Latest Updates
-
ವಾಟ್ಸಾಪ್ನಲ್ಲಿ ಪ್ರೀತಿಯ ಬಲೆ: ನಿಮ್ಮ ಖಾತೆ ಖಾಲಿಯಾಗುವ ಮುನ್ನ ಈ ಎಚ್ಚರಿಕೆ ವಹಿಸಿ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಬೇಸಿಗೆಯ ಧಗೆಗೆ ಸುಸ್ತಾಗಿದ್ದೀರಾ? ಈ ಸಾಂಪ್ರದಾಯಿಕ ಆಹಾರಗಳಿದ್ದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಅಂತರಾಷ್ಟ್ರೀಯ ನೃತ್ಯ ದಿನ: ಸೋಶಿಯಲ್ ಮೀಡಿಯಾದಲ್ಲಿ ಡ್ಯಾನ್ಸ್ ಅಬ್ಬರ, ನೀವು ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಈ ತಪ್ಪುಗಳನ್ನು ಮಾಡಬೇಡಿ! -
ಬಿಸಿಲಿನ ಬೇಗೆಯಲ್ಲಿ ಮದುವೆ ಸಂಭ್ರಮ: ಅತಿಥಿಗಳ ಆರೋಗ್ಯ ಕಾಪಾಡಲು ಪ್ಲಾನ್ ಬದಲಾಯಿಸುವುದು ಅನಿವಾರ್ಯವೇ? -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಗಾರ್ಡನ್ ಮತ್ತು ಮನೆಯನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಹೀಟ್ವೇವ್ ಎಚ್ಚರಿಕೆ: ಬಿಸಿಲ ಬೇಗೆಯಿಂದ ಬಚಾವಾಗಲು ಈ ಸರಳ ಆಹಾರ ಕ್ರಮಗಳನ್ನು ಮರೆಯದಿರಿ -
ದೆಹಲಿ ಬಿಸಿಲು: ಸುಡುವ ತಾಪಮಾನದಲ್ಲೂ ಸ್ಟೈಲಿಶ್ ಆಗಿ ಕಾಣಲು ವೈರಲ್ ಆಗ್ತಿವೆ ಈ ಸಿಂಪಲ್ ಹ್ಯಾಕ್ಸ್! -
ಮಳೆಗಾಲದ ಬೆಳಗಿನ ವರ್ಕೌಟ್: ನಿಮ್ಮ ಪ್ಲಾನ್ ಉಲ್ಟಾಪಲ್ಟಾ ಆಗದಿರಲಿ, ಈ ಮುನ್ನೆಚ್ಚರಿಕೆ ಮರೆಯದಿರಿ!
Shravan : ಶ್ರಾವಣ ಮಾಸದಲ್ಲಿ ಈ 5 ವಸ್ತುಗಳನ್ನು ಮನೆಗೆ ತಂದರೆ ಅದೃಷ್ಟವೋ ಅದೃಷ್ಟ!
ಶ್ರಾವಣ ಮಾಸ ಹಿಂದೂಗಳಿಗೆ ವಿಶೇಷ ಮಾಸ. ಈ ತಿಂಗಳನ್ನು ಶಿವನಿಗೆ ಅರ್ಪಣೆ ಮಾಡಲಾಗುತ್ತದೆ. ಈ ತಿಂಗಳಿನಲ್ಲಿ ಭಕ್ತಾದಿಗಳು ಶಿವನಿಗಾಗಿ ವಿಶೇಷ ಪೂಜೆಯನ್ನು ಅರ್ಪಣೆ ಮಾಡೋದಲ್ಲದೇ, ಮಹಾದೇವನನ್ನು ಒಲಿಸಿಕೊಳ್ಳೋದಕ್ಕೆ ನಾನಾ ರೀತಿಯ ಉಪವಾಸ ವ್ರತಗಳನ್ನೂ ಕೂಡ ಮಾಡಲಾಗುತ್ತದೆ. ನಂಬಿಕೆಗಳ ಪ್ರಕಾರ ಯಾರು ಶಿವನನ್ನು ಭಕ್ತಿಯಿಂದ ಪೂಜಿಸ್ತಾರೋ ಅವರ ಜೀವನದಲ್ಲಿ ಶಾಂತಿ, ಸಂತೋಷ ಹಾಗೂ ಸಮೃದ್ಧಿ ಪ್ರಾಪ್ತಿಯಾಗುತ್ತಂತೆ.
ಇನ್ನೂ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ಹೆಚ್ಚಾಗಿದ್ರೆ ಈ ಸಮಯದಲ್ಲಿ ಶಿವನ ಜೊತೆಗೆ ಪಾರ್ವತಿಯನ್ನು ಪೂಜಿಸಿದ್ರೆ ಆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಂತೆ. ಇನ್ನೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶ್ರಾವಣ ಮಾಸ ಪವಿತ್ರವಾದ ತಿಂಗಳಾಗಿದ್ದು, ಈ ತಿಂಗಳಿನಲ್ಲಿ ಕೆಲ ವಸ್ತುಗಳು ನಮ್ಮ ಮನೆಯಲ್ಲಿದ್ದರೆ ಸಮೃದ್ಧಿ ಹೆಚ್ಚಾಗುತ್ತಂತೆ. ಹಾಗಾದ್ರೆ ಆ ವಸ್ತುಗಳು ಯಾವುದು ಅನ್ನೋದನ್ನು ತಿಳಿಯೋಣ.

1. ಢಮರುಗ
ಮಹಾದೇವ ತನ್ನ ಪ್ರಿಯ ವಾದ್ಯವಾದ ಢಮರುಗವನ್ನು ಯಾವಾಗಲೂ ಕೈಯಲ್ಲಿಯೇ ಹಿಡಿದಿರುತ್ತಾನೆ. ಇದರ ಶಬ್ಧದಿಂದ ನಕಾರಾತ್ಮಕ ಶಕ್ತಿಗಳು ದೂರ ಹೋಗುತ್ತಂತೆ. ಅಷ್ಟೇ ಅಲ್ಲ, ಇದರ ಶಬ್ಧದಿಂದ ಮಾನಸಿಕ ಒತ್ತಡವನ್ನು ನಿವಾರಿಸೋದು ಮಾತ್ರವಲ್ಲದೇ ನಮ್ಮ ಮನಸ್ಸು ಶಾಂತಗೊಳ್ಳುತ್ತಂತೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶ್ರಾವಣ ಮಾಸದ ಸೋಮವಾರದಂದು ಡಮರುವನ್ನು ಮನೆಗೆ ತರುವುದು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ರೀತಿ ಮಾಡೋದ್ರಿಂದ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿ ವೃದ್ಧಿಯಾಗುತ್ತಂತೆ.
2. ಬಿಲ್ವಪತ್ರೆ
ಶಿವನಿಗೆ ಪ್ರಿಯವಾದ ವಸ್ತುಗಳಲ್ಲಿ ಬಿಲ್ವಪತ್ರೆ ಕೂಡ ಒಂದು. ಇದರ ಹೊರತಾಗಿ ಶಿವನ ಪೂಜೆಯು ಅಪೂರ್ಣವೆಂದು ಪರಿಗಣಿಸಲಾಗುತ್ತದೆ. ನಂಬಿಕೆಗಳ ಪ್ರಕಾರ ಶಿವನಿಗೆ ಇದನ್ನು ಅರ್ಪಿಸಿದರೆ ಸಕಲ ಇಷ್ಟಾರ್ಥಗಳು ನೆರವೇರುತ್ತಂತೆ. ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಅಥವಾ ಜೀವನದಲ್ಲಿ ಇನ್ಯಾವುದೇ ಸಮಸ್ಯೆಗಳು ಇದ್ದರೆ ಶಿವನಿಗೆ ಬಿಲ್ವಪತ್ರೆ ಅರ್ಪಿಸೋದ್ರಿಂದ ಸಮಸ್ಯೆಗಳು ನೆರವೇರುತ್ತಂತೆ.
3. ಬೆಳ್ಳಿಯ ತ್ರಿಶೂಲ
ಹಿಂದೂ ಧರ್ಮದಲ್ಲಿ ತ್ರಿಶೂಲವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗಿದೆ. ಬೆಳ್ಳಿ ತ್ರಿಶೂಲವನ್ನು ಸೋಮವಾರದಂದು ಮನೆಗೆ ತಂದರೆ ಮನೆಯ ಎಲ್ಲಾ ಋಣಾತ್ಮಕ ಶಕ್ತಿ ದೂರವಾಗಿ ಮನೆಯಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತಂತೆ. ಒಂದು ವೇಳೆ ಬೆಳ್ಳಿಯ ತ್ರಿಶೂಲವನ್ನು ಖರೀದಿಸಲು ಸಾಧ್ಯವಾಗದಿದ್ದರೆ ತಾಮ್ರದ ತ್ರಿಶೂಲವನ್ನು ಕೂಡ ಖರೀದಿಸಬಹುದು. ಬೆಳ್ಳಿಯ ತ್ರಿಶೂಲ ನಿಮ್ಮ ಮನೆಯಲ್ಲಿ ಇದ್ದರೆ ನಿಮ್ಮ ಮನೆಯಲ್ಲಿ ಸಮೃದ್ಧಿ ತುಂಬಿರುತ್ತದೆ. ಜೊತೆಗೆ ಯಾವುದೇ ಹಣಕಾಸಿನ ತೊಂದರೆಗಳು ಎದುರಾಗೋದಿಲ್ಲ.
4. ರುದ್ರಾಕ್ಷಿ
ಹಿಂದೂ ಧರ್ಮದಲ್ಲಿ ರುದ್ರಾಕ್ಷಿಗೆ ಮಹತ್ವದ ಸ್ಥಾನವನ್ನು ನೀಡಲಾಗಿದೆ. ದೇವರನ್ನು ಕುರಿತು ಪೂಜೆ ಮಾಡುವಾಗ ರುದ್ರಾಕ್ಷಿ ಮಣಿಯನ್ನು ಹಿಡಿದು ಜಪ ಮಾಡಲಾಗುತ್ತದೆ. ಶ್ರಾವಣ ಮಾಸದಲ್ಲಿ ರುದ್ರಾಕ್ಷಿಯನ್ನು ಮನೆಗೆ ತಂದರೆ ತುಂಬಾನೇ ಒಳ್ಳೆಯದು. ಆ ವ್ಯಕ್ತಿಯ ಅದೃಷ್ವೇ ಬದಲಾಗುತ್ತಂತೆ. ಆ ಮನೆಯಲ್ಲಿ ಸಂಪತ್ತು ಹಾಗೂ ಸಮೃದ್ಧಿ ಹೆಚ್ಚಾಗುತ್ತಂತೆ.
ಯಾರು ರುದ್ರಾಕ್ಷಿಯನ್ನು ಧರಿಸುತ್ತಾರೆಯೋ ಅವರ ಜೀವನದಲ್ಲಿ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ. ಕೌಟುಂಬಿಕ ಕಲಹಗಳಿದ್ದರೆ ಅವುಗಳೆಲ್ಲಾ ನಿವಾರಣೆಯಾಗುತ್ತಂತೆ. ಅಷ್ಟೇ ಅಲ್ಲ, ರುದ್ರಾಕ್ಷಿ ಮನೆಯಲ್ಲಿದ್ದರೆ ಧನಾತ್ಮಕ ಶಕ್ತಿ ಹೆಚ್ಚಾಗುತ್ತಂತೆ.
5. ಭಸ್ಮ
ಶಿವನಿಗೆ ಅತ್ಯಂತ ಪ್ರಿಯವಾದ ವಸ್ತುಗಳಲ್ಲಿ ಭಸ್ಮ ಕೂಡ ಒಂದು ಅಂತ ಪರಿಗಣಿಸಲಾಗಿದೆ. ಶ್ರಾವಣ ಮಾಸದಲ್ಲಿ ಭಸ್ಮವನ್ನು ದೇವಸ್ಥಾನದಲ್ಲಿ ಇಡುವುದರಿಂದ ಶ್ರೇಯಸ್ಸು ಹೆಚ್ಚಾಗುತ್ತಂತೆ. ನೀವು ಶಿವನ ವಿಗ್ರಹದ ಜೊತೆಗೆ ಭಸ್ಮವನ್ನು ಇಟ್ಟರೆ ಶಿವನು ಪ್ರಸನ್ನನಾಗುತ್ತಾನಂತೆ. ಹಾಗೂ ನಮ್ಮ ಜೀವನದಲ್ಲಿ ಎದುರಾಗಿದ್ದ ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೇ, ಸಂಪತ್ತು ಮತ್ತು ಸಮೃದ್ಧಿ ಕೂಡ ಹೆಚ್ಚಾಗುತ್ತದೆ.
ಶ್ರಾವಣ ಮಾಸದಲ್ಲಿ ಈ ಐದು ವಸ್ತುಗಳನ್ನು ಮನೆಗೆ ತರುವುದು ಶುಭಕರ ಎಂದು ಪರಿಗಣಿಸಲಾಗಿದೆ. ನಿಮಗೆ ಆರ್ಥಿಕ ಸಮಸ್ಯೆಯಿಂದ ಹಿಡಿದು ಯಾವುದೇ ರೀತಿಯ ಸಮಸ್ಯೆ ಇದ್ದರೂ ಕೂಡ ಪರಿಹಾರವಾಗುತ್ತದೆ.



Click it and Unblock the Notifications