Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಸೆ.7ಕ್ಕೆ ಗಣೇಶ ಪ್ರತಿಷ್ಠಾಪನೆಗೆ ಪೂಜಾ ಸಮಯ? ಗಣೇಶನನ್ನು ಮಧ್ಯಾಹ್ನ ಸಮಯದಲ್ಲಿ ಪೂಜಿಸುವುದೇಕೆ?
ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ, ಸಡಗರ-ಸಂಭ್ರಮದ ಹಬ್ಬ, ಈ ಸಡಗರ ಮನೆ-ಮನೆಗಳಿಗೆ ಸೀಮಿತವಾಗಿರದೆ ಊರಿಗೇ ಊರೇ ಸಿಂಗರಿಸಿಕೊಂಡಿರುತ್ತದೆ. ಕೆಲವರು ಮನೆಯಲ್ಲಿ ಗಣಪತಿ ಕೂರಿಸಿದರೆ, ಊರಿನವರು ಸೇರಿ ಗಣಪನ ಕೂರಿಸುತ್ತಾರೆ, ಬೆಂಗಳೂರು ಮುಂತಾದ ನಗರ ಪ್ರದೇಶಗಳಲ್ಲಿ ಪ್ರತಿಯೊಂದ ಗಲ್ಲಿಯಲ್ಲಿಯೂ ಗಣೆಶನ ಕೂರಿಸಿ ಆರಾಧಿಸಿಸುತ್ತಾರೆ.
ಕೆಲವು ಕಡೆ 3 ದಿನ ಗಣೇಶನ ಕೂರಿಸಿದರೆ , ಕೆಲವು ಕಡೆ 7 ದಿನ, 10 ದಿನ ಇಟ್ಟು ಗಣೇಶನಿಗೆ ಶಾಸ್ತ್ರೋಕ್ತವಾಗಿ ಪೂಜಿಸಿ ನಂತರ ವಿಸರ್ಜನೆ ಮಾಡಲಾಗುವುದು.

ಗಣೇಶನ ಪ್ರತಿಷ್ಠಾಪನೆ ಮಾಡುವಾಗ ಶ್ರಾಸ್ತೋಕ್ಷವಾಗಿ ಮಾಡಬೇಕು, ಗಣೇಶನ ಕೂರಿಸುವ ಕಡೆ ಈ ಬಗ್ಗೆ ಗಮನಹರಿಸಬೇಕು:
ಗಣೇಶನ ಪ್ರತಿಷ್ಠಾಪನೆ ಮಾಡುವ ಮುನ್ನ ಆ ಸ್ಥಳಗಳನ್ನು ಸುದ್ಧ ಮಾಡಬೇಕು.
ಗಣೇಶ ಮೂರ್ತಿಯನ್ನು ಆಯ್ಕೆ ಮಾಡುವಾಗ ಡೊಳ್ಳು ಹೊಟ್ಟೆಯ ಗಣಪನ ಆಯ್ಕೆ ಮಾಡಿ. ಡೊಳ್ಳು ಹೊಟ್ಟೆ ನಕರಾತ್ಮಕ ಶಕ್ತಿಯನ್ನು ಹೀರಿಕೊಳ್ಳುತ್ತದೆ, ಆ ಪರಿಸರದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುವುದು ಎಂದು ಹೇಳಲಾಗುವುದು
ನಂತರ ಗಣೇಶನನ್ನು ಮಂತ್ರಗಳನ್ನು ಪಠಿಸುತ್ತಾ ಮಾಡಿ.
ಗಣೇಶನನ್ನು ಈ ಸಮಯದಲ್ಲಿ ಪ್ರತಿಷ್ಠಾಪಿಸಿ
ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ
ಪ್ರತಿಷ್ಟಾಪನೆ ಹಾಗೂ ಪೂಜಾ ಸಮಯ
ಮಧ್ಯಾಹ್ನ ಗಣೇಶ ಪೂಜಾ ಮುಹೂರ್ತ ಸೆಪ್ಟೆಂಬರ್ 7, 11:04ರಿಂದ 01:31ರವರೆಗೆ
ಸಮಯ: 2 ಗಂಟೆ 28 ನಿಮಿಷವಿದೆ.
ಗಣೇಶನಿಗೆ ಮದ್ಯಾಹ್ನ ಸಮಯದಲ್ಲಿ ಪೂಜೆ ಸಲ್ಲಿಸುವುದೇಕೆ?
ಶ್ರೀ ಗಣೇಶನು ಮಧ್ಯಾಹ್ನದ ಹೊತ್ತಿನಲ್ಲಿ ಜನಿಸಿದನು ಎಂದು ಹೇಳಲಾಗುವುದು, ಹಾಗಾಗಿ ಗಣೇಶನನ್ನು ಮಧ್ಯಾಹ್ನದ ಹೊತ್ತಿನಲ್ಲಿ ಪೂಜಿಸಬೇಕು ಎಂದು ಹೇಳಲಾಗುವುದು.
ಗಣೇಶನ ಪ್ರತಿಷ್ಟಾಪನೆ ಮಾಡುವಾಗ ಷೋಡೋಪಚಾರ ಪೂಜೆಯ ಮೂಲಕ ಮಾಡಬೇಕು:
ಮೊದಲಿಗೆ ಆವಾಹನೆ ಮಾಡಬೇಕು:ಎರಡು ಕೈಗಳನ್ನು ಜೋಡಿಸಿ ನಮಸ್ಕರಿಸಿ ಆವಾಹನೆ ಮಾಡಬೇಕು.
ಪ್ರತಿಷ್ಟಾಪನೆ
ಗಣೇಶನ ಆವಾಹನೆ ಮಾಡಿದ ಬಳಿಕ ಗಣೇಶನ ಪಾದಗಳಿಗೆ 5 ಎಲೆಗಳನ್ನು ಇಟ್ಟು, ನಂತರ ಅಡಿಕೆ, ಅರಿಶಿಣ ಪುಡಿ, ಕುಂಕುಮ ಹಾಕಿ.
ನಂತರ ಐದು ಹೂವುಗಳನ್ನು ತೆಗೆದುಕೊಂಡು ಕೈಗಳನ್ನು ಜೋಡಿಸಿ ಪೀಠಕ್ಕೆ ಹಾಕಬೇಕು.
ಪಾಡ್ಯಾ ಸರ್ಮಪಣೆ: ಗಣೇಶನ ಪಾದಗಳಿಗೆ ನೀರು ಹಾಕಿ.
ಆರ್ಘ್ಯ ಸಮರ್ಪಣೆ
ಪಾಡ್ಯಾ ಮಾಡಿದ ಬಳಿಕ ಆರ್ಘ್ಯ ಸಮರ್ಪಣೆ ಮಾಡಬೇಕು
ನಂತರ ಅಚಮನ ಅಂದರೆ ದೇವರಿಗೆ ನಿರನ್ನು ಅರ್ಪಿಸಬೇಕು.
ನಂತರ ಮೂರ್ತಿಗೆ ನೀರು, ಹಾಲು, ಮೊಸರು, ಜೇನು, ಸಕ್ಕರೆ, ಸುಗಂಧದ್ರವ್ಯ, ಶುದ್ಧ ನೀರು ಹಾಕಿ ಸ್ನಾನ ಮಾಡಿಸಿ
ನಂತರ ವಸ್ತ್ರ ಸಮರ್ಪಣೆ, ಉತ್ತೇರಿಯಾ ಸಮರ್ಪಣೆ ಮಾಡಲಾಗುವುದು
ಗಂಧವನ್ನು ಅರ್ಪಿಸಲಾಗುವುದು
ಅಕ್ಷತೆ ಅರ್ಪಿಸಿ
ಗರಿಕೆ ಹಾಗೂ ಪುಷ್ಪ ಮಾಲೆ ಅರ್ಪಿಸಿ ಗಣೇಶನಿಗೆ ಪೂಜೆ ಸಲ್ಲಿಸಬೇಕು.



Click it and Unblock the Notifications