Latest Updates
-
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ! -
ಕರಾವಳಿ ರೆಡ್ ಅಲರ್ಟ್: ಮನೆಯಲ್ಲೇ ಸುರಕ್ಷಿತವಾಗಿ ಫಿಟ್ ಆಗಿರಲು ಈ 12 ನಿಮಿಷಗಳ ವರ್ಕೌಟ್ ಟ್ರೈ ಮಾಡಿ!
ಶ್ರೀ ರಾಮ ಚಂದ್ರ ಗುರೂಜಿ ಪುನೀತ್ ಆತ್ಮದ ಜೊತೆ ಸಂಭಾಷಣೆ ನಡೆಸಿದ್ರಾ? ಪುನೀತ್ ಇವರಿಗೆ ಹೇಳಿರುವ ಆ 3 ವಿಚಾರಗಳೇನು?
ಪುನೀತ್ ನಿಧನದ ಸುದ್ದಿ ಇನ್ನೂ ಅರಗಿಸಿಕೊಳ್ಳಲು ನಮಗೆ ಆಗುತ್ತಿಲ್ಲ, ನಗುವಿನ ಪರಮಾತ್ಮ ನಮ್ಮ ಜೊತೆಯೇ ಇದ್ದಾನೆ ಅನಿಸುತ್ತೆ, ಎಷ್ಟೋ ಅಪ್ಪು ಅಭಿಮಾನಿಗಳಿಗೆ ಒಂದೇ ಒಂದು ಕ್ಷಣ ಅಪ್ಪು ನಮ್ಮ ಕಣ್ಮುಂದೆ ಬರಬಾರದೇ ಎಂದು ಯೋಚಿಸುತ್ತಾರೆ.
ಎಷ್ಟೋ ಜನರಿಗೆ ಅಪ್ಪು ಒಬ್ಬರು ಒಳ್ಳೆಯ ನಟ ಎಂಬುವುದು ಗೊತ್ತಿತ್ತು, ಆದರೆ ಅವರೊಬ್ಬರು ಅನರ್ಘ್ಯ ರತ್ನ ಎಂಬುವುದು ತಿಳಿದಿದ್ದು ಅವರ ಮರಣದ ನಂತರ, ಅಪ್ಪುಗೆ ಸರಿಸಾಟಿ ಅಪ್ಪನೇ. ಇದೀಗ ಗುರೂಜಿಯೊಬ್ಬರು ಪುನೀತ್ ರಾಜ್ಕುಮಾರ್ ಆತ್ಮದ ಜೊತೆಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ, ಇವರ ಹೇಳಿಕೆ ಇದೀಗ ಗಮನ ಸೆಳೆದಿದೆ.

ಪುನೀತ್ ಆತ್ಮಕ್ಕೆ ಮೂರು ಪ್ರಶ್ನೆ ಕೇಳಿದೆ ಎಂದು ಹೇಳಿದ ಶ್ರೀ ರಾಮಚಂದ್ರ ಗುರೂಜಿ
ಒಂದು ಯೂಟ್ಯೂಬ್ ಚಾನಲ್ಗೆ ನೀಡಿದ ಸಂದರ್ಶನದಲ್ಲಿ ಅವರು ಆತ್ಮ ಸಂಚಾರ, ಭೂತ-ಪ್ರೇತ, ಅಗೋಚರ ಶಕ್ತಿ ಇವುಗಳ ಬಗ್ಗೆ ತುಂಬಾನೇ ಮಾಹಿತಿ ಹೇಳಿದ್ದಾರೆ, ಹೀಗೆ ಮಾತನಾಡುತ್ತಾ ನಾನು ಮೂರು ಪ್ರಶ್ನೆಗಳನ್ನು ಪುನೀತ್ ಆತ್ಮದ ಜೊತೆ ಕೇಳಿದೆ , ಅದಕ್ಕೆ ಉತ್ತರವೂ ಸಿಕ್ಕಿದೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಅವರು ಪುನೀತ್ ರಾಜ್ಕುಮಾರ್ ಆತ್ಮಕ್ಕೆ ನಿಮ್ಮ ಸಾವಿನ ಬಗ್ಗೆ ಇರುವ ಊಹಾಪೋಹಾ ನಿಜಾನಾ ಎಂದು ಕೇಳಿದ್ದಕ್ಕೆ ಇಲ್ಲ ಹೃದಯ ಸಂಬಂಧಿ ಸಮಸ್ಯೆಯಿಂದ ಸತ್ತಿದ್ದೇನೆ ಎಂದರಂತೆ, ಈಗ ಎಲ್ಲಿದ್ದೀರಿ ಎಂಬ ಪ್ರಶ್ನೆಗೆ ನನ್ನ ತಂದೆ-ತಾಯಿಯ ಹುಡುಕಾಟದಲ್ಲಿ ಇದ್ದೀನಿ ಎಂಬ ಉತ್ತರ ಬಂತೆಂತೆ.
ನೀವು ಮತ್ತೆ ಹುಟ್ಟಿ ಬರುತ್ತೀರಾ ಎಂಬ ಪ್ರಶ್ನೆಗೆ ಆ ಬಗ್ಗೆ ಯೋಚನೆ ಮಾಡಿಲ್ಲ, ಬರುವುದಾದರೆ ಮಗಳ ಹೊಟ್ಟೆಯಲ್ಲಿ ಹುಟ್ಟಿ ಬರುವೆ ಎಂದಿದ್ದಾರೆ ಎಂದು ಶ್ರೀ ರಾಮಚಂದ್ರ ಗುರೂಜಿ ಹೇಳಿದ್ದಾರೆ.
ಈ ಗುರೂಜಿ ಹೇಳಿರುವುದು ನಿಜವೇ?
ಅವರು ಹೇಳುವುದನ್ನು ಕೇಳಿದಾಗ ಸ್ವಲ್ಪ ಆಶ್ಚರ್ಯವಾಗುತ್ತೆ, ನಿಜವಾಗಲೂ ಇವರು ಪುನೀತ್ ಆತ್ಮದ ಜೊತೆ ಮಾತನಾಡಿದ್ದಾರಾ? ಅದಕ್ಕೆ ಅವರು ಆ ರೀತಿಯೆಲ್ಲಾ ಉತ್ತರಿಸಿದರಾ ಎಂಬ ಪ್ರಶ್ನೆ ಮೂಡುವುದು. ಆದರೆ ಇದು ಸುಳ್ಳು ಅಂತ ಹೇಳಲು ಆಗಲಿ ಅಥವಾ ಸತ್ಯ ಅಂತ ಹೇಳಲು ನಮಗೆ ಸಾಧ್ಯವಿಲ್ಲ, ಏಕೆಂದರೆ ಅದರ ಅನುಭವ ನಮಗೆ ಆಗಿಲ್ಲ, ಇಂಥ ಕತೆ ಕೇಳಿದ್ದೇವೆ ಅಷ್ಟೇ. ಇವರು ಖಾಸಗಿ ಚಾನಲ್ನಲ್ಲಿ ಜನ್ಮಾಂತರ ಎಂಬ ಕಾರ್ಯಕ್ರಮ ನಡೆಸಿ ಯಶಸ್ವಿಯಾಗಿದ್ದರು.
ಇವರು ಪುನೀತ್ ರಾಜ್ಕುಮಾರ್ ತೀರಿ ಹೋದ ಕೆಲವೇ ದಿನಗಳಲ್ಲಿ ಆತ್ಮದ ಜೊತೆ ಸಂಭಾಷಣೆ ನಡೆಸಿದ್ದೆ ಆದರೆ ಇದರ ಬಗ್ಗೆ ಎಲ್ಲಿಯೂ ಹೇಳಿರಲಿಲ್ಲ ಎಂದು ಹೇಳಿದ್ದಾರೆ. ನಟ ಸುಶಾಂತ್ ಸಿಂಗ್ ಮರಣವೊಂದಿದ ಬಳಿಕ ಅವರ ಪ್ರೇತಾತ್ಮದ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಪ್ಯಾರಾ ನಾರ್ಮಲ್ ಎಕ್ಸ್ಪರ್ಟ್ ಹೇಳಿದ್ದರು. ಅವರ ಹೆಸರು ಸ್ಟೀವ್ ಹಫ್ ಅವರು ಆತ್ಮದ ಜೊತೆ ಮಾತನಾಡಿರುವುದಾಗಿ ಹೇಳಿ ವೀಡಿಯೋ ಬಿಟ್ಟಿದ್ದರು. ಅದು ಕೂಡ ವೈರಲ್ ಆಗಿತ್ತು.



Click it and Unblock the Notifications