Latest Updates
-
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ರಾಜ ಪರ್ಬ 2026: ಮಹಿಳೆಯರಿಗೆ ವಿಶ್ರಾಂತಿ ನೀಡುವ ಈ ಹಬ್ಬದ ಆಚರಣೆ ಮತ್ತು ವಿಶೇಷತೆಗಳೇನು? -
ದೆಹಲಿ ಮಾಲಿನ್ಯದ ಆತಂಕ: ನಿಮ್ಮ ಮನೆಯನ್ನು ವಿಷಕಾರಿ ಗಾಳಿಯಿಂದ ರಕ್ಷಿಸಲು ಈ ಸರಳ ಕ್ರಮಗಳನ್ನು ಪಾಲಿಸಿ -
ಖರ್ಜೂರದಲ್ಲಿ ಹುಳುಗಳ ಆತಂಕ: ಆನ್ಲೈನ್ನಲ್ಲಿ ಆರ್ಡರ್ ಮಾಡುವ ಮುನ್ನ ಈ ತಪ್ಪು ಮಾಡಬೇಡಿ! -
ಸ್ಪ್ಯಾನಿಷ್ ಗ್ರ್ಯಾಂಡ್ ಪ್ರಿಕ್ಸ್ 2026: ಬಾರ್ಸಿಲೋನಾದಲ್ಲಿ ಇಂದು ಹೈ-ವೋಲ್ಟೇಜ್ ರೇಸ್, ಮಿಸ್ ಮಾಡ್ಬೇಡಿ! -
ರಕ್ತದಾನದ ನಂತರ ಜಿಮ್ಗೆ ಹೋಗುವ ಮುನ್ನ ಎಚ್ಚರ! ಈ ತಪ್ಪುಗಳನ್ನು ಮಾಡಬೇಡಿ
ಸಂಕ್ರಾಂತಿ 2026: ಈ ವರ್ಷ ಸಂಕ್ರಾಂತಿ 14ರಂದು ಅಥವಾ 15? ಹಬ್ಬದ ಹಿನ್ನೆಲೆ, ಮಹತ್ವ ಇಲ್ಲಿದೆ!
ಮಕರ ಸಂಕ್ರಾಂತಿ ಹಿಂದೂಗಳಿಗೆ ತುಂಬಾ ಮಹತ್ವವಾದ ದಿನವಾಗಿದೆ. ಮಕರ ಸಂಕ್ರಾಂತಿಯನ್ನು ಭಾರತದ ಬಹುತೇಕ ಎಲ್ಲಾ ಭಾಗದಲ್ಲೂ ಆಚರಿಸುತ್ತಾರೆ. ಆದ್ರೆ ಒಂದೊಂದು ಕಡೆ ಒಂದೊಂದು ರೀತಿಯ ಹೆಸರಿನಲ್ಲಿ ಇದನ್ನು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಈ ದಿನ ಸೂರ್ಯನು ತನ್ನ ಪಥ ಬದಲಿಸಿ ಉತ್ತರಾಯಣಕ್ಕೆ ಚಲಿಸುತ್ತಾನೆ ಎಂದು ನಂಬಲಾಗಿದೆ. ಉತ್ತರಾಯಣಕ್ಕೆ ಎಂದರೆ ಸೂರ್ಯನು ದಕ್ಷಿಣದಿಂದ ಉತ್ತರ ದಿಕ್ಕಿಗೆ ಸಂಚರಿಸಲು ಪ್ರಾರಂಭಿಸುವ ಪವಿತ್ರ ಕಾಲ ಎಂದು ಕೂಡ ಕರೆಯಲಾಗುತ್ತದೆ.
ಉತ್ತರಾಯಣದ ಆರಂಭವನ್ನು ಮಕರ ಸಂಕ್ರಾಂತಿಯಂದು ಆಚರಿಸಲಾಗುತ್ತದೆ. ಈ ದಿನ ಸೂರ್ಯನು ಮಕರ ರಾಶಿಗೆ ಪ್ರವೇಶಿಸುತ್ತಾನೆ.ಮಕರ ಸಂಕ್ರಾಂತಿಯನ್ನು ಒಂದೊಂದು ಕಡೆ ಒಂದೊಂದು ಹೆಸರಿನಲ್ಲಿ ಆಚರಣೆ ಮಾಡಲಾಗುವುದು. ಕರ್ನಾಟಕದಲ್ಲಿ ಮಕರ ಸಂಕ್ರಾಂತಿ, ಆಂಧ್ರಪ್ರದೇಶ ತಮಿಳುನಾಡಿನಲ್ಲಿ ಪೊಂಗಲ್, ಪಂಜಾಬ್, ಹರಿಯಾಣದಲ್ಲಿ ಲೋಹರಿ, ಅಸ್ಸಾಂನಲ್ಲಿ ಮಘಾ ಬಿಹು ಬಿಹಾರದಲ್ಲಿ ಕಿಚಡಿ ಎಂದು ಆಚರಿಸಲಾಗುವುದು.

ಮಕರಸಂಕ್ರಾಂತಿಯಿಂದ ರಥ ಸಪ್ತಮಿಯವರೆಗಿನ ಕಾಲವು ಪರ್ವಕಾಲ ವಾಗಿರುತ್ತದೆ. ಈ ಸಮಯದಲ್ಲಿ ಹಲವು ರೀತಿಯ ಶುಭಗಳನ್ನು ನೋಡಬಹುದು. ಮಕರ ಸಂಕ್ರಾಂತಿಯು ರೈತರ ಪಾಲಿಗೆ ಬಹಳ ಪ್ರಮುಖ ಹಬ್ಬ ಎಂದು ಪರಿಗಣಿಸಲಾಗಿದೆ. ಹಾಗೆ ಈ ಹಬ್ಬದಲ್ಲಿ ಎಲ್ಲಾ ವಿಶೇಷ ಕಾರ್ಯಗಳನ್ನ ಮಾಡಲು ತಯಾರಿ ನಡೆಸಲಾಗುತ್ತದೆ.
ಹಿಂದೂ ಸಂಸ್ಕೃತಿಯಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ದಿನದಂದು ಸ್ನಾನ ಮಾಡುವುದು ಮತ್ತು ದಾನ ಮಾಡುವುದು ಮುಂತಾದ ಆಚರಣೆಗಳನ್ನು ಮಾಡುವುದರಿಂದ ಶುಭ ಫಲಿತಾಂಶಗಳು ದೊರೆಯುತ್ತವೆ. ಈ ಸಂದರ್ಭದಲ್ಲಿ ಸೂರ್ಯನಿಗೆ ಪ್ರಾರ್ಥನೆ ಸಲ್ಲಿಸುವುದರಿಂದ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ದೀರ್ಘಾಯುಷ್ಯ ಸಿಗುತ್ತದೆ. ಹಾಗೆ ಇದು ಸಂಪತ್ತು, ಸಮೃದ್ಧಿ ತರುವ ಹಬ್ಬ ಎಂದು ಪರಿಗಣಿಸಲಾಗುತ್ತದೆ.
ಈ ವರ್ಷ ಸಂಕ್ರಾಂತಿ ಯಾವಾಗ?
ಪ್ರತಿ ವರ್ಷ ಸೂರ್ಯ ಮಕರ ರಾಶಿಗೆ ಪ್ರವೇಶಿಸುವ ಸಮಯವನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗಿದೆ. ಈ ವರ್ಷ ಜನವರಿ 14ರಂದು ಈ ಹಬ್ಬ ಆಚರಿಸಲಾಗುತ್ತದೆ. ಹಾಗೆ ಕೆಲವು ಕಡೆ ಜನವರಿ 15ರಂದು ಆಚರಿಸಲಾಗುತ್ತದೆ.
ಮಕರ ಸಂಕ್ರಾಂತಿ ಪುಣ್ಯ ಕಾಲ
ಜನವರಿ 14- ಬುಧವಾರ- ಮಧ್ಯಾಹ್ನ 03:13 ರಿಂದ ಸಂಜೆ 06:15 (03 ಗಂಟೆ 02 ನಿಮಿಷಗಳು)
ಮಕರ ಸಂಕ್ರಾಂತಿ ಪೂಜಾ ವಿಧಿವಿಧಾನ
ಈ ದಿನ ಗಂಗಾ ಸ್ನಾನ ಮಾಡುವುದು ಪವಿತ್ರ ಎಂದು ನಂಬಲಾಗಿದೆ. ಬೆಳಗ್ಗೆ ಬೇಗ ಎದ್ದು ಸ್ನಾನ ಮುಗಿಸಿ. ಗಂಗಾ ನದಿಯಲ್ಲಿ ಸ್ನಾನ ಸಾಧ್ಯವಿಲ್ಲವಾಗಿರುವುದರಿಂದ ನೀರಿಗೆ ಎಳ್ಳು ಬೆರೆಸಿ ಸ್ನಾನ ಮಾಡಲಾಗುವುದು. ಒಂದು ಪಾತ್ರೆಯಲ್ಲಿ ಅಕ್ಕಿ, ಕೆಂಪು ಹೂವು, ಹಣ್ಣು ಇಟ್ಟು ಬಳಿಕ ಕಳಷದಲ್ಲಿ ನೀರು ಇಟ್ಟುಕೊಂಡು ಸೂರ್ಯನಿಗೆ ಜಲಾರ್ಪಣೆ ಮಾಡಬೇಕು. ಈ ಸಮಯದಲ್ಲಿ ಓಂ ಸೂರ್ಯಾಯ ನಮಃ ಅಥವಾ ಓಂ ಘೃಣಿ ಸೂರ್ಯಾಯ ನಮಃ ಎಂಬ ಮಂತ್ರ ಜಪಿಸಬೇಕು.
ಹಾಗೆ ಈ ದಿನವು ಬಡವರಿಗೆ ಈ ವಸ್ತುಗಳನ್ನು ದಾನ ನೀಡಬೇಕಂತೆ. ಅದ್ರಲ್ಲೂ ಆಹಾರ ಪದಾರ್ಥಗಳು, ಕಪ್ಪು ಎಳ್ಳು, ಬೆಲ್ಲ, ಅಕ್ಕಿ, ಬಟ್ಟೆ, ಹಣ, ಎಣ್ಣೆ ದಾನವಾಗಿ ನೀಡುವುದು ನಿಮ್ಮಲ್ಲಿ ಸಮೃದ್ಧಿ ಹೆಚ್ಚಿಸಲು ಕಾರಣವಾಗಲಿದೆ. ಈ ವಸ್ತುಗಳನ್ನು ದಾನ ಮಾಡುವುದರಿಂದ ಸೂರ್ಯನಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ. ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ, ಅಗತ್ಯ ವಸ್ತುಗಳಾದ ಬಟ್ಟೆ, ಹೊದಿಕೆ, ಚಪ್ಪಲಿ ದಾನವಾಗಿ ನೀಡಬೇಕು ಎಂದು ಹೇಳಲಾಗಿದೆ. ಹಾಗೆ ಎಳ್ಳು ಬೆಲ್ಲ ಸವಿಯುವುದು, ಸಂಕ್ರಾಂತಿ ಕಾಳು ಸವಿಯಲು ನೀಡುವುದು ಇ ಹಬ್ಬದ ಮತ್ತೊಂದು ಸಂಪ್ರದಾಯವಾಗಿದೆ.



Click it and Unblock the Notifications