Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಜುಲೈ ಆಗಸ್ಟ್ನಲ್ಲಿ ಶನಿ ಮಂಗಳ ಸಂಸಪ್ತಕ ಯೋಗ: ಜ್ಯೋತಿಷ್ಯ ಪ್ರಕಾರ ಪ್ರಕೃತಿ ವಿಕೋಪದ ಸೂಚನೆಯಿದೆ
ಜೂನ್ 30ಕ್ಕೆ ಮಂಗಳ ಕರ್ಕ ರಾಶಿಯನ್ನು ಬಿಟ್ಟು ಸಿಂಹ ರಾಶಿಗೆ ಪ್ರವೇಶಿಸಿದೆ. ಆಗಸ್ಟ್ 18ರವರೆಗೆ ಸಿಂಹ ರಾಶಿಯಲ್ಲಿ ಇರಲಿದೆ. ಮಂಗಳಗ್ರಹ ಸಾಮಾನ್ಯವಾಗಿ ಒಂದು ರಾಶಿಗೆ ಪ್ರವೇಶಿಸಿದರೆ 45-50 ದಿನ ಇರಲಿದೆ. ಈ ಸಮಯದಲ್ಲಿ ಕೇಂದ್ರದಲ್ಲಿ ಶನಿ, ರಾಹು-ಕೇತು ಅಥವಾ ಸೂರ್ಯ ಬಂದ್ರೆ ನೈಸರ್ಗಿಕ ಆಪತ್ತು ಉಂಟಾಗುವುದು ಎಂದು ಹೇಳಲಾಗುವುದು.

ಈ ಅವಧಿಯಲ್ಲಿ ಸಿಂಹದಲ್ಲಿ 48 ದಿನಗಳವರೆಗೆ ಇರಲಿದೆ, ಶನಿ ಕುಂಭ ರಾಶಿಯಲ್ಲಿದೆ, ಶನಿಯು ವಕ್ರೀಯ ಚಲನೆಯಲ್ಲಿ ಇದ್ದು ಈ ಅವಧಿಯಲ್ಲಿ ಮಂಗಳ ಸಂಸಪ್ತಕ ಯೋಗ ಉಂಟು ಮಾಡಿದೆ, ಇದರಿಂದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಲಿದೆ. ಈ ವರ್ಷ ಶ್ರಾವಣ ಮಾಸದಲ್ಲಿ ಈ ಸಂಸಪ್ತಕ ಯೋಗ ಉಂಟಾಗುವುದರಿಂದ ಅತಿವೃಷ್ಠಿ, ಅನಾವೃಷ್ಠಿ, ಭೂಕಂಪನ ಮುಂತಾದ ಪ್ರಕೃತಿ ವಿಕೋಪ ಸಂಭವಿಸಬಹುದು ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಈಗಾಗಲೇ ದೇಶದಲ್ಲಿ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ, ಮಳೆಯಿಂದ ಪ್ರವಾಹ ಭೀತಿ ಉಂಟಾಗಿದೆ.
ಯಾವುದೇ ಎರಡು ಗ್ರಹಗಳು ಪರಸ್ಪರ ಏಳನೇ ಸ್ಥಾನದಲ್ಲಿದ್ದರೆ, ಆ ಗ್ರಹಗಳ ನಡುವೆ ಸಂಸಪ್ತಕ ಯೋಗವು ರೂಪುಗೊಳ್ಳುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಯಾವಾಗ ಮಂಗಳವು ಸಿಂಹ ರಾಶಿಯಲ್ಲಿ ಸಾಗುತ್ತದೆಯೋ, ಆಗ ಶನಿಯು ಕುಂಭ ರಾಶಿಯಲ್ಲಿರುತ್ತಾನೆ. ಈ ಎರಡೂ ರಾಶಿಗಳು ಪರಸ್ಪರ ಏಳನೇ ಸ್ಥಾನದಲ್ಲಿವೆ. ಇದರಿಂದ ಸಂಸಪ್ತಕ ಯೋಗ ಉಂಟಾಗಿದೆ.
ಸಂಸಪ್ತಕವು ಶುಭ ಯೋಗವಾಗಿದ್ದರೂ, ಶುಭ ಮತ್ತು ಅಶುಭ ಗ್ರಹಗಳ ಸಂಯೋಜನೆಯಿಂದಾಗಿ, ಅದರ ಫಲಿತಾಂಶಗಳು ಸಹ ಬದಲಾಗುತ್ತವೆ. ಇಲ್ಲಿ ಶನಿ ಮತ್ತು ಮಂಗಳ ಎರಡನ್ನೂ ದುಷ್ಟ ಗ್ರಹಗಳೆಂದು ಪರಿಗಣಿಸಲಾಗಿದೆ. ಮಂಗಳವು ಅಗ್ನಿ ಅಂಶದಲ್ಲಿರುವುದರಿಂದ ಹೆಚ್ಚು ಉಗ್ರವಾಗಿರುತ್ತದೆ, ಆದರೆ ಶನಿಯು ಹಿಮ್ಮುಖ ಸ್ಥಿತಿಯಲ್ಲಿಇರುವುದರಿಂದ ಸಂಸಪ್ತಕ ಯೋಗ ಅಶುಭ ಫಲ ಬೀರಲಿದೆ.
ಈ ಯೋಗದಿಂದ ಪ್ರಕೃತಿ ವಿಕೋಪದ ಜತೆಗೆ ಅಗ್ನಿ, ಭೂಕಂಪ, ಅನಿಲ ಅವಘಡ, ವಾಯು ಅಪಘಾತ ಸಂಭವಿಸುವ ಸಾಧ್ಯತೆ ಇದೆ. ದೇಶದಲ್ಲಿ ಅತಿವೃಷ್ಟಿಯನ್ನೂ ಕಾಣಬಹುದು. ಮಂಗಳ ಮತ್ತು ಶನಿಯ ಈ ಸಂಸಪ್ತಕ ಯೋಗವು ಮೇಲೆ ಭೂಕುಸಿತ ಮತ್ತು ಭೂಕಂಪಗಳ ಸಾಧ್ಯತೆಗಳನ್ನು ಸಹ ಸೃಷ್ಟಿಸುತ್ತದೆ. ರಾಜಕೀಯ ಅಸ್ಥಿರತೆ ಎಂದರೆ ರಾಜಕೀಯ ವಾತಾವರಣ ಹೆಚ್ಚಾಗಿರುತ್ತದೆ. ಗಡಿಯಲ್ಲಿ ಉದ್ವಿಗ್ನತೆ ವಾತಾವರಣ ಇರಲಿದೆ.
ಚಿನ್ನ-ಬೆಳ್ಳಿಯ ಬೆಲೆ ಹೆಚ್ಚಾಗಲಿದೆ
ಈ ಅವಧಿಯಲ್ಲಿ ಕೆಂಪು ವಸ್ತುಗಳ ಬೆಲೆ ಹೆಚ್ಚಾಗಲಿದೆ, ಚಿನ್ನ-ಬೆಳ್ಳಿಯ ಬೆಲೆ ಹೆಚ್ಚಾಗಲಿದೆ. ರಾಜಕೀಯವಾಗಿ ಹಲವು ಚರ್ಚೆಗಳು ಉಂಟಾಗಲಿದೆ. ಮಹಿಳೆ ಹಾಗೂ ರೈತರ ಪರವಾಗಿ ದೇಶದಲ್ಲಿ ಹೊಸ ಕಾನೂನುಗಳು ಬರಲಿದೆ. ಕೇಂದ್ರದಲ್ಲಿ ತುಂಬಾ ಮಹತ್ವದ ಬದಲಾವಣೆಯಾಗಲಿದೆ. ಕೆಲ ಮಹಿಳಾ ರಾಜಕಾರಣಿಗಳು ತುಂಬಾ ಮಹತ್ವದ ಜವಾಬ್ದಾರಿ ಸಿಗಲಿದೆ.
ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗಲಿದೆ
ದೇಶದಲ್ಲಿ ಇದ್ದಕ್ಕಿದ್ದಂತೆ ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗಲಿದೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ. ಏಕೆಂದರೆ ವೈದಿಕ ಶಾಸ್ತ್ರದ ಪ್ರಕಾರ ಸಿಂಹವು ಹೃದಯಕ್ಕೆ ಸಂಬಂಧಿಸಿದ ರಾಶಿಯಾಗಿದೆ.
ಮಳೆಯಿಂದ ಪ್ರಕೃತಿ ವಿಕೋಪ ಉಂಟಾಗಲಿದೆ
ಮುಂದಿನ 45 ದಿನದವರೆಗೆ ಬಿಹಾರ, ಉತ್ತರ ಪ್ರದೇಶದಲ್ಲಿ ಅತ್ಯಧಿಕ ಮಳೆ ಬೀಳಲಿದೆ, ಕೆಲವು ಕಡೆ ಮಳೆಯ ಅಭಾವ ಕಡಿಮ ಇರಲಿದೆ. ಯುಪಿ, ಬಿಹಾರದಲ್ಲಿ ಪ್ರವಾಹ ಉಂಟಾಗಬಹುದು ಎಂದು ಹೇಳಲಾಗುವುದು, ಕೆಲವು ಕಡೆ ಭೂಕಂಪನ ಉಂಟಾಗಲಿದೆ, ಕೆಲವು ಕಡೆ ಮಳೆ ತುಂಬಾ ಕಡಿಮೆ ಬೀಳಿದೆ, ಹೀಗೆ ಒಂದು ಕಡೆ ಅಧಿಕ ಮಳೆ ಮತ್ತೊಂದು ಕಡೆ ಮಳೆಯ ಪ್ರಮಾಣ ಕಡಿಮೆ ಬೀಳಲಿದೆ.



Click it and Unblock the Notifications