Latest Updates
-
ಬಿಸಿಲ ಬೇಗೆಯಲ್ಲಿ ದಂಪತಿಗಳ ನಡುವೆ ಹೆಚ್ಚಿದ ಕಿರಿಕಿರಿ: ಸಂಬಂಧ ಹಾಳಾಗದಂತೆ ತಡೆಯಲು ಈ ಟಿಪ್ಸ್ ಪಾಲಿಸಿ -
ಬಿಸಿಗಾಳಿಯ ಆರ್ಭಟಕ್ಕೆ ಹೆದರಬೇಡಿ: ಎಸಿ ಇಲ್ಲದಿದ್ದರೂ ನಿಮ್ಮ ಮನೆಯನ್ನು ಐಸ್ನಂತೆ ತಂಪಾಗಿರಿಸುವ ಅದ್ಭುತ ಟ್ರಿಕ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ ತಡೆಯಲು ಈ ಆಹಾರಗಳೇ ನಿಮ್ಮ ಬೆಸ್ಟ್ ಫ್ರೆಂಡ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರವಿರಲಿ! -
ಬಿಸಿಲ ಬೇಗೆಯಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಸಣ್ಣ ಬದಲಾವಣೆಗಳನ್ನು ಮಿಸ್ ಮಾಡ್ಬೇಡಿ! -
ಬಾಡಿಗೆ ಮನೆಯಲ್ಲಿ ಬಿಸಿಲಿನ ಬೇಗೆಯಿಂದ ಪಾರಾಗುವುದು ಹೇಗೆ? ಕರೆಂಟ್ ಬಿಲ್ ಉಳಿಸುವ ಸೀಕ್ರೆಟ್ ಟಿಪ್ಸ್ ಇಲ್ಲಿದೆ! -
ಬಿಸಿಲ ಬೇಗೆಯಲ್ಲಿ ಮಧುಮೇಹಿಗಳ ಪರದಾಟ: ಸಕ್ಕರೆ ಮಟ್ಟ ಏರಿಕೆಯಾಗದಂತೆ ತಂಪಾಗಿರಲು ಈ ಪಾನೀಯಗಳೇ ಮದ್ದು! -
ಇಂದೇ ಮ್ಯೂಸಿಯಂಗೆ ಹೋಗಿ: ಉಚಿತ ಪ್ರವೇಶದ ಜೊತೆಗೆ ಫೋಟೋಶೂಟ್ಗೆ ಸಿಗಲಿದೆ ಸುವರ್ಣಾವಕಾಶ, ಮಿಸ್ ಮಾಡ್ಬೇಡಿ! -
ಶಾಖದ ಅಲೆ ಎಚ್ಚರಿಕೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಸುರಕ್ಷಿತ ಮಾರ್ಗ! -
ಬಿಸಿಲಿನ ಬೇಗೆಯಲ್ಲೂ ಮದುವೆ ಸಂಭ್ರಮ ಮರೆಯಾಗದಿರಲಿ: ಅತಿಥಿಗಳಿಗಾಗಿ ಈ ಸಣ್ಣ ಬದಲಾವಣೆಗಳನ್ನು ಮಾಡಿ ನೋಡಿ!
ಶ್ರಾವಣ ಸೋಮವಾರ ಜಲಾಭಿಷೇಕ ಮಹತ್ವ: ಜಲಾಭಿಷೇಕದ ಬಳಿಕ ಈ ನಿಯಮ ಮರೆಯದಿರಿ
ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಹೇಳಲಾಗುವುದು. ಅದರಲ್ಲೂ ಶ್ರಾವಣ ಸೋಮವಾರ ಶಿವ ಪೂಜೆಗೆ ವಿಶೇಷವಾದ ದಿನವಾಗಿದೆ. ಅದರಲ್ಲೂಈ ದಿನ ಜಲಾಭಿಷೇಕ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಜಲಾಭಿಷೇಕ ಮಾಡಿಸಿದರೆ ಶಿವಕೃಪೆಗೆ ಬೇಗನೆ ಪಾತ್ರರಾಗುತ್ತೇವೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ಜಲಾಭಿಷೇಕದ ಮಹತ್ವವೇನು ಎಂದು ತಿಳಿಯೋಣ ಬನ್ನಿ:
ಜಲಾಭಿಷೇಕದಿಂದ ನಮಗಷ್ಟೇ ಅಲ್ಲ ನಮ್ಮ ಕುಟುಂಬಕ್ಕೂ ಪುಣ್ಯ ಫಲ ಸಿಗಲಿದೆ
ಶಿವನಿಗೆ ಜಲಾಭಿಷೇಕ ಮಾಡಿದರೆ ತುಂಬಾನೇ ಪುಣ್ಯ ಫಲ ಸಿಗಲಿದೆ, ಅದರಲ್ಲೂ ಶ್ರಾವಣ ಸೋಮವಾರ ಮಾಡಿದರೆ ಇನ್ನೂ ಒಳ್ಳೆಯದು. ಜಲಾಭಿಷೇಕ ಮಾಡುವುದರಿಂದ
ಭಕ್ತರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುವುದು, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರಲಿದೆ.

ಶಿವನಿಗೆ ಜಲಾಭಿಷೇಕ ಮಹತ್ವದ ಪೌರಾಣಿಕ ಹಿನ್ನೆಲೆ
ಅಮೃತಕ್ಕಾಗಿ ದೇವತೆಗಳು ಹಾಗೂ ದಾನವರು ಸಾಗರ ಮಂಥನ ಮಾಡುವಾಗ ಮೊದಲಿಗೆ ಹಾಲಾಹಲ ಉಕ್ಕುತ್ತೆ, ಆವಾಗ ಅಂಥ ಪರಿಸ್ಥಿತಿಯಲ್ಲಿ ಜಗತ್ತಿನ ರಕ್ಷಣೆಗಾಗಿ ಶಿವ ಆ ವಿಷವನ್ನು ಕುಡಿದು ವಿಷಕಂಠನಾಗುತ್ತಾನೆ. ಆದರೆ ವಿಷ ಕುಡಿದ ಕಾರಣ ಶಿವನಿಗೆ ಉರಿ ತಾಳಲಾಗುವುದಿಲ್ಲ, ಆವಾಗ ಶಿವನ ತಲೆಯ ಮೇಲೆ ಗಂಗೆ ಧುಮ್ಮುಕ್ಕಿ ಶಿವನ ಉರಿ ಶಮನ ಮಾಡಿದಳು. ಹೀಗಾಗಿ ಶಿವಪೂಜೆಯಲ್ಲಿ ಜಲಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ.
ಶಿವನಿಗೆ ಜಲಾಭಿಷೇಕ ಮಾಡುವಾಗ ಈ ನಿಯಮ ಮರೆಯದಿರಿ
- ನೀವು ಶಿವಲಿಂಗಕ್ಕೆ ಶುದ್ಧವಾದ ನೀರನ್ನು ಬಳಸಿ ಜಲಾಭಿಷೇಕಕ್ಕೆ ಬಳಸಬೇಕು, ಅಲ್ಲಿರುವ ಇತರ ದೇವತೆಗಳಿಗೆ ಜಲಾಭಿಷೇಕ ಮಾಡಬಾರದು. ನೀರು ಶಿವಲಿಂಗಕ್ಕೆ ಹನಿ-ಹನಿಯಾಗಿ ಬೀಳುವಂತೆ ಮೇಲಿನಿಂದ ಸುರಿಯಬೇಕು.
- ಜಲಾಭಿಷೇಕದ ಸಮಯದಲ್ಲಿ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಬೇಡಿ, ಏಕೆಂದರೆ ಶಾಸ್ತ್ರಗಳ ಪ್ರಕಾರ ಶಿವನಿಗೆ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ. * ಜಲಾಭಿಷೇಕ ಮಾಡಿದ ನಂತರ ಶಿವಲಿಂಗವನ್ನು ಸಂಪೂರ್ಣವಾಗಿ ಪ್ರದಕ್ಷಿಣೆ ಮಾಡಬಾರದು. ಏಕೆಂದರೆ ಶಿವಲಿಂಗದ ಮೇಲೆ ಅರ್ಪಿಸಿದ ನೀರನ್ನು ಗಂಗೆ ಎಂದು ಪರಿಗಣಿಸಲಾಗುತ್ತದೆ, ನಂಬಿಕೆಯ ಪ್ರಕಾರ, ತಾಯಿ ಗಂಗಾ ದಾಟಲು ಸಾಧ್ಯವಿಲ್ಲ. ಆದ್ದರಿಂದ ಪ್ರದಕ್ಷಣೆ ಹಾಕಬಾರದು.
ಶಿವನ ಈ ಮಂತ್ರಗಳನ್ನು ಪಠಿಸುತ್ತಾ ಜಲಾಭಿಷೇಕ ಮಾಡಿ
ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ ಉರ್ವಾರುಕಮಿವ ಬಂಧನಾನ್ ಮೃತ್ಯೋರ್ ಮುಕ್ಷೀಯ ಮಾಮೃತಾತ್



Click it and Unblock the Notifications