Latest Updates
-
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ದೆಹಲಿಯಲ್ಲಿ ಟೈಪ್ 2 ಮಧುಮೇಹದ ಅಪಾಯ ತುಂಬಾನೇ ಅಧಿಕ, ಏಕೆ?
ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮಧುಮೇಹ ಹೆಚ್ಚಾಗಲು ಪ್ರಮುಖ ಕಾರಣ ಆರೋಗ್ಯಕರವಲ್ಲದ ಜೀವನಶೈಲಿ. ತುಂಬಾ ಹೊತ್ತು ಒಂದೇ ಕಡೆ ಕೂತು ಕೆಲಸ ಮಾಡುವುದು, ದೈಹಿಕ ವ್ಯಾಯಾಮ ಇಲ್ಲದಿರುವುದು, ಅತ್ಯಧಿಕ ಮಾನಸಿಕ ಒತ್ತಡ, ಆರೋಗ್ಯಕರವಲ್ಲದ ಆಹಾರಶೈಲಿ ಈ ಎಲ್ಲಾ ಕಾರಣಗಳಿಂದ ಮಧುಮೇಹದ ಸಮಸ್ಯೆ ಉಂಟಾಗುವುದು. ಇದೀಗ ವಾಯು ಮಾಲಿನ್ಯ ಕೂಡ ಮಧುಮೇಹ ಹೆಚ್ಚಾಗಲು ಪ್ರಮುಖ ಕಾರಣ ಎಂದು ಅಧ್ಯಯನ ವರದಿ ಹೇಳಿದೆ.

ದೆಹಲಿಯಲ್ಲಿ ಯಾವ ರೀತಿಯಲ್ಲಿ ವಾಯು ಮಾಲಿನ್ಯವಿದೆ ಎಂಬುವುದರ ಬಗ್ಗೆ ವಾರ್ತೆಗಳಲ್ಲಿ ನೋಡುತ್ತಿರುತ್ತೇವೆ. ಅಲ್ಲಿ ವಾಯು ಮಾಲಿನ್ಯದಿಂದಾಗಿ ಇಡೀ ವಾತಾವರಣ ಮಂಜು ಮಂಜಾಗುವುದು, ಆ ಸಂದರ್ಭದಲ್ಲಿ ಓಡಾಡುವುದೇ ಕಷ್ಟವಾಗುವುದು, ಅಸ್ತಮಾ, ಶ್ವಾಸಕೋಶದ ಸಮಸ್ಯೆ ಇರುವವರಿಗೆ ಈ ಅವಧಿ ತುಂಬಾನೇ ದುಸ್ಥರವಾಗಿರುತ್ತದೆ. ಇತ್ತೀಚಿನ ಹೊಸ ಅಧ್ಯಯನ ವರದಿಯು ವಾಯು ಮಾಲಿನ್ಯ ಮಧುಮೇಹಿಗಳಿಗೂ ಹೆಚ್ಚು ಅಪಾಯಕಾರಿ ಎಂದು ಹೇಳಿದೆ.
2010ರಿಂದ 2017ರವರೆಗೆ ಈ ಅಧ್ಯಯನ ನಡೆಸಲಾಯಿತು, ಈ ಅಧ್ಯಯನದಲ್ಲಿ ದೆಹಲಿ ಹಾಗೂ ಚೆನ್ನೈ ಜನರನ್ನು ಒಳಪಡಿಸಲಾಯಿತು. ದೆಹಲಿಯಲ್ಲಿ ವಾಯು ಮಾಲಿನ್ಯದ ಪ್ರಮಾಣ 82-100μg/m3 ಹಾಗೂ ಚೆನ್ನೈನಲ್ಲಿ ವಾಯು ಮಾಲಿನ್ಯ ಪ್ರಮಾಣ 30-40μg/m3 ಇದ್ದು ವಾಯು ಮಾಲಿನ್ಯ ಅಧಿಕವಿರುವ ಕಡೆ ಮಧುಮೇಹಿಗಳ ಸಂಖ್ಯೆ ಅಧಿಕವಿದೆ ಎಂದು ಈ ವರದಿ ಹೇಳಿದೆ.
ದೇಶದಲ್ಲಿಯೇ ಅತ್ಯಧಿಕ ವಾಯು ಮಾಲಿನ್ಯ ಇರುವ ಪ್ರದೇಶ ದೆಹಲಿ
ದೆಹಲಿಯಲ್ಲಿ ವಾಯು ಮಾಲಿನ್ಯ ತುಂಬಾನೇ ಅಧಿಕವಿದೆ. ಹಾಗಾಗಿ ದೆಹಲಿಯಲ್ಲಿ ಪಟಾಕಿ ಸಿಡಿಸಲು ಅನುಮತಿ ನೀಡುವುದಿಲ್ಲ.
ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ ವಾಯು ಮಾಲಿನ್ಯ
ವಾಯು ಮಾಲಿನ್ಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ, ದೆಹಲಿ ಹೀಗೆ ಮುಂದುವರೆದರೆ ಇನ್ನು ಕೆಲವು ವರ್ಷಗಳಲ್ಲಿ ಮನುಷ್ಯರು ವಾಸ ಮಾಡುವುದೇ ಕಷ್ಟವಾಗಬಹುದು, ದೆಹಲಿಯಲ್ಲಿ ವಾಯು ಮಾಲಿನ್ಯದಿಂದಾಗಿ ಶ್ವಾಸಕೋಶ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿದೆ.
ಮಧುಮೇಹಗಳು ಹೊರಗಡೆ ಓಡಾಡುವಾಗ ಮಾಸ್ಕ್ ಧರಿಸಿ
ಮಧುಮೇಹಿಗಳು ವಾಯು ಮಾಲಿನ್ಯ ಇರುವ ಕಡೆ ಓಡಾಡುವಾಗ ಮಾಸ್ಕ್ ಧರಿಸಿ, ಇದರಿಂದ ವಾಯು ಮಾಲಿನ್ಯದ ಅಪಾಯವನ್ನು ಸ್ವಲ್ಪ ಮಟ್ಟಿಗೆ ತಡೆಗಟ್ಟಬಹುದು.
ಮಧುಮೇಹದಿಂದಾಗಿ ಯಾವೆಲ್ಲಾ ಗಂಭೀರ ಸಮಸ್ಯೆ ಉಂಟಾಗುವುದು
ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗುವುದು
ಮಧುಮೇಹಿಗಳಲ್ಲಿ ರಕ್ತದೊತ್ತಡ ಅಧಿಕವಾಗಿ ಹೃದಯಾಗಾತ ಉಂಟಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ರಮಧುಮೇಹಿಗಳು ದೇಹದಲ್ಲಿ ಸಕ್ಕರೆಯಂಶ ನಿಯಂತ್ರಣದಲ್ಲಿಡಬೇಕು.
ಕಣ್ಣುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ದೇಹದ ರಕ್ತದಲ್ಲಿ ಸಕ್ಕರೆಯಂಶ ಅಧಿಕವಾದರೆ ದೃಷ್ಟಿದೋಷ ಉಂಟಾಗುವ ಸಾಧ್ಯತೆ ಇದೆ. ಮಧುಮೇಹಿಗಳಲ್ಲಿ ಕಣ್ಣು ಮಂಜಾಗುವ ಸಮಸ್ಯೆ ಕಂಡು ಬರುವುದು. ಆದ್ದರಿಂದ ಮಧುಮೇಹಿಗಳು ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಬೇಕು.
ಕಿಡ್ನಿಗೆ ಹಾನಿಯಾಗುವುದು
ಮಧುಮೇಹ ನಿಯಂತ್ರಣದಲ್ಲಿ ಇರದಿದ್ದರೆ ಕಿಡ್ನಿಗೆ ಹಾನಿಯುಂಟಾಗುವುದು. ಆದ್ದರಿಂದ ಕಿಡ್ನಿಯ ಆರೋಗ್ಯದ ಬಗ್ಗೆ ತಿಳಿಯಲು ನಿಯಮಿತವಾಗಿ ಮಾಡಿಸುತ್ತಾ ಇರಬೇಕು.
ನರಗಳಿಗೆ ಸಂಬಂಧಿಸಿದ ಸಮಸ್ಯೆ
ದೇಹದಲ್ಲಿ ಸಕ್ಕರೆಯಂಶ ಹೆಚ್ಚಾದಾಗ ನರಗಳಿಗೆ ಸಮಸ್ಯೆ ಉಂಟಾಗುವುದು. ಮಧುಮೇಹಿಗಳು ಮದ್ಯಪಾನ ಮಾಡಿದರೆ ನರಗಳಿಗೆ ಅಧಿಕ ಹಾನಿಯಾಗುವುದು, ಆದ್ದರಿಂದ ಈ ಬಗ್ಗೆ ಜಾಗ್ರತೆವಹಿಸಿ.



Click it and Unblock the Notifications