Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಮಗುವಿನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದ್ಯಾ? ಹಾಗಾದ್ರೆ ಈ ರೀತಿ ಮಾಡಿ!
ಎಲ್ಲವೂ ಚೆನ್ನಾಗಿದ್ದ ಮನೆಯಲ್ಲಿ ಇದ್ದಕಿದ್ದ ಹಾಗೆ ಸಮಸ್ಯೆಗಳು ಕಾಣಿಸಿಕೊಂಡರೆ ಅಥವಾ ಆ ಮನೆಯವರಿಗೆ ಕಷ್ಟದ ಮೇಲೆ ಕಷ್ಟ ಬಂದರೆ ಖಂಡಿತ ಆ ಮನೆಯ ಮೇಲೆ ಯಾರದ್ದೋ ಕೆಟ್ಟ ದೃಷ್ಟಿ ಬಿದ್ದಿದೆ ಎಂದರ್ಥ. ಅದ್ರಲ್ಲೂ ಮಕ್ಕಳ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬಿದ್ದಾಗ ಬಹು ಬೇಗನೇ ಗೊತ್ತಾಗುತ್ತದೆ.

ಮಕ್ಕಳನ್ನು ಎಲ್ಲಾದರೂ ಹೊರಗಡೆ ಕರೆದುಕೊಂಡು ಹೋದ್ರೆ ಮತ್ತೆ ಮನೆಗೆ ವಾಪಾಸ್ಸ್ ಬಂದಾಗ ಮಕ್ಕಳು ಒಂದೇ ಸಮನೇ ಅಳೋದಕ್ಕೆ ಶುರು ಮಾಡ್ತಾರೆ. ಯಾರು ಏನು ಹೇಳಿದ್ರೂ ಕೂಡ ಮಕ್ಕಳನ್ನು ನಿಯಂತ್ರಣಕ್ಕೆ ತರೋದು ಕಷ್ಟ. ಮಕ್ಕಳಿಗೆ ಏನಾಗುತ್ತಿದೆ ಎಂದು ಪೋಷಕರು ಗೊಂದಲಕ್ಕೆ ಒಳಗಾಗುತ್ತಾರೆ. ಅಷ್ಟಕ್ಕು ಮಕ್ಕಳ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬಿದ್ದರೆ ಇದಕ್ಕೆ ಪರಿಹಾರ ಏನು ಅನ್ನೋದನ್ನು ತಿಳಿಯೋಣ.
ಕೆಟ್ಟ ದೃಷ್ಟಿ ನಿವಾರಿಸಲು ಈ ರೀತಿ ಪರಿಹಾರ ಮಾಡಿ!
ಮಕ್ಕಳ ಮೇಲೆ ಹೊರಗಿನವರ ಕೆಟ್ಟ ದೃಷ್ಟಿ ಬಿದ್ದರೆ ಆ ಮಕ್ಕಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಹಾಗೂ ಇದ್ದಕ್ಕಿದ್ದ ಹಾಗೆ ಜೋರಾಗಿ ಅಳುತ್ತಾರೆ.
ಎಳ್ಳೆಣ್ಣೆಯಿಂದ ದೃಷ್ಟಿ ಎತ್ತಿ!
ಮಗುವಿನ ಮೇಲಿರುವ ಕೆಟ್ಟ ದೃಷ್ಟಿಯನ್ನು ನಿವಾರಿಸಲು ಮೊದಲಿಗೆ ಹಿಟ್ಟಿನ ದೀಪವನ್ನು ತಯಾರಿಸಿ. ನಂತರ ಅದಕ್ಕೆ ಎಳ್ಖೆಣ್ಣೆಯನ್ನು ಹಾಕಿ ಅದರಿಂದ ನಾಲ್ಕು ದೀಪಗಳನ್ನು ಹಚ್ಚಿರಿ. ನಂತರ ಅದರಿಂದ ನಿಮ್ಮ ಮಗುವಿನ ದೃಷ್ಟಿ ತೆಗೆಯಿರಿ.
ನಂತರ ಈ ದೀಪವನ್ನು ಮೂರು ದಾರಿ ಸೇರುವ ಕಡೆ ಹಾಕಬೇಕು. ಹೀಗೆ ಮಾಡಿದರೆ ನಿಮ್ಮ ಮಗುವಿನ ಮೇಲಿರುವ ದೃಷ್ಟಿದೋಷ ನಿವಾರಣೆಯಾಗುತ್ತದೆ. ಹಾಗೂ ನಿಮ್ಮ ಮಗು ಮೊದಲಿನ ಹಾಗೆಯೇ ಆಗುತ್ತದೆ. ಆದಷ್ಟು ಮಕ್ಕಳನ್ನು ದುಷ್ಟ ದೃಷ್ಟಿಯಿಂದ ದೂರ ಇಡೋದಕ್ಕಾಗಿ ದೃಷ್ಟಿ ರಕ್ಷಾ ಕವಚವನ್ನು ಧರಿಸಿ. ಇದರಿಂದ ಮಕ್ಕಳ ಮೇಲೆ ಕೆಟ್ಟ ದೃಷ್ಟಿ ಬೀಳುವುದನ್ನು ತಪ್ಪಿಸಬಹುದು.
ಮೆಣಸಿನ ಕಾಯಿ, ಉಪ್ಪು, ಅರಶಿನದಿಂದ ಪರಿಹಾರ!
ಈ ರೀತಿ ಮಾಡಿದ್ರೆ ಕೂಡ ಮಕ್ಕಳ ಮೇಲಿನ ದೃಷ್ಟಿಯನ್ನು ತೆಗೆದು ಹಾಕಬಹುದು. ಏಳು ಮೆಣಸಿನಕಾಯಿಗಳು, ಸ್ವಲ್ಪ ಉಪ್ಪು ಮತ್ತು ಅರಿಶಿನವನ್ನು ತೆಗೆದುಕೊಂಡು ಮಗುವಿನ ತಲೆಯ ಸುತ್ತ ಏಳು ಬಾರಿ ತಿರುಗಿಸಬೇಕು. ಆ ನಂತರ ಅದನ್ನು ಬೆಂಕಿಗೆ ಅರ್ಪಿಸಬೇಕು. ಇದರಿಂದ ನಿಮ್ಮ ಮಗುವಿನ ಮೇಲಿದ್ದ ಕೆಟ್ಟ ದೃಷ್ಟಿಯೆಲ್ಲಾ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ.
ಹನುಮಾನ್ ಚಾಲೀಸಾ ಪಠಿಸಿರಿ!
ಆಂಜನೇಯನನ್ನು ತೊಂದರೆಗಳನ್ನು ವಿಮೋಚನೆ ಮಾಡುವವನು ಅಂತ ಕರೆಯಲಾಗುತ್ತದೆ. ಅವನು ಎಲ್ಲಾ ತೊಂದರೆಗಳನ್ನು ನಾಶಮಾಡುವವನು. ಅದರಿಂದ ನಿಮ್ಮ ಮಗು ನಿತ್ಯ ಹನುಮಾನ್ ಚಾಲೀಸ್ ಪಠಿಸುವಂತೆ ನೋಡಿಕೊಳ್ಳಿ. ನಿತ್ಯ ಈ ಮಂತ್ರಗಳನ್ನು ಪಠಿಸುತ್ತಿದ್ದರೆ ಕಷ್ಟಗಳೆಲ್ಲಾ ತನ್ನಿಂದ ತಾನೇ ದೂರವಾಗುತ್ತದೆ.
ಪಂಚಮುಖಿ ಆಂಜನೇಯನ ಲಾಕೆಟ್ ಧರಿಸಿ!
ಪಂಚಮುಖಿ ಆಂಜನೇಯ ತುಂಬಾನೇ ಪವರ್ ಫುಲ್. ಮನೆಯಲ್ಲಿ ಪಂಚಮುಖಿ ಆಂಜನೇಯನ ವಿಗ್ರಹವಿದ್ದರೆ ಯಾವುದೇ ರೀತಿ ತೊಂದರೆ ಎದುರಾಗೋದಿಲ್ವಂತೆ. ಅದೇ ರೀತಿ ನೀವು ಪಂಚಮುಖಿ ಆಂಜನೇಯನ ಲಾಕೆಟ್ ಅನ್ನು ಧರಿಸಿದ್ರೆ ನಿಮ್ಮ ಕಷ್ಟಗಳೆಲ್ಲಾ ನಿವಾರಣೆಯಾಗೋದ್ರ ಜೊತೆಗೆ ಕೆಟ್ಟ ದೃಷ್ಟಿ ಬೀಳೋದ್ರಿಂದ ತಪ್ಪಿಸಿಕೊಳ್ಳಬಹುದು.
ಜೀವನದಲ್ಲಿ ತೊಂದರೆಗಳ ಮೇಲೆ ತೊಂದರೆಗಳು ಬರುತ್ತಿದ್ದಾಗ ಈ ರೀತಿ ಯಾವುದಾದರೂ ಕೆಟ್ಟ ದೃಷ್ಟಿ ಬಿದ್ದಿದೆ ಅಂತ ಹೇಳಬಹುದು. ಹೀಗಾಗಿ ನೀವು ತುಂಬಾನೇ ಹುಷಾರಾಗಿರಿ. ಹಾಗೂ ನಿಮ್ಮ ಮಕ್ಕಳ ಮೇಲೆ ಒಂದು ಕಣ್ಣಿಟ್ಟಿರಿ. ಈ ರೀತಿ ಪರಿಹಾರಗಳನ್ನು ಮಾಡಿದ್ರೆ ಎಲ್ಲಾ ಸಮಸ್ಯೆಗಳು ನಿವಾರಣೆ ಆಗಲಿದೆ.



Click it and Unblock the Notifications











