Latest Updates
-
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು?
ಫೆಬ್ರವರಿ 4ಕ್ಕೆ ರಥ ಸಪ್ತಮಿ: ಈ ದಿನ ಯಾವ ಮಂತ್ರಪಠಿಸಬೇಕು? ದಾನದ ಮಹತ್ವವೇನು?
ಧಾರ್ಮಿಕ ನಂಬಿಕೆಗಳಲ್ಲಿ ರಥ ಸಪ್ತಮಿ ದಿನಕ್ಕೆ ತುಂಬಾನೇ ಮಹತ್ವವಿದೆ. ಈ ವರ್ಷ ರಥ ಸಪ್ತಮಿಯನ್ನು ಫೆಬ್ರವರಿ 4ರಂದು ಆಚರಿಸಲಾಗುತ್ತಿದೆ. ಈ ದಿನವನ್ನು ಮಾಘ ಸಪ್ತಮಿ, ಮಾಘ ಜಯಂತಿ ಅಥವಾ ಸೂರ್ಯ ಜಯಂತಿಯೆಂದು ಆಚರಿಸಲಾಗುವುದು. ಮಾಘ ಮಾಸದಲ್ಲಿಬರುವ ಶುಕ್ಲಪಕ್ಷದ ಸಪ್ತಮಿಯಂದು ರಥ ಸಪ್ತಮಿ ಆಚರಿಸಲಾಗುವುದು.
ರಥ ಸಪ್ತಮಿಯಂದು ಮಾಡುವ ದಾನ ಧರ್ಮಕ್ಕೆ ತುಂಬಾನೇ ಮಹತ್ವವಿದೆ, ಈ ದಿನ ದಾನ ಮಾಡುವುದರಿಂದ ಸೂರ್ಯನ ಕೃಪೆಗೆ ಪಾತ್ರರಾಗುತ್ತೇವೆ, ಇದರಿಂದ ಒಳಿತಾಗಲಿದೆ ಎಂಬುವುದು ನಂಬಿಕೆ.

ರಥ ಸಪ್ತಮಿ ತಿಥಿ
ರಥ ಸಪ್ತಮಿ ತಿಥಿ ಪ್ರಾರಂಭ: ಫೆಬ್ರವರಿ 4 ಬೆಳಗ್ಗೆ 07:56ಕ್ಕೆ
ರಥ ಸಪ್ತಮಿ ತಿಥಿ ಮುಕ್ತಾಯ: ಪೆಬ್ರವರಿ5 ಬೆಳಗ್ಗೆ 05:29ರವರೆಗೆ ಇರಲಿದೆ. ಉದಯ ತಿಥಿ ಪ್ರಕಾರ ರಥ ಸಪ್ತಮಿಯನ್ನು ಫೆಬ್ರವರಿ 4ರಂದು ಆಚರಿಸಲಾಗುವುದು.
ಈ ದಿನದ ಮಹತ್ವವೇನು?
ಪೌರಾಣಿಕ ನಂಬಿಕೆಯ ಪ್ರಕಾರ ಸೂರ್ಯನು ಸಪ್ತ ಕುದುರೆಗ ರಥವನ್ನು ಏರಿ ಉತ್ತಾರಾಯಣದ ಕಡೆಗೆ ಕಡೆಗೆ ಪ್ರಯಾಣಿಸುತ್ತಾನೆ. ಈ ಸಮಯವನ್ನು ಉತ್ತರಾಯಣ ಪುಣ್ಯಕಾಲವೆಂದು ಕರೆಯಲಾಗುವುದು. ಧಾರ್ಮಿಕ ಕಾರ್ಯಗಳನ್ನು ಮಾಡಲು ಈ ಸಮಯ ತುಂಬಾನೇ ಉತ್ತಮವಾಗಿದೆ. ಈ ದಿನದಂದು ಸೂರ್ಯನಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ದಿನ ಸೂರ್ಯನನ್ನು ಆರಾಧನೆ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ಇರಲಿದೆ, ಈ ದಿನ ಮಾಡುವ ದಾನದಿಂದ ನಿಮ್ಮ ಸಮೃದ್ಧಿ ಹೆಚ್ಚಾಗಲಿದೆ ಎಂದು ಹೇಳಲಾಗುವುದು.
ರಥ ಸಪ್ತಮಿಯಂದು ಪುಣ್ಯ ಸ್ನಾನದ ಮಹತ್ವ
ಈ ದಿನ ಸೂರ್ಯೋದಯಕ್ಕೆ ಮುನ್ನ ಎದ್ದು ಸೂರ್ಯನಿಗೆ ಆರ್ಘ್ಯ ಅರ್ಪಿಸಬೇಕು. ಈ ದಿನ ಸೂರ್ಯ ದೇವನನ್ನು ಪೂಜಿಸುವುದರಿಂದ ಕಾಯಿಲೆಗಳಿಂದ ಗುಣ ಮುಖರಾಗುತ್ತಾರೆ ಎಂಬ ನಂಬಿಕೆಯಿದೆ. ಈ ದಿನ ಗಂಗಾನದಿಯಲ್ಲಿ ಸ್ನಾನ ಮಾಡಲಾಗುವುದು. ಇದೀಗ ಮಹಾಕುಂಭಮೇಳ ನಡೆಯುತ್ತಿರುವುದರಿಂದ ತ್ರಿವೇಣಿಯಲ್ಲಿ ಸ್ನಾನ ಮಾಡಲು ಕೋಟ್ಯಾಂತರ ಹಿಂದಗಳು ಪ್ರಯಾಗ್ರಾಜ್ಗೆ ಪ್ರಯಾಣಿಸಿದ್ದಾರೆ.
ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸುವಾಗ ಕಲಶದ ನೀರಿಗೆ ಸ್ವಲ್ಪ ಕುಂಕುಮ ಹಾಕಿ ಆರ್ಘ್ಯ ಅರ್ಪಿಸಲಾಗುವುದು. ಈ ದಿನ ತುಪ್ಪ ಹಾಕಿದ ಮಣ್ಣಿನ ಹಣತೆ ಹಚ್ಚಿಟ್ಟು ಸೂರ್ಯನಿಗೆ ಪೂಜೆ ಸಲ್ಲಿಸುತ್ತಾರೆ.
ರಥ ಸಪ್ತಮಿಯಂದು ಈ ಮಂತ್ರಗಳನ್ನು ಪಠಿಸಿ
ಸೂರ್ಯ ನಮಸ್ಕಾರ ಮಂತ್ರ : ಓಂ ಮಿತ್ರಾಯ ನಮಃ
ಓಂ ರವಾಯ್ರೇ ನಮಃ
ಓಂ ಸೂರ್ಯಾಯ ನಮಃ
ಓಂ ಭಾನವೇ ನಮಃ
ಓಂ ಖಗಾಯ ನಮಃ
ಓಂ ಪುಷ್ನೇ ನಮಃ
ಓಂ ಹಿರಣ್ಯಗರ್ಭಾಯ ನಮಃ
ಓಂ ಮರೀಚಯೇ ನಮಃ
ಓಂ ಆದಿತ್ಯಾಯ ನಮಃ
ಓಂ ಸವಿತ್ರೇ ನಮಃ
ಓಂ ಅರ್ಕಾಯ ನಮಃ
ಓಂ ಭಾಸ್ಕರಾಯ ನಮಃ
ಸೂರ್ಯ ಬೀಜ ಮಂತ್ರ :
ಓಂ ಹರಂ ಹ್ರೀ ಹ್ರೌಂ ಸಃ ಸೂರ್ಯಾಯ ನಮಃ
ಸೂರ್ಯ ಗಾಯತ್ರಿ ಮಂತ್ರ :
ಓಂ ಭಾಸ್ಕರಾಯ ವಿದ್ಮಹೇ ಮಹಾದುತ್ಯಾತಿಕರಾಯ ಧೀಮಹಿ ತಾನಃ ಸೂರ್ಯ ಪ್ರಚೋದಯಾತ್ ಓಂ ಆದಿತ್ಯಾಯ ವಿದ್ಮಹೇ ಮಾರ್ತಾಂಡೇ ಧೀಮಹಿ ತನಃ ಸೂರ್ಯ ಪ್ರಚೋದಯಾತ್ ಓಂ ಸಪ್ತ ತುರಂಗಾಯ ವಿದ್ಮಹೇ ಸಹಸ್ರ ಕೀರ್ಣಯ ಧೀಮಹಿ ತನ್ನೋ ರವಿ ಪ್ರಚೋದಯಾತ್
ಆದಿತ್ಯ ಹೃದಯಂ ಮಂತ್ರ :
ಆದಿತ್ಯನ ಹೃದಯದ ಪುಣ್ಯವೇ ಶತ್ರುನಾಶ ಜಯವಹಂ ಜಪೇನ್ನಿತ್ಯಂ ಅಕ್ಷಯ ಪರಂ ಶಿವಮ್



Click it and Unblock the Notifications
