Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಜುಲೈ 24ಕ್ಕೆ ಶ್ರಾವಣ ಮೊದಲ ಸೋಮವಾರ: ಈ ದಿನ ಶಿವನ ಆರಾಧನೆಯ ಪೂಜಾ ವಿಧಿ ವಿಧಾನಗಳೇನು?
ಜುಲೈ 24ಕ್ಕೆ ಶ್ರಾವಣ ಮೊದಲ ಸೋಮವಾರ. ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನ, ಈ ದಿನ ಶಿವನನ್ನು ಭಕ್ತಿಯಿಂದ ಆರಾಧಿಸಿದರೆ ನಮ್ಮೆಲ್ಲಾ ಬೇಡಿಕೆಗಳು, ಇಷ್ಟಾರ್ಥಗಳು ಶಿವನ ಕೃಪೆಯಿಂದ ನೆರವೇರುವುದು. ಶ್ರಾವಣ ಸೋಮವಾರದಂದು ಉಪವಾಸವಿದ್ದು ಕೈಲಾಸನಾಥನ ಆರಾಧನೆ ಮಾಡಲಾಗುವುದು.
ಶ್ರಾವಣ ಸೋಮವಾರ ನೀವು ಶಿವನ ಆರಾಧನೆ ಹೇಗೆ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಸೋಮವಾರ ಶಿವಪೂಜೆ ಮಾಡುವಾಗ ಪಾಲಿಸಬೇಕಾದ ಪೂಜಾ ವಿಧಾನಗಳು
ಗಂಗಾಜಲದೊಂದಿಗೆ ಶಿವನ ಪ್ರತಿಷ್ಠಾಪನೆ
ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ, ಶಿವ ಕುಟುಂಬವನ್ನು ಪೂಜಿಸಲಾಗುವುದು. ಈ ದಿನ ಶಿವನನ್ನು ಗಂಗಾಜಲದೊಂದಿಗೆ ಪ್ರತಿಷ್ಠಾಪಿಸಿ, ಶಿವನಿಗೆ ವಿಭೂತಿ ಅರ್ಪಿಸಿ ಪೂಜಿಸಬೇಕು. ಶಿವಪೂಜೆಯಲ್ಲಿ ಹಾಲು, ಗಂಗಾಜಲ, ಬಿಲ್ವಪತ್ರೆ, ಎಳ್ಳು, ಹಣ್ಣುಗಳು, ನೇವೇದ್ಯ ಅರ್ಪಿಸಿ ಪೂಜಿಸಲಾಗುವುದು.
ಈ ದಿನ ಶಿವನಿಗೆ ಅಭಿಷೇಕ ಮಾಡಿಸಿ
ನಿಮ್ಮ ಇಷ್ಟಾರ್ಥಗಳು ನೆರವೇರಲು ಈ ದಿನ ನೀವು ಶಿವನಿಗೆ ಅಭಿಷೇಕ ಮಾಡಿಸಿ. ಈ ದಿನ ಶಿವನಿಗೆ ನಿಮ್ಮ ಇಷ್ಟಾರ್ಥಗಳು ನೆರವೇರಲು ನೀವು ನಿರ್ದಿಷ್ಟ ವಸ್ತುವಿನಿಂದ ಅಭಿಷೇಕ ಮಾಡಿದರೆ ಒಳ್ಳೆಯದು. ಹಾಲಿನಿಂದ ಅಭಿಷೇಕ ಮಾಡಿಸಿದೆ ಸಂತಾನ ಭಾಗ್ಯ, ಕುಟುಂಬದಲ್ಲಿ ನೆಮ್ಮದಿ, ಕಬ್ಬಿನ ಹಾಲಿನಿಂದ ಅಭಿಷೇಕ ಮಾಡಿದರೆ ಧನ ಲಾಭ, ಸಾಸಿವೆ ಎಣ್ಣೆಯಿಂದ ಅಭಿಷೇಕ ಮಾಡಿದರೆ ಶತ್ರುನಾಶ, ತುಪ್ಪದಿಂದ ಅಭಿಷೇಕ ಮಾಡುವುದರಿಂದ ಇಷ್ಟಾರ್ಥ ನೆರವೇರುವುದು.
ಶ್ರಾವಣ ಸೋಮವಾರ ಈ ಉಪವಾಸ ನಿಯಮಗಳನ್ನು ಅನುಭವಿಸಿ
ಶ್ರಾವಣ ಸೋಮವಾರ ಕಠಿಣ ಉಪವಾಸ ನಿಯಮವನ್ನು ಪಾಲಿಸಿದರೆ ತುಂಬಾ ಒಳ್ಳೆಯದು. ಕೆಲವರು ಈ ದಿನ ಏನೂ ತಿನ್ನುವುದಿಲ್ಲ, ಇನ್ನು ಕೆಲವರು ಹಾಲು, ಹಣ್ಣುಗಳನ್ನು ಮಾತ್ರ ಸೇವಿಸುತ್ತಾರೆ. ಕಠಿಣ ಉಪವಾಸ ನಿಯಮ ಪಾಲಿಸಲು ಕೆಲವರಿಗೆ ಕಷ್ಟವಾಗುವುದು ಅಂಥವರು ಸಾಬುದಾನ ಖಿಚಡಿ ಸೇವಿಸಬಹುದು.
ಶ್ರಾವಣ ಪೂಜೆಯ ವಿಧಾನ
* ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ
* ಶಿವನ ವಿಗ್ರಹ ಅಥವಾ ಶಿವಲಿಂಗವನ್ನು ಪ್ರತಿಷ್ಠಾಪಿಸಿ ಓಂ ನಮಃ ಶಿವಾಯ ಎಂಬ ಮಂತ್ರ ಪಠಿಸಿ.
* ಶಿವನಿಗೆ ಅಭಿಷೇಕ ಮಾಡಿ
* ಗಣಪತಿಯನ್ನು ಮೊದಲು ಪೂಜಿಸಬೇಕು
* ಪಾರ್ವತಿ ದೇವಿ, ನಂದಿಗೆ ಗಂಗಾಜಲ ಅರ್ಪಿಸಿ.
* ಶಿವನಿಗೆ 108 ಬಿಲ್ವಪತ್ರೆ ಅರ್ಪಿಸಿ.
ಶಿವನ ಮಂತ್ರಗಳನ್ನು ಪಠಿಸಿ
ಓಂ ತ್ರ್ಯಂಬಕಂ ಯಜಾಮಹೆ ಸುಗಂಧಿಂ ಪುಷ್ಟಿವರ್ಧನಂ
ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್.
ಅರ್ಥ ತ್ರ್ಯಯಂಬಕಮ್: ಓ ಶಿವನೇ ನೀವು ಮೂರು ಕಣ್ಣುಗಳನ್ನು ಹೊಂದಿದ್ದೀರಿ
ಯಜ್ಮಹೇ : ನಿರಂತರವಾಗಿ ಪೂಜಿಸಲ್ಪಡುತ್ತೀರಿ
ಸುಗಂಧಿನ್: ಪರಿಮಳವನ್ನು ಆಸ್ವಾದಿಸುವವರು
ಪುಷ್ಠಿ ವರ್ಧನಂ: ಭಕ್ತಿಯನ್ನು ಹೆಚ್ಚಿಸುವವರು
ಉರ್ವಾರುಕಮೀವ
ಬಂಧನಾತ್: ಮುಕ್ತಿದಾತ
ಮೃತ್ಯು: ಮರಣ
ಮೋಕ್ಷ: ಜನನ ಮರಣ ಚಕ್ರದಿಂದ ಬಿಡುಗಡೆ
ಮಮ್ರಿತಾತ್: ಅಮರ ಅಲ್ಲ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ ಎಂದು ಇದರ ಅರ್ಥವನ್ನು ಹೇಳಬಹುದು.



Click it and Unblock the Notifications
