Latest Updates
-
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು
ಆಗಸ್ಟ್ 31ಕ್ಕೆ ಈ ವರ್ಷದ ಕೊನೆಯ ಶನಿ ತ್ರಯೋದಶಿ: ಶನಿದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯ, ಏಕೆ?
ಈ ಶನಿವಾರ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವವಾದ ದಿನ, ಏಕೆಂದರೆ ಈ ದಿನ ಶನಿ ತ್ರಯೋದಶಿ ಅಥವಾ ಶನಿ ಪ್ರದೋಷ ವ್ರತವಿದೆ. ಶನಿ ದೋಷವಿರುವವರು ಈ ದಿನ ಪರಿಹಾರ ಮಾಡಿದರೆ ಶನಿ ಕಾಟ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಪ್ರದೋಷ ವ್ರತ ಶಿವನಿಗೆ ಮೀಸಲಾದ ದಿನ. ಶನಿವಾರ ಶನಿ ದೇವನಿಗೆ ಮೀಸಲಾದ ದಿನ. ಪ್ರದೋಷ ವ್ರತ ಶನಿವಾರದಂದು ಬಂದರೆ ಆ ದಿನವನ್ನು ಶನಿ ತ್ರಯೋದಶಿಯೆಂದು ಆಚರಿಸಲಾಗುವುದು.

ಶನಿ ದೇವನ ಆರಾಧನೆಗೆ ಶ್ರೇಷ್ಠವಾದ ದಿನ
ಈ ದಿನ ಶನಿ ದೇವನ ಆರಾಧನೆ ಮಾಡವುದರಿಂದ ಶನಿಯ ಕೃಪೆ ನಮ್ಮ ಮೇಲಿರಲಿದೆ, ಶನಿ ೋಷ, ಶನಿ ಧೈಯ್ಯ ಇರುವವರು ತುಂಬಾನೇ ಕಷ್ಟ ಅನುಭವಿಸುತ್ತಾರೆ. ಈ ದಿನ ಭಕ್ತಿಯಿಂದ ಶನಿಯನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ಕಡಿಮೆಯಾಗುವುದು, ಹಾಗಾಗಿ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ.
ಶನಿ ತ್ರಯೋದಶಿಯಂದು ಎನು ಮಾಡಬೇಕು?
ಈ ದಿನ ಉಪವಾಸವಿದ್ದು ಶನಿಯ ಆರಾಧನೆ ಮಡಬೇಕು. ಶನಿ ದೇವಾಲಯಕ್ಕೆ ಹೋಗಿ ಸಾಸಿವೆಯೆಣ್ಣೆಯಲ್ಲಿ ನಿಮ್ಮ ಮುಖವನ್ನು ನೋಡಿ ಆ ಎಣ್ಣೆಯನ್ನು ದೇವಾಯಕ್ಕೆ ಅರ್ಪಿಸಬೇಕು.
ಈ ದಿನ ಬಡವರಿಗೆ ದಾನ ಮಾಡಿದರೆ ಒಳ್ಳಯದು
ಬಡವರಿಗೆ ಕಪ್ಪು ಕಂಬಳಿ, ಎಳ್ಳು, ಸಾಸಿವೆಯೆಣ್ಣೆ ಈ ಬಗೆಯ ವಸ್ತುಗಳನ್ನು ದಾನ ಮಾಡಿ.
ಇನ್ನು ಶಿವ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿದರೆ ಒಳ್ಳೆಯದು
ಈ ದಿನ ಶಿವ ದೇವಾಲಕ್ಕೆ ಹೋಗಿ ರುದ್ರಾಭಿಷೇಕ ಮಾಡಿ. ಶಿವನ ಕೃಪೆಯಿಂದ ಕೂಡ ಶನಿಯ ಕಾಟ ಕಡಿಮೆಯಾಗುವುದು.
ಈ ದಿನ ಹೀಗೆ ಮಾಡಿದರೆ ಕಷ್ಟಗಳು, ಸವಾಲುಗಳು ಕಡಿಮೆಯಾಗುವುದು, ಬದುಕಿನಲ್ಲಿ ಧನಾತ್ಮಕ ಬದಲಾವಣೆಯಾಗುವುದು ಎಂದು ಹೇಳಲಾಗುವುದು:
ಶನಿವಾರ ಸೂರ್ಯಾಸ್ತದ ಬಳಿಕ ಕಪ್ಪು ಉದ್ದು ಹಾಕಿ ಮಾಡಿದ ಕಿಚಡಿ ಸೇವನೆ ಮಾಡಿದರೆ ಒಳ್ಳೆಯದು
ಈ ದಿನ ನೀಲಮಣಿ ಧರಿಸುವುದರಿಂದ ಅದರ ರಕ್ಷೆ ಇರಲಿದೆ ಎಂದು ಹೇಳಲಾಗುವುದು.
ರುದ್ರಾಕ್ಷಿ ಧರಿಸಲು ಈ ದಿನ ಶ್ರೇಷ್ಠವಾಗಿದೆ
14 ಮುಖಿ ರುದ್ರಾಕ್ಷಿ ಅಥವಾ ಸಪ್ತಮುಖಿ ರುದ್ರಾಕ್ಷಿಯನ್ನು ಶನಿಮಾಲೆಯ ಜೊತೆ ಧರಿಸಿದರೆ ಕಷ್ಟಗಳು ಕಡಿಮೆಯಾಗುವುದು ನಂಬಲಾಗುವುದು.
ಈ ದಿನ ಹನುಮಾನ್ ಚಾಲೀಸಾ ಪಠಿಸಿ: , ಶನಿ ಸಾಡೇಸಾತಿ ಇರುವವರು ಶನಿಯ ಕೆಟ್ಟದೃಷ್ಟಿಯಿಂದ ಪಾರಾಗಲು ಸಾಧ್ಯವೇ ಇಲ್ಲ ಎಂದು ಹೇಳಲಾಗುವುದು, ಆದರೆ ಶನಿಯ ಕೆಟ್ಟ ಪರಿಣಾಮ ಕಡಿಮೆ ಮಾಡುವ ಶಕ್ತಿ ಹನುಮಾನ್ ಚಾಲೀಸಾಗೆ ಇದೆ. ಹನುಮಾನ್ ಚಾಲೀಸಾ ಪಠಣೆ ಮಾಡುವುದರಂದ ಎದುರಾಗುವ ಸವಾಲುಗಳು ದೂರಾಗುವುದು. ಶನಿಯ ತೀಕ್ಷ್ಣ ಪರಿಣಾಮ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಈ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ '
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications
