Latest Updates
-
ಆರ್ಬಿಐ ಹೊಸ ಆಟೋ-ಪೇ ನಿಯಮ: ನಿಮ್ಮ OTT ಮತ್ತು SIP ಪಾವತಿಗಳು ಸ್ಥಗಿತಗೊಳ್ಳುವ ಮುನ್ನ ಎಚ್ಚೆತ್ತುಕೊಳ್ಳಿ! -
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ?
ಶ್ರಾವಣ ಮಾಸ: ಶಿವನಿಗೆ ಯಾವ ವಸ್ತುಗಳಿಂದ ಅಭಿಷೇಕ ಮಾಡಿದರೆ ಏನು ಫಲ ಸಿಗುವುದು?
ಶ್ರಾವಣ ಮಾಸವೆಂದರೆ ಶಿವನ ಪೂಜೆಗೆ ಮೀಸಲಾದ ಮಾಸ. ಈ ಮಾಸದಲ್ಲಿ ಮಾಡುವ ಶಿವ ಪೂಜೆಯಿಂದ ಹೆಚ್ಚಿನ ಫಲ ಸಿಗುವುದು ಎಂಬ ಧಾರ್ಮಿಕ ನಂಬಿಕೆ ಇದೆ. ಅದರಲ್ಲೂ ಶ್ರಾವಣ ಸೋಮವಾರಂತೂ ಶಿವ ಪೂಜೆಗೆ ಶ್ರೇಷ್ಠವಾದ ದಿನವಾಗಿದೆ.
ಶಿವ ಪೂಜೆ ಮಾಡುವಾಗ ಶಿವನಿಗೆ ಅಭಿಷೇಕ ಮಾಡಲಾಗುವುದು. ಶಿವನಿಗೆ ಅಭಿಷೇಕ ಮಾಡಲು ನೀರು, ಹಾಲು, ತುಪ್ಪ ಸೇರಿದಂತೆ ಹಲವು ವಸ್ತುಗಳನ್ನು ಬಳಸಲಾಗುವುದು. ನಾವು ನಮ್ಮ ಇಷ್ಟಾರ್ಥ ನೆರವೇರಲು ಅದಕ್ಕೆ ತಕ್ಕ ವಸ್ತುವಿನಿಂದ ಶಿವನಿಗೆ ಅಭಿಷೇಕ ಮಾಡಿದರೆ ನಮ್ಮ ಆಸೆ ಬೇಗನೆ ನೆರವೇರುವುದು. ಯಾವ ವಸ್ತುವಿನಿಂದ ಅಭಿಷೇಕ ಮಾಡಿದರೆ ಏನು ಪ್ರಯೋಜನ ಎಂದು ನೋಡೋಣ ಬನ್ನಿ:

ಜಲಾಭಿಷೇಕ
ನಮ್ಮ ಇಷ್ಟಾರ್ಥ ನೆರವೇರಲು ಜಲಾಭಿಷೇಕ ಮಾಡಿದರೆ ಒಳ್ಳೆಯದು.
ಪಂಚಗವ್ಯಂ: ಹಾಲು, ಮೊಸರು, ತುಪ್ಪ, ಗೋಮೂತ್ರ, ಸೆಗಣಿಯಿಂದ ಮಾಡುವ ಅಭಿಷೇಕ.
ಈ ಅಭಿಷೇಕ ಮಾಡುವುದರಿಂದ ಎಲ್ಲಾ ಪಾಪಗಳಿಂದ ಮುಕ್ತರಾಗಬಹುದು.
ಪಂಚಾಮೃತ ಅಭಿಷೇಕ ( ಬಾಳೆಹಣ್ಣು, ಬೆಲ್ಲ, ಸಕ್ಕರೆ, ಬೀಜವಿಲ್ಲದ ಖರ್ಜೂರ, ಜೇನು, ಡ್ರೈ ಫ್ರೂಟ್ಸ್) ಇವುಗಳಿಂದ ಅಭಿಷೇಕ ಮಾಡಲಾಗುವುದು. ಇದರಿಂದ ಆರೋಗ್ಯ ವೃದ್ಧಿಸುವುದು.
ತುಪ್ಪದ ಅಭಿಷೇಕ: ಶಿವಲಿಂಗಕ್ಕೆ ತುಪ್ಪದ ಅಭಿಷೇಕ ಮಾಡುವುದರಿಂದ ಮೋಕ್ಷ ಸಿಗಲಿದೆ.
ಹಾಲಿನ ಅಭಿಷೇಕ: ಶಿವ ಲಿಂಗಕ್ಕೆ ಅಭಿಷೇಕ ಮಾಡುವುದರಿಂದ ದೀರ್ಘಾಯುಷ್ಯ ದೊರೆಯಲಿದೆ.
ಮೊಸರಿನ ಅಭಿಷೇಕ: ಸಂತಾನ ಭಾಗ್ಯ, ಮಕ್ಕಳ ಆರೋಗ್ಯಕ್ಕಾಗಿ ಮೊಸರಿನ ಅಭಿಷೇಕ ಮಾಡಲಾಗುವುದು.
ಜೇನಿನಿಂದ ಅಭಿಷೇಕ: ಸಂಗೀತ ಜ್ಞಾನ, ಜ್ಞಾನ ವೃದ್ಧಿಗಾಗಿ ಈ ಅಭಿಷೇಕ ಮಾಡಲಾಗುವುದು.
ಅಕ್ಕಿ ಹಿಟ್ಟಿನಿಂದ ಅಭಿಷೇಕ: ಅಕ್ಕಿ ಹಿಟ್ಟಿನಿಂದ ಅಭಿಷೇಕ ಮಾಡುವುದರಿಂದ ಸಾಲದಿಂದ ಮುಕ್ತರಾಗಬಹುದು.
ಕಬ್ಬಿನರಸದ ಹಾಲು: ಶತ್ರುನಾಶಕ್ಕೆ, ಉತ್ತಮ ಆರೋಗ್ಯಕ್ಕಾಗಿ ಅಭಿಷೇಕ ಮಾಡಲಾಗುವುದು.
ನಿಂಬೆರಸ: ಸಾವಿನ ಭಯ ಹೋಗಲಾಡಿಸಲು, ಕಾಯಿಲೆಯಿಂದ ಗುಣಮುಖರಾಗಲು ನಿಂಬೆರಸದಿಂದ ಅಭಿಷೇಕ ಮಾಡಲಾಗುವುದು.
ಎಳನೀರಿನ ಅಭಿಷೇಕ: ಜೀವನದಲ್ಲಿ ಸುಖ, ನೆಮ್ಮದಿಗಾಗಿ ಈ ಅಭಿಷೇಕ ಮಾಡಲಾಗುವುದು.
ಅನ್ನಾಭಿಷೇಕ: ಸಂಪತ್ತು ವೃದ್ಧಿಗಾಗಿ ಈ ಅಭಿಷೇಕ ಮಾಡಲಾಗುವುದು.
ಲಕ್ಷ್ಮಿ ಕೃಪೆಗಾಗಿ: ಶ್ರೀ ಚಂದನದ ಪೇಸ್ಟ್ ಹಚ್ಚಿ ಅಭಿಷೇಕ ಮಾಡುವುದರಿಂದ ಲಕ್ಷ್ಮಿ ಕೃಪೆ ದೊರೆಯಲಿದೆ.
ಲಿಂಗಕ್ಕೆ ಸಕ್ಕರೆ ಅಭಿಷೇಕ: ಶತ್ರುನಾಶಕ್ಕೆ ಸಕ್ಕರೆಯಿಂದ ಅಭಿಷೇಕ ಮಾಡಿದರೆ ಒಳ್ಳೆಯದು.
ಗಂಗಾಜಲದ ಅಭಿಷೇಕ: ಜಲಾಭಿಷೇ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯಲಿದೆ.
ಶಿವ ಮಂತ್ರಗಳು
ಪಂಚಾಕ್ಷರಿ ಶಿವ ಮಂತ್ರ
ಓಂ ನಮಃ ಶಿವಾಯ
ಓಂ ನಮಃ ಶಿವಾಯವನ್ನು ನೀವು ಎಲ್ಲಿ ಬೇಕಾದರೂ ಯಾವಾಗ ಬೇಕಾದರೂ ಹೇಳಬಹುದು.
ಮಹಾಮೃತ್ಯುಂಜಯ ಮಂತ್ರ
ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಠಿವರ್ಧನಂ| ಊರ್ವಾರುಕಂವಾ ಬಂಧನಾ ಮೃತ್ಯೋರ್-ಮುಕ್ಷೀಯ ಮಾಮೃತಾತ್||
ಈ ಮಂತ್ರವನ್ನು ಪಠಿಸಲು ಕೆಲವು ನಿಯಮಗಳಿವೆ. ಈ ಮಂತ್ರವನ್ನು ಯಾವಾಗ ಮತ್ತು ಹೇಗೆ ಹೇಳಬೇಕು ಎಂಬುದು ಗೊತ್ತಿರಬೇಕು, ಸ್ಪಷ್ಠವಾಗಿ ಪಠಿಸಬೇಕು. ಈ ಮಂತ್ರವನ್ನು ಹೇಳುವುದರಿಂದಾಗಿ ಸಾವನ್ನು ಗೆಲ್ಲುವ ಶಕ್ತಿ ದೊರೆಯುತ್ತದೆ. ಸಾವಿನ ಭಯ ದೂರಾಗುವುದು.
ಶಿವ ಗಾಯತ್ರಿ ಮಂತ್ರ
ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರ ಪ್ರಚೋದಯಾತ್
ಗಾಯತ್ರೀ ಮಂತ್ರ ತುಂಬಾನೇ ಶಕ್ತಿಶಾಲಿಯಾಗಿರುವ ಮಂತ್ರ . ಅದರಲ್ಲಿ ಇದು ಶಿವ ಗಾಯತ್ರೀ ಮಂತ್ರ ಪಠಣೆ ಮಾಡುವುದರಿಂದ ಮನಸ್ಸಿಗೆ ಶಾಂತಿ ದೊರೆಯಲಿದೆ.



Click it and Unblock the Notifications











