Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಜುಲೈ 24ಕ್ಕೆ ಶ್ರಾವಣ ಮೊದಲ ಸೋಮವಾರ: ಈ ದಿನ ಶಿವನ ಆರಾಧನೆಯ ಪೂಜಾ ವಿಧಿ ವಿಧಾನಗಳೇನು?
ಜುಲೈ 24ಕ್ಕೆ ಶ್ರಾವಣ ಮೊದಲ ಸೋಮವಾರ. ಶಿವನ ಆರಾಧನೆಗೆ ತುಂಬಾನೇ ಶ್ರೇಷ್ಠವಾದ ದಿನ, ಈ ದಿನ ಶಿವನನ್ನು ಭಕ್ತಿಯಿಂದ ಆರಾಧಿಸಿದರೆ ನಮ್ಮೆಲ್ಲಾ ಬೇಡಿಕೆಗಳು, ಇಷ್ಟಾರ್ಥಗಳು ಶಿವನ ಕೃಪೆಯಿಂದ ನೆರವೇರುವುದು. ಶ್ರಾವಣ ಸೋಮವಾರದಂದು ಉಪವಾಸವಿದ್ದು ಕೈಲಾಸನಾಥನ ಆರಾಧನೆ ಮಾಡಲಾಗುವುದು.
ಶ್ರಾವಣ ಸೋಮವಾರ ನೀವು ಶಿವನ ಆರಾಧನೆ ಹೇಗೆ ಮಾಡಿದರೆ ಒಳ್ಳೆಯದು ಎಂದು ನೋಡೋಣ ಬನ್ನಿ:

ಸೋಮವಾರ ಶಿವಪೂಜೆ ಮಾಡುವಾಗ ಪಾಲಿಸಬೇಕಾದ ಪೂಜಾ ವಿಧಾನಗಳು
ಗಂಗಾಜಲದೊಂದಿಗೆ ಶಿವನ ಪ್ರತಿಷ್ಠಾಪನೆ
ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ಧರಿಸಿ, ಶಿವ ಕುಟುಂಬವನ್ನು ಪೂಜಿಸಲಾಗುವುದು. ಈ ದಿನ ಶಿವನನ್ನು ಗಂಗಾಜಲದೊಂದಿಗೆ ಪ್ರತಿಷ್ಠಾಪಿಸಿ, ಶಿವನಿಗೆ ವಿಭೂತಿ ಅರ್ಪಿಸಿ ಪೂಜಿಸಬೇಕು. ಶಿವಪೂಜೆಯಲ್ಲಿ ಹಾಲು, ಗಂಗಾಜಲ, ಬಿಲ್ವಪತ್ರೆ, ಎಳ್ಳು, ಹಣ್ಣುಗಳು, ನೇವೇದ್ಯ ಅರ್ಪಿಸಿ ಪೂಜಿಸಲಾಗುವುದು.
ಈ ದಿನ ಶಿವನಿಗೆ ಅಭಿಷೇಕ ಮಾಡಿಸಿ
ನಿಮ್ಮ ಇಷ್ಟಾರ್ಥಗಳು ನೆರವೇರಲು ಈ ದಿನ ನೀವು ಶಿವನಿಗೆ ಅಭಿಷೇಕ ಮಾಡಿಸಿ. ಈ ದಿನ ಶಿವನಿಗೆ ನಿಮ್ಮ ಇಷ್ಟಾರ್ಥಗಳು ನೆರವೇರಲು ನೀವು ನಿರ್ದಿಷ್ಟ ವಸ್ತುವಿನಿಂದ ಅಭಿಷೇಕ ಮಾಡಿದರೆ ಒಳ್ಳೆಯದು. ಹಾಲಿನಿಂದ ಅಭಿಷೇಕ ಮಾಡಿಸಿದೆ ಸಂತಾನ ಭಾಗ್ಯ, ಕುಟುಂಬದಲ್ಲಿ ನೆಮ್ಮದಿ, ಕಬ್ಬಿನ ಹಾಲಿನಿಂದ ಅಭಿಷೇಕ ಮಾಡಿದರೆ ಧನ ಲಾಭ, ಸಾಸಿವೆ ಎಣ್ಣೆಯಿಂದ ಅಭಿಷೇಕ ಮಾಡಿದರೆ ಶತ್ರುನಾಶ, ತುಪ್ಪದಿಂದ ಅಭಿಷೇಕ ಮಾಡುವುದರಿಂದ ಇಷ್ಟಾರ್ಥ ನೆರವೇರುವುದು.
ಶ್ರಾವಣ ಸೋಮವಾರ ಈ ಉಪವಾಸ ನಿಯಮಗಳನ್ನು ಅನುಭವಿಸಿ
ಶ್ರಾವಣ ಸೋಮವಾರ ಕಠಿಣ ಉಪವಾಸ ನಿಯಮವನ್ನು ಪಾಲಿಸಿದರೆ ತುಂಬಾ ಒಳ್ಳೆಯದು. ಕೆಲವರು ಈ ದಿನ ಏನೂ ತಿನ್ನುವುದಿಲ್ಲ, ಇನ್ನು ಕೆಲವರು ಹಾಲು, ಹಣ್ಣುಗಳನ್ನು ಮಾತ್ರ ಸೇವಿಸುತ್ತಾರೆ. ಕಠಿಣ ಉಪವಾಸ ನಿಯಮ ಪಾಲಿಸಲು ಕೆಲವರಿಗೆ ಕಷ್ಟವಾಗುವುದು ಅಂಥವರು ಸಾಬುದಾನ ಖಿಚಡಿ ಸೇವಿಸಬಹುದು.
ಶ್ರಾವಣ ಪೂಜೆಯ ವಿಧಾನ
* ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ, ಮಡಿ ಬಟ್ಟೆ ಧರಿಸಿ
* ಶಿವನ ವಿಗ್ರಹ ಅಥವಾ ಶಿವಲಿಂಗವನ್ನು ಪ್ರತಿಷ್ಠಾಪಿಸಿ ಓಂ ನಮಃ ಶಿವಾಯ ಎಂಬ ಮಂತ್ರ ಪಠಿಸಿ.
* ಶಿವನಿಗೆ ಅಭಿಷೇಕ ಮಾಡಿ
* ಗಣಪತಿಯನ್ನು ಮೊದಲು ಪೂಜಿಸಬೇಕು
* ಪಾರ್ವತಿ ದೇವಿ, ನಂದಿಗೆ ಗಂಗಾಜಲ ಅರ್ಪಿಸಿ.
* ಶಿವನಿಗೆ 108 ಬಿಲ್ವಪತ್ರೆ ಅರ್ಪಿಸಿ.
ಶಿವನ ಮಂತ್ರಗಳನ್ನು ಪಠಿಸಿ
ಓಂ ತ್ರ್ಯಂಬಕಂ ಯಜಾಮಹೆ ಸುಗಂಧಿಂ ಪುಷ್ಟಿವರ್ಧನಂ
ಉರ್ವಾರುಕಮಿವ ಬಂಧನಾನ್ಮೃತ್ಯೋರ್ಮುಕ್ಷೀಯ ಮಾಮೃತಾತ್.
ಅರ್ಥ ತ್ರ್ಯಯಂಬಕಮ್: ಓ ಶಿವನೇ ನೀವು ಮೂರು ಕಣ್ಣುಗಳನ್ನು ಹೊಂದಿದ್ದೀರಿ
ಯಜ್ಮಹೇ : ನಿರಂತರವಾಗಿ ಪೂಜಿಸಲ್ಪಡುತ್ತೀರಿ
ಸುಗಂಧಿನ್: ಪರಿಮಳವನ್ನು ಆಸ್ವಾದಿಸುವವರು
ಪುಷ್ಠಿ ವರ್ಧನಂ: ಭಕ್ತಿಯನ್ನು ಹೆಚ್ಚಿಸುವವರು
ಉರ್ವಾರುಕಮೀವ
ಬಂಧನಾತ್: ಮುಕ್ತಿದಾತ
ಮೃತ್ಯು: ಮರಣ
ಮೋಕ್ಷ: ಜನನ ಮರಣ ಚಕ್ರದಿಂದ ಬಿಡುಗಡೆ
ಮಮ್ರಿತಾತ್: ಅಮರ ಅಲ್ಲ
ಅರ್ಥ: ನಾವು ನಿನ್ನನ್ನು ಧ್ಯಾನಿಸುತ್ತೇವೆ ಓಹ್ ಶಿವ. ಸಾವಿನ ಬಂಧಗಳಿಂದ ತಪ್ಪಿಸಿಕೊಳ್ಳಲು ನಮಗೆ ಸಹಾಯ ಮಾಡಿ ಮತ್ತು ಅಮರತ್ವವು ಸಾಧ್ಯವಾಗದಿದ್ದರೂ, ದಯವಿಟ್ಟು ಮೋಕ್ಷವನ್ನು ಸಾಧಿಸಲು ನಮಗೆ ಸಹಾಯ ಮಾಡಿ ಎಂದು ಇದರ ಅರ್ಥವನ್ನು ಹೇಳಬಹುದು.



Click it and Unblock the Notifications