Latest Updates
-
UGC NET ಪರೀಕ್ಷೆ: ಪರೀಕ್ಷೆಯ ಒತ್ತಡದ ನಡುವೆ ಮನೆಯಲ್ಲಿ ನೆಮ್ಮದಿ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈಗಲೇ ಈ ಕೆಲಸ ಮಾಡಿ! -
ಭಾರಿ ಮಳೆ, ವಿದ್ಯುತ್ ಕಡಿತ: ಸಂಕಷ್ಟದ ಸಮಯದಲ್ಲಿ ನಿಮ್ಮ ಆರೋಗ್ಯ ಮತ್ತು ಆಹಾರ ಸುರಕ್ಷತೆ ಕಾಪಾಡಿಕೊಳ್ಳುವುದು ಹೇಗೆ? -
ಮುಂಬೈನಲ್ಲಿ ವರುಣನ ಆರ್ಭಟ: ರೆಡ್ ಅಲರ್ಟ್ ಘೋಷಣೆ, ಪ್ರಯಾಣಿಕರೇ ಎಚ್ಚರ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಆರ್ಭಟ: ಹೊರಗೆ ಹೋಗುವ ಮುನ್ನ ಎಚ್ಚರ, ಮನೆಯಲ್ಲೇ ಫಿಟ್ ಆಗಿರಲು ಈ 8 ನಿಮಿಷದ ಟಿಪ್ಸ್! -
ಟೆಲಿಗ್ರಾಂ ಬಳಕೆದಾರರೇ ಗಮನಿಸಿ: ಸೇವೆ ಆರಂಭವಾದರೂ ಈ ಬದಲಾವಣೆ ಮರೆಯದಿರಿ! -
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ!
ಶತ್ರುಹಂತ ಯೋಗ 2023 : ಈ 3 ರಾಶಿಯವರಿಗೆ ಸಾಕಷ್ಟು ಧನಲಾಭವಾಗಲಿದೆ!
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ನವಗ್ರಹ ಸ್ಥಾನ ಬದಲಾವಣೆಯಿಂದ ಅನೇಕ ರೀತಿಯ ಶುಭ ಮತ್ತು ಅಶುಭ ಯೋಗಗಳು ಸೃಷ್ಟಿಯಾಗುತ್ತವೆ. ಈ ಬಾರಿ ಗ್ರಹಂಚ ಸೇನಾಪತಿ ಮತ್ತು ಭೂಮಿಚ ಪುತ್ರ ಕನ್ಯಾ ರಾಶಿಯಲ್ಲಿದ್ದಾನೆ. ಇದೇ ವೇಳೆ ಮಂಗಳ ಗ್ರಹದಿಂದಾಗಿ ಕನ್ಯಾ ರಾಶಿಯಲ್ಲಿ ಶತ್ರುಹಂತ ಯೋಗ ಸೃಷ್ಟಿಯಾಗಿದೆ. ಈ ಯೋಗವು ಸೆಪ್ಟೆಂಬರ್ 18 ರವರೆಗೆ ಇರುತ್ತದೆ.

ವೈದಿಕ ಜ್ಯೋತಿಷ್ಯದ ಪ್ರಕಾರ ಶತ್ರುಹಂತ ಯೋಗಗಳ ಅರ್ಥ ಶತ್ರುಗಳ ನಾಶಕ. ಈ ಯೋಗವನ್ನು ಮಂಗಳಕರ ಯೋಗಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇದರ ಪರಿಣಾಮವಾಗಿ ಮೂರು ರಾಶಿಗಳು ಅದೃಷ್ಟಕರ ಫಲಿತಾಂಶವನ್ನು ಪಡೆಯಲಿದ್ದಾರೆ. ಅಷ್ಟಕ್ಕೂ ಶುಭಕರ ಫಲಿತಾಂಶವನ್ನು ಪಡೆಯುವ ರಾಶಿಗಳು ಯಾವುದು ಅನ್ನೋದನ್ನು ತಿಳಿಯೋಣ.
ಮೇಷ ರಾಶಿ
ಮಂಗಳನು ಈ ರಾಶಿಯ ಎಂಟನೇ ಮನೆಯ ಅಧಿಪತಿ. ಈ ಬಾರಿ ಮೇಷ ರಾಶಿಯವರು ಶತ್ರುಹಂತ ಯೋಗದ ಫಲಿತಾಂಶವನ್ನು ಪಡೆಯಲಿದ್ದಾರೆ. ಕಾನೂನು ವಿಷಯಗಳಲ್ಲಿ ನಿಮಗಿದ್ದ ಅಡೆ-ತಡೆಗಳೆಲ್ಲಾ ನಿವಾರಣೆಯಾಗುತ್ತದೆ. ನೀವು ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರವನ್ನು ಪಡೆಯುತ್ತೀರಿ. ನೀವು ಪಟ್ಟ ಶ್ರಮಕ್ಕೆ ತಕ್ಕ ಫಲಿತಾಂಶವನ್ನು ಪಡೆಯುತ್ತೀರಿ. ನಿಮ್ಮ ವೃತ್ತಿ ಜೀವನದಲ್ಲಿ ಹಲವು ರೀತಿಯ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮ ವ್ಯಾಪಾರ ಅಥವಾ ವೃತ್ತಿ ಕ್ಷೇತ್ರದಲ್ಲಿ ಅನುಭವಿ ವ್ಯಕ್ತಿಗಳ ಸಲಹೆಯಿಂದ ಪ್ರಯೋಜನವನ್ನು ಪಡೆಯುತ್ತೀರಿ.
ಕರ್ಕಾಟಕ ರಾಶಿ
ಶತ್ರುಹಂತ ಯೋಗದ ಪರಿಣಾಮವಾಗಿ ಕರ್ಕಾಟಕ ರಾಶಿಯವರು ಸಾಕಷ್ಟು ಶುಭ ಫಲಿತಾಂಶಗಳನ್ನು ಪಡೆಯಲಿದ್ದಾರೆ. ಈ ಯೋಗದ ಪರಿಣಾಮದಿಂದಾಗಿ ಈ ರಾಶಿಯವರು ಎಲ್ಲಾ ಕ್ಷೇತ್ರಗಳಲ್ಲಿ ಖ್ಯಾತಿಯನ್ನು ಪಡೆಯಲಿದ್ದಾರೆ. ನಿಮ್ಮ ಆತ್ಮವಿಶ್ವಾಸದ ಬಲದಿಂದ ನೀವು ಎಲ್ಲಾ ಕಷ್ಟಗಳಿಂದ ಮುಕ್ತರಾಗುತ್ತೀರಿ. ವ್ಯಾಪಾರ ಮಾಡುತ್ತಿರುವವರು ಆರ್ಥಿಕ ಲಾಭವನ್ನು ಪಡೆಯಬಹುದು. ಈ ಅವಧಿಯಲ್ಲಿ ಸಾಮಾನ್ಯವಾಗಿ ನೀವು ಅಂದುಕೊಂಡ ಎಲ್ಲಾ ಕೆಲಸಗಳನ್ನು ಪೂರೈಸಲು ಸಾಧ್ಯವಾಗುತ್ತದೆ.
ತುಲಾ ರಾಶಿ
ತುಲಾ ರಾಶಿಯವರು ಶತ್ರುಹಂತ ಯೋಗದ ಪ್ರಯೋಜನ ಪಡೆಯಲಿದ್ದಾರೆ. ಹೀಗಾಗಿ ಪ್ರತಿ ಸವಾಲನ್ನು ಎದುರಿಸಲು ದೈರ್ಯವನ್ನು ಪಡೆಯುತ್ತೀರಿ. ಕೆಲಸದಲ್ಲಿ ನಿಮ್ಮ ಮೇಲಧಿಕಾರಿಗಳಿಂದ ನೀವು ಪ್ರಶಂಸೆಯನ್ನು ಪಡೆಯಲು ಸಾಧ್ಯವಾಗುತ್ತದೆ. ಉದ್ಯೋಗಸ್ಥರು ತಮ್ಮ ಕಠಿಣ ಪರಿಶ್ರಮದಿಂದ ಉನ್ನತ ಸ್ಥಾನವನ್ನು ಪಡೆಯುತ್ತಾರೆ. ರಾಜಕಾರಣಿಗಳು ತಮ್ಮ ಪ್ರಭಾವವನ್ನು ಹೆಚ್ಚಿಸುತ್ತಾರೆ. ಮತ್ತು ಸರ್ಕಾರಿ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲಸಗಳು ನೀವು ಪಡೆಯುವ ಸಾಧ್ಯತೆಗಳಿದೆ. ನಿರುದ್ಯೋಗಿಗಳು ಹೊಸ ಉದ್ಯೋಗ ಪಡೆಯುವ ಸಾಧ್ಯತೆಗಳಿದೆ.



Click it and Unblock the Notifications