Latest Updates
-
ವಿಶ್ವ ಸೊಳ್ಳೆ ದಿನ: ಮಳೆಗಾಲದಲ್ಲಿ ಬಾಲ್ಕನಿಯಲ್ಲಿ ಯೋಗ ಮಾಡುವಾಗ ಸೊಳ್ಳೆ ಕಡಿತದಿಂದ ಪಾರಾಗುವುದು ಹೇಗೆ? -
BWF ವರ್ಲ್ಡ್ಸ್ ದೆಹಲಿ: ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ಈ 8 ನಿಮಿಷದ ವ್ಯಾಯಾಮ ನಿಮ್ಮ ನೋವನ್ನು ಮರೆಸುತ್ತೆ! -
ಡೆಂಗ್ಯೂ ಜ್ವರದಿಂದ ಬೇಗ ಚೇತರಿಸಿಕೊಳ್ಳಬೇಕೇ? ನಿಮ್ಮ ಆಹಾರದಲ್ಲಿ ಇರಲಿ ಈ ಪೌಷ್ಟಿಕಾಂಶಗಳು! -
ಡೆಂಗ್ಯೂ ಜ್ವರದ ಬಳಿಕ ಸುಸ್ತು ಕಾಡುತ್ತಿದೆಯೇ? ಬೇಗ ಚೇತರಿಸಿಕೊಳ್ಳಲು ಈ ಆಹಾರಕ್ರಮ ಪಾಲಿಸಿ, ಮನೆಯಲ್ಲೇ ORS ಮಾಡಿ -
ಓಣಂ ಸದ್ಯದ ಹಬ್ಬದೂಟಕ್ಕೆ ಭಾರಿ ಬೇಡಿಕೆ: ಬೆಂಗಳೂರು-ಕೊಚ್ಚಿಯಲ್ಲಿ ಸ್ಲಾಟ್ಗಳು ಫುಲ್, ಈಗಲೇ ಬುಕ್ ಮಾಡಿ! -
ವರಮಹಾ ಲಕ್ಷ್ಮಿ ವ್ರತ 2026: ಆಗಸ್ಟ್ 21 ಅಥವಾ 28? ದಿನಾಂಕದ ಗೊಂದಲಕ್ಕೆ ಇಲ್ಲಿದೆ ಪರಿಹಾರ! -
ಕಂಟೆಂಟ್ ಕ್ರಿಯೇಟರ್ಗಳೇ ಗಮನಿಸಿ: ಫೋಟೊ ಶೂಟ್ ವೇಳೆ ನೋವು ಮರೆಯಾಗಲು ಈ 12 ನಿಮಿಷದ ವರ್ಕೌಟ್ ಸಾಕು! -
ಫೋಟೋಗ್ರಾಫರ್ಗಳೇ ಎಚ್ಚರ! ನೋವಿಲ್ಲದೆ ಅದ್ಭುತ ಫೋಟೋ ಕ್ಲಿಕ್ಕಿಸಲು ಈ 7 ನಿಮಿಷದ ಮೊಬಿಲಿಟಿ ರಿಸೆಟ್ ಟ್ರೈ ಮಾಡಿ -
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು
ಕರಾವಳಿಗೆ ಅಪ್ಪಳಿಸಲಿದೆ ರೆಮಲ್ ಸೈಕ್ಲೋನ್..! ರೆಮಲ್ ಅರ್ಥವೇನು ಗೊತ್ತಾ?
ರಾಜ್ಯದ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 15 ದಿನಗಳಲ್ಲಿ ಕರ್ನಾಟಕದಾದ್ಯಂತ ಮಳೆಯಾಗಿದ್ದು, ಇನ್ನು ಒಂದು ವಾರ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅವಧಿ ಪೂರ್ವ ಮುಂಗಾರಿನ ಮುನ್ಸೂಚನೆಯೂ ಸಿಕ್ಕಿದ್ದುಮ ರೈತರಲ್ಲಿ ಸಂತಸ ಮೂಡಿದೆ. ಜೊತೆಗೆ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.
ಇದರ ನಡುವೆ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪರಿಣಾಮವಾಗಿ ಚಂಡಮಾರುತ ಉಂಟಾಗಿದ್ದು, 2024ರ ಮೊದಲ ಚಂಡಮಾರುತ ಇದಾಗಿದೆ. ಈ ಸೈಕ್ಲೋನ್ ಬಾಂಗ್ಲಾದೇಶ ಕರಾವಳಿ ಹಾಗೂ ಭಾರತದ ಕರಾವಳಿಗೆ ಅಪ್ಪಳಿಸುವ ಸಾಧ್ಯತ ಹೆಚ್ಚಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸದ್ಯ ಈ ಚಂಡಮಾರುತಕ್ಕೆ ರೆಮಲ್ ಎಂದು ಹೆಸರಿಡಲಾಗಿದೆ. ಮೇ 26ರಂದು ಭಾರತದ ಕರಾವಳಿ ಭಾಗದಲ್ಲಿ ರೆಮಲ್ ಅಬ್ಬರಿಸಿದಲಿದೆಯಂತೆ. ರೆಮಲ್ ಚಂಡಮಾರುತವು ಭಾನುವಾರ ಮಧ್ಯರಾತ್ರಿ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರಾ ನಡುವೆ ಅಪ್ಪಳಿಸಲಿದೆ.
ಭಾನುವಾರ ಮಧ್ಯರಾತ್ರಿಯ ವೇಳೆಗೆ ಇದು ತೀವ್ರ ಚಂಡಮಾರುತದ ಚಂಡಮಾರುತವಾಗಿ ಸಾಗರ್ ದ್ವೀಪ ಮತ್ತು ಖೆಪುಪಾರಾ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.
ರೆಮಲ್ ಚಂಡಮಾರುತ ಎಂದು ಹೆಸರಿಟ್ಟಿದ್ದು ಏಕೆ? ಇದರ ಅರ್ಥವೇನು?
ಚಂಡಮಾರುತಕ್ಕೆ ಒಮಾನ್ನಿಂದ 'ರೆಮಲ್' ಎಂದು ಹೆಸರಿಸಲಾಗಿದೆ, ಅರೇಬಿಕ್ನಲ್ಲಿ ರೆಮಲ್ ಎಂದರೆ 'ಮರಳು' ಎಂಬರ್ಥ ನೀಡುತ್ತದೆ. ಅರೇಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿನ ಚಂಡಮಾರುತಗಳನ್ನು ಪ್ರಮಾಣಿತ ನಾಮಕರಣದ ಸಂಪ್ರದಾಯದ ಆಧಾರದ ಮೇಲೆ ಪ್ರದೇಶದ ಒಟ್ಟು 13 ದೇಶಗಳು ಹೆಸರಿಸುತ್ತವೆ. ಈ ಸಮಾವೇಶದ ಪ್ರಕಾರ ಪ್ರಾದೇಶಿಕ ವಿಶೇಷ ಹವಾಮಾನ ಕೇಂದ್ರಗಳು (RSMCs) ಮತ್ತು ಉಷ್ಣವಲಯದ ಸೈಕ್ಲೋನ್ ಎಚ್ಚರಿಕೆ ಕೇಂದ್ರಗಳು (TCWCs) ಪ್ರಪಂಚದಾದ್ಯಂತ ಪ್ರತಿ ಚಂಡಮಾರುತವನ್ನು ಹೆಸರಿಸುತ್ತವೆ. ಹೀಗಾಗಿ ಈ ಚಂಡಮಾರುತ್ತಕ್ಕೆ ಮೊದಲೇ ಹೆಸರಿಡಲಾಗಿದ್ದು, ರೆಮಲ್ ಎಂದು ನಾಮಕರಣ ಮಾಡಲಾಗಿದೆ.
IMD ಪ್ರಕಾರ, ಚಂಡಮಾರುತವು ಭಾನುವಾರ ಗಂಟೆಗೆ 102 ಕಿಲೋಮೀಟರ್ ವೇಗವನ್ನು ತಲುಪುವ ಸಾಧ್ಯತೆಯಿದೆ. ಮೇ 26 ಮತ್ತು 27 ಕ್ಕೆ ಭಾರಿ ಮಳೆಯ ಎಚ್ಚರಿಕೆಯನ್ನು ಸಹ ನೀಡಿದೆ. ಪಶ್ಚಿಮ ಬಂಗಾಳದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಡಿಶಾದ ಪಕ್ಕದ ಜಿಲ್ಲೆಗಳಲ್ಲಿ, ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮತ್ತು ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಜೊತೆಗೆ ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದಲ್ಲಿ, ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಗಾಳಿಯ ಪ್ರಮಾಣ ಹೆಚ್ಚಾಗುತ್ತಲಿದ್ದು, ಇನ್ನು ಕೆಲವು ರಾಜ್ಯಗಳಲ್ಲಿ ಮಳೆ ಮುಂದುವರೆದಿದೆ. ಈಗಾಗಲೇ ಬೆಂಗಳೂರು ಸೇರಿ, ಚಾಮರಾಜನಗರ, ಕೊಡಗು, ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದ್ದು, ಇನ್ನೊಂದು ವಾರವೂ ಈ ಮಳೆ ಮುಂದುವರೆಯಲಿದೆ ಎಂದು ತಿಳಿದುಬಂದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮೇ 26ರ ಬೆಳಗ್ಗೆವರೆಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕೆಲವು ಕಡೆ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆಯೂ ಇದೆ ಎಂದು ತಿಳಿಸಿದೆ.



Click it and Unblock the Notifications
