Latest Updates
-
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ?
ನಾಳೆ ಷಟ್ತಿಲಾ ಏಕಾದಶಿ; ವಿಷ್ಣು ಆಶೀರ್ವಾದ ಪಡೆಯಲು ಏನು ಮಾಡಬೇಕು? ಈ ಕಥೆ ಗೊತ್ತಾ?
ಹಿಂದೂ ಪುರಾಣಗಳ ಪ್ರಕಾರ ಎಲ್ಲಾ ಹಬ್ಬಗಳು ಹಾಗೆ ಏಕಾದಶಿಗಳು ಬಹಳ ಪ್ರಮುಖ ಸ್ಥಾನ ನೀಡಲಾಗುತ್ತದೆ. ಏಕಾದಶಿಗಳ ಆಚರಣೆಯಿಂದ ವ್ಯಕ್ತಿಯೊಬ್ಬರ ಜೀವನದಲ್ಲಿ ಹಲವು ರೀತಿಯ ಬದಲಾವಣೆಗಳು ಸಂಭವಿಸುತ್ತದೆ. ಅದ್ರಲ್ಲೂ ಹಲವು ಏಕಾದಶಿಗಳಿಂದ ಸಂಪತ್ತು, ಆರೋಗ್ಯ, ಐಶ್ವರ್ಯ ಪ್ರಾಪ್ತಿಯಾಗಲಿದೆ ಎಂದು ನಂಬಲಾಗಿದೆ. ಹಿಂದೂ ನಂಬಿಕೆಯಲ್ಲಿ ಪ್ರತಿ ತಿಂಗಳು ಸಹ ಹಲವು ರೀತಿ ಏಕಾದಶಿಗಳು ಬರುವುದು ನೋಡಬಹುದು.
ಈಗ ಜನವರಿಯ ಮಕರ ಸಂಕ್ರಮಣದ ಸಮಯದಲ್ಲಿ ಪ್ರಮುಖ ಏಕಾದಶಿಯೊಂದನ್ನು ಆಚರಿಸಲಾಗುತ್ತದೆ. ಷಟ್ತಿಲಾ ಏಕಾದಶಿಯನ್ನು ಆಚರಿಸುವ ಕುರಿತಾಗಿ ನಾವಿಂದು ತಿಳಿದುಕೊಳ್ಳೋಣ. ಮಾಘ ಮಾಸದ ಕೃಷ್ಣ ಪಕ್ಷದ ದಿನದಂದು ಬರುವ ಷಟ್ತಿಲಾ ಏಕಾದಶಿಯನ್ನು ಇನ್ನೂ ಹೆಚ್ಚು ಪ್ರಭಾವಶಾಲಿ ಎಂದು ಪರಿಗಣಿಸಲಾಗಿದೆ. 2026ರ ಮೊದಲ ಏಕಾದಶಿ ಜನವರಿ 14 ರಂದು ಬರುತ್ತದೆ.

ಮಕರ ಸಂಕ್ರಾಂತಿಯ ದಿನದಂದು ಈ ಏಕಾದಶಿ ಆಚರಿಸಲಾಗುತ್ತಿದೆ. ಇದು ಬಹಳ ವಿಶೇಷ ದಿನವೆಂದು ಕರೆಯಲಾಗಿದೆ. ಈ ದಿನವು ವಿಷ್ಣುವಿಗೆ ಸಮರ್ಪಿಸಲಾಗುತ್ತದೆ. ಇನ್ನೊಂದು ಕಡೆ ಸೂರ್ಯ ದೇವನಿಗೆ ಪ್ರಮುಖ ದಿನವಾಗಿ ವಿಷ್ಣುವಿನ ಪೂಜೆ ಮಾಡುವುದು ಷಟ್ತಿಲಾ ಏಕಾದಶಿಯ ವಿಶೇಷವಾಗಿದೆ. ಈ ದಿನದಂದು ಎಳ್ಳನ್ನು ಬಳಸಿ ಯಾವುದಾದರು ಖಾದ್ಯ ತಯಾರಿಸುತ್ತಾರೆ ಅದನ್ನು ನೈವೇದ್ಯವಾಗಿ ಬಳಸುತ್ತಾರೆ.
ಷಟ್ತಿಲಾ ಏಕಾದಶಿಯ ಸಮಯ ಶುಭ ಗಳಿಗೆ ಯಾವಾಗ?
ಮಾಘ ಮಾಸದ ಕೃಷ್ಣ ಪಕ್ಷದ ಏಕಾದಶಿ ತಿಥಿ ಪ್ರಾರಂಭವಾಗುತ್ತದೆ
ಜನವರಿ 13, ಮಧ್ಯಾಹ್ನ 03:17 ಕ್ಕೆ
ಏಕಾದಶಿ ತಿಥಿ ಕೊನೆ: ಜನವರಿ 14, ಸಂಜೆ 05:52 ಕ್ಕೆ
ನೀವು ಷಟ್ತಿಲಾ ಏಕಾದಶಿ ಉಪವಾಸವನ್ನು ಆಚರಿಸುತ್ತಿದ್ದರೆ. ಆ ನಿಯಮಗಳನ್ನು ಸಹ ಪಾಲಿಸಿ. ಹಾಗೆ ಜನವರಿ 15 ಬೆಳಗ್ಗೆ 7:15ರ ನಂತರ ನಿಮ್ಮ ಉಪವಾಸ ಮುರಿಬಹುದು.
ಷಟ್ತಿಲಾ ಏಕಾದಶಿಯಂದು ಏನು ಮಾಡಬೇಕು?
ಯಾರು ಈ ಉಪವಾಸ ಆಚರಿಸುತ್ತಾರೋ ಅವರು ವಿಷ್ಣುವಿನ ಪೂಜೆ ಮಾಡಬೇಕು. ಹಾಗೆ ವಿಷ್ಣುವಿನ ಕಥೆ ಕೇಳಬೇಕು. ಷಟ್ತಿಲಾ ಏಕಾದಶಿಯ ದಿನ ಹಸುವಿನ ಸಗಣಿ, ಹತ್ತಿ, ಎಳ್ಳು ಬೆರೆಸಿ ಹಸುವಿಗೆ ರೊಟ್ಟಿಗಳನ್ನು ಮಾಡಿ ಹವನ ಮಾಡಬೇಕು. ಏಕಾದಶಿಯ ದಿನದಂದು ಸಿಹಿತಿಂಡಿ, ತೆಂಗಿನಕಾಯಿ ಅರ್ಘ್ಯವನ್ನು ಅರ್ಪಿಸಿ ವಿಷ್ಣುವನ್ನು ಸ್ತುತಿಸಿ.
ಷಟ್ತಿಲಾ ಏಕಾದಶಿಯ ಕಥೆ ಏನು?
ಪುರಾಣದ ಪ್ರಕಾರ ಪ್ರಾಚೀನ ಕಾಲದಲ್ಲಿ ಮಹಿಳೆಯೊಬ್ಬಳು ವಿಷ್ಣುವಿನ ಆರಾಧಕಿಯಾಗಿದ್ದಳು. ಆಕೆ ವಿಷ್ಣುವಿನ ಯಾವುದೇ ಪೂಜೆ, ಉಪವಾಸ ತಪ್ಪಿಸುತ್ತಿರಲಿಲ್ಲ. ಉಪವಾಸವನ್ನು ಮಾಡಿದ್ದರಿಂದ ಆಕೆ ಸಂಪತ್ತು, ಆರೋಗ್ಯ, ಸಮೃದ್ಧಿ ಪಡೆದಳು. ಹಾಗೆ ವಿಷ್ಣುವನ್ನು ನಂಬಿದರೆ ಮೋಕ್ಷ ಸಿಗುವುದೆಂದು ಭಾವಿಸಿದ್ದಳು, ಅದನ್ನೆ ಪ್ರಚಾರ ಮಾಡಿದಳು. ಆದ್ರೆ ಆಕೆ ಎಂದಿಗೂ ದಾನ ಧರ್ಮದಲ್ಲಿ ಭಾಗಿಯಾಗಲಿಲ್ಲವಂತೆ. ಆಕೆಯ ಮರಣದ ಬಳಿಕ ವೈಕುಂಠಕ್ಕೆ ತೆರಳಿದಳು. ಆದ್ರೆ ವೈಕುಂಠದಲ್ಲಿ ಆಕೆಗೆ ಅಚ್ಚರಿ ಕಾದಿತ್ತು. ಅಲ್ಲಿ ಆಕೆಗೆ ಕೇವಲ ಖಾಲಿಯಾದ ಗುಡಿಸಲು ಮಾತ್ರ ನೀಡಲಾಗಿತ್ತು.
ವಿಷ್ಣುವಿನ ಪರಮ ಭಕ್ತೆಗೂ ವೈಕುಂಠದಲ್ಲಿ ಖಾಲಿ ಗುರಿಸಲು ಸಿಕ್ಕಿತು. ಇದರಿಂದ ನೊಂದ ಮಹಿಳೆ ವಿಷ್ಣುವಿನ ಬಳಿ ತೆರಳಿ ಕೇಳಿದಳಂತೆ. ಪ್ರತಿ ವಾರ ನಿನಗಾಗಿ ಉಪವಾಸ ಮಾಡಿದ್ದೆ, ಒಂದೂ ದಿನವೂ ಬಿಡದೆ ಪೂಜೆ ಮಾಡಿದ್ದೆ ಆದ್ರೆ ಖಾಲಿ ಗುಡಿಸಲು ಏಕೆ ಎಂಬ ಪ್ರಶ್ನೆ ಇಟ್ಟಳು. ನೀನು ಇಷ್ಟೊಂದು ಪೂಜೆ ಮಾಡಿದರೂ, ನಿನ್ನ ಪೂಜೆಯ ಫಲದಿಂದ ವೈಕುಂಠಕ್ಕೆ ಬಂದರೂ, ನಿನ್ನ ಜೀವನದಲ್ಲಿ ನೀನು ಯಾವತ್ತೂ ಏನನ್ನೂ ದಾನ ಮಾಡಿಲ್ಲ ಆದ್ದರಿಂದ ನಿನಗೆ ಈ ಫಲ ಸಿಕ್ಕಿದೆ ಎಂದು ಹೇಳುತ್ತಾನೆ. ಹಾಗೆ ವಿಷ್ಣು ಭಿಕ್ಷುಕನ ವೇಷ ಧರಿಸಿ ಮಹಿಳೆಯ ಮನೆಗೆ ಬಂದಾಗ ಆಕೆ ಪೂಜೆಯ ನಂತರ ಭಿಕ್ಷೆ ನೀಡುವುದಾಗಿಯೂ ಹಾಗೆ ರಾಗಿ ಮುದ್ದೆಯ ಬದಲಾಗಿ ನೀರು ಕೊಟ್ಟು ಕಳುಹಿಸಿರುವುದನ್ನು ವಿಷ್ಣು ವಿವರಿಸಿದನು.
ವಿಷ್ಣುವಿನ ಈ ಮಾತುಗಳ ಕೇಳಿ ಮಹಿಳೆಗೆ ಪಶ್ಚಾತ್ತಾಪವಾಗುತ್ತದೆ. ಆಕೆ ತಾನು ಮಾಡಿದ ತಪ್ಪಿಗೆ ಪರಿಹಾರವೇನು ಎಂಬುದನ್ನು ಕೇಳಿದಳು. ಆಗ ಶ್ರೀ ಹರಿಯು ದೇವ ಕನ್ಯೆಯರು ನಿನ್ನನ್ನು ಭೇಟಿಯಾಗಲು ಬರುತ್ತಾರೆ, ಅವರನ್ನು ನಿನ್ನಗುಡಿಸಲಿಗೆ ಆಹ್ವಾನಿಸಬೇಕು, ನಂತರ ಅವರು ಷಟ್ತಿಲಾ ಏಕಾದಶಿಯ ಉಪವಾಸದ ಕತೆ ಬಗ್ಗೆ ಹೇಳುವವರೆಗೆ ಗುಡಿಸಲ ಬಾಗಿಲು ತೆರೆಯಬೇಡ ಎಂದನು. ಇದಾದ ಬಳಿಕ ದೇವಕನ್ಯೆಯರು ಹೇಳಿದ ಈ ಕಥೆ ಕೇಳಿದ ಬಳಿಕ ಆಕೆಯ ಪಾಪಗಳು ಪರಿಹಾರವಾದವು ಎಂದು ಹೇಳಲಾಗಿದೆ.



Click it and Unblock the Notifications