Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ದೆಹಲಿಯಲ್ಲಿ ಟೈಪ್ 2 ಮಧುಮೇಹದ ಅಪಾಯ ತುಂಬಾನೇ ಅಧಿಕ, ಏಕೆ?
ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಧುಮೇಹ ಹೆಚ್ಚಾಗಲು ಪ್ರಮುಖ ಕಾರಣ ಆರೋಗ್ಯಕರವಲ್ಲದ ಜೀವನಶೈಲಿ. ತುಂಬಾ ಹೊತ್ತು ಒಂದೇ ಕಡೆ ಕೂತು ಕೆಲಸ ಮಾಡುವುದು, ದೈಹಿಕ ವ್ಯಾಯಾಮ ಇಲ್ಲದಿರುವುದು, ಅತ್ಯಧಿಕ ಮಾನಸಿಕ ಒತ್ತಡ, ಆರೋಗ್ಯಕರವಲ್ಲದ ಆಹಾರಶೈಲಿ ಈ ಎಲ್ಲಾ ಕಾರಣಗಳಿಂದ ಮಧುಮೇಹದ ಸಮಸ್ಯೆ ಉಂಟಾಗುವುದು. ಇದೀಗ ವಾಯು ಮಾಲಿನ್ಯ ಕೂಡ ಮಧುಮೇಹ ಹೆಚ್ಚಾಗಲು ಪ್ರಮುಖ ಕಾರಣ ಎಂದು ಅಧ್ಯಯನ ವರದಿ ಹೇಳಿದೆ.

ದೆಹಲಿಯಲ್ಲಿ ಯಾವ ರೀತಿಯಲ್ಲಿ ವಾಯು ಮಾಲಿನ್ಯವಿದೆ ಎಂಬುವುದರ ಬಗ್ಗೆ ವಾರ್ತೆಗಳಲ್ಲಿ ನೋಡುತ್ತಿರುತ್ತೇವೆ. ಅಲ್ಲಿ ವಾಯು ಮಾಲಿನ್ಯದಿಂದಾಗಿ ಇಡೀ ವಾತಾವರಣ ಮಂಜು ಮಂಜಾಗುವುದು, ಆ ಸಂದರ್ಭದಲ್ಲಿ ಓಡಾಡುವುದೇ ಕಷ್ಟವಾಗುವುದು, ಅಸ್ತಮಾ, ಶ್ವಾಸಕೋಶದ ಸಮಸ್ಯೆ ಇರುವವರಿಗೆ ಈ ಅವಧಿ ತುಂಬಾನೇ ದುಸ್ಥರವಾಗಿರುತ್ತದೆ. ಇತ್ತೀಚಿನ ಹೊಸ ಅಧ್ಯಯನ ವರದಿಯು ವಾಯು ಮಾಲಿನ್ಯ ಮಧುಮೇಹಿಗಳಿಗೂ ಹೆಚ್ಚು ಅಪಾಯಕಾರಿ ಎಂದು ಹೇಳಿದೆ.
2010ರಿಂದ 2017ರವರೆಗೆ ಈ ಅಧ್ಯಯನ ನಡೆಸಲಾಯಿತು, ಈ ಅಧ್ಯಯನದಲ್ಲಿ ದೆಹಲಿ ಹಾಗೂ ಚೆನ್ನೈ ಜನರನ್ನು ಒಳಪಡಿಸಲಾಯಿತು. ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ 82-100μg/m3 ಹಾಗೂ ಚೆನ್ನೈನಲ್ಲಿ ವಾಯು ಮಾಲಿನ್ಯ ಪ್ರಮಾಣ 30-40μg/m3 ಇದ್ದು ವಾಯು ಮಾಲಿನ್ಯ ಅಧಿಕವಿರುವ ಕಡೆ ಮಧುಮೇಹಿಗಳ ಸಂಖ್ಯೆ ಅಧಿಕವಿದೆ ಎಂದು ಈ ವರದಿ ಹೇಳಿದೆ.
ದೇಶದಲ್ಲಿಯೇ ಅತ್ಯಧಿಕ ವಾಯು ಮಾಲಿನ್ಯ ಇರುವ ಪ್ರದೇಶ ದೆಹಲಿ
ದೆಹಲಿಯಲ್ಲಿ ವಾಯು ಮಾಲಿನ್ಯ ತುಂಬಾನೇ ಅಧಿಕವಿದೆ. ಹಾಗಾಗಿ ದೆಹಲಿಯಲ್ಲಿ ಪಟಾಕಿ ಸಿಡಿಸಲು ಅನುಮತಿ ನೀಡುವುದಿಲ್ಲ.
ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ವಾಯು ಮಾಲಿನ್ಯ
ವಾಯು ಮಾಲಿನ್ಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ದೆಹಲಿ ಹೀಗೆ ಮುಂದುವರೆದರೆ ಇನ್ನು ಕೆಲವು ವರ್ಷಗಳಲ್ಲಿ ಮನುಷ್ಯರು ವಾಸ ಮಾಡುವುದೇ ಕಷ್ಟವಾಗಬಹುದು, ದೆಹಲಿಯಲ್ಲಿ ವಾಯು ಮಾಲಿನ್ಯದಿಂದಾಗಿ ಶ್ವಾಸಕೋಶ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿದೆ.
ಮಧುಮೇಹಗಳು ಹೊರಗಡೆ ಓಡಾಡುವಾಗ ಮಾಸ್ಕ್ ಧರಿಸಿ
ಮಧುಮೇಹಿಗಳು ವಾಯು ಮಾಲಿನ್ಯ ಇರುವ ಕಡೆ ಓಡಾಡುವಾಗ ಮಾಸ್ಕ್ ಧರಿಸಿ, ಇದರಿಂದ ವಾಯು ಮಾಲಿನ್ಯದ ಅಪಾಯವನ್ನು ಸ್ವಲ್ಪ ಮಟ್ಟಿಗೆ ತಡೆಗಟ್ಟಬಹುದು.
ಮಧುಮೇಹದಿಂದಾಗಿ ಯಾವೆಲ್ಲಾ ಗಂಭೀರ ಸಮಸ್ಯೆ ಉಂಟಾಗುವುದು
ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗುವುದು
ಮಧುಮೇಹಿಗಳಲ್ಲಿ ರಕ್ತದೊತ್ತಡ ಅಧಿಕವಾಗಿ ಹೃದಯಾಗಾತ ಉಂಟಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ರಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಬೇಕು.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ದೇಹದ ರಕ್ತದಲ್ಲಿ ಸಕ್ಕರೆಯಂಶ ಅಧಿಕವಾದರೆ ದೃಷ್ಟಿದೋಷ ಉಂಟಾಗುವ ಸಾಧ್ಯತೆ ಇದೆ. ಮಧುಮೇಹಿಗಳಲ್ಲಿ ಕಣ್ಣು ಮಂಜಾಗುವ ಸಮಸ್ಯೆ ಕಂಡು ಬರುವುದು. ಆದ್ದರಿಂದ ಮಧುಮೇಹಿಗಳು ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಬೇಕು.
ಕಿಡ್ನಿಗೆ ಹಾನಿಯಾಗುವುದು
ಮಧುಮೇಹ ನಿಯಂತ್ರಣದಲ್ಲಿ ಇರದಿದ್ದರೆ ಕಿಡ್ನಿಗೆ ಹಾನಿಯುಂಟಾಗುವುದು. ಆದ್ದರಿಂದ ಕಿಡ್ನಿಯ ಆರೋಗ್ಯದ ಬಗ್ಗೆ ತಿಳಿಯಲು ನಿಯಮಿತವಾಗಿ ಮಾಡಿಸುತ್ತಾ ಇರಬೇಕು.
ನರಗಳಿಗೆ ಸಂಬಂಧಿಸಿದ ಸಮಸ್ಯೆ
ದೇಹದಲ್ಲಿ ಸಕ್ಕರೆಯಂಶ ಹೆಚ್ಚಾದಾಗ ನರಗಳಿಗೆ ಸಮಸ್ಯೆ ಉಂಟಾಗುವುದು. ಮಧುಮೇಹಿಗಳು ಮದ್ಯಪಾನ ಮಾಡಿದರೆ ನರಗಳಿಗೆ ಅಧಿಕ ಹಾನಿಯಾಗುವುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ.



Click it and Unblock the Notifications