Latest Updates
-
ಅಮೆಜಾನ್ ಸೇಲ್ ಶುರು: ನಿಮ್ಮ ಬಾಲ್ಕನಿಯನ್ನು ಸುಂದರ ತೋಟವನ್ನಾಗಿಸಲು ಮಿಸ್ ಮಾಡ್ಬೇಡಿ ಈ ಬೆಸ್ಟ್ ಡೀಲ್ಸ್! -
ಬಿಸಿಲ ಧಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಪಾನೀಯಗಳೇ ಮದ್ದು! -
ಅಮ್ಮನಿಗೆ ಕೊನೆಯ ನಿಮಿಷದಲ್ಲಿ ಗಿಫ್ಟ್ ಕೊಡಬೇಕಾ? ಈ ಟ್ರಿಕ್ಸ್ ಫಾಲೋ ಮಾಡಿ, ಅಮ್ಮನ ಮುಖದಲ್ಲಿ ನಗು ಮೂಡಿಸಿ! -
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ!
ಶನಿವಾರದಂದು ಬಂದಿದೆ ಷಟಿಲಾ ಏಕಾದಶಿ: ಈ 2 ಕಾರ್ಯ ಮಾಡಿದರೆ ಸಂಪತ್ತು ವೃದ್ಧಿಸುವುದು
ವರ್ಷದಲ್ಲಿ ಒಟ್ಟು 24 ಏಕಾದಶಿ, ತಿಂಗಳಿಗೆ 2 ಏಕಾದಶಿ ಬರುತ್ತದೆ, ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಇವತ್ತು ಅಂದರೆ ಜನವರಿ 25ಕ್ಕೆ ಶಟಿಲಾ ಏಕಾದಶಿಯನ್ನು ಆಚರಿಸಲಾಗುವುದು. ಈ ದಿನ ಏಕಾದಶಿ ವ್ರತವನ್ನು ಮಾಡುವವರು ಬೆಳಗ್ಗೆ ಎದ್ದು ಸ್ನಾನ ಮಾಡಿ ಶ್ರೀ ವಿಷ್ಣುವಿಗೆ ಪೂಜೆ ಸಲ್ಲಿಸಿರುತ್ತಾರೆ. ಆದರೆ ಈ ದಿನ ಶನಿವಾರದಂದು ಈ ಷಟಿಲಾ ಏಕಾದಶಿ ಬಂದಿರುವುದರಿಂದ ಈ ಎರಡು ಕಾರ್ಯ ಮಾಡಿದರೆ ಈ ಏಕಾದಶಿಯಿಂದ ಮತ್ತಷ್ಟು ಪ್ರಯೋಜನ ಪಡೆಯುತ್ತೀರಿ....

ಎಳ್ಳು ಪರಿಹಾರ
ಹೌದು ಈ ದಿನ ನೀವು ಕಪ್ಪು ಎಳ್ಳನ್ನು ಕಳಸದಲ್ಲಿ ಹಾಕಿಟ್ಟು ಪೂಜಿಸಿ, ಅಲ್ಲದೆ ಮನೆಯ ಮೂಲೆ-ಮೂಲೆಯಲ್ಲಿ ಸ್ವಲ್ಪ ಎಳ್ಳು ಹಾಕಿ, ಇನ್ನು ಸ್ವಂತ ವ್ಯವಹಾರ ಮಾಡುತ್ತಿದ್ದರೆ ಆಫೀಸ್ನಲ್ಲಿಯೂ ಎಳ್ಳನ್ನು ಹಾಕಿ, ಹೀಗೆ ಮಾಡುವುದರಿಂದ ಶ್ರೀ ವಿಷ್ಣು ಹಾಗೂ ಶನಿಯ ಕೃಪೆ ನಿಮ್ಮ ಮೇಲಿರುತ್ತದೆ, ಇದರಿಂದ ಕಷ್ಟಗಳು ಕಡಿಮೆಯಾಗುವುದು.
ದಾನ ಮಾಡಿ
ಈ ದಿನ ಮಾಡುವ ದಾನಕ್ಕೆ ತುಂಬಾನೇ ಮಹತ್ವವಿದೆ ಹಾಗಾಗಿ ಈ ದಿನ ನಿಮ್ಮ ಕೈಲ್ಲಾದಂತೆ ದಾನ ಧರ್ಮಗಳನ್ನು ಮಾಡಿ, ಹೀಗೆ ದಾನ ಮಾಡುವಾಗ ಆ ವಸ್ತುಗಳ ಜೊತೆಗೆ ಸ್ವಲ್ಪ ಕಪ್ಪು ಎಳ್ಳು ಕೂಡ ದಾನ ಮಾಡಿ, ಹೀಗೆ ಮಾಡುವುದರಿಂದ ಆರ್ಥಿಕ ತೊಂದರೆಗಳು ದೂರಾಗುವುದು.
ಈ ದಿನ ಅನ್ನದಾನಕ್ಕೆ ತುಂಬಾನೇ ಮಹತ್ವವಿದೆ
ಇದರ ಮಹತ್ವ ಹೇಳುವ ಪೌರಾಣಿಕ ಕತೆ ಕೂಡ ಇದೆ
ಒಬ್ಬಾಕೆ ಮಹಾವಿಷ್ಣುವಿನ ದೊಡ್ಡ ಭಕ್ತೆಯಾಗಿದ್ದಳು. ಪ್ರತಿ ಏಕಾದಶಿಯನ್ನು ಬಹಳ ಕಠಿಣವಾಗಿ ಆಚರಿಸುತ್ತಿದ್ದಳು, ಉಪವಾಸ ಮಾಡುತ್ತಿದ್ದಳು, ಮಂತ್ರಗಳನ್ನು ಪಠಿಸುತ್ತಿದ್ದಳು, ತನಗೆ ಮೋಕ್ಷ ಬೇಕೆಂದು ಸದಾ ಶ್ರೀವಿಷ್ಣುವಿನ ಜಪ ಮಾಡುತ್ತಲೇ ಇರುತ್ತಾಳೆ. ನಾನು ಶ್ರೀ ವಿಷ್ಣುವಿನ ಭಕ್ತೆಯಾಗಿರುವುದರಿಂದ ಖಂಡಿತನನಗೆ ಮೋಕ್ಷ ಸಿಗುತ್ತದೆ ಎಂದು ನಂಬಿರುತ್ತಾಳೆ. ಆಕೆ ಇಹಲೋಕ ತ್ಯಜಿಸಿದ ಬಳಿಕ ವೈಕುಂಠಕ್ಕೆ ಹೋಗುತ್ತಾಳೆ, ಆದರೆ ಅಲ್ಲಿ ಅವಳಿಗೆ ಖಾಲಿ ಗುಡಿಸಲು ನೀಡಲಾಗುತ್ತೆ.
ವೈಕುಂಠ ಎಂದರೆ ಸ್ವರ್ಗದ ಬಾಗಿಲು ನಮಗಾಗಿ ತೆರೆದಿರುತ್ತದೆ ಆದರೆ ಇಲ್ಲಿ ನನಗೆ ಗುಡಿಸಲು ನೀಡಲಾಗಿದೆ ಎಂದು ದುಃಖ ಪಡುತ್ತಾಳೆ. ಆಕೆ ಶ್ರೀ ವಿಷ್ಣುವಿನ ಬಳಿ ನಿನ್ನ ಸದಾ ಜಪ ಮಾಡುತ್ತಿದ್ದೆ, ಎಲ್ಲಾ ಏಕಾದಶಿಯಂದು ಉಪವಾಸ ಇರುತ್ತಿದ್ದೆ, ಆದರೆ ನನಗ್ಯಾಕೆ ಹೀಗೆ ಎಂದಾಗ ನಿನ್ನ ಪೂಜೆಯ ಫಲದಿಂದ ನೀನು ವೈಕುಂಠಕ್ಕೆ ಬಂದಿದ್ದೀಯ, ಆದರೆ ನೀನು ಅನ್ನ ದಾನ ಮಾಡಿಲ್ಲ, ಒಮ್ಮೆ ನಾನೇ ನಿನ್ನ ಬಳಿ ಆಹಾರ ಕೇಳಲು ಬಂದಾಗ ನೀನು ನಮಗೆ ಅನ್ನದ ಬದಲಿಗೆ ಮಣ್ಣು ನೀಡಿದೆ ಎಂದು ಹೇಳಿದಾಗ ಆಕೆ ಕಣ್ಣೀರು ಹಾಕಿ ನನಗೆ ನನ್ನ ತಪ್ಪನ್ನು ಸರಿಪಡಿಸುವ ಮಾರ್ಗ ಕೇಳುತ್ತಾಳೆ. ಆಗ ಶ್ರೀ ವಿಷ್ಣುವು ದೇವ ಕನ್ಯೆಯರು ಬರುತ್ತಾರೆ ಅವರು ಹೇಳಿ ಶಟಿಲಾ ಏಕಾದಶಿಯ ಕತೆಕೇಳು ಅಂತಾರೆ, ಅದರಂತೆ ಆಕೆಯ ಗುಡಿಸಲಿಗೆ ದೇವ ಕನ್ಯೆಯರು ಬರುತ್ತಾರೆ. ಅವರು ದಾನ ಮಹತ್ವ, ಷಟಿಲಾ ಏಕಾದಶಿಯ ವ್ರತ ನಿಯಮ ಹೇಳುತ್ತಾರೆ, ಆಕೆ ಅದನ್ನೆಲ್ಲಾ ಭಕ್ತಿಯಿಂದ ಕೇಳುತ್ತದೆ, ಅವರು ಹೇಳಿದ ಕತೆಯಲ್ಲಿ ಅವರು ಅನ್ನ ದಾನದ ಮಹತ್ವ ಬಗ್ಗೆ ಹೇಳುತ್ತಾರೆ. ನಂತರ ನೋಡಿದರೆ ಗುಡಿಸಲು ಮಾಯವಾಗಿರುತ್ತದೆ, ಆಕೆಗೆ ಸ್ವರ್ಗದ ಬಾಗಿಲು ತೆರೆಯುತ್ತದೆ.



Click it and Unblock the Notifications