Latest Updates
-
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ? -
ಜಸ್ಟ್ ನೀರು ಸೇರಿಸಿ.. ಈ ಅದ್ಭುತ ರುಚಿಯ ಚಟ್ನಿ ರೆಡಿ! ಮಿಕ್ಸಿ ಬಳಸದೆ ಮಾಡೋದು ಹೇಗೆ? -
ಮಾರ್ಚ್ನಲ್ಲಿ ಬುಧ ಉದಯ: 4 ರಾಶಿಯವರಿಗೆ ಅಡ್ಡಿಗಳಿಂದ ವಿಮುಕ್ತಿ, ಅದೃಷ್ಟದ ಸಮಯ!
ಆಗಸ್ಟ್ 31ಕ್ಕೆ ಈ ವರ್ಷದ ಕೊನೆಯ ಶನಿ ತ್ರಯೋದಶಿ: ಶನಿದೋಷ ನಿವಾರಣೆಗೆ ಈ ದಿನ ತುಂಬಾ ಮುಖ್ಯ, ಏಕೆ?
ಈ ಶನಿವಾರ ಧಾರ್ಮಿಕ ದೃಷ್ಟಿಯಿಂದ ತುಂಬಾನೇ ಮಹತ್ವವಾದ ದಿನ, ಏಕೆಂದರೆ ಈ ದಿನ ಶನಿ ತ್ರಯೋದಶಿ ಅಥವಾ ಶನಿ ಪ್ರದೋಷ ವ್ರತವಿದೆ. ಶನಿ ದೋಷವಿರುವವರು ಈ ದಿನ ಪರಿಹಾರ ಮಾಡಿದರೆ ಶನಿ ಕಾಟ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಪ್ರದೋಷ ವ್ರತ ಶಿವನಿಗೆ ಮೀಸಲಾದ ದಿನ. ಶನಿವಾರ ಶನಿ ದೇವನಿಗೆ ಮೀಸಲಾದ ದಿನ. ಪ್ರದೋಷ ವ್ರತ ಶನಿವಾರದಂದು ಬಂದರೆ ಆ ದಿನವನ್ನು ಶನಿ ತ್ರಯೋದಶಿಯೆಂದು ಆಚರಿಸಲಾಗುವುದು.

ಶನಿ ದೇವನ ಆರಾಧನೆಗೆ ಶ್ರೇಷ್ಠವಾದ ದಿನ
ಈ ದಿನ ಶನಿ ದೇವನ ಆರಾಧನೆ ಮಾಡವುದರಿಂದ ಶನಿಯ ಕೃಪೆ ನಮ್ಮ ಮೇಲಿರಲಿದೆ, ಶನಿ ೋಷ, ಶನಿ ಧೈಯ್ಯ ಇರುವವರು ತುಂಬಾನೇ ಕಷ್ಟ ಅನುಭವಿಸುತ್ತಾರೆ. ಈ ದಿನ ಭಕ್ತಿಯಿಂದ ಶನಿಯನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ಕಡಿಮೆಯಾಗುವುದು, ಹಾಗಾಗಿ ಈ ದಿನ ತುಂಬಾನೇ ಮಹತ್ವವಾದ ದಿನವಾಗಿದೆ.
ಶನಿ ತ್ರಯೋದಶಿಯಂದು ಎನು ಮಾಡಬೇಕು?
ಈ ದಿನ ಉಪವಾಸವಿದ್ದು ಶನಿಯ ಆರಾಧನೆ ಮಡಬೇಕು. ಶನಿ ದೇವಾಲಯಕ್ಕೆ ಹೋಗಿ ಸಾಸಿವೆಯೆಣ್ಣೆಯಲ್ಲಿ ನಿಮ್ಮ ಮುಖವನ್ನು ನೋಡಿ ಆ ಎಣ್ಣೆಯನ್ನು ದೇವಾಯಕ್ಕೆ ಅರ್ಪಿಸಬೇಕು.
ಈ ದಿನ ಬಡವರಿಗೆ ದಾನ ಮಾಡಿದರೆ ಒಳ್ಳಯದು
ಬಡವರಿಗೆ ಕಪ್ಪು ಕಂಬಳಿ, ಎಳ್ಳು, ಸಾಸಿವೆಯೆಣ್ಣೆ ಈ ಬಗೆಯ ವಸ್ತುಗಳನ್ನು ದಾನ ಮಾಡಿ.
ಇನ್ನು ಶಿವ ದೇವಾಲಯಕ್ಕೆ ಹೋಗಿ ರುದ್ರಾಭಿಷೇಕ ಮಾಡಿದರೆ ಒಳ್ಳೆಯದು
ಈ ದಿನ ಶಿವ ದೇವಾಲಕ್ಕೆ ಹೋಗಿ ರುದ್ರಾಭಿಷೇಕ ಮಾಡಿ. ಶಿವನ ಕೃಪೆಯಿಂದ ಕೂಡ ಶನಿಯ ಕಾಟ ಕಡಿಮೆಯಾಗುವುದು.
ಈ ದಿನ ಹೀಗೆ ಮಾಡಿದರೆ ಕಷ್ಟಗಳು, ಸವಾಲುಗಳು ಕಡಿಮೆಯಾಗುವುದು, ಬದುಕಿನಲ್ಲಿ ಧನಾತ್ಮಕ ಬದಲಾವಣೆಯಾಗುವುದು ಎಂದು ಹೇಳಲಾಗುವುದು:
ಶನಿವಾರ ಸೂರ್ಯಾಸ್ತದ ಬಳಿಕ ಕಪ್ಪು ಉದ್ದು ಹಾಕಿ ಮಾಡಿದ ಕಿಚಡಿ ಸೇವನೆ ಮಾಡಿದರೆ ಒಳ್ಳೆಯದು
ಈ ದಿನ ನೀಲಮಣಿ ಧರಿಸುವುದರಿಂದ ಅದರ ರಕ್ಷೆ ಇರಲಿದೆ ಎಂದು ಹೇಳಲಾಗುವುದು.
ರುದ್ರಾಕ್ಷಿ ಧರಿಸಲು ಈ ದಿನ ಶ್ರೇಷ್ಠವಾಗಿದೆ
14 ಮುಖಿ ರುದ್ರಾಕ್ಷಿ ಅಥವಾ ಸಪ್ತಮುಖಿ ರುದ್ರಾಕ್ಷಿಯನ್ನು ಶನಿಮಾಲೆಯ ಜೊತೆ ಧರಿಸಿದರೆ ಕಷ್ಟಗಳು ಕಡಿಮೆಯಾಗುವುದು ನಂಬಲಾಗುವುದು.
ಈ ದಿನ ಹನುಮಾನ್ ಚಾಲೀಸಾ ಪಠಿಸಿ: , ಶನಿ ಸಾಡೇಸಾತಿ ಇರುವವರು ಶನಿಯ ಕೆಟ್ಟದೃಷ್ಟಿಯಿಂದ ಪಾರಾಗಲು ಸಾಧ್ಯವೇ ಇಲ್ಲ ಎಂದು ಹೇಳಲಾಗುವುದು, ಆದರೆ ಶನಿಯ ಕೆಟ್ಟ ಪರಿಣಾಮ ಕಡಿಮೆ ಮಾಡುವ ಶಕ್ತಿ ಹನುಮಾನ್ ಚಾಲೀಸಾಗೆ ಇದೆ. ಹನುಮಾನ್ ಚಾಲೀಸಾ ಪಠಣೆ ಮಾಡುವುದರಂದ ಎದುರಾಗುವ ಸವಾಲುಗಳು ದೂರಾಗುವುದು. ಶನಿಯ ತೀಕ್ಷ್ಣ ಪರಿಣಾಮ ಕಡಿಮೆಯಾಗುವುದು ಎಂದು ಹೇಳಲಾಗುವುದು.
ಈ ಮಂತ್ರಗಳನ್ನು ಪಠಿಸಿ
"ಓಂ ಹಿಲ್ಮ್ ಶಾಮ್ ಶನಾಯ ನಮ"
"ಓಂ ಪ್ರಾಮ್ ಪ್ರೀಮ್ ಪ್ರೌಮ್ ಸಹ ಶಾನೈಶ್ರಾಯ ನಮ"
"ಓಂ ಶಾಮ್ ಶನೇಶ್ಚಾರ ನಮಃ"
"ಔಮ್ ಐಂಗ್ ಹರಿಂಗ್ ಶರಿಂಗ್ ಶಂಗ್ ಶನೈಶ್ಚರಾಯ ನಮ ಔಮ್"
ಶನಿ ಗಾಯತ್ರಿ ಮಂತ್ರ '
ಓಂ ಶನೈಶ್ಚರಾಯ ವಿದ್ಮಯೇ ಸೂರ್ಯಪುತ್ರಾಯ ದಹಿಮಹಿ ತನ್ನೊ ಮಂಡಾ ಪ್ರಚೋದಾಯತ್
ಶನಿ ಧ್ಯಾನ ಮಂತ್ರ
ನೀಲಂಜನ ಸಮಾಭಮ್ ರವಿಪುತ್ರಂ ಯಮಗ್ರಾಜಂ ಚಯಾ ಮಾರ್ತಾಂದ ಸಂಭಾತ್ ತಮ್ ನಮಮಿ ಶೈಶ್ಚರಂ



Click it and Unblock the Notifications











