Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶ್ರಾವಣ ಮಾಸ 2023 : ಈ ಆಹಾರಗಳನ್ನು ಶಿವನಿಗೆ ಅರ್ಪಿಸಿದ್ರೆ ನಿಮ್ಮೆಲ್ಲಾ ಕಷ್ಟಗಳು ಪರಿಹಾರವಾಗುತ್ತೆ!
ಶ್ರಾವಣ ಮಾಸ ಹಿಂದೂಗಳಿಗೆ ವಿಶೇಷವಾದ ಮಾಸ. ಈ ಮಾಸದಲ್ಲಿ ಶಿವನಿಗೆ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಈ ಸಮಯದಲ್ಲಿ ಶಿವನನ್ನು ಭಕ್ತಿಯಿಂದ ಬೇಡಿಕೊಂಡರೆ ನಮ್ಮೆಲ್ಲಾ ಇಷ್ಟಾರ್ಥಗಳು ನೆರವೇರುತ್ತೆ ಅನ್ನೋ ನಂಬಿಕೆಯಿದೆ.
ಅದ್ರಲ್ಲೂ ಕರ್ನಾಟಕದಲ್ಲಿ ಜುಲೈ 18ರಿಂದ ಶ್ರಾವಣ ಮಾಸ ಆರಂಭವಾಗ್ತಿದ್ದು, ಈ ಸಮಯದಲ್ಲಿ ಶಿವನಿಗೆ ಪ್ರಿಯವಾದ ಕೆಲವೊಂದು ಆಹಾರಗಳನ್ನು ಅರ್ಪಣೆ ಮಾಡಿದ್ರೆ ನಿಮ್ಮೆಲ್ಲಾ ಇಷ್ಟಾರ್ಥಗಳು ನೆರವೇರಲಿದೆ. ಅಷ್ಟಕ್ಕೂ ಯಾವೆಲ್ಲಾ ವಿಧದ ಆಹಾರಗಳನ್ನು ಶಿವನಿಗೆ ಅರ್ಪಣೆ ಮಾಡಿದ್ರೆ ಒಳ್ಳೆಯದಾಗುತ್ತೆ ಅನ್ನೋದನ್ನು ತಿಳಿಯೋಣ.

1. ಬಿಲ್ವಪತ್ರೆ
ಮಾತೆ ಪಾರ್ವತಿಯು ಬಿಲ್ವಪತ್ರೆ ಮರದ ಪ್ರತಿಯೊಂದು ಭಾಗದಲ್ಲಿಯೂ ನೆಲೆಸಿದ್ದಾಳೆ ಎನ್ನುವ ನಂಬಿಕೆಯಿದೆ. ಹೀಗಾಗಿ ಬಿಲ್ವಪತ್ರೆಯ ಎಲೆಗಳನ್ನು ಶಿವನಿಗೆ ಅರ್ಪಣೆ ಮಾಡಿದ್ರೆ ಒಳ್ಳೆಯದಾಗುತ್ತೆ ಅನ್ನೋ ನಂಬಿಕೆಯಿದೆ. ಇದರಿಂದ ಶಿವನ ಆಶೀರ್ವಾದ ಸದಾ ಇರುತ್ತದೆ.
2. ಮೊಸರು
ಶ್ರಾವಣ ಮಾಸದಲ್ಲಿ ಶಿವನಿಗೆ ಮೊಸರು ಅರ್ಪಿಸೋದ್ರಿಂದ ಒಳ್ಳೆಯದಾಗುತ್ತಂತೆ. ಇದರಿಂದ ನಮ್ಮ ಜೀವನದಲ್ಲಿರುವ ಪ್ರತಿಯೊಂದು ಕಷ್ಟಗಳು ನಿವಾರಣೆಯಾಗುತ್ತದೆ. ಯಾವುದಾದರೂ ಕೆಲಸಕ್ಕೆ ಅಡೆ-ತಡೆಗಳು ಉಂಟಾಗಿದ್ದರೆ ಅದರಿಂದ ನೀವು ಪರಿಹಾರ ಕಂಡುಕೊಳ್ಳಬಹುದು.
3. ಜೇನುತುಪ್ಪ
ಶಿವನಿಗೆ ಪ್ರಿಯವಾದ ವಸ್ತುಗಳಲ್ಲಿ ಜೇನು ತುಪ್ಪ ಕೂಡ ಒಂದಾಗಿದೆ. ಆದರಿಂದ ಇದನ್ನು ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಅರ್ಪಿಸುವುದರಿಂದ ಒಳ್ಳೆಯದಾಗುತ್ತೆ ಎನ್ನುವ ನಂಬಿಕೆಯಿದೆ. ಹಿಂದೂ ನಂಬಿಕೆಗಳ ಪ್ರಕಾರ ಜೀವನದಲ್ಲಿರುವ ತೊಂದರೆಗಳು ಮತ್ತು ರೋಗಗಳನ್ನು ದೂರವಿಡಲು ಶಿವನಿಗೆ ಜೇನಿನ ಅಭಿಷೇಕ ಮಾಡಬೇಕಂತೆ.
4. ಹಾಲು
ಶಿವಲಿಂಗಕ್ಕೆ ಹಾಲನ್ನು ಅರ್ಪಣೆ ಮಾಡೋದ್ರಿಂದ ನಮ್ಮಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತಂತೆ. ಇದೇ ಕಾರಣಕ್ಕೆ ಶಿವಲಿಂಗಕ್ಕೆ ಶ್ರಾವಣ ಮಾಸದಲ್ಲಿ ಹಾಲನ್ನು ಅರ್ಪಣೆ ಮಾಡುವುದು.
5. ತುಪ್ಪು
ಶ್ರಾವಣ ಮಾಸದಲ್ಲಿ ತುಪ್ಪವನ್ನು ಶಿವಲಿಂಗಕ್ಕೆ ಅರ್ಪಣೆ ಮಾಡಿದ್ರೆ ನಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿ ಹೆಚ್ಚಾಗುತ್ತಂತೆ.
6. ಅಕ್ಕಿ
ಶ್ರಾವಣ ತಿಂಗಳಿನಲ್ಲಿ ಶಿವನಿಗೆ ಅಕ್ಕಿಯನ್ನು ಅರ್ಪಣೆ ಮಾಡೋದ್ರಿಂದ ಕುಟುಂಬದಲ್ಲಿರುವ ಎಲ್ಲಾ ರೀತಿಯ ಆರ್ಥಿಕ ಸಮಸ್ಯೆಗಳು ಪರಿಹಾರವಾಗಿ ನಿಮ್ಮ ಜೀವನದಲ್ಲಿ ಸ್ಥಿರತೆ ಹೆಚ್ಚಾಗುತ್ತಂತೆ.
7. ಕೇಸರಿ
ಶಿವಲಿಂಗಕ್ಕೆ ನೀರನ್ನು ಸುರಿಯುವ ಮೊದಲು ಹಾಲಿಗೆ ಕೇಸರಿ ಸೇರಿಸುವುದು ಅಥವಾ ಶಿವಲಿಂಗಕ್ಕೆ ಕೇಸರಿ ಎಳೆಗಳನ್ನು ಅರ್ಪಿಸುವುದರಿಂದ ಒಳ್ಳೆಯದಾಗುತ್ತಂತೆ. ಇದರಿಂದ ನೀವು ಬಯಸಿದ ಜೀವನದ ಸಂಗಾತಿ ನಿಮಗೆ ಸಿಗುತ್ತಾರೆ. ಹಾಗೂ ನಿಮ್ಮ ವೈವಾಹಿಕ ಜೀವನ ಸುಧಾರಿಸುತ್ತದೆ.
8. ಗೋಧಿ
ಶ್ರಾವಣ ಮಾಸದಲ್ಲಿ ಶಿವಲಿಂಗಕ್ಕೆ ಗೋಧಿಯನ್ನು ಅರ್ಪಣೆ ಮಾಡೋದ್ರಿಂದ ಶಿವನ ಆಶೀರ್ವಾದ ನಿಮ್ಮ ಮೇಲೆ ಸದಾ ಇರುತ್ತಂತೆ.
ಶ್ರಾವಣ ಮಾಸದಲ್ಲಿ ಈ ವಸ್ತುಗಳನ್ನು ಶಿವನಿಗೆ ತಪ್ಪದೇ ಅರ್ಪಿಸಿ. ಇದರಿಂದ ನಿಮ್ಮೆಲ್ಲಾ ಕಷ್ಟಗಳು ದೂರವಾಗುತ್ತದೆ.



Click it and Unblock the Notifications


