Latest Updates
-
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು! -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆಯ ಮಳೆನೀರು ಕೊಯ್ಲು ವ್ಯವಸ್ಥೆ ಹಾಳಾಗದಂತೆ ತಡೆಯುವುದು ಹೇಗೆ? -
ಮಳೆಗಾಲದಲ್ಲಿ ಮಕ್ಕಳ ಲಂಚ್ಬಾಕ್ಸ್ ಸುರಕ್ಷತೆ: ಆರೋಗ್ಯಕರ ಮತ್ತು ಹೈ-ಪ್ರೋಟೀನ್ ಆಹಾರದ ಟಿಪ್ಸ್ -
ಮುಂಬೈನಲ್ಲಿ ಭಾರೀ ಮಳೆ: ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ, ಪೋಷಕರು ಗಮನಿಸಿ!
ನಿಜ ಜೀವನದಲ್ಲಿ ಸ್ಪೈಡರ್ ಮ್ಯಾನ್ ನೋಡಿದ್ದೀರಾ..? ಇಲ್ಲಿದ್ದಾನೆ ನೋಡಿ..!
ನೀವು ಹಾಲಿವುಡ್ನ ಸೂಪರ್ ಹಿಟ್ ಮೂವಿ ಸ್ಪೈಡರ್ ಮ್ಯಾನ್ ನೋಡಿರಬಹುದು. ಈಗಂತು ಈ ಸ್ಪೈಡರ್ ಮ್ಯಾನ್ ಸಿನಿಮಾದ ಮುಂದುವರೆದ ಭಾಗಗಳು ಸಹ ಬಂದಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಸ್ಪೈಡರ್ ಮ್ಯಾನ್ ಸಿನಿಮಾ ನೋಡಿ ಆನಂದಿಸಿರುತ್ತಾರೆ.
ಸಿನಿಮಾದಲ್ಲಿ ದೊಡ್ಡ ಕಥೆ ಏನು ಇಲ್ಲದಿದ್ದರೂ ಕಷ್ಟದಲ್ಲಿರುವ ಜನರನ್ನು ಆ ಸಂಕಷ್ಟಗಳಿಂದ ಪಾರು ಮಾಡುವುದೇ ಈ ಸ್ಪೈಡರ್ ಮ್ಯಾನ್ನ ಕೆಲಸವಾಗಿರುತ್ತದೆ. ಹೀಗಾಗಿ ಇದೊಂದಿ ಸೂಪರ್ ಹೀರೋ ಸಿನಿಮಾ ಆಗಿತ್ತು. ಆರಂಭದಲ್ಲಿ ಇದೊಂದು ಕಾಮಿಕ್ ಬುಕ್ ರೀತಿ ಕಥೆಗಳಾಗಿ ಬರಲು ಆರಂಭಿಸಿದ್ದು, ಅದರ ಇತಿಹಾಸವೆಲ್ಲ ನಿಮಗೆ ಗೊತ್ತಿರಬಹುದು.

ಆದ್ರೆ ನಿಜ ಜೀವನದಲ್ಲಿ ಸ್ಪೈಡರ್ ಮ್ಯಾನ್ ಅನ್ನು ನೀವು ಎಲ್ಲಾದ್ರು ನೋಡಿದ್ದೀರಾ? ಕಷ್ಟದಲ್ಲಿರುವ ವ್ಯಕ್ತಿಯನ್ನ ಕಣ್ಣು ಮಿಟುಕಿಸಿ ಬಿಡುವಷ್ಟರಲ್ಲಿ ಜೀವ ಉಳಿಸಿದ ನಿಜ ಜೀವನದ ಸ್ಪೈಡರ್ ಮ್ಯಾನ ಕಥೆ ಇದು. ಹೌದು ಕೇರಳದಲ್ಲಿ ಕಂಡಕ್ಟರ್ ಒಬ್ಬ ತನ್ನ ಕಾರ್ಯದಿಂದಾಗಿ ಈಗ ಭಾರತದ ದೇಸಿ ಸ್ಪೈಡರ್ ಮ್ಯಾನ್ ಎಂಬ ಬಿರುದು ಪಡೆದಿದ್ದಾನೆ.
ಬಸ್ನಲ್ಲಿ ಪ್ರಯಾಣಿಕನೊಬ್ಬ ಬಸ್ನಿಂದ ಕೆಳಗೆ ಬೀಳುವಾಗ ಒಂದೇ ಕೈನಲ್ಲಿ ಆತನ ಜೀವ ಉಳಿಸಿದ ಆತನ ವಿಡಿಯೋ ವೈರಲ್ ಆಗಿದ್ದು, ಎಲ್ಲರು ಆತನ ಕಾರ್ಯ ಕಂಡು ಈತ ನಿಜವಾದ ಸ್ಪೈಡರ್ ಮ್ಯಾನ್ ಎನ್ನುತ್ತಿದ್ದಾರೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಸಹ ಆಗಿದ್ದು ಎಲ್ಲರು ಇದು ಸಾಧ್ಯವಾಗಿದ್ದು ಹೇಗೆ ಎಂಬ ಅಚ್ಚರಿಗೆ ಒಳಗಾಗಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಖಾಸಗಿ ಬಸ್ನಲ್ಲಿ ಕಂಡಕ್ಟರ್ ಟಿಕೆಟ್ ನೀಡುತ್ತಿದ್ದರೆ ಆತನ ಪಕ್ಕದಲ್ಲೇ ಒಬ್ಬ ಪ್ರಯಾಣಿಕ ನಿಂತಿರುವುದನ್ನು ನಾವು ನೋಡಬಹುದು. ಆದರೆ ಬಸ್ ವೇಗವಾಗಿ ಹೋಗುವಾಗ ಆತ ಆಯತಪ್ಪಿ ಇನ್ನೇನು ಕೇಳಗೆ ಬೀಳುತ್ತಾನೆ ಎನ್ನುವಷ್ಟರಲ್ಲಿ ಕಂಡಕ್ಟರ್ ಒಂದೇ ಕೈನಲ್ಲಿ ಆತನ ಹಿಡಿದುಕೊಳ್ಳುತ್ತಾನೆ. ಇದರಿಂದ ಆತ ಬಸ್ನಿಂದ ರೋಡಿಗೆ ಬೀಳುವುದರಿಂದ ಕ್ಷಣದಲ್ಲಿ ಪಾರಾಗುತ್ತಾನೆ. ಇದೆಲ್ಲವು ಕಣ್ಣು ಮಿಟುಕಿಸಿ ಬಿಡುವ ನಡುವೆ ನಡೆದು ಹೋಗುತ್ತದೆ.
ಕಂಡಕ್ಟರ್ ಆತನ ಮೇಲೆ ಎತ್ತಿ ಬಸ್ ಒಳಗೆ ಎಳೆದುಕೊಳ್ಳುತ್ತಾನೆ. ಬಳಿಕ ಬಸ್ನೊಳಗೆ ಇದ್ದ ಮಂದಿ ಬಸ್ನ ಡೋರ್ ಹಾಕಿಕೊಳ್ಳುತ್ತಾರೆ. ಈ ಘಟನೆ ಬಸ್ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡುಗರು ಥ್ರಿಲ್ಗೆ ಒಳಗಾಗಿದ್ದಾರೆ. ಏಕೆಂದರೆ ಕಂಡಕ್ಟರ್ನ ಸಮಯ ಪ್ರಜ್ಞೆಯಿಂದಾಗಿ ಒಂದು ಜೀವ ಉಳಿದಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ಹರಿದಾಡುವ ಜೊತೆಗೆ 3 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಜೊತೆಗೆ ಸಾವಿರಾರು ಮಂದಿ ಕಂಡಕ್ಟರ್ ಕಾರ್ಯ ಕಂಡು ಬೆರಗಾಗಿದ್ದಾರೆ. ಅಲ್ಲದೆ ಒಬ್ಬೊಬ್ಬರು ಒಂದೊಂದು ರೀತಿ ಕಮೆಂಟ್ ಮಾಡಿದ್ದಾರೆ.
"ಆ ವ್ಯಕ್ತಿ ನಿಜವಾಗಿಯೂ ರಜನಿಕಾಂತ್ ಅವರ ಪುನರ್ಜನ್ಮ" ಎಂದು ಒಬ್ಬ ಬಳಕೆದಾರ ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ಹಾಸ್ಯಮಯವಾಗಿ 'ಆತ ಹಣ ನೀಡದೆ ಬಸ್ ಇಳಿಯಲು ಮುಂದಾದಾಗ ಕಂಡಕ್ಟರ್ ಕಷ್ಟ ಪಟ್ಟು ಹಿಡಿದಿದ್ಧಾನೆ' ಎಂದು ಹೇಳಿದ್ದಾರೆ.
ಆದ್ರೆ ಹಲವರು ಈತ ಭಾರತದ ನಿಜವಾದ ಸ್ಪೈಡರ್ ಮ್ಯಾನ್ ಎಂದಿದ್ದಾರೆ. ಪ್ರಯಾಣಿಕನಿಗೆ ಮರು ಜೀವ ನೀಡಿದ ಕಂಡಕ್ಟರ್ಗೆ ನಮ್ಮದೊಂದು ಸೆಲ್ಯೂಟ್ ಎಂದಿದ್ದಾರೆ. ಮತ್ತೆ ಕೆಲವರು ಬಸ್ನಲ್ಲಿ ಓಡಾಡುವಾಗ ಪ್ರಯಾಣಿಕರು ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ. ಒಂದು ಕ್ಷಣ ಮೈಮರೆತು ಇಂತಹ ದುರಂತಕ್ಕೆ ಬಲಿಯಾದರೆ ನಿಮ್ಮ ಕುಟುಂಬ ಬೀದಿಗೆ ಬರಲಿದೆ ಎಂದು ಬಳಕೆದಾರರೊಬ್ಬರು ಜಾಗೃತಿಯ ಮಾತುಗಳ ಆಡಿದ್ದಾರೆ. ಸದ್ಯ ಈ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.



Click it and Unblock the Notifications