Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ದೆಹಲಿಯಲ್ಲಿ ಟೈಪ್ 2 ಮಧುಮೇಹದ ಅಪಾಯ ತುಂಬಾನೇ ಅಧಿಕ, ಏಕೆ?
ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಧುಮೇಹ ಹೆಚ್ಚಾಗಲು ಪ್ರಮುಖ ಕಾರಣ ಆರೋಗ್ಯಕರವಲ್ಲದ ಜೀವನಶೈಲಿ. ತುಂಬಾ ಹೊತ್ತು ಒಂದೇ ಕಡೆ ಕೂತು ಕೆಲಸ ಮಾಡುವುದು, ದೈಹಿಕ ವ್ಯಾಯಾಮ ಇಲ್ಲದಿರುವುದು, ಅತ್ಯಧಿಕ ಮಾನಸಿಕ ಒತ್ತಡ, ಆರೋಗ್ಯಕರವಲ್ಲದ ಆಹಾರಶೈಲಿ ಈ ಎಲ್ಲಾ ಕಾರಣಗಳಿಂದ ಮಧುಮೇಹದ ಸಮಸ್ಯೆ ಉಂಟಾಗುವುದು. ಇದೀಗ ವಾಯು ಮಾಲಿನ್ಯ ಕೂಡ ಮಧುಮೇಹ ಹೆಚ್ಚಾಗಲು ಪ್ರಮುಖ ಕಾರಣ ಎಂದು ಅಧ್ಯಯನ ವರದಿ ಹೇಳಿದೆ.

ದೆಹಲಿಯಲ್ಲಿ ಯಾವ ರೀತಿಯಲ್ಲಿ ವಾಯು ಮಾಲಿನ್ಯವಿದೆ ಎಂಬುವುದರ ಬಗ್ಗೆ ವಾರ್ತೆಗಳಲ್ಲಿ ನೋಡುತ್ತಿರುತ್ತೇವೆ. ಅಲ್ಲಿ ವಾಯು ಮಾಲಿನ್ಯದಿಂದಾಗಿ ಇಡೀ ವಾತಾವರಣ ಮಂಜು ಮಂಜಾಗುವುದು, ಆ ಸಂದರ್ಭದಲ್ಲಿ ಓಡಾಡುವುದೇ ಕಷ್ಟವಾಗುವುದು, ಅಸ್ತಮಾ, ಶ್ವಾಸಕೋಶದ ಸಮಸ್ಯೆ ಇರುವವರಿಗೆ ಈ ಅವಧಿ ತುಂಬಾನೇ ದುಸ್ಥರವಾಗಿರುತ್ತದೆ. ಇತ್ತೀಚಿನ ಹೊಸ ಅಧ್ಯಯನ ವರದಿಯು ವಾಯು ಮಾಲಿನ್ಯ ಮಧುಮೇಹಿಗಳಿಗೂ ಹೆಚ್ಚು ಅಪಾಯಕಾರಿ ಎಂದು ಹೇಳಿದೆ.
2010ರಿಂದ 2017ರವರೆಗೆ ಈ ಅಧ್ಯಯನ ನಡೆಸಲಾಯಿತು, ಈ ಅಧ್ಯಯನದಲ್ಲಿ ದೆಹಲಿ ಹಾಗೂ ಚೆನ್ನೈ ಜನರನ್ನು ಒಳಪಡಿಸಲಾಯಿತು. ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ 82-100μg/m3 ಹಾಗೂ ಚೆನ್ನೈನಲ್ಲಿ ವಾಯು ಮಾಲಿನ್ಯ ಪ್ರಮಾಣ 30-40μg/m3 ಇದ್ದು ವಾಯು ಮಾಲಿನ್ಯ ಅಧಿಕವಿರುವ ಕಡೆ ಮಧುಮೇಹಿಗಳ ಸಂಖ್ಯೆ ಅಧಿಕವಿದೆ ಎಂದು ಈ ವರದಿ ಹೇಳಿದೆ.
ದೇಶದಲ್ಲಿಯೇ ಅತ್ಯಧಿಕ ವಾಯು ಮಾಲಿನ್ಯ ಇರುವ ಪ್ರದೇಶ ದೆಹಲಿ
ದೆಹಲಿಯಲ್ಲಿ ವಾಯು ಮಾಲಿನ್ಯ ತುಂಬಾನೇ ಅಧಿಕವಿದೆ. ಹಾಗಾಗಿ ದೆಹಲಿಯಲ್ಲಿ ಪಟಾಕಿ ಸಿಡಿಸಲು ಅನುಮತಿ ನೀಡುವುದಿಲ್ಲ.
ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ವಾಯು ಮಾಲಿನ್ಯ
ವಾಯು ಮಾಲಿನ್ಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ದೆಹಲಿ ಹೀಗೆ ಮುಂದುವರೆದರೆ ಇನ್ನು ಕೆಲವು ವರ್ಷಗಳಲ್ಲಿ ಮನುಷ್ಯರು ವಾಸ ಮಾಡುವುದೇ ಕಷ್ಟವಾಗಬಹುದು, ದೆಹಲಿಯಲ್ಲಿ ವಾಯು ಮಾಲಿನ್ಯದಿಂದಾಗಿ ಶ್ವಾಸಕೋಶ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿದೆ.
ಮಧುಮೇಹಗಳು ಹೊರಗಡೆ ಓಡಾಡುವಾಗ ಮಾಸ್ಕ್ ಧರಿಸಿ
ಮಧುಮೇಹಿಗಳು ವಾಯು ಮಾಲಿನ್ಯ ಇರುವ ಕಡೆ ಓಡಾಡುವಾಗ ಮಾಸ್ಕ್ ಧರಿಸಿ, ಇದರಿಂದ ವಾಯು ಮಾಲಿನ್ಯದ ಅಪಾಯವನ್ನು ಸ್ವಲ್ಪ ಮಟ್ಟಿಗೆ ತಡೆಗಟ್ಟಬಹುದು.
ಮಧುಮೇಹದಿಂದಾಗಿ ಯಾವೆಲ್ಲಾ ಗಂಭೀರ ಸಮಸ್ಯೆ ಉಂಟಾಗುವುದು
ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗುವುದು
ಮಧುಮೇಹಿಗಳಲ್ಲಿ ರಕ್ತದೊತ್ತಡ ಅಧಿಕವಾಗಿ ಹೃದಯಾಗಾತ ಉಂಟಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ರಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಬೇಕು.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ದೇಹದ ರಕ್ತದಲ್ಲಿ ಸಕ್ಕರೆಯಂಶ ಅಧಿಕವಾದರೆ ದೃಷ್ಟಿದೋಷ ಉಂಟಾಗುವ ಸಾಧ್ಯತೆ ಇದೆ. ಮಧುಮೇಹಿಗಳಲ್ಲಿ ಕಣ್ಣು ಮಂಜಾಗುವ ಸಮಸ್ಯೆ ಕಂಡು ಬರುವುದು. ಆದ್ದರಿಂದ ಮಧುಮೇಹಿಗಳು ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಬೇಕು.
ಕಿಡ್ನಿಗೆ ಹಾನಿಯಾಗುವುದು
ಮಧುಮೇಹ ನಿಯಂತ್ರಣದಲ್ಲಿ ಇರದಿದ್ದರೆ ಕಿಡ್ನಿಗೆ ಹಾನಿಯುಂಟಾಗುವುದು. ಆದ್ದರಿಂದ ಕಿಡ್ನಿಯ ಆರೋಗ್ಯದ ಬಗ್ಗೆ ತಿಳಿಯಲು ನಿಯಮಿತವಾಗಿ ಮಾಡಿಸುತ್ತಾ ಇರಬೇಕು.
ನರಗಳಿಗೆ ಸಂಬಂಧಿಸಿದ ಸಮಸ್ಯೆ
ದೇಹದಲ್ಲಿ ಸಕ್ಕರೆಯಂಶ ಹೆಚ್ಚಾದಾಗ ನರಗಳಿಗೆ ಸಮಸ್ಯೆ ಉಂಟಾಗುವುದು. ಮಧುಮೇಹಿಗಳು ಮದ್ಯಪಾನ ಮಾಡಿದರೆ ನರಗಳಿಗೆ ಅಧಿಕ ಹಾನಿಯಾಗುವುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ.



Click it and Unblock the Notifications