Latest Updates
-
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ! -
ಶುಕ್ರ, ಶನಿ & ಸೂರ್ಯ ಸಂಗಮ: ಮೀನ ರಾಶಿಯಲ್ಲಿ ತ್ರಿಗ್ರಹ ಯೋಗ.. ಈ 5 ರಾಶಿಗಳಿಗೆ ಬಂಪರ್ ಲಾಟರಿ! ಯಾರಿಗೆ ಲಾಭ, ನಷ್ಟ?
School Holiday: ರಣಭೀಕರ ಮಳೆ.. ಎಂಟು ಜಿಲ್ಲೆಗಳಲ್ಲಿ ರಜೆ ಘೋಷಣೆ! ಇಲ್ಲಿದೆ ಪಟ್ಟಿ
ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದೆ. ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಜವರಾಯ, ಈಗ ಮತ್ತೆ ಅಬ್ಬರಿಸುತ್ತಿದ್ದಾನೆ. ಹೌದು, ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ (Karnataka Weather) ಸುರಿಯುತ್ತಿದ್ದು, ಹವಾಮಾನ ಇಲಾಖೆ ಈಗಾಗಲೇ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಭಾರೀ ಮಳೆಯಿಂದಾಗಿ ಎಂಟು ಜಿಲ್ಲೆಗಳಾದ್ಯಂತ ಶಾಲೆ ಮತ್ತು ಕಾಲೇಜುಗಳಿಗೆ ರಜೆ (school holiday in karnataka) ಘೋಷಿಸಲಾಗಿದೆ. ಎಲ್ಲೆಲ್ಲಿ ರಜೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯದ ಮಂಗಳೂರು, ಉಡುಪಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಂಗಾರು ಮಳೆಯ (Karnataka Rain) ಆರ್ಭಟ ಮುಂದುವರಿದಿದೆ. ಇಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳ ಪ್ರವಾಹ, ಕೃಷಿ ಭೂಮಿ ಜಲಾವೃತ ಮತ್ತು ಗುಡ್ಡ ಕುಸಿತದಂತಹ ಅನಾಹುತಗಳು ಸಂಭವಿಸಿವೆ. ಕಳೆದ ಕೆಲವು ದಿನಗಳಿಂದ ತುಸು ವಿರಾಮ ನೀಡಿದ್ದ ಮಳೆಯು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಕೊಡಗು ಮತ್ತು ಉತ್ತರ ಕರ್ನಾಟಕದ ಭಾಗಗಳಲ್ಲಿ ಮತ್ತೆ ಅಬ್ಬರಿಸುತ್ತಿದೆ. ಮಳೆಯಿಂದಾಗಿ ಉಂಟಾದ ತೊಂದರೆಗಳ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ವಿವಿಧ ತಾಲೂಕುಗಳಲ್ಲಿ ರಜೆ ನೀಡಲಾಗಿದೆ.

ಚಿತ್ರದುರ್ಗದಲ್ಲಿ ನಿರಂತರ ಮಳೆ, ಶಾಲೆಗಳಿಗೆ ರಜೆ
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಸೂಚಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ರಜೆ
ಉತ್ತರ ಕನ್ನಡ ಜಿಲ್ಲೆಯಲ್ಲಿ 'ರೆಡ್ ಅಲರ್ಟ್' ಘೋಷಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ 11 ತಾಲ್ಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಮುಂಡಗೋಡು ತಾಲೂಕಿಗೆ ಮಾತ್ರ ರಜೆ ನೀಡಿಲ್ಲ. ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಭಟ್ಕಳ, ಸಿದ್ಧಾಪುರ, ಯಲ್ಲಾಪುರ, ದಾಂಡೇಲಿ, ಜೋಯಿಡಾ ಮತ್ತು ಹಳಿಯಾಳದಲ್ಲಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ರಜೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯ ಮುನ್ಸೂಚನೆಯ ಕಾರಣ, ಜಿಲ್ಲಾಧಿಕಾರಿ ಎಚ್.ವಿ.ದರ್ಶನ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ರಜೆ
ಶಿವಮೊಗ್ಗ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಿವಿಧ ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಶಾಲಾ-ಕಾಲೇಜುಗಳಿಗೆ ರಜೆ ಆದೇಶ ಹೊರಡಿಸಿದ್ದಾರೆ.
ಹಾಸನ ಜಿಲ್ಲೆಯಲ್ಲೂ ರಜೆ
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಿರುವ ಕಾರಣ, ಸಕಲೇಶಪುರ ಮತ್ತು ಬೇಲೂರು ತಾಲೂಕುಗಳ ಅಂಗನವಾಡಿ ಹಾಗೂ ಪ್ರಾಥಮಿಕ & ಪ್ರೌಢಶಾಲೆಗಳಿಗೆ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ರಜೆ
ಕೊಡಗು ಜಿಲ್ಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಜೋರು ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ರಜೆ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿಯೂ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆಯಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಮುಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ (ನರಸಿಂಹರಾಜಪುರ) ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ವಸ್ತಾರೆ, ಆವತಿ ಹೋಬಳಿ ವ್ಯಾಪ್ತಿಯ ಅಂಗನವಾಡಿ ಮತ್ತು ಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ.
ದಾವಣಗೆರೆ ಜಿಲ್ಲೆಯಲ್ಲೂ ರಜೆ
ದಾವಣಗೆರೆ ಜಿಲ್ಲೆಯಾದ್ಯಂತವೂ ಭಾರೀ ಮಳೆಯಾಗುತ್ತಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ.



Click it and Unblock the Notifications












