Latest Updates
-
ಭಾರತ-ಇಂಗ್ಲೆಂಡ್ ಪಂದ್ಯ ವೀಕ್ಷಿಸುವಾಗ ಬೆನ್ನು ನೋವು ಕಾಡುತ್ತಿದೆಯೇ? ಈ 8 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮದುವೆ ಸಂಭ್ರಮಕ್ಕೆ ಸಿದ್ಧರಾಗಿದ್ದೀರಾ? ಮಳೆಗಾಲದ ಮದುವೆಗೆ ಈ 5 ಟಿಪ್ಸ್ ಮರೆಯದಿರಿ! -
ಬೆಲೆ ಏರಿಕೆಯ ಬಿಸಿ: ಜೂನ್ CPI ವರದಿ ಮತ್ತು ನಿಮ್ಮ ಕಿಚನ್ ಬಜೆಟ್ ಉಳಿಸುವ ಸ್ಮಾರ್ಟ್ ಟಿಪ್ಸ್ -
ಸ್ವಿಗ್ಗಿ ಇನ್ಸ್ಟಾಮಾರ್ಟ್ ಗ್ರಾಹಕರಿಗೆ ಎಚ್ಚರಿಕೆ: ಹಾಲು, ಮೊಟ್ಟೆ ಖರೀದಿಸುವಾಗ ಈ ತಪ್ಪು ಮಾಡಬೇಡಿ! -
4-0 ಸೋಲಿನ ಆಘಾತದಲ್ಲಿ ಭಾರತೀಯ ಫ್ಯಾನ್ಸ್: ಏಕದಿನ ಸರಣಿಗೆ ಕಮ್ಬ್ಯಾಕ್ ಸಾಧ್ಯವೇ? ಇಲ್ಲಿದೆ ಪಂದ್ಯಗಳ ವೇಳಾಪಟ್ಟಿ ಮತ್ತು ಹೆಲ್ತ್ ಟಿಪ್ಸ್! -
ಮಾಸಿಕ ಶಿವರಾತ್ರಿ ಉಪವಾಸ: ಸುಸ್ತಾಗದಂತೆ ಇರಲು 6 ನಿಮಿಷದ ಸರಳ ವ್ಯಾಯಾಮ ಮತ್ತು ಟಿಪ್ಸ್ -
ಮನೆಯವರ ವಿರೋಧದ ನಡುವೆ ಮದುವೆ: ಅಲಹಾಬಾದ್ ಹೈಕೋರ್ಟ್ನಿಂದ ಜೋಡಿಗಳಿಗೆ ಸಿಕ್ಕಿತು ಭರ್ಜರಿ ರಕ್ಷಣೆ! -
ಮಳೆ ನಂತರ ದೆಹಲಿ-ಎನ್ಸಿಆರ್ನಲ್ಲಿ ಶುದ್ಧ ಗಾಳಿ: ನಿಮ್ಮ ಮನೆಯನ್ನು ಫ್ರೆಶ್ ಆಗಿಡಲು ಈ ಸರಳ ಟಿಪ್ಸ್ ಪಾಲಿಸಿ! -
ಯೋಗಿನಿ ಏಕಾದಶಿ: ಮಧುಮೇಹಿಗಳು ಉಪವಾಸ ಮಾಡುವಾಗ ಈ ಆರೋಗ್ಯ ಟಿಪ್ಸ್ ಮರೆಯದಿರಿ! -
ವಿಶ್ವ ಜನಸಂಖ್ಯಾ ದಿನ: ಉಚಿತ ಗರ್ಭನಿರೋಧಕಗಳು ಮತ್ತು ನಿಮ್ಮ ಗೌಪ್ಯತೆ ಬಗ್ಗೆ ತಿಳಿಯಲೇಬೇಕಾದ ಸತ್ಯಗಳು
ಆಗಸ್ಟ್ 31ಕ್ಕೆ ಈ ವರ್ಷದ ಕೊನೆಯ ಶನಿ ತ್ರಯೋದಶಿ: ಶನಿದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯ, ಏಕೆ?
ಈ ಶನಿವಾರ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವವಾದ ದಿನ, ಏಕೆಂದರೆ ಈ ದಿನ ಶನಿ ತ್ರಯೋದಶಿ ಅಥವಾ ಶನಿ ಪ್ರದೋಷ ವ್ರತವಿದೆ. ಶನಿ ದೋಷವಿರುವವರು ಈ ದಿನ ಪರಿಹಾರ ಮಾಡಿದರೆ ಶನಿ ಕಾಟ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಪ್ರದೋಷ ವ್ರತ ಶಿವನಿಗೆ ಮೀಸಲಾದ ದಿನ. ಶನಿವಾರ ಶನಿ ದೇವನಿಗೆ ಮೀಸಲಾದ ದಿನ. ಪ್ರದೋಷ ವ್ರತ ಶನಿವಾರದಂದು ಬಂದರೆ ಆ ದಿನವನ್ನು ಶನಿ ತ್ರಯೋದಶಿಯೆಂದು ಆಚರಿಸಲಾಗುವುದು.

ಶನಿ ದೇವನ ಆರಾಧನೆಗೆ ಶ್ರೇಷ್ಠವಾದ ದಿನ
ಈ ದಿನ ಶನಿ ದೇವನ ಆರಾಧನೆ ಮಾಡವುದರಿಂದ ಶನಿಯ ಕೃಪೆ ನಮ್ಮ ಮೇಲಿರಲಿದೆ, ಶನಿ ೋಷ, ಶನಿ ಧೈಯ್ಯ ಇರುವವರು ತುಂಬಾನೇ ಕಷ್ಟ ಅನುಭವಿಸುತ್ತಾರೆ. ಈ ದಿನ ಭಕ್ತಿಯಿಂದ ಶನಿಯನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ಕಡಿಮೆಯಾಗುವುದು, ಹಾಗಾಗಿ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ.
ಶನಿ ತ್ರಯೋದಶಿಯಂದು ಎನು ಮಾಡಬೇಕು?
ಈ ದಿನ ಉಪವಾಸವಿದ್ದು ಶನಿಯ ಆರಾಧನೆ ಮಡಬೇಕು. ಶನಿ ದೇವಾಲಯಕ್ಕೆ ಹೋಗಿ ಸಾಸಿವೆಯೆಣ್ಣೆಯಲ್ಲಿ ನಿಮ್ಮ ಮುಖವನ್ನು ನೋಡಿ ಆ ಎಣ್ಣೆಯನ್ನು ದೇವಾಯಕ್ಕೆ ಅರ್ಪಿಸಬೇಕು.
ಈ ದಿನ ಬಡವರಿಗೆ ದಾನ ಮಾಡಿದರೆ ಒಳ್ಳಯದು
ಬಡವರಿಗೆ ಕಪ್ಪು ಕಂಬಳಿ, ಎಳ್ಳು, ಸಾಸಿವೆಯೆಣ್ಣೆ ಈ ಬಗೆಯ ವಸ್ತುಗಳನ್ನು ದಾನ ಮಾಡಿ.
ಇನ್ನು ಶಿವ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿದರೆ ಒಳ್ಳೆಯದು
ಈ ದಿನ ಶಿವ ದೇವಾಲಕ್ಕೆ ಹೋಗಿ ರುದ್ರಾಭಿಷೇಕ ಮಾಡಿ. ಶಿವನ ಕೃಪೆಯಿಂದ ಕೂಡ ಶನಿಯ ಕಾಟ ಕಡಿಮೆಯಾಗುವುದು.
ಈ ದಿನ ಹೀಗೆ ಮಾಡಿದರೆ ಕಷ್ಟಗಳು, ಸವಾಲುಗಳು ಕಡಿಮೆಯಾಗುವುದು, ಬದುಕಿನಲ್ಲಿ ಧನಾತ್ಮಕ ಬದಲಾವಣೆಯಾಗುವುದು ಎಂದು ಹೇಳಲಾಗುವುದು:
ಶನಿವಾರ ಸೂರ್ಯಾಸ್ತದ ಬಳಿಕ ಕಪ್ಪು ಉದ್ದು ಹಾಕಿ ಮಾಡಿದ ಕಿಚಡಿ ಸೇವನೆ ಮಾಡಿದರೆ ಒಳ್ಳೆಯದು
ಈ ದಿನ ನೀಲಮಣಿ ಧರಿಸುವುದರಿಂದ ಅದರ ರಕ್ಷೆ ಇರಲಿದೆ ಎಂದು ಹೇಳಲಾಗುವುದು.
ರುದ್ರಾಕ್ಷಿ ಧರಿಸಲು ಈ ದಿನ ಶ್ರೇಷ್ಠವಾಗಿದೆ
14 ಮುಖಿ ರುದ್ರಾಕ್ಷಿ ಅಥವಾ ಸಪ್ತಮುಖಿ ರುದ್ರಾಕ್ಷಿಯನ್ನು ಶನಿಮಾಲೆಯ ಜೊತೆ ಧರಿಸಿದರೆ ಕಷ್ಟಗಳು ಕಡಿಮೆಯಾಗುವುದು ನಂಬಲಾಗುವುದು.
ಈ ದಿನ ಹನುಮಾನ್ ಚಾಲೀಸಾ ಪಠಿಸಿ: , ಶನಿ ಸಾಡೇಸಾತಿ ಇರುವವರು ಶನಿಯ ಕೆಟ್ಟದೃಷ್ಟಿಯಿಂದ ಪಾರಾಗಲು ಸಾಧ್ಯವೇ ಇಲ್ಲ ಎಂದು ಹೇಳಲಾಗುವುದು, ಆದರೆ ಶನಿಯ ಕೆಟ್ಟ ಪರಿಣಾಮ ಕಡಿಮೆ ಮಾಡುವ ಶಕ್ತಿ ಹನುಮಾನ್ ಚಾಲೀಸಾಗೆ ಇದೆ. ಹನುಮಾನ್ ಚಾಲೀಸಾ ಪಠಣೆ ಮಾಡುವುದರಂದ ಎದುರಾಗುವ ಸವಾಲುಗಳು ದೂರಾಗುವುದು. ಶನಿಯ ತೀಕ್ಷ್ಣ ಪರಿಣಾಮ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಈ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ '
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications