Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
ಆಗಸ್ಟ್ 31ಕ್ಕೆ ಈ ವರ್ಷದ ಕೊನೆಯ ಶನಿ ತ್ರಯೋದಶಿ: ಶನಿದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯ, ಏಕೆ?
ಈ ಶನಿವಾರ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವವಾದ ದಿನ, ಏಕೆಂದರೆ ಈ ದಿನ ಶನಿ ತ್ರಯೋದಶಿ ಅಥವಾ ಶನಿ ಪ್ರದೋಷ ವ್ರತವಿದೆ. ಶನಿ ದೋಷವಿರುವವರು ಈ ದಿನ ಪರಿಹಾರ ಮಾಡಿದರೆ ಶನಿ ಕಾಟ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಪ್ರದೋಷ ವ್ರತ ಶಿವನಿಗೆ ಮೀಸಲಾದ ದಿನ. ಶನಿವಾರ ಶನಿ ದೇವನಿಗೆ ಮೀಸಲಾದ ದಿನ. ಪ್ರದೋಷ ವ್ರತ ಶನಿವಾರದಂದು ಬಂದರೆ ಆ ದಿನವನ್ನು ಶನಿ ತ್ರಯೋದಶಿಯೆಂದು ಆಚರಿಸಲಾಗುವುದು.

ಶನಿ ದೇವನ ಆರಾಧನೆಗೆ ಶ್ರೇಷ್ಠವಾದ ದಿನ
ಈ ದಿನ ಶನಿ ದೇವನ ಆರಾಧನೆ ಮಾಡವುದರಿಂದ ಶನಿಯ ಕೃಪೆ ನಮ್ಮ ಮೇಲಿರಲಿದೆ, ಶನಿ ೋಷ, ಶನಿ ಧೈಯ್ಯ ಇರುವವರು ತುಂಬಾನೇ ಕಷ್ಟ ಅನುಭವಿಸುತ್ತಾರೆ. ಈ ದಿನ ಭಕ್ತಿಯಿಂದ ಶನಿಯನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ಕಡಿಮೆಯಾಗುವುದು, ಹಾಗಾಗಿ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ.
ಶನಿ ತ್ರಯೋದಶಿಯಂದು ಎನು ಮಾಡಬೇಕು?
ಈ ದಿನ ಉಪವಾಸವಿದ್ದು ಶನಿಯ ಆರಾಧನೆ ಮಡಬೇಕು. ಶನಿ ದೇವಾಲಯಕ್ಕೆ ಹೋಗಿ ಸಾಸಿವೆಯೆಣ್ಣೆಯಲ್ಲಿ ನಿಮ್ಮ ಮುಖವನ್ನು ನೋಡಿ ಆ ಎಣ್ಣೆಯನ್ನು ದೇವಾಯಕ್ಕೆ ಅರ್ಪಿಸಬೇಕು.
ಈ ದಿನ ಬಡವರಿಗೆ ದಾನ ಮಾಡಿದರೆ ಒಳ್ಳಯದು
ಬಡವರಿಗೆ ಕಪ್ಪು ಕಂಬಳಿ, ಎಳ್ಳು, ಸಾಸಿವೆಯೆಣ್ಣೆ ಈ ಬಗೆಯ ವಸ್ತುಗಳನ್ನು ದಾನ ಮಾಡಿ.
ಇನ್ನು ಶಿವ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿದರೆ ಒಳ್ಳೆಯದು
ಈ ದಿನ ಶಿವ ದೇವಾಲಕ್ಕೆ ಹೋಗಿ ರುದ್ರಾಭಿಷೇಕ ಮಾಡಿ. ಶಿವನ ಕೃಪೆಯಿಂದ ಕೂಡ ಶನಿಯ ಕಾಟ ಕಡಿಮೆಯಾಗುವುದು.
ಈ ದಿನ ಹೀಗೆ ಮಾಡಿದರೆ ಕಷ್ಟಗಳು, ಸವಾಲುಗಳು ಕಡಿಮೆಯಾಗುವುದು, ಬದುಕಿನಲ್ಲಿ ಧನಾತ್ಮಕ ಬದಲಾವಣೆಯಾಗುವುದು ಎಂದು ಹೇಳಲಾಗುವುದು:
ಶನಿವಾರ ಸೂರ್ಯಾಸ್ತದ ಬಳಿಕ ಕಪ್ಪು ಉದ್ದು ಹಾಕಿ ಮಾಡಿದ ಕಿಚಡಿ ಸೇವನೆ ಮಾಡಿದರೆ ಒಳ್ಳೆಯದು
ಈ ದಿನ ನೀಲಮಣಿ ಧರಿಸುವುದರಿಂದ ಅದರ ರಕ್ಷೆ ಇರಲಿದೆ ಎಂದು ಹೇಳಲಾಗುವುದು.
ರುದ್ರಾಕ್ಷಿ ಧರಿಸಲು ಈ ದಿನ ಶ್ರೇಷ್ಠವಾಗಿದೆ
14 ಮುಖಿ ರುದ್ರಾಕ್ಷಿ ಅಥವಾ ಸಪ್ತಮುಖಿ ರುದ್ರಾಕ್ಷಿಯನ್ನು ಶನಿಮಾಲೆಯ ಜೊತೆ ಧರಿಸಿದರೆ ಕಷ್ಟಗಳು ಕಡಿಮೆಯಾಗುವುದು ನಂಬಲಾಗುವುದು.
ಈ ದಿನ ಹನುಮಾನ್ ಚಾಲೀಸಾ ಪಠಿಸಿ: , ಶನಿ ಸಾಡೇಸಾತಿ ಇರುವವರು ಶನಿಯ ಕೆಟ್ಟದೃಷ್ಟಿಯಿಂದ ಪಾರಾಗಲು ಸಾಧ್ಯವೇ ಇಲ್ಲ ಎಂದು ಹೇಳಲಾಗುವುದು, ಆದರೆ ಶನಿಯ ಕೆಟ್ಟ ಪರಿಣಾಮ ಕಡಿಮೆ ಮಾಡುವ ಶಕ್ತಿ ಹನುಮಾನ್ ಚಾಲೀಸಾಗೆ ಇದೆ. ಹನುಮಾನ್ ಚಾಲೀಸಾ ಪಠಣೆ ಮಾಡುವುದರಂದ ಎದುರಾಗುವ ಸವಾಲುಗಳು ದೂರಾಗುವುದು. ಶನಿಯ ತೀಕ್ಷ್ಣ ಪರಿಣಾಮ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಈ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ '
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications