Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಅಯೋಧ್ಯೆ ರಾಮನಿಗೂ ತಟ್ಟಿದ ಬೇಸಿಗೆ ಬಿಸಿ.! ವಿಗ್ರಹಕ್ಕೆ ಹತ್ತಿ ಬಟ್ಟೆ ಅಲಂಕಾರ..!
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೊಂಡು ಈಗ ಲಕ್ಷ ಲಕ್ಷ ಭಕ್ತರ ಆಗಮನದಿಂದಾಗಿ ಇಡೀ ದೇವಾಲಯ ಪ್ರಮುಖ ಯಾತ್ರಾ ಸ್ಥಳವಾಗಿ ಮಾರ್ಪಟ್ಟಿದೆ. ದೇವಾಲಯದಲ್ಲಿ ಜರುಗುವ ರಾಮ ಆರತಿ ಕಣ್ತುಂಬಿಕೊಳ್ಳಲೆಂದು ದೇಶದ ಮೂಲೆ ಮೂಲೆಯಿಂದಲೂ ಭಕ್ತರು ಆಗಮಿಸುತ್ತಿದ್ದಾರೆ.
ಈ ನಡುವೆ ದೇಶದೆಲ್ಲೆಡೆ ತಾಪಮಾನ ಏರಿಕೆಯಿಂದ ಜನ ಹೈರಾಣಾಗಿದ್ದಾರೆ. ಅದರಲ್ಲೂ ಉತ್ತರ ಭಾಗದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಿದೆ. ಹೀಗಾಗಿ ಜನ ಮನೆಯಿಂದ ಆಚೆ ಬರುವುದು ಸಹ ಕಷ್ಟವಾಗಿದೆ. ಇನ್ನು ಅಯೋಧ್ಯೆಯಲ್ಲೂ ಇದೇ ರೀತಿಯ ಪರಿಸ್ಥಿತಿಯಿದ್ದು, ತಾಪಮಾನ ಏರಿಕೆ ಕೇವಲ ರಾಮನ ಭಕ್ತರಿಗಷ್ಟೇ ಅಲ್ಲ ಸ್ವತಃ ರಾಮನಿಗೂ ತಟ್ಟಿದೆ.

ಹೌದು ಅಯೋಧ್ಯೆಯಲ್ಲಿ ಬಿಸಿಲಿನ ತಾಪ ಹೆಚ್ಚಳವಾಗಿರುವ ಹಿನ್ನೆಲೆ ಬಾಲ ರಾಮನಿಗೆ ಬಟ್ಟೆ ತೊಡಿಸಲಾಗಿದೆ. ಬೇಸಿಗೆಯಲ್ಲಿ ತಾಪಮಾನ ಏರಿಕೆಯಾಗಿರುವ ಹಿನ್ನೆಲೆ ದೇವಾಲಯ ಆಡಳಿರ ಮಂಡಳಿ ರಾಮನಿಗೆ ಬಟ್ಟೆ ಧರಿಸುವ ನಿರ್ಧಾರ ಮಾಡಿದೆ. ರಾಮನಿಗೆ ಮೃದುವಾದ ಹತ್ತಿ ಬಟ್ಟೆಯನ್ನು ತೊಡಿಸಲಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ "ಪ್ರಭು ಇಂದು ಧರಿಸಿರುವ ವಸ್ತ್ರವು ಕೈಮಗ್ಗದ ಹತ್ತಿಯಿಂದ ಮಾಡಲ್ಪಟ್ಟಿದೆ, ನೈಸರ್ಗಿಕ ಇಂಡಿಗೋ ಬಣ್ಣಬಣ್ಣದ ಮತ್ತು ಹೂವುಗಳಿಂದ ಅಲಂಕರಿಸಲ್ಪಟ್ಟಿದೆ ಎಂದಿದೆ. ಈ ಬಟ್ಟೆ ತುಂಬಾ ಹಗುರ ಮತ್ತು ತಾಪಮಾನದಿಂದ ರಾಮನಿಗೆ ತಂಪಾಗಲಿದೆ ಎಂದಿದೆ.
ಈ ಮೊದಲು ಅಯೋಧ್ಯೆಯ ರಾಮ ಇನ್ನೂ ಬಾಲಕ ಹೀಗಾಗಿ ಆತನಿಗೂ ವಿಶ್ರಾಂತಿಯ ಅಗತ್ಯವಿದೆ ಎಂದು ಆಡಳಿತ ಮಂಡಳಿ ಮಧ್ಯಾಹ್ನ 1 ಗಂಟೆ ಕಾಲ ಗರ್ಭ ಗುಡಿ ಮುಚ್ಚುವ ನಿರ್ಧಾರ ಮಾಡಿತ್ತು. 'ಶ್ರೀ ರಾಮ್ ಲಲ್ಲಾ 5 ವರ್ಷದ ಮಗುವಾಗಿದ್ದು, ಇಷ್ಟು ಗಂಟೆಗಳ ಕಾಲ ಎಚ್ಚರವಾಗಿರಲು ಆತನು ಒತ್ತಡವನ್ನು ಹೊಂದಲು ಸಾಧ್ಯವಿಲ್ಲ. ಆದ್ದರಿಂದ ಬಾಲ ದೇವರಿಗೆ ಸ್ವಲ್ಪ ವಿಶ್ರಾಂತಿ ನೀಡಲು, ದೇವಾಲಯದ ಬಾಗಿಲುಗಳನ್ನು ಮುಚ್ಚಲು ಟ್ರಸ್ಟ್ ನಿರ್ಧರಿಸಿದೆ. ಮಧ್ಯಾಹ್ನ 12:30 ರಿಂದ 1:30 ರವರೆಗೆ, ದೇವರು ವಿಶ್ರಾಂತಿ ಪಡೆಯಲಿ' ಎಂದು ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ತಿಳಿಸಿದ್ದಾರೆ. ಈಗ ರಾಮನಿಗೆ ವಸ್ತ್ರ ಧರಿಸಿ ಅಲಂಕಾರ ಮಾಡಿದೆ.
ಅದ್ದೂರಿ ರಾಮನವಮಿಗೆ ಭರದ ಸಿದ್ಧತೆ
ಇದೇ ವರ್ಷ ಜನವರಿಯಲ್ಲಿ ಈ ರಾಮಮಂದಿರ ಲೋಕಾರ್ಪಣೆಗೊಂಡಿತ್ತು. ಮುಂಬರುವ ರಾಮನವಮಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದ್ದು ಇದಕ್ಕಾಗಿ ಸಭೆ ಕರೆದಿದೆ. ಹನುಮಾನ್ಗರ್ಹಿ ದೇವಸ್ಥಾನದ ಆಡಳಿತ ಮಂಡಳಿಯು ಭಕ್ತರಿಗೆ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಲು ಶುಕ್ರವಾರ ಸಭೆ ನಡೆಸಿದೆ ಎಂದು ದೇವಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಬೇಸಿಗೆಯ ಬೇಗೆಯಲ್ಲಿ ಭಕ್ತರ ಪಾದಗಳು ಸುಡದಂತೆ ನೋಡಿಕೊಳ್ಳಲು ವಿಶೇಷ ಗಮನಹರಿಸಿ ಶೌಚಾಲಯಗಳ ವ್ಯವಸ್ಥೆಗೆ ವಿಶೇಷ ಗಮನ ಹರಿಸುವ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮತ್ತು ವ್ಯವಸ್ಥೆಗಳ ಕುರಿತು ಅಧಿಕಾರಿಗಳು ಚರ್ಚಿಸಿದ್ದಾರಂತೆ.
ರಾಮಮಂದಿರಕ್ಕೆ ಹೆಚ್ಚಾದ ಭಕ್ತರ ಸಂಖ್ಯೆ
ರಾಮಮಂದಿರ ಉದ್ಘಾಟನೆಗೊಂಡ ದಿನದಿಂದಲೇ ಭಕ್ತರ ದಂಡು ಹೆಚ್ಚಾಗಿದೆ. ಅದರಲ್ಲೂ ವಿಶೇಷ ರೈಲು ಸೇವೆ ನೀಡದ ಬಳಿಕ ಭಕ್ತರ ಸಂಖ್ಯೆ ದುಪ್ಪಟ್ಟಾಗಿದೆ. ಹೀಗಾಗಿ ಈ ಜನದಟ್ಟಣೆ ತಡೆಯಲು ದೇವಾಲಯ ಟ್ರಸ್ಟ್ ತಿರುಮಲದ ಟ್ರಸ್ಟ್ನ ನೆರವು ಕೇಳಿದೆ.
ದೇಶಾದ್ಯಂತ ವಿಶೇಷ ರೈಲುಗಳ ಪ್ರಾರಂಭವು ದೇವಾಲಯದ ಪಟ್ಟಣದಲ್ಲಿ ಭಕ್ತರ ಸಂಖ್ಯೆ ಹೆಚ್ಚಿದೆ. ಪ್ರತಿದಿನ ಸರಾಸರಿ 80,000 ಭಕ್ತರು ರಾಮನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ, ಇದು ದೇಶದ ಅತಿ ಹೆಚ್ಚು ಭೇಟಿ ನೀಡುವ ಯಾತ್ರಾ ಕೇಂದ್ರಗಳಲ್ಲಿ ಒಂದಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ.



Click it and Unblock the Notifications