Latest Updates
-
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್! -
ಸಸ್ಯಜನ್ಯ ಹಾಲು: ತೂಕ ಇಳಿಕೆ ಮತ್ತು ಮಧುಮೇಹ ನಿಯಂತ್ರಣಕ್ಕೆ ಇದುವೇ ಬೆಸ್ಟ್ ಪರ್ಯಾಯ! -
ಸಕ್ಕರೆ ಬೆಲೆ ಏರಿಕೆ ಬಿಸಿ: ಹಬ್ಬದ ಸಿಹಿ ಬಜೆಟ್ ಉಳಿಸಲು ಇಲ್ಲಿದೆ 300 ರೂಪಾಯಿಯ ಸ್ಮಾರ್ಟ್ ಟಿಪ್ಸ್ -
ವರಮಹಾಲಕ್ಷ್ಮೀ ವ್ರತದ ಶಾಸ್ತ್ರೋಕ್ತ ವಿಧಾನ ಮತ್ತು ಪೂಜಾ ನಿಯಮಗಳು -
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬಿಸಿ: ಕೆ.ಆರ್. ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಹೂವು-ಹಣ್ಣುಗಳ ದರ -
BWF ವಿಶ್ವ ಚಾಂಪಿಯನ್ಷಿಪ್: ದೆಹಲಿಯಲ್ಲಿ ಭಾರತೀಯ ಆಟಗಾರರ ಅಬ್ಬರ, ಅಭಿಮಾನಿಗಳಿಗೆ ಇಲ್ಲಿದೆ ವಿಶೇಷ ಗೇಮ್ ಪ್ಲಾನ್! -
ವರಮಹಾಲಕ್ಷ್ಮಿ ಹಬ್ಬದ ದಿನಾಂಕದ ಗೊಂದಲ: ಆಗಸ್ಟ್ 21 ಅಥವಾ 28? ಇಲ್ಲಿದೆ ಸ್ಪಷ್ಟ ಮಾಹಿತಿ!
ಶ್ರಾವಣ ಸೋಮವಾರ ಜಲಾಭಿಷೇಕ ಮಹತ್ವ: ಜಲಾಭಿಷೇಕದ ಬಳಿಕ ಈ ನಿಯಮ ಮರೆಯದಿರಿ
ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಹೇಳಲಾಗುವುದು. ಅದರಲ್ಲೂ ಶ್ರಾವಣ ಸೋಮವಾರ ಶಿವ ಪೂಜೆಗೆ ವಿಶೇಷವಾದ ದಿನವಾಗಿದೆ. ಅದರಲ್ಲೂಈ ದಿನ ಜಲಾಭಿಷೇಕ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಜಲಾಭಿಷೇಕ ಮಾಡಿಸಿದರೆ ಶಿವಕೃಪೆಗೆ ಬೇಗನೆ ಪಾತ್ರರಾಗುತ್ತೇವೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ಜಲಾಭಿಷೇಕದ ಮಹತ್ವವೇನು ಎಂದು ತಿಳಿಯೋಣ ಬನ್ನಿ:
ಜಲಾಭಿಷೇಕದಿಂದ ನಮಗಷ್ಟೇ ಅಲ್ಲ ನಮ್ಮ ಕುಟುಂಬಕ್ಕೂ ಪುಣ್ಯ ಫಲ ಸಿಗಲಿದೆ
ಶಿವನಿಗೆ ಜಲಾಭಿಷೇಕ ಮಾಡಿದರೆ ತುಂಬಾನೇ ಪುಣ್ಯ ಫಲ ಸಿಗಲಿದೆ, ಅದರಲ್ಲೂ ಶ್ರಾವಣ ಸೋಮವಾರ ಮಾಡಿದರೆ ಇನ್ನೂ ಒಳ್ಳೆಯದು. ಜಲಾಭಿಷೇಕ ಮಾಡುವುದರಿಂದ
ಭಕ್ತರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುವುದು, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರಲಿದೆ.

ಶಿವನಿಗೆ ಜಲಾಭಿಷೇಕ ಮಹತ್ವದ ಪೌರಾಣಿಕ ಹಿನ್ನೆಲೆ
ಅಮೃತಕ್ಕಾಗಿ ದೇವತೆಗಳು ಹಾಗೂ ದಾನವರು ಸಾಗರ ಮಂಥನ ಮಾಡುವಾಗ ಮೊದಲಿಗೆ ಹಾಲಾಹಲ ಉಕ್ಕುತ್ತೆ, ಆವಾಗ ಅಂಥ ಪರಿಸ್ಥಿತಿಯಲ್ಲಿ ಜಗತ್ತಿನ ರಕ್ಷಣೆಗಾಗಿ ಶಿವ ಆ ವಿಷವನ್ನು ಕುಡಿದು ವಿಷಕಂಠನಾಗುತ್ತಾನೆ. ಆದರೆ ವಿಷ ಕುಡಿದ ಕಾರಣ ಶಿವನಿಗೆ ಉರಿ ತಾಳಲಾಗುವುದಿಲ್ಲ, ಆವಾಗ ಶಿವನ ತಲೆಯ ಮೇಲೆ ಗಂಗೆ ಧುಮ್ಮುಕ್ಕಿ ಶಿವನ ಉರಿ ಶಮನ ಮಾಡಿದಳು. ಹೀಗಾಗಿ ಶಿವಪೂಜೆಯಲ್ಲಿ ಜಲಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ.
ಶಿವನಿಗೆ ಜಲಾಭಿಷೇಕ ಮಾಡುವಾಗ ಈ ನಿಯಮ ಮರೆಯದಿರಿ
- ನೀವು ಶಿವಲಿಂಗಕ್ಕೆ ಶುದ್ಧವಾದ ನೀರನ್ನು ಬಳಸಿ ಜಲಾಭಿಷೇಕಕ್ಕೆ ಬಳಸಬೇಕು, ಅಲ್ಲಿರುವ ಇತರ ದೇವತೆಗಳಿಗೆ ಜಲಾಭಿಷೇಕ ಮಾಡಬಾರದು. ನೀರು ಶಿವಲಿಂಗಕ್ಕೆ ಹನಿ-ಹನಿಯಾಗಿ ಬೀಳುವಂತೆ ಮೇಲಿನಿಂದ ಸುರಿಯಬೇಕು.
- ಜಲಾಭಿಷೇಕದ ಸಮಯದಲ್ಲಿ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಬೇಡಿ, ಏಕೆಂದರೆ ಶಾಸ್ತ್ರಗಳ ಪ್ರಕಾರ ಶಿವನಿಗೆ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ. * ಜಲಾಭಿಷೇಕ ಮಾಡಿದ ನಂತರ ಶಿವಲಿಂಗವನ್ನು ಸಂಪೂರ್ಣವಾಗಿ ಪ್ರದಕ್ಷಿಣೆ ಮಾಡಬಾರದು. ಏಕೆಂದರೆ ಶಿವಲಿಂಗದ ಮೇಲೆ ಅರ್ಪಿಸಿದ ನೀರನ್ನು ಗಂಗೆ ಎಂದು ಪರಿಗಣಿಸಲಾಗುತ್ತದೆ, ನಂಬಿಕೆಯ ಪ್ರಕಾರ, ತಾಯಿ ಗಂಗಾ ದಾಟಲು ಸಾಧ್ಯವಿಲ್ಲ. ಆದ್ದರಿಂದ ಪ್ರದಕ್ಷಣೆ ಹಾಕಬಾರದು.
ಶಿವನ ಈ ಮಂತ್ರಗಳನ್ನು ಪಠಿಸುತ್ತಾ ಜಲಾಭಿಷೇಕ ಮಾಡಿ
ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ ಉರ್ವಾರುಕಮಿವ ಬಂಧನಾನ್ ಮೃತ್ಯೋರ್ ಮುಕ್ಷೀಯ ಮಾಮೃತಾತ್



Click it and Unblock the Notifications