Latest Updates
-
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ಸಜ್ಜುಗೊಳಿಸಿ: ಸೋರಿಕೆ ಮತ್ತು ತೇವಾಂಶದಿಂದ ಮುಕ್ತಿ ಪಡೆಯಿರಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೇಹ ತಂಪಾಗಿಡಲು ಈ ಸಾಂಪ್ರದಾಯಿಕ ಪಾನೀಯಗಳೇ ಮದ್ದು! -
ಬೆಂಗಳೂರಿನಲ್ಲಿ ಇವತ್ತು ಭಾರಿ ಮಳೆ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಈ ಕೆಲಸಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಾದಿದೆ! -
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ!
ಮೈಸೂರು ಕೆಫೆ ಮಾಲೀಕರ ಕಾಲಿಗೆ ಬಿದ್ದ ಅಂಬಾನಿ ಜೋಡಿ!! ಯಾರು ಈ ಮಹಿಳೆ ಗೊತ್ತಾ?
ದೇಶದಲ್ಲೀಗ ಅಂಬಾನಿ ಕುಟುಂಬದ ವಿವಾಹ ಮಹೋತ್ಸವವೇ ಸದ್ದು ಮಾಡುತ್ತಿದೆ. ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಕಳೆದ ಶುಕ್ರವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಧಿಕಾ ಮರ್ಚೆಂಟ್ ಕೈ ಹಿಡಿದಿರುವ ಅವರು ಅದ್ದೂರಿ ಮದುವೆಯಲ್ಲಿ ಮಿಂಚಿದ್ದಾರೆ.
ಈ ಮದುವೆ ಸಮಾರಂಭದಲ್ಲಿ ಇಡೀ ಬಾಲಿವುಡ್ ಗಣ್ಯರು ಸೇರಿ ವಿಶ್ವದ ಪ್ರಮುಖ ಉದ್ಯಮಿಗಳು, ಕ್ರೀಡಾಪಟುಗಳು, ರಾಜಕಾರಣಿಗಳು ಸಹ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಹ ಈ ಮದುವೆ ಭೇಟಿ ನೀಡಿ ನವ ವಧು ವರರಿಗೆ ಆಶೀರ್ವಾದ ಮಾಡಿದ್ದಾರೆ.

ಅಲ್ಲದೆ ಅಂಬಾನಿ ಮಗನ ವಿವಾಹಕ್ಕೆ ಬಂದಿದ್ದ ಅತಿಥಿಗಳಿಗೆ ರಾಜರ ಸತ್ಕಾರವೇ ಸಿಕ್ಕಿದೆ. ದುಬಾರಿ ಉಡುಗೊರೆ ಸೇರಿ ಅಲ್ಲಿ ಭರ್ಜರಿ ಭೋಜನದ ವ್ಯವಸ್ಥೆಯೂ ಮಾಡಲಾಗಿತ್ತು. ಜೊತೆಗೆ ಅವರ ವಿವಾಹ ಮಹೋತ್ಸವದಲ್ಲಿ ಭಾಗಿಯಾಗಿದ್ದವರೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ಹೆಸರು, ಖ್ಯಾತಿ ಗಳಿಸಿದ್ದವರೇ ಆಗಿದ್ದರು.
ಅದ್ರಲ್ಲೂ ಹಾಲಿವುಡ್ ನಟರು, ಸಿಂಗರ್ಗಳಿಗೆ ಕೋಟಿ ಕೋಟಿ ನೀಡಿ ಕರೆಸಲಾಗಿತ್ತು, ಇದೆಲ್ಲಕ್ಕಿಂತ ಅಚ್ಚರಿಯಾಗಿ ಕಂಡಿದ್ದು ಓರ್ವ ಮಹಿಳೆ. ಹೌದು ಮೈಸೂರು ಕೆಫೆ ಸಂಸ್ಥಾಪಕಿ ಸಹ ಈ ಮದುವೆಯಲ್ಲಿ ಭಾಗಿಯಾಗಿದ್ದರು. ಆದರೆ ಅಲ್ಲಿದ್ದವರಿಗೆ ಈ ಮಹಿಳೆ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿತ್ತು. ಒಬ್ಬ ಸಾಮಾನ್ಯ ಮಹಿಳೆಯಂತೆ ಯಾವುದೇ ಆಡಂಬರವಿಲ್ಲದೆ ಮದುವೆಯಲ್ಲಿ ಭಾಗಿಯಾಗಿದ್ದ ಅವರು ಎಲ್ಲರ ಗಮನ ತಮ್ಮತ್ತ ಸೆಳೆದಿದ್ದರು.
ಮೈಸೂರು ಕೆಫೆ ಮಾಲಿಕರಾದ ಶಾಂತೇರಿ ನಾಯಕ್ ಇಡೀ ಮದುವೆಯಲ್ಲಿ ಗಮನ ಸೆಳೆದ ಮಹಿಳೆಯಾಗಿದ್ದಾರೆ. ಸಾಮಾನ್ಯ ಮಹಿಳೆಯಂತೆ ಸೀರೆ ಉಟ್ಟು ಅಲಂಕಾರ, ಆಭರಣ ಇಲ್ಲದೆ ಕಾಣಿಸಿಕೊಂಡ ಅವರು ಕೇಂದ್ರ ಬಿಂದು ಆಗಿದ್ದರು.
ಇವರನ್ನು ಕಂಡೊಡನೆ ಅನಂತ್ ಅಂಬಾನಿ ತನ್ನ ಪತ್ನಿ ರಾಧಿಕಾ ಮರ್ಚೆಂಟ್ ಅವರನ್ನು ಕರೆದು ಪರಿಚಯ ಮಾಡಿಕೊಟ್ಟರು. ಅಲ್ಲದೆ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಸಹ ಪಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜನರು ಸಹ ಅಚ್ಚರಿಯಿಂದ ಅಂಬಾನಿ ಕುಟುಂಬ ಅವರನ್ನು ಗುರುತಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು ಕೆಫೆಯ ಮಾಲೀಕರಾದ ನರೇಶ್ ನಾಯಕ್ ಅವರ ತಾಯಿ ಶಾಂತೇರಿ ನಾಯಕ್, ರಾಜ್ಯದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. ಶಾಂತೇರಿಯವರು ಕೆಫೆಯನ್ನು ನರೇಶ್ಗೆ ಹಸ್ತಾಂತರಿಸುವ ಮೊದಲು ಕೆಫೆ ಮಾಲಿಕತ್ವ ಹೊಂದಿದ್ದರಲ್ಲದೆ ಅದರ ನಿರ್ವಹಣೆ ಅವರೇ ಮಾಡುತ್ತಿದ್ದರು.
ಮೈಸೂರು ಕೆಫೆ ರಾಜ್ಯದಲ್ಲಿ ಮಾತ್ರವಲ್ಲ ಇತರೆ ರಾಜ್ಯದಲ್ಲೂ ಶಾಖೆಗಳ ಹೊಂದಿದೆ. ಹೀಗಾಗಿ ಅನಂತ್ ಅಂಬಾನಿ ಅವರಿಗೆ ಈ ಕೆಫೆಯ ತಿಂಡಿ ಬಹಳ ಅಚ್ಚುಮೆಚ್ಚಂತೆ. ಮದುವೆಯಲ್ಲಿ ಭೇಟಿಯಾದಾಗಲು ಸಹ ಪ್ರತಿ ಭಾನುವಾರ, ನಾವು ನಿಮ್ಮ ಆಹಾರವನ್ನು ನಮ್ಮ ಮನೆಯಲ್ಲಿ ತಿನ್ನುತ್ತೇವೆ ಎಂದು ಹೇಳುತ್ತಿದ್ದಾರೆ.
ಈ ವಿಡಿಯೋ ನೋಡಿದ ಮಂದಿ ಇಷ್ಟೊಂದು ಐಷಾರಾಮಿ ಬದುಕು, ಆಸ್ತಿ ಇದ್ದರೂ ಅಂಬಾನಿ ಕುಟುಂಬ ಸಂಸ್ಕಾರ ಮಾತ್ರ ಮರೆತಿಲ್ಲ ಹಿರಿಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಅರಿತಿದ್ದಾರೆ. ಹೀಗಾಗಿಯೇ ಅವರ ಸಂಪತ್ತು ಬೆಳೆಯುತ್ತಲೇ ಇದೆ ಎಂದು ಕಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ಮಸಾಲೆ ದೋಸೆ ಎಂದರೆ ಅಂಬಾನಿಗೆ ಬಲು ಇಷ್ಟ. ಅವರು ಹಲವು ಬಾರಿ ಈ ಬಗ್ಗೆ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಮೈಸೂರು ಕೆಫೆ ಓನರ್ನನ್ನು ಮದುವೆಗೆ ಆಹ್ವಾನಿಸಲು ಮರೆಯಲಿಲ್ಲ. ಅಲ್ಲದೆ ಶಾಂತೇರಿ ನಾಯಕ್ ಅವರಿಗೆ ವಿಶೇಷ ಗೌರವ ಸಹ ನೀಡಿದ್ದಾರೆ.



Click it and Unblock the Notifications