Latest Updates
-
ಸಮಲಿಂಗಿ ಜೋಡಿಗಳೇ ಎಚ್ಚರ: ಗಿಫ್ಟ್ ಟ್ಯಾಕ್ಸ್ನಿಂದ ಪಾರಾಗಲು ಈ ದಾಖಲೆಗಳು ಕಡ್ಡಾಯ! -
ಅಡುಗೆ ಎಣ್ಣೆ ಬೆಲೆ ಏರಿಕೆ: ಬಜೆಟ್ ಮತ್ತು ಆರೋಗ್ಯ ಕಾಪಾಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಯುಪಿಐನಲ್ಲಿ ಎಐ ಕ್ರಾಂತಿ: ಇನ್ಮುಂದೆ ನಿಮ್ಮ ಬಿಲ್ ಪಾವತಿಗಳನ್ನು ಡಿಜಿಟಲ್ ಏಜೆಂಟ್ ನೋಡಿಕೊಳ್ಳಲಿದೆ! -
ಉತ್ತರಾಖಂಡದಲ್ಲಿ ಆರೆಂಜ್ ಅಲರ್ಟ್: ಹೋಟೆಲ್ ರೂಮ್ನಲ್ಲೇ ಫಿಟ್ ಆಗಿರಲು ಈ ಸರಳ ವ್ಯಾಯಾಮಗಳನ್ನು ಮಾಡಿ! -
UGC-NET ಪರೀಕ್ಷೆಯ ಗೊಂದಲ: ವಿದ್ಯಾರ್ಥಿಗಳ ಆತಂಕ ದೂರ ಮಾಡಲು ಪೋಷಕರಿಗೆ ಇಲ್ಲಿದೆ 48 ಗಂಟೆಗಳ ಸ್ಟಡಿ-ರಿಸೆಟ್ ಪ್ಲಾನ್! -
ದೆಹಲಿ ಮಳೆ: ಗುಡುಗು-ಮಿಂಚಿನಿಂದ ನಿಮ್ಮ ಎಲೆಕ್ಟ್ರಾನಿಕ್ ವಸ್ತುಗಳನ್ನು ರಕ್ಷಿಸಲು ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಎನರ್ಜಿ ಡ್ರಿಂಕ್ಸ್ ಕುಡಿಯುವ ಮುನ್ನ ಎಚ್ಚರ! FSSAI ಹೊಸ ನಿಯಮ ಮತ್ತು ಆರೋಗ್ಯಕರ ಪರ್ಯಾಯಗಳು -
ಗುರುಗ್ರಾಮದಲ್ಲಿ ವರುಣನ ಆರ್ಭಟ: ಕಚೇರಿಗೆ ಹೋಗ್ಬೇಡಿ, ಮನೆಯಿಂದಲೇ ಕೆಲಸ ಮಾಡಿ - ಪೊಲೀಸರ ಮಹತ್ವದ ಸೂಚನೆ -
ಮಳೆಗಾಲದ ಜಡತ್ವಕ್ಕೆ ಗುಡ್ ಬೈ: ಮುಂಬೈ-ಪುಣೆ ಜನರಿಗಾಗಿ 10 ನಿಮಿಷದ ಸರಳ ವ್ಯಾಯಾಮಗಳು -
ಮುಂಬೈ ಮಳೆ ಆರ್ಭಟ: ಸಂಗಾತಿಯ ಸುರಕ್ಷತೆಗಾಗಿ ನೀವು ಮಾಡಬೇಕಾದ ಪ್ರಮುಖ ಕೆಲಸಗಳಿವು!
ಸೆ.7ಕ್ಕೆ ಗಣೇಶ ಪ್ರತಿಷ್ಠಾಪನೆಗೆ ಪೂಜಾ ಸಮಯ? ಗಣೇಶನನ್ನು ಮಧ್ಯಾಹ್ನ ಸಮಯದಲ್ಲಿ ಪೂಜಿಸುವುದೇಕೆ?
ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ, ಸಡಗರ-ಸಂಭ್ರಮದ ಹಬ್ಬ, ಈ ಸಡಗರ ಮನೆ-ಮನೆಗಳಿಗೆ ಸೀಮಿತವಾಗಿರದೆ ಊರಿಗೇ ಊರೇ ಸಿಂಗರಿಸಿಕೊಂಡಿರುತ್ತದೆ. ಕೆಲವರು ಮನೆಯಲ್ಲಿ ಗಣಪತಿ ಕೂರಿಸಿದರೆ, ಊರಿನವರು ಸೇರಿ ಗಣಪನ ಕೂರಿಸುತ್ತಾರೆ, ಬೆಂಗಳೂರು ಮುಂತಾದ ನಗರ ಪ್ರದೇಶಗಳಲ್ಲಿ ಪ್ರತಿಯೊಂದ ಗಲ್ಲಿಯಲ್ಲಿಯೂ ಗಣೆಶನ ಕೂರಿಸಿ ಆರಾಧಿಸಿಸುತ್ತಾರೆ.
ಕೆಲವು ಕಡೆ 3 ದಿನ ಗಣೇಶನ ಕೂರಿಸಿದರೆ , ಕೆಲವು ಕಡೆ 7 ದಿನ, 10 ದಿನ ಇಟ್ಟು ಗಣೇಶನಿಗೆ ಶಾಸ್ತ್ರೋಕ್ತವಾಗಿ ಪೂಜಿಸಿ ನಂತರ ವಿಸರ್ಜನೆ ಮಾಡಲಾಗುವುದು.

ಗಣೇಶನ ಪ್ರತಿಷ್ಠಾಪನೆ ಮಾಡುವಾಗ ಶ್ರಾಸ್ತೋಕ್ಷವಾಗಿ ಮಾಡಬೇಕು, ಗಣೇಶನ ಕೂರಿಸುವ ಕಡೆ ಈ ಬಗ್ಗೆ ಗಮನಹರಿಸಬೇಕು:
ಗಣೇಶನ ಪ್ರತಿಷ್ಠಾಪನೆ ಮಾಡುವ ಮುನ್ನ ಆ ಸ್ಥಳಗಳನ್ನು ಸುದ್ಧ ಮಾಡಬೇಕು.
ಗಣೇಶ ಮೂರ್ತಿಯನ್ನು ಆಯ್ಕೆ ಮಾಡುವಾಗ ಡೊಳ್ಳು ಹೊಟ್ಟೆಯ ಗಣಪನ ಆಯ್ಕೆ ಮಾಡಿ. ಡೊಳ್ಳು ಹೊಟ್ಟೆ ನಕರಾತ್ಮಕ ಶಕ್ತಿಯನ್ನು ಹೀರಿಕೊಳ್ಳುತ್ತದೆ, ಆ ಪರಿಸರದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುವಂತೆ ಮಾಡುವುದು ಎಂದು ಹೇಳಲಾಗುವುದು
ನಂತರ ಗಣೇಶನನ್ನು ಮಂತ್ರಗಳನ್ನು ಪಠಿಸುತ್ತಾ ಮಾಡಿ.
ಗಣೇಶನನ್ನು ಈ ಸಮಯದಲ್ಲಿ ಪ್ರತಿಷ್ಠಾಪಿಸಿ
ಸೆಪ್ಟೆಂಬರ್ 7ಕ್ಕೆ ಗಣೇಶ ಚತುರ್ಥಿ
ಪ್ರತಿಷ್ಟಾಪನೆ ಹಾಗೂ ಪೂಜಾ ಸಮಯ
ಮಧ್ಯಾಹ್ನ ಗಣೇಶ ಪೂಜಾ ಮುಹೂರ್ತ ಸೆಪ್ಟೆಂಬರ್ 7, 11:04ರಿಂದ 01:31ರವರೆಗೆ
ಸಮಯ: 2 ಗಂಟೆ 28 ನಿಮಿಷವಿದೆ.
ಗಣೇಶನಿಗೆ ಮದ್ಯಾಹ್ನ ಸಮಯದಲ್ಲಿ ಪೂಜೆ ಸಲ್ಲಿಸುವುದೇಕೆ?
ಶ್ರೀ ಗಣೇಶನು ಮಧ್ಯಾಹ್ನದ ಹೊತ್ತಿನಲ್ಲಿ ಜನಿಸಿದನು ಎಂದು ಹೇಳಲಾಗುವುದು, ಹಾಗಾಗಿ ಗಣೇಶನನ್ನು ಮಧ್ಯಾಹ್ನದ ಹೊತ್ತಿನಲ್ಲಿ ಪೂಜಿಸಬೇಕು ಎಂದು ಹೇಳಲಾಗುವುದು.
ಗಣೇಶನ ಪ್ರತಿಷ್ಟಾಪನೆ ಮಾಡುವಾಗ ಷೋಡೋಪಚಾರ ಪೂಜೆಯ ಮೂಲಕ ಮಾಡಬೇಕು:
ಮೊದಲಿಗೆ ಆವಾಹನೆ ಮಾಡಬೇಕು:ಎರಡು ಕೈಗಳನ್ನು ಜೋಡಿಸಿ ನಮಸ್ಕರಿಸಿ ಆವಾಹನೆ ಮಾಡಬೇಕು.
ಪ್ರತಿಷ್ಟಾಪನೆ
ಗಣೇಶನ ಆವಾಹನೆ ಮಾಡಿದ ಬಳಿಕ ಗಣೇಶನ ಪಾದಗಳಿಗೆ 5 ಎಲೆಗಳನ್ನು ಇಟ್ಟು, ನಂತರ ಅಡಿಕೆ, ಅರಿಶಿಣ ಪುಡಿ, ಕುಂಕುಮ ಹಾಕಿ.
ನಂತರ ಐದು ಹೂವುಗಳನ್ನು ತೆಗೆದುಕೊಂಡು ಕೈಗಳನ್ನು ಜೋಡಿಸಿ ಪೀಠಕ್ಕೆ ಹಾಕಬೇಕು.
ಪಾಡ್ಯಾ ಸರ್ಮಪಣೆ: ಗಣೇಶನ ಪಾದಗಳಿಗೆ ನೀರು ಹಾಕಿ.
ಆರ್ಘ್ಯ ಸಮರ್ಪಣೆ
ಪಾಡ್ಯಾ ಮಾಡಿದ ಬಳಿಕ ಆರ್ಘ್ಯ ಸಮರ್ಪಣೆ ಮಾಡಬೇಕು
ನಂತರ ಅಚಮನ ಅಂದರೆ ದೇವರಿಗೆ ನಿರನ್ನು ಅರ್ಪಿಸಬೇಕು.
ನಂತರ ಮೂರ್ತಿಗೆ ನೀರು, ಹಾಲು, ಮೊಸರು, ಜೇನು, ಸಕ್ಕರೆ, ಸುಗಂಧದ್ರವ್ಯ, ಶುದ್ಧ ನೀರು ಹಾಕಿ ಸ್ನಾನ ಮಾಡಿಸಿ
ನಂತರ ವಸ್ತ್ರ ಸಮರ್ಪಣೆ, ಉತ್ತೇರಿಯಾ ಸಮರ್ಪಣೆ ಮಾಡಲಾಗುವುದು
ಗಂಧವನ್ನು ಅರ್ಪಿಸಲಾಗುವುದು
ಅಕ್ಷತೆ ಅರ್ಪಿಸಿ
ಗರಿಕೆ ಹಾಗೂ ಪುಷ್ಪ ಮಾಲೆ ಅರ್ಪಿಸಿ ಗಣೇಶನಿಗೆ ಪೂಜೆ ಸಲ್ಲಿಸಬೇಕು.



Click it and Unblock the Notifications