Latest Updates
-
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ? -
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್
ಈ ತಪ್ಪುಗಳನ್ನು ಅಪ್ಪಿ-ತಪ್ಪಿಯೂ ಮಾಡಬೇಡಿ ಇದರಿಂದ ಶನಿಯ ವಕ್ರದೃಷ್ಟಿ ನಿಮ್ಮ ಮೇಲೆ ಬೀಳಬಹುದು!
ಶನಿಯ ಪ್ರಭಾವ ಒರ್ವ ವ್ಯಕ್ತಿಯ ಬಾಳಿನಲ್ಲಿ ದೀರ್ಘವಾಗಿ ಇರುತ್ತದೆ. ಅದು ಒಳ್ಳೆಯದಾಗಿರಲಿ ಅಥವಾ ಕೆಟ್ಟದಾಗಿರಲಿ. ಒಂದು ವೇಳೆ ಶನಿಯ ವಕ್ರದೃಷ್ಟಿ ಮನುಷ್ಯನ ಮೇಲೆ ಬಿದ್ದರೆ ಅದರಿಂದ ತಪ್ಪಿಸಿಕೊಳ್ಳುವುದು ತುಂಬಾನೇ ಕಷ್ಟ. ಮನುಷ್ಯ ಮಾಡುವ ಕೆಲವೊಂದು ಕೆಲಸಗಳು ಆತನನ್ನು ಶನಿಯ ಕೋಪಕ್ಕೆ ಗುರಿಯಾಗುವಂತೆ ಮಾಡುತ್ತಂತೆ. ಹಾಗಾದ್ರೆ ಯಾವೆಲ್ಲಾ ತಪ್ಪು ಕೆಲಸಗಳನ್ನು ಮಾಡಿದ್ರೆ ಶನಿಯ ಕೋಪಕ್ಕೆ ಗುರಿಯಾಗುತ್ತೀವಿ ಅನ್ನೋದನ್ನು ನೋಡೋಣ.
ಬಟ್ಟೆಯನ್ನು ಎಲ್ಲೆಂದರಲ್ಲಿ ಎಸೆಯಬೇಡಿ!
ಅನೇಕರು ಮನೆ ತಲುಪಿದ ತಕ್ಷಣ ಬಟ್ಟೆಯನ್ನು ಬಿಚ್ಚಿ ತಮ್ಮ ಮನಸ್ಸಿಗೆ ಬಂದ ಹಾಗೆ ಎಲ್ಲೆಂದರಲ್ಲಿ ಎಸೆದು ಬಿಡುತ್ತಾರೆ. ಇಲ್ಲ ಅಂದರೆ ಸ್ನಾನದ ಮನೆಗೆ ಹೋದರೆ ಅಲ್ಲೇ ಬಟ್ಟೆಯ್ನು ಬಿಟ್ಟು ಬರುತ್ತಾರೆ. ಈ ರೀತಿ ಮಾಡೋದ್ರಿಂದ ಶನಿಯ ವಕ್ರದೃಷ್ಟಿಗೆ ಗುರಿಯಾಗಬೇಕಾಗುತ್ತಂತೆ. ಶನಿಯಿಂದ ಅಶುಭ ಫಲಗಳನ್ನು ಪಡೆಯಬೇಕಾಗುತ್ತದೆ. ಇದರಿಂದ ನಿಮ್ಮ ಬಾಳಿನಲ್ಲಿ ನೀವು ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತಂತೆ.

ಜೋರಾಗಿ ಮಾತನಾಡುವುದು
ತಾಳ್ಮೆ ಅನ್ನೋದು ಮನುಷ್ಯನಿಗೆ ತುಂಬಾನೇ ಮುಖ್ಯವಾಗುತ್ತದೆ. ಏನಾದರೂ ಸಮಸ್ಯೆ ಆದರೂ ಕೂಡ ಅದನ್ನು ತಾಳ್ಮೆಯಿಂದ ನಿಭಾಯಿಸುವ ಕಲೆ ನಮಗೆ ಗೊತ್ತಿರಬೇಕು. ಆದರೆ ಹೆಚ್ಚಿನವರು ಸಣ್ಣ ತಪ್ಪಾದರೆ ಸಾಕು ಮನೆ ಮಂದಿಗೆಲ್ಲಾ ಕೇಳಿಸುವ ಹಾಗೆ ಕಿರುಚಾಡಿ ಮಾತನಾಡುತ್ತಾರೆ. ಈ ರೀತಿಯ ಗುಣದಿಂದಾಗಿ ನೀವು ಶನಿಯ ಕೋಪಕ್ಕೆ ತುತ್ತಾಗುವ ಸಾಧ್ಯತೆಯಿದೆ.
ಮನೆಯಲ್ಲಿ ಏರು ಧ್ವನಿಯಲ್ಲಿ ಮಾತನಾಡುವುದು ಶನಿಗೆ ಇಷ್ಟ ಆಗೋದಿಲ್ವಂತೆ. ಶುಕ್ರನನ್ನು ಒಲಿಸಿಕೊಳ್ಳಬೇಕಾದರೆ ಮಾತು ಮಧುರವಾಗಿರಬೇಕೆಂತೆ. ಆಗ ಶುಕ್ರನ ಕೃಪೆಯಿಂದಾಗಿ ಮನೆಯಲ್ಲಿ ಸುಖ, ಶಾಂತಿ ಮತ್ತು ಸಂತೋಷ ತುಂಬಿರುತ್ತಂತೆ. ಒಂದು ವೇಳೆ ಶನಿಯ ಕೆಂಗಣ್ಣಿಗೆ ಗುರಿಯಾದರೆ ಜೀವನದಲ್ಲಿ ಕಷ್ಟಗಳನ್ನೇ ಎದುರಿಸಬೇಕಾಗುತ್ತದೆ. ಮತ್ತು ಮಾನಸಿಕ ನೆಮ್ಮದಿ ಇರೋದಿಲ್ಲ.
ತಟ್ಟೆಯಲ್ಲಿ ಊಟವನ್ನು ಹಾಗೆಯೇ ಬಿಡುವುದು
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಊಟ ಮಾಡುವ ಸಂದರ್ಭದಲ್ಲಿ ಹೊಟ್ಟೆ ತುಂಬಿತೆಂದು ಅರ್ಧದಲ್ಲೇ ಊಟ ಹಾಗೂ ತಟ್ಟೆಯನ್ನು ಅಲ್ಲೇ ಬಿಟ್ಟು ಹೋಗಬಾರದು. ಇದರಿಂದ ಶನಿ ಕೋಪಗೊಳ್ಳುತ್ತಾನಂತೆ. ನೀವು ಪ್ರತಿ ಸಲ ಈ ರೀತಿ ಮಾಡುತ್ತಿದ್ದರೆ ಇದರಿಂದ ಅಶುಭ ಫಲಗಳನ್ನೇ ನಿರೀಕ್ಷೇ ಮಾಡಬೇಕಾಗುತ್ತದೆ.
ಶನಿ ಅಷ್ಟೇ ಅಲ್ಲ, ಚಂದ್ರನಿಂದಲೂ ಅಶುಭ ಪಲವನ್ನು ಪಡೆಯಬೇಕಾಗುತ್ತಂತೆ. ಹೆಚ್ಚಿನವರಿಗೆ ಈ ಅಭ್ಯಾಸ ಇದೆ. ಮನೆಯಲ್ಲಿ ಊಟ ಮಾಡಿದ ನಂತರ ಸಾಕಾಯ್ತು ಎಂದು ಕಾರಣ ಕೊಟ್ಟು ಊಟದ ತಟ್ಟೆಯನ್ನು ಅರ್ಧದಲ್ಲೇ ಎದ್ದು ಹೋಗುತ್ತಾರೆ. ತಿಂದ ತಟ್ಟೆಯನ್ನೂ ತೊಳೆಯೋದಿಲ್ಲ. ಈ ರೀತಿ ಮಾಡುವುದು ತಪ್ಪು. ಇಷ್ಟು ದಿನ ನೀವು ಈ ರೀತಿ ಮಾಡುತ್ತಿದ್ದರೆ ಇನ್ನಾದರೂ ನಿಮ್ಮ ಕೆಲಸಗಳನ್ನು ನೀವೆ ಮಾಡಿಕೊಳ್ಳಿ.
ಪೊರಕೆಯನ್ನು ಎಲ್ಲಂದರಲ್ಲಿ ಇಡಬಾರದು
ಪ್ರತಿ ಮನೆಯನ್ನು ಸ್ವಚ್ಛಗೊಳಿಸೋದಕ್ಕೆ ಪೊರಕೆಯನ್ನು ಖಂಡಿತವಾಗಿ ಬಳಸಲಾಗುತ್ತದೆ. ಆದರೆ ಮನೆಯನ್ನು ಸ್ವಚ್ಛಗೊಳಿಸಿದ ನಂತರ ನೀವು ಪೊರಕೆಯನ್ನು ಎಲ್ಲಿ ಇಡುತ್ತೀರಿ. ಪೊರಕೆ ಅನ್ನೋದು ತುಂಬಾನೇ ಸೂಕ್ಷ್ಮ ವಿಚಾರ. ಹೀಗಾಗಿ ಮನೆ ಸ್ವಚ್ಛಗೊಳಿಸಿದ ನಂತರ ಪೊರಕೆಯನ್ನು ಎಲ್ಲಂದರಲ್ಲಿ ಎಸೆಯುವ ಅಭ್ಯಾಸ ಒಳ್ಳೆಯದಲ್ಲ. ಈ ರೀತಿ ಮಾಡಿದರೆ ಶನಿಯ ಕೋಪಕ್ಕೆ ಗುರಿಯಾಗುತ್ತಾರಂತೆ. ಹೀಗಾಗಿ ಪೊರಕೆಯನ್ನು ಮನೆಯ ಒಂದು ಮೂಲೆಯಲ್ಲಿ ಇಟ್ಟರೆ ಉತ್ತಮ.
ಕೈಲಾಗದವರಿಗೆ ಸಹಾಯ ಮಾಡಬೇಕು
ನಿಮ್ಮ ಮನೆಬಾಗಿಲಿಗೆ ಬಂದ ನಿರ್ಗತಿಕರು, ಭಿಕ್ಷುಕರು ಅಥವಾ ದುರ್ಬಲರನ್ನು ಅವಮಾನ ಮಾಡಿ ಕಳುಹಿಸಬೇಡಿ. ಊಟ, ನೀರು ಕೇಳುತ್ತಾ ಬಂದ ನಿರ್ಗತಿಕನಿಗೆ ಕರುಣೆ ತೋರಿಸುವ ಗುಣ ನಮ್ಮಲ್ಲಿ ಇರಬೇಕು. ಅವನಿಗೆ ಒಂದು ಹೊತ್ತಿನ ಊಟ ಕೊಡೋದ್ರಿಂದ ನಾವು ಕಳೆದುಕೊಳ್ಳೋದು ಏನು ಇಲ್ಲ. ನಮ್ಮ ಮನೆಬಾಗಿಲಿಗೆ ಸಹಾಯ ಕೇಳುತ್ತಾ ಬಂದವನಿಗೆ ಯಾರು ಅವಮಾನ ಮಾಡುತ್ತಾರೋ ಅವರು ಶನಿಯ ಕೆಟ್ಟ ದೃಷ್ಟಿಗೆ ಗುರಿಯಾಗುತ್ತಾರಂತೆ.
ಬೇರೆಯವರಿಗೆ ಸಿಗಬೇಕಾದ ಹಣ ಸಿಗದಂತೆ ಮಾಡುವುದು
ಕಷ್ಟಪಟ್ಟು ದುಡಿದ ವ್ಯಕ್ತಿಯ ಹಣವನ್ನು ಆತನಿಗೆ ಹಿಂತಿರುಗಿಸಲೇಬೇಕು. ಉದಾಹರಣೆಗೆ ನಿಮ್ಮ ಕೈ ಕೆಳಗೆ ಒರ್ವ ವ್ಯಕ್ತಿ ಕೆಲಸ ಮಾಡಿರುತ್ತಾನೆ ಅಂದುಕೊಳ್ಳಿ. ಆತ ಮಾಡಿದ ಕೆಲಸಕ್ಕೆ ತಕ್ಕ ಸಂಭಳವನ್ನು ಆತನಿಗೆ ಕೊಡೋದು ನಿಮ್ಮ ಕರ್ತವ್ಯ. ಆದರೆ ಹೆಚ್ಚಿನ ಜನ ತಮ್ಮ ಕೆಲಸವನ್ನು ಮಾಡಿಸಿ ಕೆಲಸದವರಿಗೆ ದುಡ್ಡು ಕೊಡದೇ ಮೋಸ ಮಾಡುತ್ತಾರೆ. ಇದು ಖಂಡಿತ ಸರಿಯಲ್ಲ. ಈ ರೀತಿ ಮಾಡಿದರೆ ಖಂಡಿತ ಶನಿಯ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.
ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡೋದಕ್ಕೆ ಹೋಗಬೇಡಿ. ಇದರಿಂದ ಶನಿಯ ಕೋಪಕ್ಕೆ ಗುರಿಯಾಗೋದು ಖಂಡಿತ. ಹೀಗಾಗಿ ಈ ವಿಚಾರಗಳ ಬಗ್ಗೆ ಹೆಚ್ಚಿನ ಗಮನ ನೀಡಿ.



Click it and Unblock the Notifications
