Latest Updates
-
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ!
ಆಗಸ್ಟ್ 31ಕ್ಕೆ ಈ ವರ್ಷದ ಕೊನೆಯ ಶನಿ ತ್ರಯೋದಶಿ: ಶನಿದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯ, ಏಕೆ?
ಈ ಶನಿವಾರ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವವಾದ ದಿನ, ಏಕೆಂದರೆ ಈ ದಿನ ಶನಿ ತ್ರಯೋದಶಿ ಅಥವಾ ಶನಿ ಪ್ರದೋಷ ವ್ರತವಿದೆ. ಶನಿ ದೋಷವಿರುವವರು ಈ ದಿನ ಪರಿಹಾರ ಮಾಡಿದರೆ ಶನಿ ಕಾಟ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಪ್ರದೋಷ ವ್ರತ ಶಿವನಿಗೆ ಮೀಸಲಾದ ದಿನ. ಶನಿವಾರ ಶನಿ ದೇವನಿಗೆ ಮೀಸಲಾದ ದಿನ. ಪ್ರದೋಷ ವ್ರತ ಶನಿವಾರದಂದು ಬಂದರೆ ಆ ದಿನವನ್ನು ಶನಿ ತ್ರಯೋದಶಿಯೆಂದು ಆಚರಿಸಲಾಗುವುದು.

ಶನಿ ದೇವನ ಆರಾಧನೆಗೆ ಶ್ರೇಷ್ಠವಾದ ದಿನ
ಈ ದಿನ ಶನಿ ದೇವನ ಆರಾಧನೆ ಮಾಡವುದರಿಂದ ಶನಿಯ ಕೃಪೆ ನಮ್ಮ ಮೇಲಿರಲಿದೆ, ಶನಿ ೋಷ, ಶನಿ ಧೈಯ್ಯ ಇರುವವರು ತುಂಬಾನೇ ಕಷ್ಟ ಅನುಭವಿಸುತ್ತಾರೆ. ಈ ದಿನ ಭಕ್ತಿಯಿಂದ ಶನಿಯನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ಕಡಿಮೆಯಾಗುವುದು, ಹಾಗಾಗಿ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ.
ಶನಿ ತ್ರಯೋದಶಿಯಂದು ಎನು ಮಾಡಬೇಕು?
ಈ ದಿನ ಉಪವಾಸವಿದ್ದು ಶನಿಯ ಆರಾಧನೆ ಮಡಬೇಕು. ಶನಿ ದೇವಾಲಯಕ್ಕೆ ಹೋಗಿ ಸಾಸಿವೆಯೆಣ್ಣೆಯಲ್ಲಿ ನಿಮ್ಮ ಮುಖವನ್ನು ನೋಡಿ ಆ ಎಣ್ಣೆಯನ್ನು ದೇವಾಯಕ್ಕೆ ಅರ್ಪಿಸಬೇಕು.
ಈ ದಿನ ಬಡವರಿಗೆ ದಾನ ಮಾಡಿದರೆ ಒಳ್ಳಯದು
ಬಡವರಿಗೆ ಕಪ್ಪು ಕಂಬಳಿ, ಎಳ್ಳು, ಸಾಸಿವೆಯೆಣ್ಣೆ ಈ ಬಗೆಯ ವಸ್ತುಗಳನ್ನು ದಾನ ಮಾಡಿ.
ಇನ್ನು ಶಿವ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿದರೆ ಒಳ್ಳೆಯದು
ಈ ದಿನ ಶಿವ ದೇವಾಲಕ್ಕೆ ಹೋಗಿ ರುದ್ರಾಭಿಷೇಕ ಮಾಡಿ. ಶಿವನ ಕೃಪೆಯಿಂದ ಕೂಡ ಶನಿಯ ಕಾಟ ಕಡಿಮೆಯಾಗುವುದು.
ಈ ದಿನ ಹೀಗೆ ಮಾಡಿದರೆ ಕಷ್ಟಗಳು, ಸವಾಲುಗಳು ಕಡಿಮೆಯಾಗುವುದು, ಬದುಕಿನಲ್ಲಿ ಧನಾತ್ಮಕ ಬದಲಾವಣೆಯಾಗುವುದು ಎಂದು ಹೇಳಲಾಗುವುದು:
ಶನಿವಾರ ಸೂರ್ಯಾಸ್ತದ ಬಳಿಕ ಕಪ್ಪು ಉದ್ದು ಹಾಕಿ ಮಾಡಿದ ಕಿಚಡಿ ಸೇವನೆ ಮಾಡಿದರೆ ಒಳ್ಳೆಯದು
ಈ ದಿನ ನೀಲಮಣಿ ಧರಿಸುವುದರಿಂದ ಅದರ ರಕ್ಷೆ ಇರಲಿದೆ ಎಂದು ಹೇಳಲಾಗುವುದು.
ರುದ್ರಾಕ್ಷಿ ಧರಿಸಲು ಈ ದಿನ ಶ್ರೇಷ್ಠವಾಗಿದೆ
14 ಮುಖಿ ರುದ್ರಾಕ್ಷಿ ಅಥವಾ ಸಪ್ತಮುಖಿ ರುದ್ರಾಕ್ಷಿಯನ್ನು ಶನಿಮಾಲೆಯ ಜೊತೆ ಧರಿಸಿದರೆ ಕಷ್ಟಗಳು ಕಡಿಮೆಯಾಗುವುದು ನಂಬಲಾಗುವುದು.
ಈ ದಿನ ಹನುಮಾನ್ ಚಾಲೀಸಾ ಪಠಿಸಿ: , ಶನಿ ಸಾಡೇಸಾತಿ ಇರುವವರು ಶನಿಯ ಕೆಟ್ಟದೃಷ್ಟಿಯಿಂದ ಪಾರಾಗಲು ಸಾಧ್ಯವೇ ಇಲ್ಲ ಎಂದು ಹೇಳಲಾಗುವುದು, ಆದರೆ ಶನಿಯ ಕೆಟ್ಟ ಪರಿಣಾಮ ಕಡಿಮೆ ಮಾಡುವ ಶಕ್ತಿ ಹನುಮಾನ್ ಚಾಲೀಸಾಗೆ ಇದೆ. ಹನುಮಾನ್ ಚಾಲೀಸಾ ಪಠಣೆ ಮಾಡುವುದರಂದ ಎದುರಾಗುವ ಸವಾಲುಗಳು ದೂರಾಗುವುದು. ಶನಿಯ ತೀಕ್ಷ್ಣ ಪರಿಣಾಮ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಈ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ '
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications