Latest Updates
-
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ! -
ಮಳೆಗಾಲದ ಮದುವೆ: ನಿಮ್ಮ ಸಂಭ್ರಮಕ್ಕೆ ಅಡ್ಡಿಯಾಗದಂತೆ ಪ್ಲಾನ್ ಮಾಡುವುದು ಹೇಗೆ? -
ಮುಂಗಾರು ಮಳೆ: ನಿಮ್ಮ ಬಾಲ್ಕನಿ ಮತ್ತು ಎಸಿ ಸುರಕ್ಷಿತವೇ? ಈ 10 ನಿಮಿಷದ ಕೆಲಸ ಜೀವ ಉಳಿಸಬಹುದು!
ಶ್ರಾವಣ ಮಾಸ 2023 : ಈ ಆಹಾರಗಳನ್ನು ಶಿವನಿಗೆ ಅರ್ಪಿಸಿದ್ರೆ ನಿಮ್ಮೆಲ್ಲಾ ಕಷ್ಟಗಳು ಪರಿಹಾರವಾಗುತ್ತೆ!
ಶ್ರಾವಣ ಮಾಸ ಹಿಂದೂಗಳಿಗೆ ವಿಶೇಷವಾದ ಮಾಸ. ಈ ಮಾಸದಲ್ಲಿ ಶಿವನಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಈ ಸಮಯದಲ್ಲಿ ಶಿವನನ್ನು ಭಕ್ತಿಯಿಂದ ಬೇಡಿಕೊಂಡರೆ ನಮ್ಮೆಲ್ಲಾ ಇಷ್ಟಾರ್ಥಗಳು ನೆರವೇರುತ್ತೆ ಅನ್ನೋ ನಂಬಿಕೆಯಿದೆ.
ಅದ್ರಲ್ಲೂ ಕರ್ನಾಟಕದಲ್ಲಿ ಜುಲೈ 18ರಿಂದ ಶ್ರಾವಣ ಮಾಸ ಆರಂಭವಾಗ್ತಿದ್ದು, ಈ ಸಮಯದಲ್ಲಿ ಶಿವನಿಗೆ ಪ್ರಿಯವಾದ ಕೆಲವೊಂದು ಆಹಾರಗಳನ್ನು ಅರ್ಪಣೆ ಮಾಡಿದ್ರೆ ನಿಮ್ಮೆಲ್ಲಾ ಇಷ್ಟಾರ್ಥಗಳು ನೆರವೇರಲಿದೆ. ಅಷ್ಟಕ್ಕೂ ಯಾವೆಲ್ಲಾ ವಿಧದ ಆಹಾರಗಳನ್ನು ಶಿವನಿಗೆ ಅರ್ಪಣೆ ಮಾಡಿದ್ರೆ ಒಳ್ಳೆಯದಾಗುತ್ತೆ ಅನ್ನೋದನ್ನು ತಿಳಿಯೋಣ.

1. ಬಿಲ್ವಪತ್ರೆ
ಮಾತೆ ಪಾರ್ವತಿಯು ಬಿಲ್ವಪತ್ರೆ ಮರದ ಪ್ರತಿಯೊಂದು ಭಾಗದಲ್ಲಿಯೂ ನೆಲೆಸಿದ್ದಾಳೆ ಎನ್ನುವ ನಂಬಿಕೆಯಿದೆ. ಹೀಗಾಗಿ ಬಿಲ್ವಪತ್ರೆಯ ಎಲೆಗಳನ್ನು ಶಿವನಿಗೆ ಅರ್ಪಣೆ ಮಾಡಿದ್ರೆ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆಯಿದೆ. ಇದರಿಂದ ಶಿವನ ಆಶೀರ್ವಾದ ಸದಾ ಇರುತ್ತದೆ.
2. ಮೊಸರು
ಶ್ರಾವಣ ಮಾಸದಲ್ಲಿ ಶಿವನಿಗೆ ಮೊಸರು ಅರ್ಪಿಸೋದ್ರಿಂದ ಒಳ್ಳೆಯದಾಗುತ್ತಂತೆ. ಇದರಿಂದ ನಮ್ಮ ಜೀವನದಲ್ಲಿರುವ ಪ್ರತಿಯೊಂದು ಕಷ್ಟಗಳು ನಿವಾರಣೆಯಾಗುತ್ತದೆ. ಯಾವುದಾದರೂ ಕೆಲಸಕ್ಕೆ ಅಡೆ-ತಡೆಗಳು ಉಂಟಾಗಿದ್ದರೆ ಅದರಿಂದ ನೀವು ಪರಿಹಾರ ಕಂಡುಕೊಳ್ಳಬಹುದು.
3. ಜೇನುತುಪ್ಪ
ಶಿವನಿಗೆ ಪ್ರಿಯವಾದ ವಸ್ತುಗಳಲ್ಲಿ ಜೇನು ತುಪ್ಪ ಕೂಡ ಒಂದಾಗಿದೆ. ಆದರಿಂದ ಇದನ್ನು ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಅರ್ಪಿಸುವುದರಿಂದ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ. ಹಿಂದೂ ನಂಬಿಕೆಗಳ ಪ್ರಕಾರ ಜೀವನದಲ್ಲಿರುವ ತೊಂದರೆಗಳು ಮತ್ತು ರೋಗಗಳನ್ನು ದೂರವಿಡಲು ಶಿವನಿಗೆ ಜೇನಿನ ಅಭಿಷೇಕ ಮಾಡಬೇಕಂತೆ.
4. ಹಾಲು
ಶಿವಲಿಂಗಕ್ಕೆ ಹಾಲನ್ನು ಅರ್ಪಣೆ ಮಾಡೋದ್ರಿಂದ ನಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತಂತೆ. ಇದೇ ಕಾರಣಕ್ಕೆ ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಹಾಲನ್ನು ಅರ್ಪಣೆ ಮಾಡುವುದು.
5. ತುಪ್ಪು
ಶ್ರಾವಣ ಮಾಸದಲ್ಲಿ ತುಪ್ಪವನ್ನು ಶಿವಲಿಂಗಕ್ಕೆ ಅರ್ಪಣೆ ಮಾಡಿದ್ರೆ ನಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತಂತೆ.
6. ಅಕ್ಕಿ
ಶ್ರಾವಣ ತಿಂಗಳಿನಲ್ಲಿ ಶಿವನಿಗೆ ಅಕ್ಕಿಯನ್ನು ಅರ್ಪಣೆ ಮಾಡೋದ್ರಿಂದ ಕುಟುಂಬದಲ್ಲಿರುವ ಎಲ್ಲಾ ರೀತಿಯ ಆರ್ಥಿಕ ಸಮಸ್ಯೆಗಳು ಪರಿಹಾರವಾಗಿ ನಿಮ್ಮ ಜೀವನದಲ್ಲಿ ಸ್ಥಿರತೆ ಹೆಚ್ಚಾಗುತ್ತಂತೆ.
7. ಕೇಸರಿ
ಶಿವಲಿಂಗಕ್ಕೆ ನೀರನ್ನು ಸುರಿಯುವ ಮೊದಲು ಹಾಲಿಗೆ ಕೇಸರಿ ಸೇರಿಸುವುದು ಅಥವಾ ಶಿವಲಿಂಗಕ್ಕೆ ಕೇಸರಿ ಎಳೆಗಳನ್ನು ಅರ್ಪಿಸುವುದರಿಂದ ಒಳ್ಳೆಯದಾಗುತ್ತಂತೆ. ಇದರಿಂದ ನೀವು ಬಯಸಿದ ಜೀವನದ ಸಂಗಾತಿ ನಿಮಗೆ ಸಿಗುತ್ತಾರೆ. ಹಾಗೂ ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.
8. ಗೋಧಿ
ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಗೋಧಿಯನ್ನು ಅರ್ಪಣೆ ಮಾಡೋದ್ರಿಂದ ಶಿವನ ಆಶೀರ್ವಾದ ನಿಮ್ಮ ಮೇಲೆ ಸದಾ ಇರುತ್ತಂತೆ.
ಶ್ರಾವಣ ಮಾಸದಲ್ಲಿ ಈ ವಸ್ತುಗಳನ್ನು ಶಿವನಿಗೆ ತಪ್ಪದೇ ಅರ್ಪಿಸಿ. ಇದರಿಂದ ನಿಮ್ಮೆಲ್ಲಾ ಕಷ್ಟಗಳು ದೂರವಾಗುತ್ತದೆ.



Click it and Unblock the Notifications


