Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಶ್ರಾವಣ ಸೋಮವಾರ ಜಲಾಭಿಷೇಕ ಮಹತ್ವ: ಜಲಾಭಿಷೇಕದ ಬಳಿಕ ಈ ನಿಯಮ ಮರೆಯದಿರಿ
ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಹೇಳಲಾಗುವುದು. ಅದರಲ್ಲೂ ಶ್ರಾವಣ ಸೋಮವಾರ ಶಿವ ಪೂಜೆಗೆ ವಿಶೇಷವಾದ ದಿನವಾಗಿದೆ. ಅದರಲ್ಲೂಈ ದಿನ ಜಲಾಭಿಷೇಕ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಜಲಾಭಿಷೇಕ ಮಾಡಿಸಿದರೆ ಶಿವಕೃಪೆಗೆ ಬೇಗನೆ ಪಾತ್ರರಾಗುತ್ತೇವೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ಜಲಾಭಿಷೇಕದ ಮಹತ್ವವೇನು ಎಂದು ತಿಳಿಯೋಣ ಬನ್ನಿ:
ಜಲಾಭಿಷೇಕದಿಂದ ನಮಗಷ್ಟೇ ಅಲ್ಲ ನಮ್ಮ ಕುಟುಂಬಕ್ಕೂ ಪುಣ್ಯ ಫಲ ಸಿಗಲಿದೆ
ಶಿವನಿಗೆ ಜಲಾಭಿಷೇಕ ಮಾಡಿದರೆ ತುಂಬಾನೇ ಪುಣ್ಯ ಫಲ ಸಿಗಲಿದೆ, ಅದರಲ್ಲೂ ಶ್ರಾವಣ ಸೋಮವಾರ ಮಾಡಿದರೆ ಇನ್ನೂ ಒಳ್ಳೆಯದು. ಜಲಾಭಿಷೇಕ ಮಾಡುವುದರಿಂದ
ಭಕ್ತರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುವುದು, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರಲಿದೆ.

ಶಿವನಿಗೆ ಜಲಾಭಿಷೇಕ ಮಹತ್ವದ ಪೌರಾಣಿಕ ಹಿನ್ನೆಲೆ
ಅಮೃತಕ್ಕಾಗಿ ದೇವತೆಗಳು ಹಾಗೂ ದಾನವರು ಸಾಗರ ಮಂಥನ ಮಾಡುವಾಗ ಮೊದಲಿಗೆ ಹಾಲಾಹಲ ಉಕ್ಕುತ್ತೆ, ಆವಾಗ ಅಂಥ ಪರಿಸ್ಥಿತಿಯಲ್ಲಿ ಜಗತ್ತಿನ ರಕ್ಷಣೆಗಾಗಿ ಶಿವ ಆ ವಿಷವನ್ನು ಕುಡಿದು ವಿಷಕಂಠನಾಗುತ್ತಾನೆ. ಆದರೆ ವಿಷ ಕುಡಿದ ಕಾರಣ ಶಿವನಿಗೆ ಉರಿ ತಾಳಲಾಗುವುದಿಲ್ಲ, ಆವಾಗ ಶಿವನ ತಲೆಯ ಮೇಲೆ ಗಂಗೆ ಧುಮ್ಮುಕ್ಕಿ ಶಿವನ ಉರಿ ಶಮನ ಮಾಡಿದಳು. ಹೀಗಾಗಿ ಶಿವಪೂಜೆಯಲ್ಲಿ ಜಲಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ.
ಶಿವನಿಗೆ ಜಲಾಭಿಷೇಕ ಮಾಡುವಾಗ ಈ ನಿಯಮ ಮರೆಯದಿರಿ
- ನೀವು ಶಿವಲಿಂಗಕ್ಕೆ ಶುದ್ಧವಾದ ನೀರನ್ನು ಬಳಸಿ ಜಲಾಭಿಷೇಕಕ್ಕೆ ಬಳಸಬೇಕು, ಅಲ್ಲಿರುವ ಇತರ ದೇವತೆಗಳಿಗೆ ಜಲಾಭಿಷೇಕ ಮಾಡಬಾರದು. ನೀರು ಶಿವಲಿಂಗಕ್ಕೆ ಹನಿ-ಹನಿಯಾಗಿ ಬೀಳುವಂತೆ ಮೇಲಿನಿಂದ ಸುರಿಯಬೇಕು.
- ಜಲಾಭಿಷೇಕದ ಸಮಯದಲ್ಲಿ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಬೇಡಿ, ಏಕೆಂದರೆ ಶಾಸ್ತ್ರಗಳ ಪ್ರಕಾರ ಶಿವನಿಗೆ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ. * ಜಲಾಭಿಷೇಕ ಮಾಡಿದ ನಂತರ ಶಿವಲಿಂಗವನ್ನು ಸಂಪೂರ್ಣವಾಗಿ ಪ್ರದಕ್ಷಿಣೆ ಮಾಡಬಾರದು. ಏಕೆಂದರೆ ಶಿವಲಿಂಗದ ಮೇಲೆ ಅರ್ಪಿಸಿದ ನೀರನ್ನು ಗಂಗೆ ಎಂದು ಪರಿಗಣಿಸಲಾಗುತ್ತದೆ, ನಂಬಿಕೆಯ ಪ್ರಕಾರ, ತಾಯಿ ಗಂಗಾ ದಾಟಲು ಸಾಧ್ಯವಿಲ್ಲ. ಆದ್ದರಿಂದ ಪ್ರದಕ್ಷಣೆ ಹಾಕಬಾರದು.
ಶಿವನ ಈ ಮಂತ್ರಗಳನ್ನು ಪಠಿಸುತ್ತಾ ಜಲಾಭಿಷೇಕ ಮಾಡಿ
ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ ಉರ್ವಾರುಕಮಿವ ಬಂಧನಾನ್ ಮೃತ್ಯೋರ್ ಮುಕ್ಷೀಯ ಮಾಮೃತಾತ್



Click it and Unblock the Notifications