Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಶ್ರಾವಣ ಸೋಮವಾರ ಜಲಾಭಿಷೇಕ ಮಹತ್ವ: ಜಲಾಭಿಷೇಕದ ಬಳಿಕ ಈ ನಿಯಮ ಮರೆಯದಿರಿ
ಶ್ರಾವಣ ಮಾಸದಲ್ಲಿ ಶಿವ ಪೂಜೆ ಮಾಡುವುದರಿಂದ ಹೆಚ್ಚಿನ ಪ್ರಯೋಜನ ಸಿಗಲಿದೆ ಎಂದು ಹೇಳಲಾಗುವುದು. ಅದರಲ್ಲೂ ಶ್ರಾವಣ ಸೋಮವಾರ ಶಿವ ಪೂಜೆಗೆ ವಿಶೇಷವಾದ ದಿನವಾಗಿದೆ. ಅದರಲ್ಲೂಈ ದಿನ ಜಲಾಭಿಷೇಕ ಮಾಡಿದರೆ ಒಳ್ಳೆಯದು ಎಂದು ಹೇಳಲಾಗುವುದು. ಜಲಾಭಿಷೇಕ ಮಾಡಿಸಿದರೆ ಶಿವಕೃಪೆಗೆ ಬೇಗನೆ ಪಾತ್ರರಾಗುತ್ತೇವೆ ಎಂದು ನಂಬಲಾಗಿದೆ. ಶ್ರಾವಣ ಮಾಸದಲ್ಲಿ ಜಲಾಭಿಷೇಕದ ಮಹತ್ವವೇನು ಎಂದು ತಿಳಿಯೋಣ ಬನ್ನಿ:
ಜಲಾಭಿಷೇಕದಿಂದ ನಮಗಷ್ಟೇ ಅಲ್ಲ ನಮ್ಮ ಕುಟುಂಬಕ್ಕೂ ಪುಣ್ಯ ಫಲ ಸಿಗಲಿದೆ
ಶಿವನಿಗೆ ಜಲಾಭಿಷೇಕ ಮಾಡಿದರೆ ತುಂಬಾನೇ ಪುಣ್ಯ ಫಲ ಸಿಗಲಿದೆ, ಅದರಲ್ಲೂ ಶ್ರಾವಣ ಸೋಮವಾರ ಮಾಡಿದರೆ ಇನ್ನೂ ಒಳ್ಳೆಯದು. ಜಲಾಭಿಷೇಕ ಮಾಡುವುದರಿಂದ
ಭಕ್ತರ ಎಲ್ಲಾ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುವುದು, ಕುಟುಂಬದಲ್ಲಿ ಸಂತೋಷ ಮತ್ತು ಸಮೃದ್ಧಿ ಇರಲಿದೆ.

ಶಿವನಿಗೆ ಜಲಾಭಿಷೇಕ ಮಹತ್ವದ ಪೌರಾಣಿಕ ಹಿನ್ನೆಲೆ
ಅಮೃತಕ್ಕಾಗಿ ದೇವತೆಗಳು ಹಾಗೂ ದಾನವರು ಸಾಗರ ಮಂಥನ ಮಾಡುವಾಗ ಮೊದಲಿಗೆ ಹಾಲಾಹಲ ಉಕ್ಕುತ್ತೆ, ಆವಾಗ ಅಂಥ ಪರಿಸ್ಥಿತಿಯಲ್ಲಿ ಜಗತ್ತಿನ ರಕ್ಷಣೆಗಾಗಿ ಶಿವ ಆ ವಿಷವನ್ನು ಕುಡಿದು ವಿಷಕಂಠನಾಗುತ್ತಾನೆ. ಆದರೆ ವಿಷ ಕುಡಿದ ಕಾರಣ ಶಿವನಿಗೆ ಉರಿ ತಾಳಲಾಗುವುದಿಲ್ಲ, ಆವಾಗ ಶಿವನ ತಲೆಯ ಮೇಲೆ ಗಂಗೆ ಧುಮ್ಮುಕ್ಕಿ ಶಿವನ ಉರಿ ಶಮನ ಮಾಡಿದಳು. ಹೀಗಾಗಿ ಶಿವಪೂಜೆಯಲ್ಲಿ ಜಲಾಭಿಷೇಕಕ್ಕೆ ತುಂಬಾನೇ ಮಹತ್ವವಿದೆ.
ಶಿವನಿಗೆ ಜಲಾಭಿಷೇಕ ಮಾಡುವಾಗ ಈ ನಿಯಮ ಮರೆಯದಿರಿ
- ನೀವು ಶಿವಲಿಂಗಕ್ಕೆ ಶುದ್ಧವಾದ ನೀರನ್ನು ಬಳಸಿ ಜಲಾಭಿಷೇಕಕ್ಕೆ ಬಳಸಬೇಕು, ಅಲ್ಲಿರುವ ಇತರ ದೇವತೆಗಳಿಗೆ ಜಲಾಭಿಷೇಕ ಮಾಡಬಾರದು. ನೀರು ಶಿವಲಿಂಗಕ್ಕೆ ಹನಿ-ಹನಿಯಾಗಿ ಬೀಳುವಂತೆ ಮೇಲಿನಿಂದ ಸುರಿಯಬೇಕು.
- ಜಲಾಭಿಷೇಕದ ಸಮಯದಲ್ಲಿ ತುಳಸಿ ಎಲೆಗಳನ್ನು ನೀರಿನಲ್ಲಿ ಹಾಕಬೇಡಿ, ಏಕೆಂದರೆ ಶಾಸ್ತ್ರಗಳ ಪ್ರಕಾರ ಶಿವನಿಗೆ ತುಳಸಿಯನ್ನು ಅರ್ಪಿಸುವುದನ್ನು ನಿಷೇಧಿಸಲಾಗಿದೆ. * ಜಲಾಭಿಷೇಕ ಮಾಡಿದ ನಂತರ ಶಿವಲಿಂಗವನ್ನು ಸಂಪೂರ್ಣವಾಗಿ ಪ್ರದಕ್ಷಿಣೆ ಮಾಡಬಾರದು. ಏಕೆಂದರೆ ಶಿವಲಿಂಗದ ಮೇಲೆ ಅರ್ಪಿಸಿದ ನೀರನ್ನು ಗಂಗೆ ಎಂದು ಪರಿಗಣಿಸಲಾಗುತ್ತದೆ, ನಂಬಿಕೆಯ ಪ್ರಕಾರ, ತಾಯಿ ಗಂಗಾ ದಾಟಲು ಸಾಧ್ಯವಿಲ್ಲ. ಆದ್ದರಿಂದ ಪ್ರದಕ್ಷಣೆ ಹಾಕಬಾರದು.
ಶಿವನ ಈ ಮಂತ್ರಗಳನ್ನು ಪಠಿಸುತ್ತಾ ಜಲಾಭಿಷೇಕ ಮಾಡಿ
ಪಂಚಾಕ್ಷರಿ ಮಂತ್ರ
ಓಂ ನಮಃ ಶಿವಾಯಃ
ಶಿವ ಗಾಯತ್ರಿ ಮಂತ್ರ
ಓಂ ಮಹಾದೇವಾಯ ವಿದ್ಮಹೇ ರುದ್ರಮೂರ್ತಯೇ ಧೀಮಹಿ ತನ್ನಃ ಶಿವಃ ಪ್ರಚೋದಯಾತ್ ।
ಮಹಾ ಮೃತ್ಯುಂಜಯ ಮಂತ್ರ
ಓಂ ತ್ರ್ಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿ ವರ್ಧನಂ ಉರ್ವಾರುಕಮಿವ ಬಂಧನಾನ್ ಮೃತ್ಯೋರ್ ಮುಕ್ಷೀಯ ಮಾಮೃತಾತ್



Click it and Unblock the Notifications