Latest Updates
-
ಡೇಟಿಂಗ್ ಆಪ್ ಬಳಸುತ್ತೀರಾ? ಈ 'ರೆಡ್ ಫ್ಲ್ಯಾಗ್'ಗಳಿದ್ದರೆ ನೀವು ಹನಿಟ್ರ್ಯಾಪ್ ಬಲೆಗೆ ಬೀಳಬಹುದು! -
ವಿದ್ಯುತ್ ಬಿಲ್ ಚಿಂತೆಯೇ? ಪಿಎಂ ಸೂರ್ಯ ಘರ್ ಯೋಜನೆಯಲ್ಲಿ 5.75% ಬಡ್ಡಿಗೆ ಸೋಲಾರ್ ಪಡೆಯಿರಿ! -
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ!
ಶ್ರಾವಣ ಸೋಮವಾರ ಜಲಾಭಿಷೇಕ ಮಹತ್ವ: ಜಲಾಭಿಷೇಕದ ಬಳಿಕ ಈ ನಿಯಮ ಮರೆಯದಿರಿ
ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಹೇಳಲಾಗುವುದು. ಅದರಲ್ಲೂ ಶ್ರಾವಣ ಸೋಮವಾರ ಶಿವ ಪೂಜೆಗೆ ವಿಶೇಷವಾದ ದಿನವಾಗಿದೆ. ಅದರಲ್ಲೂಈ ದಿನ ಜಲಾಭಿಷೇಕ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಜಲಾಭಿಷೇಕ ಮಾಡಿಸಿದರೆ ಶಿವಕೃಪೆಗೆ ಬೇಗನೆ ಪಾತ್ರರಾಗುತ್ತೇವೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ಜಲಾಭಿಷೇಕದ ಮಹತ್ವವೇನು ಎಂದು ತಿಳಿಯೋಣ ಬನ್ನಿ:
ಜಲಾಭಿಷೇಕದಿಂದ ನಮಗಷ್ಟೇ ಅಲ್ಲ ನಮ್ಮ ಕುಟುಂಬಕ್ಕೂ ಪುಣ್ಯ ಫಲ ಸಿಗಲಿದೆ
ಶಿವನಿಗೆ ಜಲಾಭಿಷೇಕ ಮಾಡಿದರೆ ತುಂಬಾನೇ ಪುಣ್ಯ ಫಲ ಸಿಗಲಿದೆ, ಅದರಲ್ಲೂ ಶ್ರಾವಣ ಸೋಮವಾರ ಮಾಡಿದರೆ ಇನ್ನೂ ಒಳ್ಳೆಯದು. ಜಲಾಭಿಷೇಕ ಮಾಡುವುದರಿಂದ
ಭಕ್ತರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುವುದು, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರಲಿದೆ.

ಶಿವನಿಗೆ ಜಲಾಭಿಷೇಕ ಮಹತ್ವದ ಪೌರಾಣಿಕ ಹಿನ್ನೆಲೆ
ಅಮೃತಕ್ಕಾಗಿ ದೇವತೆಗಳು ಹಾಗೂ ದಾನವರು ಸಾಗರ ಮಂಥನ ಮಾಡುವಾಗ ಮೊದಲಿಗೆ ಹಾಲಾಹಲ ಉಕ್ಕುತ್ತೆ, ಆವಾಗ ಅಂಥ ಪರಿಸ್ಥಿತಿಯಲ್ಲಿ ಜಗತ್ತಿನ ರಕ್ಷಣೆಗಾಗಿ ಶಿವ ಆ ವಿಷವನ್ನು ಕುಡಿದು ವಿಷಕಂಠನಾಗುತ್ತಾನೆ. ಆದರೆ ವಿಷ ಕುಡಿದ ಕಾರಣ ಶಿವನಿಗೆ ಉರಿ ತಾಳಲಾಗುವುದಿಲ್ಲ, ಆವಾಗ ಶಿವನ ತಲೆಯ ಮೇಲೆ ಗಂಗೆ ಧುಮ್ಮುಕ್ಕಿ ಶಿವನ ಉರಿ ಶಮನ ಮಾಡಿದಳು. ಹೀಗಾಗಿ ಶಿವಪೂಜೆಯಲ್ಲಿ ಜಲಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ.
ಶಿವನಿಗೆ ಜಲಾಭಿಷೇಕ ಮಾಡುವಾಗ ಈ ನಿಯಮ ಮರೆಯದಿರಿ
- ನೀವು ಶಿವಲಿಂಗಕ್ಕೆ ಶುದ್ಧವಾದ ನೀರನ್ನು ಬಳಸಿ ಜಲಾಭಿಷೇಕಕ್ಕೆ ಬಳಸಬೇಕು, ಅಲ್ಲಿರುವ ಇತರ ದೇವತೆಗಳಿಗೆ ಜಲಾಭಿಷೇಕ ಮಾಡಬಾರದು. ನೀರು ಶಿವಲಿಂಗಕ್ಕೆ ಹನಿ-ಹನಿಯಾಗಿ ಬೀಳುವಂತೆ ಮೇಲಿನಿಂದ ಸುರಿಯಬೇಕು.
- ಜಲಾಭಿಷೇಕದ ಸಮಯದಲ್ಲಿ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಬೇಡಿ, ಏಕೆಂದರೆ ಶಾಸ್ತ್ರಗಳ ಪ್ರಕಾರ ಶಿವನಿಗೆ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ. * ಜಲಾಭಿಷೇಕ ಮಾಡಿದ ನಂತರ ಶಿವಲಿಂಗವನ್ನು ಸಂಪೂರ್ಣವಾಗಿ ಪ್ರದಕ್ಷಿಣೆ ಮಾಡಬಾರದು. ಏಕೆಂದರೆ ಶಿವಲಿಂಗದ ಮೇಲೆ ಅರ್ಪಿಸಿದ ನೀರನ್ನು ಗಂಗೆ ಎಂದು ಪರಿಗಣಿಸಲಾಗುತ್ತದೆ, ನಂಬಿಕೆಯ ಪ್ರಕಾರ, ತಾಯಿ ಗಂಗಾ ದಾಟಲು ಸಾಧ್ಯವಿಲ್ಲ. ಆದ್ದರಿಂದ ಪ್ರದಕ್ಷಣೆ ಹಾಕಬಾರದು.
ಶಿವನ ಈ ಮಂತ್ರಗಳನ್ನು ಪಠಿಸುತ್ತಾ ಜಲಾಭಿಷೇಕ ಮಾಡಿ
ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ ಉರ್ವಾರುಕಮಿವ ಬಂಧನಾನ್ ಮೃತ್ಯೋರ್ ಮುಕ್ಷೀಯ ಮಾಮೃತಾತ್



Click it and Unblock the Notifications