Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
ರಾಮ ಮಂದಿರ ಉದ್ಘಾಟನೆಗೆ ಬರುವ ಗಣ್ಯರಿಗೆ 'ರಾಮ್ರಾಜ್' ಉಡುಗೊರೆ..? ಏನಿದು ಗೊತ್ತಾ?
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ಧಾರ್ಮಿಕ ಕಾರ್ಯಗಳು ಆರಂಭಗೊಂಡಿದ್ದು, ಕೋಟ್ಯಂತರ ಭಕ್ತರ ಗಮನ ಸೆಳೆಯುತ್ತಿದೆ. ಈ ಭವ್ಯ ವೈಭವ ಕಣ್ತುಂಬಿಕೊಳ್ಳಲು ದೇಶದ, ವಿದೇಶದ ಮೂಲೆಯಿಂದಲೂ ಭಕ್ತರು ಅಯೋಧ್ಯೆ ತಲುಪುತ್ತಿದ್ದಾರೆ. ಸುಮಾರು ಒಂದು ವಾರಗಳ ಕಾಲ ಧಾರ್ಮಿಕ ಕಾರ್ಯಗಳು ನಡೆಯುಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣಪ್ರತಿಷ್ಠಾಪನೆ ದಿನ ಪಾಲ್ಗೊಳ್ಳುವ ಮೂಲಕ ಮಂದಿರ ಲೋಕಾರ್ಪಣೆ ಕಾರ್ಯ ಅಂತ್ಯವಾಗುತ್ತಿದೆ.
ಹೀಗಾಗಿ ಈ ಭವ್ಯ ಸ್ಮರಣೀಯ ಗಳಿಗೆಗೆ ಸಾಕ್ಷಿಯಾಗಲು ನೂರಾರು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ದೇಶದ ವಿದೇಶಿ ಗಣ್ಯರಿಗೂ ಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಜನವರಿ 22ರಂದು ಅಯೋಧ್ಯೆಯಲ್ಲಿ ನೂರಾರು ಗಣ್ಯರು ಈ ವೈಭವ ಕಣ್ತುಂಬಿಕೊಳ್ಳಲಿದ್ದಾರೆ.
ಇನ್ನು ಈ ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ ಉಡುಗೊರೆಯಾಗಿ 'ರಾಮ್ರಾಜ್' ನೀಡುವುದಾಗಿ ರಾಮ ಜನ್ಮ ಭೂಮಿ ಟ್ರಸ್ಟ್ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಹೇಳಿದ್ದಾರೆ. ಹಾಗಾದರೆ ಈ ರಾಮ್ರಾಜ್ ಎಂದರೆ ಏನು? ಈ ಉಡುಗೊರೆಯಲ್ಲಿ ಏನಿದೆ? ಇದರ ವಿಶೇಷತೆ ಏನು ಎಂಬ ಕುರಿತು ಇಲ್ಲಿದೆ ಮಾಹಿತಿ.

ಆಹ್ವಾನಿತ ಗಣ್ಯರಿಗೆ ಟೋಕನ್ ನೀಡಲು ನಿರ್ಧರಿಸಲಾಗಿದೆ. ಪ್ರತಿಯೊಬ್ಬ ಗಣ್ಯರಿಗೂ ಕಾರ್ಯಕ್ರಮದ ಅಂತ್ಯದಲ್ಲಿ ರಾಮ್ ರಾಜ್ ಮತ್ತು ಪ್ರಸಾದ ನೀಡುತ್ತಾರೆ ಎನ್ನಲಾಗಿದೆ.
'ರಾಮ್ರಾಜ್' ಎಂದರೇನು?
'ರಾಮ್ರಾಜ್' ಎಂದರೆ ರಾಮ ಮಂದಿರ ನಿರ್ಮಾಣಕ್ಕಾಗಿ ನಿಗದಿಯಾಗಿದ್ದ ಜಾಗದಿಂದ ತೆಗೆದಿರುವ ಮಣ್ಣು. ಹೌದು ಮಂದಿರ ನಿರ್ಮಾಣಕ್ಕಾಗಿ ಅಡಿಪಾಯ ತೆಗೆಯಲಾಗಿದ್ದು, ಈ ವೇಳೆ ಮುಖ್ಯಗರ್ಭಗುಡಿಯ ಬಳಿ ಇದ್ದ ಮಣ್ಣನ್ನು ಸಂಗ್ರಹಿಸಿ ಇಡಲಾಗಿದೆ. ಇದನ್ನು ರಾಮ ಮಂದಿರ ಉದ್ಘಾಟನೆಗೆ ಆಗಮಿಸುವ ಗಣ್ಯರಿಗೆ ಬಾಕ್ಸ್ವೊಂದರಲ್ಲಿ ಹಾಕಿ ನೀಡಲು ನಿರ್ಧರಿಸಲಾಗಿದೆ.
ಗಿಫ್ಟ್ ಬಾಕ್ಸ್ ಏನನ್ನು ಒಳಗೊಂಡಿರುತ್ತದೆ?
'ಪ್ರಾಣ ಪ್ರತಿಷ್ಠಾ' ಸಮಾರಂಭದಲ್ಲಿ ಪಾಲ್ಗೊಳ್ಳುವ ಆಹ್ವಾನಿತರಿಗೆ ಉಡುಗೊರೆಯಾಗಿ ನೀಡಲಾಗುವ ಈ ಉಡುಗೊರೆ ಬಾಕ್ಸ್ಗಳ ಸುತ್ತ ಸಾಕಷ್ಟು ಕುತೂಹಲವಿದೆ. 'ರಾಮರಾಜ್' ಅನ್ನು ಸಣ್ಣ ಪೆಟ್ಟಿಗೆಗಳಲ್ಲಿ 'ಮೋತಿಚೂರ್ ಲಡ್ಡೋಸ್' ಜೊತೆಗೆ ಪ್ಯಾಕ್ ಮಾಡಲಾಗುವುದು, 'ದೇಸಿ ತುಪ್ಪ'ದಿಂದ ಮಾಡಲಾಗಿರುವ ಪ್ರಸಾದವೂ ಸಹ ಈ ಉಡುಗೊರೆ ಬಾಕ್ಸ್ನಲ್ಲಿರಲಿದೆ ಎನ್ನಲಾಗಿದೆ.
ಯಾರಿಗೆಲ್ಲ ಆಹ್ವಾನ ನೀಡಲಾಗಿದೆ?
ಪ್ರಾಣ ಪ್ರತಿಷ್ಠಾ ಸಮಾರಂಭದ ಮುಖ್ಯ ಅತಿಥಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸ ವರದಿಗಳ ಪ್ರಕಾರ, ಸೆಲೆಬ್ರಿಟಿಗಳು, ಕೈಗಾರಿಕೋದ್ಯಮಿಗಳು, ರಾಜಕಾರಣಿಗಳು ಮತ್ತು ಆಧ್ಯಾತ್ಮಿಕ ನಾಯಕರು ಸೇರಿ 7,000ಕ್ಕೂ ಹೆಚ್ಚು ಆಹ್ವಾನಗಳನ್ನು ಕಳುಹಿಸಲಾಗಿದೆ. ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಅಮಿತಾಭ್ ಬಚ್ಚನ್, ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ ರಾಜ್ಯದ ರಿಷಬ್ ಶೆಟ್ಟಿಗೂ ಆಹ್ವಾನ ಬಂದಿದೆ ಎಂದು ಹೇಳಲಾಗಿದೆ.
22 ಜನವರಿ 2024 ರಂದು ಮಧ್ಯಾಹ್ನ 12:20 ಕ್ಕೆ ಪವಿತ್ರಾಭಿಷೇಕ ಸಮಾರಂಭವು ಪ್ರಾರಂಭವಾಗುತ್ತದೆ ಮತ್ತು ವಾರಣಾಸಿಯ ಪುರೋಹಿತರು ನಾಲ್ಕು ಟ್ರಸ್ಟಿಗಳು ಮತ್ತು ನಾಲ್ಕು ಪುರೋಹಿತರೊಂದಿಗೆ ಇದನ್ನು ನಡೆಸುತ್ತಾರೆ.
ಪ್ರತಿಷ್ಠಾಪನೆ ದಿನ ತಿರುಪತಿಯೊಂದ 1 ಲಕ್ಷ ಲಡ್ಡು
ತಿರುಪತಿಗೆ ಹೋದರೆ ಲಡ್ಡು ತಂದು ಹಂಚುತ್ತೇವೆ, ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾಗಿ ದಕ್ಷಿಣ ಭಾರತದಲ್ಲಿ ಅತ್ಯಂತ ಪ್ರಸಿದ್ದಿ ಪಡೆದಿರುವ ತಿರುಪತಿ ದೇವಾಲಯದಲ್ಲಿ ಲಡ್ಡು ಪ್ರಸಾದವೇ ಪ್ರಮುಖವಾಗಿದೆ. ಈ ಲಡ್ಡು ಪ್ರಸಾದವನ್ನೇ ಶ್ರೀರಾಮನಿಗೆ ತಿರುಪತಿಯ ಕೊಡುಗೆಯಾಗಿ ನೀಡಲಾಗುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮನ ಪ್ರತಿಷ್ಟಾಪನೆಗೆ ಹೋಗುವ ಭಕ್ತರಿಗೆ ನೀಡಲೆಂದೇ 1 ಲಕ್ಷ ಲಡ್ಡುಗಳನ್ನು ತಿರುಪತಿ ದೇವಾಲಯದಿಂದ ಕಳುಹಿಸಿಕೊಡಲಾಗುವುದು.



Click it and Unblock the Notifications












