Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಅಂದು ಹಳ್ಳಿ ಹೈದ ರಾಜೇಶ್..ಇಂದು ಚಂದ್ರಶೇಖರ್ ಸಿದ್ದಿ.! ಕತ್ತು ಹಿಸುಕಿದ ನಗರ!
ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಲ್ಲೂ ಆಘಾತ ತಂದಿದೆ. ಕಾಮಿಡಿ ಶೋ ವೇದಿಕೆಯ ಮೇಲೆ ಅದ್ಭುತ ನಟನೆ ಮಾಡುತ್ತಿದ್ದ ಸಿದ್ದಿ ಯುವಕ ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮ್ಮಳ್ಳಿ ಗ್ರಾಮದ ಅರಣ್ಯದಲ್ಲಿ ಆತನ ಶವ ಪತ್ತೆಯಾಗಿದೆ. ತಾಲೂಕಿನ ಕಟ್ಟಿಗೆ ಗ್ರಾಮಕ್ಕೆ ಪತ್ನಿಯೊಂದಿಗೆ ಕೆಲಸಕ್ಕೆಂದು ಚಂದ್ರಶೇಖರ ಸಿದ್ದಿ ಹೋಗಿದ್ದರು. ಶನಿವಾರ ಮಧ್ಯಾಹ್ನ 2 ಗಂಟೆಗೆ ತನ್ನ ಮಗನೊಂದಿಗೆ ಶಾಲೆ ಬಿಟ್ಟು ಮನೆಗೆ ಬಂದಿದ್ದರು. ಬಳಿಕ ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದರು.

ಆದ್ರೆ ಎಷ್ಟು ಸಮಯ ಕಳೆದರು ವಾಪಾಸು ಬಾರದ ಹಿನ್ನಲೆ ಹುಡುಕಾಟ ಆರಂಭಿಸಿದ್ದಾರೆ. ಹೆಂಡತಿ ಹುಡುಕಾಡಿದಾಗ ಮರಕ್ಕೆ ಹಗ್ಗದಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಅವರು ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದೆ. ಕೆಲ ತಿಂಗಳಿನಿಂದ ಕಾರವಾರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು ಎಂದು ಕೂಡ ತಿಳಿದುಬಂದಿದೆ.
ಒಂದಿಷ್ಟು ಅವಕಾಶ ಅವರ ಹುಡುಕಿ ಬಂದಿದ್ದವು
ಚಂದ್ರಶೇಖರ ಸಿದ್ದಿ ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿ ರಿಯಾಲಿಟಿ ಶೋನಲ್ಲಿ ಕೆಲ ಕಾಲ ಕಾಣಿಸಿಕೊಂಡಿದ್ದರು. ನಿನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಈತ ಕನ್ನಡದ ಕೆಲವು ಧಾರವಾಹಿಗಳಲ್ಲಿಯೂ ಚಿಕ್ಕ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಅವಕಾಶಗಳು ಕಡಿಮೆಯಾದವು. ಹೀಗಾಗಿ ಅವರು ತಮ್ಮ ಹುಟ್ಟೂರಿಗೆ ತೆರಳಿದ್ದರು. ಆದ್ರೆ ಅಲ್ಲಿ ಅವರಿಗೆ ಖಿನ್ನತೆ ಕಾಡತೊಡಗಿತ್ತು. ಮಾನಸಿಕ ಸ್ಥಿತಿ ಹದಗೆಟ್ಟ ಪರಿಣಾಮ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ ಈಗ ಅವರು ತಮ್ಮ 31ನೇ ವರ್ಷದಲ್ಲಿಯೇ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಇದು ಎಲ್ಲರಲ್ಲೂ ಆಘಾತಕ್ಕೆ ಕಾರಣವಾಗಿದೆ.
ಹಳ್ಳಿ ಹೈದನ ಕಥೆಯೂ ಹೀಗೆ ಆಗಿತ್ತು
ಈ ಹಿಂದೆ ಖಾಸಗಿ ವಾಹಿನಿಯ 'ಹಳ್ಳಿ ಹೈದ ಪ್ಯಾಟೇಗ್ ಬಂದ' ಎಂಬ ರಿಯಾಲಿಟಿ ಶೋಗೆ ಆಗಮಿಸಿದ್ದ ಹಳ್ಳಿ ಹುಡುಗನ ಬದುಕು ಕೂಡ ಅರ್ಧದಲ್ಲೇ ಅಂತ್ಯಗೊಂಡಿತ್ತು. ಎಚ್.ಡಿ.ಕೋಟೆ ತಾಲೂಕು ಬಳ್ಳೆ ಹಾಡಿಯ ಗಿರಿಜನ ಯುವಕ ರಾಜೇಶ್ ಕೇವಲ 24 ವರ್ಷಕ್ಕೆ ಪ್ರಾಣ ಕಳೆದುಕೊಂಡಿದ್ದ. ಆತ ಕೂಡ ರಿಯಾಲಿಟಿ ಶೋನಲ್ಲಿ ನಟಿಸಿ ಸ್ಪರ್ಧಿಗೆ ಕಪಾಳ ಮೋಕ್ಷ ಮಾಡಿ ರಾದ್ದಾಂತ ಮಾಡಿಕೊಂಡಿದ್ದ.
ರಿಯಾಲಿಟಿ ಶೋನಲ್ಲಿ ಫೇಮಸ್ ಆದ ಹುಡುಗ ಬಳಿಕ ಸಿನಿಮಾ ರಂಗಕ್ಕೂ ಎಂಟ್ರಿ ಕೊಟ್ಟಿದ್ದ. ಮುಗ್ದನಾಗಿದ್ದ ಆತನಿಗೆ ಹೊಸ ಜೀವನ, ನಗರ ಜೀವನಕ್ಕೆ ಹೊಂದಿಕೊಳ್ಳುವುದು ಕಷ್ಟವಾಗಿತ್ತು. ಹಾಗೆ ಆತ ಜಂಗಲ್ ಜಾಕಿ ಎಂಬ ಸಿನಿಮಾದಲ್ಲಿ ನಾಯಕನಾಗಿ ನಟಿಸಿದ್ದ. ಆದ್ರೆ ಸಿನಿಮಾ ಬಿಡುಗಡೆಯಾಗದೆ ತಡವಾಗಿತ್ತು. ಇದರಿಂದ ನೊಂದುಕೊಂಡಿದ್ದ ಆತ ಖಿನ್ನತೆಗೂ ಒಳಗಾಗಿದ್ದ.
ಹಣಕಾಸು ಹಾಗೂ ಸಿನಿಮಾ ವಿಚಾರವಾಗಿ ಬಹಳ ನೊಂದಿದ್ದ ಆತ ಮನೆಯ ಮಹಡಿಯಿಂದ ಕೆಳಗೆ ಹಾರಿದ್ದ. ಈ ವೇಳೆ ಕಾಂಪೌಂಡ್ಗೆ ಹಾಕಿದ್ದ ಸರಳುಗಳು ಆತನ ದೇಹವನ್ನು ಹೊಕ್ಕಿದ್ದವು ಇದರಿಂದ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ. ಒಂದು ಸಿನಿಮಾ ಕಂಪ್ಲೀಟ್ ಮಾಡಿದ್ದ ಹಾಗೆ ಮತ್ತೊಂದು ಸಿನಿಮಾ ಮುಗಿಯುವ ಹಂತ ತಲುಪಿತ್ತು. ಹೊಸ ಸಿನಿಮಾ ಇನ್ನೂ ಸೆಟ್ಟೇರಬೇಕಿತ್ತು. ಆದ್ರೆ ನಗರ ಜೀವನಕ್ಕೆ ಹೊಂದಿಕೊಳ್ಳದ ಆತ ಜೀವ ತೆಗದುಕೊಳ್ಳುವ ನಿರ್ಧಾರ ಮಾಡಿದ್ದ.
ಈಗ ಮತ್ತೋರ್ವ ಸಿದ್ದಿ ಯುವಕ ಹೆಂಡತಿ ಮಕ್ಕಳನ್ನು ಬಿಟ್ಟು ಆತ್ಮಹತ್ಯೆಗೆ ಒಳಗಾಗಿರುವುದು ಆಘಾತ ಮೂಡಿಸಿದೆ. ಹಳ್ಳಿಯಿಂದ ಬರುವ ಮಂದಿ ಸಿಟಿಯಲ್ಲಿ ಜೀವನ ಕಟ್ಟಿಕೊಳ್ಳುವ ಭರದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವುದು ವಿಪರ್ಯಾಸ.



Click it and Unblock the Notifications

