Latest Updates
-
ಹವಾಮಾನದಲ್ಲಿ ಭಾರಿ ಬದಲಾವಣೆ: ಮೇ 12-13 ರಂದು ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ದೆಹಲಿ ಮದುವೆ ಸೀಸನ್: ಮಳೆ ಮತ್ತು ಬಿರುಗಾಳಿಯಿಂದ ನಿಮ್ಮ ಸಂಭ್ರಮವನ್ನು ಕಾಪಾಡಿಕೊಳ್ಳುವುದು ಹೇಗೆ? -
ಬಿಸಿಗಾಳಿ-ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಟಿಪ್ಸ್ ಫಾಲೋ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ಈ ಆಹಾರ ಕ್ರಮ ಪಾಲಿಸಿದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಕಾನ್ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯರ ಅಬ್ಬರ, ಈ ಬಾರಿ ಫ್ಯಾಷನ್ ಲೋಕವೇ ದಂಗು! -
ಪ್ರಧಾನಿ ಮೋದಿ ಭೇಟಿಯ ನಂತರ ಟ್ರೆಂಡಿಂಗ್: ಕೇವಲ 15 ನಿಮಿಷದಲ್ಲಿ ನಿಮ್ಮ ದಿನವನ್ನು ಬದಲಾಯಿಸುವ ಮ್ಯಾಜಿಕ್ ಯೋಗ ಟಿಪ್ಸ್! -
ಮದರ್ಸ್ ಡೇ 2026: ಅಮ್ಮ ಮತ್ತು ಅತ್ತೆಯ ನಡುವೆ ಸಿಲುಕಿದ್ದೀರಾ? ಈ ಟ್ರಿಕ್ಸ್ ಫಾಲೋ ಮಾಡಿ! -
ಬಿರುಗಾಳಿ ಅಪ್ಪಳಿಸುವ ಮುನ್ನ ಎಚ್ಚರ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ ಕೆಲಸಗಳನ್ನು ಇಂದೇ ಮಾಡಿ! -
ಬಿಸಿಗಾಳಿಯ ಆರ್ಭಟಕ್ಕೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಮದರ್ಸ್ ಡೇ 2026: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿರೋ ಈ ವಿಶೇಷ ಟ್ರೆಂಡ್ಸ್ ನೀವು ಮಿಸ್ ಮಾಡ್ಬೇಡಿ!
ಶ್ರಾವಣ ಮಾಸ: ಶಿವನಿಗೆ ಯಾವ ವಸ್ತುಗಳಿಂದ ಅಭಿಷೇಕ ಮಾಡಿದರೆ ಏನು ಫಲ ಸಿಗುವುದು?
ಶ್ರಾವಣ ಮಾಸವೆಂದರೆ ಶಿವನ ಪೂಜೆಗೆ ಮೀಸಲಾದ ಮಾಸ. ಈ ಮಾಸದಲ್ಲಿ ಮಾಡುವ ಶಿವ ಪೂಜೆಯಿಂದ ಹೆಚ್ಚಿನ ಫಲ ಸಿಗುವುದು ಎಂಬ ಧಾರ್ಮಿಕ ನಂಬಿಕೆ ಇದೆ. ಅದರಲ್ಲೂ ಶ್ರಾವಣ ಸೋಮವಾರಂತೂ ಶಿವ ಪೂಜೆಗೆ ಶ್ರೇಷ್ಠವಾದ ದಿನವಾಗಿದೆ.
ಶಿವ ಪೂಜೆ ಮಾಡುವಾಗ ಶಿವನಿಗೆ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಲು ನೀರು, ಹಾಲು, ತುಪ್ಪ ಸೇರಿದಂತೆ ಹಲವು ವಸ್ತುಗಳನ್ನು ಬಳಸಲಾಗುವುದು. ನಾವು ನಮ್ಮ ಇಷ್ಟಾರ್ಥ ನೆರವೇರಲು ಅದಕ್ಕೆ ತಕ್ಕ ವಸ್ತುವಿನಿಂದ ಶಿವನಿಗೆ ಅಭಿಷೇಕ ಮಾಡಿದರೆ ನಮ್ಮ ಆಸೆ ಬೇಗನೆ ನೆರವೇರುವುದು. ಯಾವ ವಸ್ತುವಿನಿಂದ ಅಭಿಷೇಕ ಮಾಡಿದರೆ ಏನು ಪ್ರಯೋಜನ ಎಂದು ನೋಡೋಣ ಬನ್ನಿ:

ಜಲಾಭಿಷೇಕ
ನಮ್ಮ ಇಷ್ಟಾರ್ಥ ನೆರವೇರಲು ಜಲಾಭಿಷೇಕ ಮಾಡಿದರೆ ಒಳ್ಳೆಯದು.
ಪಂಚಗವ್ಯಂ: ಹಾಲು, ಮೊಸರು, ತುಪ್ಪ, ಗೋಮೂತ್ರ, ಸೆಗಣಿಯಿಂದ ಮಾಡುವ ಅಭಿಷೇಕ.
ಈ ಅಭಿಷೇಕ ಮಾಡುವುದರಿಂದ ಎಲ್ಲಾ ಪಾಪಗಳಿಂದ ಮುಕ್ತರಾಗಬಹುದು.
ಪಂಚಾಮೃತ ಅಭಿಷೇಕ ( ಬಾಳೆಹಣ್ಣು, ಬೆಲ್ಲ, ಸಕ್ಕರೆ, ಬೀಜವಿಲ್ಲದ ಖರ್ಜೂರ, ಜೇನು, ಡ್ರೈ ಫ್ರೂಟ್ಸ್) ಇವುಗಳಿಂದ ಅಭಿಷೇಕ ಮಾಡಲಾಗುವುದು. ಇದರಿಂದ ಆರೋಗ್ಯ ವೃದ್ಧಿಸುವುದು.
ತುಪ್ಪದ ಅಭಿಷೇಕ: ಶಿವಲಿಂಗಕ್ಕೆ ತುಪ್ಪದ ಅಭಿಷೇಕ ಮಾಡುವುದರಿಂದ ಮೋಕ್ಷ ಸಿಗಲಿದೆ.
ಹಾಲಿನ ಅಭಿಷೇಕ: ಶಿವ ಲಿಂಗಕ್ಕೆ ಅಭಿಷೇಕ ಮಾಡುವುದರಿಂದ ದೀರ್ಘಾಯುಷ್ಯ ದೊರೆಯಲಿದೆ.
ಮೊಸರಿನ ಅಭಿಷೇಕ: ಸಂತಾನ ಭಾಗ್ಯ, ಮಕ್ಕಳ ಆರೋಗ್ಯಕ್ಕಾಗಿ ಮೊಸರಿನ ಅಭಿಷೇಕ ಮಾಡಲಾಗುವುದು.
ಜೇನಿನಿಂದ ಅಭಿಷೇಕ: ಸಂಗೀತ ಜ್ಞಾನ, ಜ್ಞಾನ ವೃದ್ಧಿಗಾಗಿ ಈ ಅಭಿಷೇಕ ಮಾಡಲಾಗುವುದು.
ಅಕ್ಕಿ ಹಿಟ್ಟಿನಿಂದ ಅಭಿಷೇಕ: ಅಕ್ಕಿ ಹಿಟ್ಟಿನಿಂದ ಅಭಿಷೇಕ ಮಾಡುವುದರಿಂದ ಸಾಲದಿಂದ ಮುಕ್ತರಾಗಬಹುದು.
ಕಬ್ಬಿನರಸದ ಹಾಲು: ಶತ್ರುನಾಶಕ್ಕೆ, ಉತ್ತಮ ಆರೋಗ್ಯಕ್ಕಾಗಿ ಅಭಿಷೇಕ ಮಾಡಲಾಗುವುದು.
ನಿಂಬೆರಸ: ಸಾವಿನ ಭಯ ಹೋಗಲಾಡಿಸಲು, ಕಾಯಿಲೆಯಿಂದ ಗುಣಮುಖರಾಗಲು ನಿಂಬೆರಸದಿಂದ ಅಭಿಷೇಕ ಮಾಡಲಾಗುವುದು.
ಎಳನೀರಿನ ಅಭಿಷೇಕ: ಜೀವನದಲ್ಲಿ ಸುಖ, ನೆಮ್ಮದಿಗಾಗಿ ಈ ಅಭಿಷೇಕ ಮಾಡಲಾಗುವುದು.
ಅನ್ನಾಭಿಷೇಕ: ಸಂಪತ್ತು ವೃದ್ಧಿಗಾಗಿ ಈ ಅಭಿಷೇಕ ಮಾಡಲಾಗುವುದು.
ಲಕ್ಷ್ಮಿ ಕೃಪೆಗಾಗಿ: ಶ್ರೀ ಚಂದನದ ಪೇಸ್ಟ್ ಹಚ್ಚಿ ಅಭಿಷೇಕ ಮಾಡುವುದರಿಂದ ಲಕ್ಷ್ಮಿ ಕೃಪೆ ದೊರೆಯಲಿದೆ.
ಲಿಂಗಕ್ಕೆ ಸಕ್ಕರೆ ಅಭಿಷೇಕ: ಶತ್ರುನಾಶಕ್ಕೆ ಸಕ್ಕರೆಯಿಂದ ಅಭಿಷೇಕ ಮಾಡಿದರೆ ಒಳ್ಳೆಯದು.
ಗಂಗಾಜಲದ ಅಭಿಷೇಕ: ಜಲಾಭಿಷೇ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯಲಿದೆ.
ಶಿವ ಮಂತ್ರಗಳು
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಓಂ ನಮಃ ಶಿವಾಯವನ್ನು ನೀವು ಎಲ್ಲಿ ಬೇಕಾದರೂ ಯಾವಾಗ ಬೇಕಾದರೂ ಹೇಳಬಹುದು.
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ಈ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ. ಈ ಮಂತ್ರವನ್ನು ಯಾವಾಗ ಮತ್ತು ಹೇಗೆ ಹೇಳಬೇಕು ಎಂಬುದು ಗೊತ್ತಿರಬೇಕು, ಸ್ಪಷ್ಠವಾಗಿ ಪಠಿಸಬೇಕು. ಈ ಮಂತ್ರವನ್ನು ಹೇಳುವುದರಿಂದಾಗಿ ಸಾವನ್ನು ಗೆಲ್ಲುವ ಶಕ್ತಿ ದೊರೆಯುತ್ತದೆ. ಸಾವಿನ ಭಯ ದೂರಾಗುವುದು.
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಗಾಯತ್ರೀ ಮಂತ್ರ ತುಂಬಾನೇ ಶಕ್ತಿಶಾಲಿಯಾಗಿರುವ ಮಂತ್ರ . ಅದರಲ್ಲಿ ಇದು ಶಿವ ಗಾಯತ್ರೀ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯಲಿದೆ.



Click it and Unblock the Notifications