Latest Updates
-
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್ -
ಐಟಿಆರ್ ಸಲ್ಲಿಕೆಗೆ ಇನ್ನು 4 ದಿನ ಬಾಕಿ: ಭಾರಿ ದಂಡದಿಂದ ಪಾರಾಗಲು ಈ ಕೆಲಸಗಳನ್ನು ಇಂದೇ ಮಾಡಿ! -
IMD ಮಳೆ ಎಚ್ಚರಿಕೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಈ 12 ನಿಮಿಷದ ವರ್ಕೌಟ್ ಮಾಡಿ ಫಿಟ್ ಆಗಿರಿ!
ಫೆಬ್ರವರಿ 4ಕ್ಕೆ ರಥ ಸಪ್ತಮಿ: ಈ ದಿನ ಯಾವ ಮಂತ್ರಪಠಿಸಬೇಕು? ದಾನದ ಮಹತ್ವವೇನು?
ಧಾರ್ಮಿಕ ನಂಬಿಕೆಗಳಲ್ಲಿ ರಥ ಸಪ್ತಮಿ ದಿನಕ್ಕೆ ತುಂಬಾನೇ ಮಹತ್ವವಿದೆ. ಈ ವರ್ಷ ರಥ ಸಪ್ತಮಿಯನ್ನು ಫೆಬ್ರವರಿ 4ರಂದು ಆಚರಿಸಲಾಗುತ್ತಿದೆ. ಈ ದಿನವನ್ನು ಮಾಘ ಸಪ್ತಮಿ, ಮಾಘ ಜಯಂತಿ ಅಥವಾ ಸೂರ್ಯ ಜಯಂತಿಯೆಂದು ಆಚರಿಸಲಾಗುವುದು. ಮಾಘ ಮಾಸದಲ್ಲಿಬರುವ ಶುಕ್ಲಪಕ್ಷದ ಸಪ್ತಮಿಯಂದು ರಥ ಸಪ್ತಮಿ ಆಚರಿಸಲಾಗುವುದು.
ರಥ ಸಪ್ತಮಿಯಂದು ಮಾಡುವ ದಾನ ಧರ್ಮಕ್ಕೆ ತುಂಬಾನೇ ಮಹತ್ವವಿದೆ, ಈ ದಿನ ದಾನ ಮಾಡುವುದರಿಂದ ಸೂರ್ಯನ ಕೃಪೆಗೆ ಪಾತ್ರರಾಗುತ್ತೇವೆ, ಇದರಿಂದ ಒಳಿತಾಗಲಿದೆ ಎಂಬುವುದು ನಂಬಿಕೆ.

ರಥ ಸಪ್ತಮಿ ತಿಥಿ
ರಥ ಸಪ್ತಮಿ ತಿಥಿ ಪ್ರಾರಂಭ: ಫೆಬ್ರವರಿ 4 ಬೆಳಗ್ಗೆ 07:56ಕ್ಕೆ
ರಥ ಸಪ್ತಮಿ ತಿಥಿ ಮುಕ್ತಾಯ: ಪೆಬ್ರವರಿ5 ಬೆಳಗ್ಗೆ 05:29ರವರೆಗೆ ಇರಲಿದೆ. ಉದಯ ತಿಥಿ ಪ್ರಕಾರ ರಥ ಸಪ್ತಮಿಯನ್ನು ಫೆಬ್ರವರಿ 4ರಂದು ಆಚರಿಸಲಾಗುವುದು.
ಈ ದಿನದ ಮಹತ್ವವೇನು?
ಪೌರಾಣಿಕ ನಂಬಿಕೆಯ ಪ್ರಕಾರ ಸೂರ್ಯನು ಸಪ್ತ ಕುದುರೆಗ ರಥವನ್ನು ಏರಿ ಉತ್ತಾರಾಯಣದ ಕಡೆಗೆ ಕಡೆಗೆ ಪ್ರಯಾಣಿಸುತ್ತಾನೆ. ಈ ಸಮಯವನ್ನು ಉತ್ತರಾಯಣ ಪುಣ್ಯಕಾಲವೆಂದು ಕರೆಯಲಾಗುವುದು. ಧಾರ್ಮಿಕ ಕಾರ್ಯಗಳನ್ನು ಮಾಡಲು ಈ ಸಮಯ ತುಂಬಾನೇ ಉತ್ತಮವಾಗಿದೆ. ಈ ದಿನದಂದು ಸೂರ್ಯನಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಈ ದಿನ ಸೂರ್ಯನನ್ನು ಆರಾಧನೆ ಮಾಡುವುದರಿಂದ ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ಇರಲಿದೆ, ಈ ದಿನ ಮಾಡುವ ದಾನದಿಂದ ನಿಮ್ಮ ಸಮೃದ್ಧಿ ಹೆಚ್ಚಾಗಲಿದೆ ಎಂದು ಹೇಳಲಾಗುವುದು.
ರಥ ಸಪ್ತಮಿಯಂದು ಪುಣ್ಯ ಸ್ನಾನದ ಮಹತ್ವ
ಈ ದಿನ ಸೂರ್ಯೋದಯಕ್ಕೆ ಮುನ್ನ ಎದ್ದು ಸೂರ್ಯನಿಗೆ ಆರ್ಘ್ಯ ಅರ್ಪಿಸಬೇಕು. ಈ ದಿನ ಸೂರ್ಯ ದೇವನನ್ನು ಪೂಜಿಸುವುದರಿಂದ ಕಾಯಿಲೆಗಳಿಂದ ಗುಣ ಮುಖರಾಗುತ್ತಾರೆ ಎಂಬ ನಂಬಿಕೆಯಿದೆ. ಈ ದಿನ ಗಂಗಾನದಿಯಲ್ಲಿ ಸ್ನಾನ ಮಾಡಲಾಗುವುದು. ಇದೀಗ ಮಹಾಕುಂಭಮೇಳ ನಡೆಯುತ್ತಿರುವುದರಿಂದ ತ್ರಿವೇಣಿಯಲ್ಲಿ ಸ್ನಾನ ಮಾಡಲು ಕೋಟ್ಯಾಂತರ ಹಿಂದಗಳು ಪ್ರಯಾಗ್ರಾಜ್ಗೆ ಪ್ರಯಾಣಿಸಿದ್ದಾರೆ.
ಈ ದಿನ ಸೂರ್ಯನಿಗೆ ಆರ್ಘ್ಯ ಅರ್ಪಿಸುವಾಗ ಕಲಶದ ನೀರಿಗೆ ಸ್ವಲ್ಪ ಕುಂಕುಮ ಹಾಕಿ ಆರ್ಘ್ಯ ಅರ್ಪಿಸಲಾಗುವುದು. ಈ ದಿನ ತುಪ್ಪ ಹಾಕಿದ ಮಣ್ಣಿನ ಹಣತೆ ಹಚ್ಚಿಟ್ಟು ಸೂರ್ಯನಿಗೆ ಪೂಜೆ ಸಲ್ಲಿಸುತ್ತಾರೆ.
ರಥ ಸಪ್ತಮಿಯಂದು ಈ ಮಂತ್ರಗಳನ್ನು ಪಠಿಸಿ
ಸೂರ್ಯ ನಮಸ್ಕಾರ ಮಂತ್ರ : ಓಂ ಮಿತ್ರಾಯ ನಮಃ
ಓಂ ರವಾಯ್ರೇ ನಮಃ
ಓಂ ಸೂರ್ಯಾಯ ನಮಃ
ಓಂ ಭಾನವೇ ನಮಃ
ಓಂ ಖಗಾಯ ನಮಃ
ಓಂ ಪುಷ್ನೇ ನಮಃ
ಓಂ ಹಿರಣ್ಯಗರ್ಭಾಯ ನಮಃ
ಓಂ ಮರೀಚಯೇ ನಮಃ
ಓಂ ಆದಿತ್ಯಾಯ ನಮಃ
ಓಂ ಸವಿತ್ರೇ ನಮಃ
ಓಂ ಅರ್ಕಾಯ ನಮಃ
ಓಂ ಭಾಸ್ಕರಾಯ ನಮಃ
ಸೂರ್ಯ ಬೀಜ ಮಂತ್ರ :
ಓಂ ಹರಂ ಹ್ರೀ ಹ್ರೌಂ ಸಃ ಸೂರ್ಯಾಯ ನಮಃ
ಸೂರ್ಯ ಗಾಯತ್ರಿ ಮಂತ್ರ :
ಓಂ ಭಾಸ್ಕರಾಯ ವಿದ್ಮಹೇ ಮಹಾದುತ್ಯಾತಿಕರಾಯ ಧೀಮಹಿ ತಾನಃ ಸೂರ್ಯ ಪ್ರಚೋದಯಾತ್ ಓಂ ಆದಿತ್ಯಾಯ ವಿದ್ಮಹೇ ಮಾರ್ತಾಂಡೇ ಧೀಮಹಿ ತನಃ ಸೂರ್ಯ ಪ್ರಚೋದಯಾತ್ ಓಂ ಸಪ್ತ ತುರಂಗಾಯ ವಿದ್ಮಹೇ ಸಹಸ್ರ ಕೀರ್ಣಯ ಧೀಮಹಿ ತನ್ನೋ ರವಿ ಪ್ರಚೋದಯಾತ್
ಆದಿತ್ಯ ಹೃದಯಂ ಮಂತ್ರ :
ಆದಿತ್ಯನ ಹೃದಯದ ಪುಣ್ಯವೇ ಶತ್ರುನಾಶ ಜಯವಹಂ ಜಪೇನ್ನಿತ್ಯಂ ಅಕ್ಷಯ ಪರಂ ಶಿವಮ್



Click it and Unblock the Notifications