Latest Updates
-
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ -
ಹುಷಾರ್.. ಈ ರಾಶಿಗಳಿಗೆ ಶನಿಯಿಂದ ಸಂಕಷ್ಟ ಶುರು! ಶನಿಯ ಕೆಂಗಣ್ಣಿನಿಂದ ತಪ್ಪಿಸಿಕೊಳ್ಳೋದು ಹೇಗೆ? -
ಕಡಲ ತೀರದಲ್ಲಿ ಮತ್ತೆ ಕಾಣಿಸಿಕೊಂಡ ಡೂಮ್ಸ್ಡೇ ಫಿಶ್: ಮತ್ತೇನು ದುರಂತ ಕಾದಿದೆ? -
ಮಾರ್ಚ್ 13ರಿಂದ ಶನಿ ಅಸ್ತಮ: 40 ದಿನಗಳ ಕಾಲ ಈ ರಾಶಿಯವರಿಗೆ ಶನಿ ಪ್ರಭಾವ ಇಳಿಕೆ! ಅದೃಷ್ಟದ ದಿನ! -
ದಪ್ಪ ಆಗಿದ್ದೀರಾ? ತೂಕ ಇಳಿಸಬೇಕಾ? ಈ ಗಂಜಿ 1 ಕಪ್ ಕುಡಿಯಿರಿ.. ಡಬಲ್ ಸ್ಪೀಡ್ನಲ್ಲಿ ಸಣ್ಣ ಆಗ್ತೀರಾ!! -
ಬೇಸಿಗೆಯಲ್ಲಿ ದೇಹ ತಂಪಾಗಿಟ್ಟು ದಣಿವು ನೀಗಿಸುವ ನವಣೆ ಮೊಸರನ್ನ: ಸುಲಭವಾಗಿ ಮಾಡುವ ವಿಧಾನವಿದು! -
ಫ್ರಿಜ್ನಲ್ಲಿ ಇಟ್ಟ ಆಹಾರ ಬೇಗ ಕೆಡುತ್ತಿದ್ಯಾ? ಈ 5 ಮ್ಯಾಜಿಕ್ ಟ್ರಿಕ್ಸ್ ಬಳಸಿ.. ಫ್ರೆಶ್ ಆಗಿಡಿ! -
ಸೋಲೋ ಡೇಟ್ ಟ್ರೆಂಡ್: ಒಂಟಿಯಾಗಿ ಸಮಯ ಕಳೆಯೋದು ಎಷ್ಟು ಉತ್ತಮ ಗೊತ್ತಾ?
ಶ್ರಾವಣ ಸೋಮವಾರ ಜಲಾಭಿಷೇಕ ಮಹತ್ವ: ಜಲಾಭಿಷೇಕದ ಬಳಿಕ ಈ ನಿಯಮ ಮರೆಯದಿರಿ
ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಹೇಳಲಾಗುವುದು. ಅದರಲ್ಲೂ ಶ್ರಾವಣ ಸೋಮವಾರ ಶಿವ ಪೂಜೆಗೆ ವಿಶೇಷವಾದ ದಿನವಾಗಿದೆ. ಅದರಲ್ಲೂಈ ದಿನ ಜಲಾಭಿಷೇಕ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಜಲಾಭಿಷೇಕ ಮಾಡಿಸಿದರೆ ಶಿವಕೃಪೆಗೆ ಬೇಗನೆ ಪಾತ್ರರಾಗುತ್ತೇವೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ಜಲಾಭಿಷೇಕದ ಮಹತ್ವವೇನು ಎಂದು ತಿಳಿಯೋಣ ಬನ್ನಿ:
ಜಲಾಭಿಷೇಕದಿಂದ ನಮಗಷ್ಟೇ ಅಲ್ಲ ನಮ್ಮ ಕುಟುಂಬಕ್ಕೂ ಪುಣ್ಯ ಫಲ ಸಿಗಲಿದೆ
ಶಿವನಿಗೆ ಜಲಾಭಿಷೇಕ ಮಾಡಿದರೆ ತುಂಬಾನೇ ಪುಣ್ಯ ಫಲ ಸಿಗಲಿದೆ, ಅದರಲ್ಲೂ ಶ್ರಾವಣ ಸೋಮವಾರ ಮಾಡಿದರೆ ಇನ್ನೂ ಒಳ್ಳೆಯದು. ಜಲಾಭಿಷೇಕ ಮಾಡುವುದರಿಂದ
ಭಕ್ತರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುವುದು, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರಲಿದೆ.

ಶಿವನಿಗೆ ಜಲಾಭಿಷೇಕ ಮಹತ್ವದ ಪೌರಾಣಿಕ ಹಿನ್ನೆಲೆ
ಅಮೃತಕ್ಕಾಗಿ ದೇವತೆಗಳು ಹಾಗೂ ದಾನವರು ಸಾಗರ ಮಂಥನ ಮಾಡುವಾಗ ಮೊದಲಿಗೆ ಹಾಲಾಹಲ ಉಕ್ಕುತ್ತೆ, ಆವಾಗ ಅಂಥ ಪರಿಸ್ಥಿತಿಯಲ್ಲಿ ಜಗತ್ತಿನ ರಕ್ಷಣೆಗಾಗಿ ಶಿವ ಆ ವಿಷವನ್ನು ಕುಡಿದು ವಿಷಕಂಠನಾಗುತ್ತಾನೆ. ಆದರೆ ವಿಷ ಕುಡಿದ ಕಾರಣ ಶಿವನಿಗೆ ಉರಿ ತಾಳಲಾಗುವುದಿಲ್ಲ, ಆವಾಗ ಶಿವನ ತಲೆಯ ಮೇಲೆ ಗಂಗೆ ಧುಮ್ಮುಕ್ಕಿ ಶಿವನ ಉರಿ ಶಮನ ಮಾಡಿದಳು. ಹೀಗಾಗಿ ಶಿವಪೂಜೆಯಲ್ಲಿ ಜಲಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ.
ಶಿವನಿಗೆ ಜಲಾಭಿಷೇಕ ಮಾಡುವಾಗ ಈ ನಿಯಮ ಮರೆಯದಿರಿ
- ನೀವು ಶಿವಲಿಂಗಕ್ಕೆ ಶುದ್ಧವಾದ ನೀರನ್ನು ಬಳಸಿ ಜಲಾಭಿಷೇಕಕ್ಕೆ ಬಳಸಬೇಕು, ಅಲ್ಲಿರುವ ಇತರ ದೇವತೆಗಳಿಗೆ ಜಲಾಭಿಷೇಕ ಮಾಡಬಾರದು. ನೀರು ಶಿವಲಿಂಗಕ್ಕೆ ಹನಿ-ಹನಿಯಾಗಿ ಬೀಳುವಂತೆ ಮೇಲಿನಿಂದ ಸುರಿಯಬೇಕು.
- ಜಲಾಭಿಷೇಕದ ಸಮಯದಲ್ಲಿ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಬೇಡಿ, ಏಕೆಂದರೆ ಶಾಸ್ತ್ರಗಳ ಪ್ರಕಾರ ಶಿವನಿಗೆ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ. * ಜಲಾಭಿಷೇಕ ಮಾಡಿದ ನಂತರ ಶಿವಲಿಂಗವನ್ನು ಸಂಪೂರ್ಣವಾಗಿ ಪ್ರದಕ್ಷಿಣೆ ಮಾಡಬಾರದು. ಏಕೆಂದರೆ ಶಿವಲಿಂಗದ ಮೇಲೆ ಅರ್ಪಿಸಿದ ನೀರನ್ನು ಗಂಗೆ ಎಂದು ಪರಿಗಣಿಸಲಾಗುತ್ತದೆ, ನಂಬಿಕೆಯ ಪ್ರಕಾರ, ತಾಯಿ ಗಂಗಾ ದಾಟಲು ಸಾಧ್ಯವಿಲ್ಲ. ಆದ್ದರಿಂದ ಪ್ರದಕ್ಷಣೆ ಹಾಕಬಾರದು.
ಶಿವನ ಈ ಮಂತ್ರಗಳನ್ನು ಪಠಿಸುತ್ತಾ ಜಲಾಭಿಷೇಕ ಮಾಡಿ
ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ ಉರ್ವಾರುಕಮಿವ ಬಂಧನಾನ್ ಮೃತ್ಯೋರ್ ಮುಕ್ಷೀಯ ಮಾಮೃತಾತ್



Click it and Unblock the Notifications











