Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶ್ರಾವಣ ಮಾಸದಲ್ಲಿ ಉಪವಾಸ ಮಾಡುವಾಗ ಈ ತಪ್ಪುಗಳು ಆಗದಿರಲಿ!
ಶ್ರಾವಣ ಮಾಸದಲ್ಲಿ ಪ್ರತಿಯೊಬ್ಬರಲ್ಲೂ ಒಂದು ರೀತಿಯ ಖುಷಿ ಮನೆ ಮಾಡಿರುತ್ತದೆ. ಈ ತಿಂಗಳನ್ನು ಸಂಪೂರ್ಣವಾಗಿ ಶಿವನಿಗಾಗಿ ಅರ್ಪಣೆ ಮಾಡಲಾಗುತ್ತದೆ. ಈ ತಿಂಗಳಿನಲ್ಲಿ ಶಿವನನ್ನು ಕುರಿತು ವಿಶೇಷ ಪೂಜೆ ಹಾಗೂ ಉಪವಾಸವನ್ನು ನೆರವೇರಿಸಲಾಗುತ್ತದೆ. ಈ ತಿಂಗಳು ಬಹಳ ವಿಶೇಷ ಏಕೆಂದರೆ ಈ ಸಂದರ್ಭದಲ್ಲಿ ಶಿವನು ಭೂ ಲೋಕಕ್ಕೆ ಇಳಿದು ಬಂದು ಭಕ್ತರನ್ನು ಪೊರೆಯುತ್ತಾನೆ ಎಂದು ನಂಬಲಾಗಿದೆ.

ಸಾಮಾನ್ಯವಾಗಿ ಈ ಮಾಸದಲ್ಲಿ ಧಾರಾಕಾರ ಮಳೆಯಾಗುತ್ತದೆ. ಹಾಗೂ ಬಿಸಿಲಿನ ತಾಪದಿಂದ ಜನರಿಗೆ ನಿರಾಳವಾಗಲಿದೆ. ಈ ತಿಂಗಳು ಪೂರ್ತಿ ಮಹಾದೇವನ ಪೂಜೆಯಲ್ಲೇ ಭಕ್ತಾದಿಗಳು ಮಗ್ನರಾಗಲಿದ್ದಾರೆ. ಅನೇಕ ಜನರು ಈ ದಿನ ಉಪವಾಸವನ್ನು ಆಚರಿಸುತ್ತಾರೆ. ಶಿವನ ಆರಾಧನೆಯಿಂದ ವ್ಯಕ್ತಿಯ ಎಲ್ಲಾ ದುಃಖಗಳು ಕೊನೆಗೊಳ್ಳುತ್ತವೆ.
ಅವನು ಎಲ್ಲಾ ರೀತಿಯಲ್ಲಿ ಸಂತೋಷವನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ. ಅದ್ರಲ್ಲೂ ಶ್ರಾವಣ ಸೋಮವಾರದಂದು ಉಪವಾಸ ಮಾಡುವವರು ಈ ವಿಚಾರದ ಬಗ್ಗೆ ಕಾಳಜಿ ಮಾಡುವುದು ತುಂಬಾನೇ ಮುಖ್ಯವಾಗುತ್ತದೆ. ಅಷ್ಟಕ್ಕೂ ಏನೆಲ್ಲಾ ನಿಯಮ ಪಾಲಿಸಬೇಕು ಅನ್ನೋದನ್ನು ತಿಳಿಯೋಣ.
ಶ್ರಾವಣ ಮಾಸದ ಉಪವಾಸ ಹೇಗಿರಬೇಕು?
* ಪೂರ್ಣ ನಂಬಿಕೆಯೊಂದಿಗೆ ಉಪವಾಸ ಮಾಡಿ. ಮನಸ್ಸಿನಲ್ಲಿ ಯಾವುದೇ ರೀತಿ ಗೊಂದಲ ಇಟ್ಟುಕೊಳ್ಳಬೇಡಿ
* ತೆಗೆದುಕೊಂಡ ಪ್ರತಿಜ್ಞೆಯನ್ನು ಪ್ರಾಮಾಣಿಕತೆಯಿಂದ ಅನುಸರಿಸಿ
* ನೀರನ್ನೂ ಮುಟ್ಟದೇ ಉಪವಾಸ ಮಾಡಬೇಕು ಎನ್ನುವ ನಿಯಮವಿಲ್ಲ
* ಆರೋಗ್ಯಕರವಾಗಿರುವಾಗ ಉಪವಾಸವನ್ನು ಮಾಡಬೇಕು
* ಉಪವಾಸದ ಸಮಯದಲ್ಲಿ ನೀವು ಒಣ ಹಣ್ಣುಗಳು ಮತ್ತು ಹಣ್ಣುಗಳನ್ನು ತಿನ್ನಬೇಕು
* ಉಪವಾಸದ ಸಮಯದಲ್ಲಿ ದೇಹದ ಶಕ್ತಿ ಕಡಿಮೆಯಾಗುತ್ತದೆ
* ಆದ್ದರಿಂದ ಜ್ಯೂಸ್, ಮಜ್ಜಿಗೆ ಮತ್ತು ನೀರನ್ನು ಸೇವಿಸಿ ಮತ್ತು ನಿಮ್ಮನ್ನು ಹೈಡ್ರೇಟ್ ಆಗಿ ಇಟ್ಟುಕೊಳ್ಳಿ
ಶ್ರಾವಣ ಉಪವಾಸದಲ್ಲಿ ಈ ತಪ್ಪುಗಳನ್ನು ಮಾಡಬೇಡಿ!
* ಉಪವಾಸದ ಸಮಯದಲ್ಲಿ ತಯಾರಿಸಿದ ಆಹಾರದಲ್ಲಿ ಸಾಮಾನ್ಯ ಉಪ್ಪಿನ ಬದಲು ಕಲ್ಲು ಉಪ್ಪನ್ನು ಬಳಸಿ
* ಉಪ್ಪು ಸೇವನೆಯಿಂದ ನೀವು ದುರ್ಬಲರಾಗುವುದಿಲ್ಲ
* ಬ್ರಹ್ಮಚರ್ಯವನ್ನು ಅನುಸರಿಸಿ
* ಸಂತೋಷವಾಗಿರಿ ಮತ್ತು ಶಿವನನ್ನು ಆರಾಧಿಸಿ
ಈ ಆಹಾರಗಳನ್ನು ಸೇವಿಸಬೇಡಿ!
* ಶ್ರಾವಣ ಮಾಸದಲ್ಲಿ ಈರುಳ್ಳಿ-ಬೆಳ್ಳುಳ್ಳಿ, ಸಾಸಿವೆ ಎಣ್ಣೆ, ಎಳ್ಳೆಣ್ಣೆ, ಉದ್ದಿನಬೇಳೆ ಮತ್ತು ಬದನೆಕಾಯಿಯಂತಹ ಆಹಾರಗಳಿಂದ ದೂರವಿರಿ
* ಶ್ರಾವಣ ಮಾಸದಲ್ಲಿ ಮಾಂಸ, ಮೊಟ್ಟೆ ಮತ್ತು ಮದ್ಯ ಸೇವಿಸಬೇಡಿ
* ಪ್ಯಾಕೆಟ್ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ
* ಈ ತಿಂಗಳಲ್ಲಿ ಮನೆಯಲ್ಲಿ ಕಲಹ ಸೃಷ್ಟಿಸಬೇಡಿ
* ಯಾರನ್ನೂ ಟೀಕಿಸಬೇಡಿ
* ದುಷ್ಟರಿಂದ ದೂರವಿರಿ
ಶ್ರಾವಣ ಮಾಸದಲ್ಲಿ ಉಪವಾಸ ಮಾಡುವವರು ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿದರೆ ಉಪವಾಸದ ಫಲವನ್ನು ಖಂಡಿತ ಪಡೆಯುತ್ತೀರಿ.



Click it and Unblock the Notifications