Latest Updates
-
ವರಮಹಾಲಕ್ಷ್ಮಿ ಹಬ್ಬದ ತಯಾರಿ: ಕುಟುಂಬದೊಂದಿಗೆ ಜಗಳವಿಲ್ಲದೆ, ಶಾಂತಿಯುತವಾಗಿ ಹಬ್ಬ ಆಚರಿಸುವುದು ಹೇಗೆ? -
ನಾಲ್ಕನೇ ಓಣಂ ಸಂಭ್ರಮ: ಪೂಕಳಂ ಸ್ಪರ್ಧೆಗೆ ಕ್ವಿಕ್ ಟಿಪ್ಸ್ ಮತ್ತು ಝೀರೋ-ವೇಸ್ಟ್ ಹ್ಯಾಕ್ಸ್! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ: ಇನ್ಮುಂದೆ ಕ್ಯಾನ್ ಮೇಲೆ ಈ ಹೆಸರು ಇರಲ್ಲ, FSSAI ಹೊಸ ರೂಲ್ಸ್! -
ರಕ್ಷಾಬಂಧನ 2026: ಚಂದ್ರಗ್ರಹಣದ ಭಯ ಬೇಡ, ರಾಖಿ ಕಟ್ಟಲು ಬೆಸ್ಟ್ ಟೈಮ್ ಇಲ್ಲಿದೆ! -
ಉರಿ ಬಿಸಿಲು, ತೇವಾಂಶದ ಕಾಟ: ಎಸಿ ಇಲ್ಲದಿದ್ದರೂ ಫಿಟ್ ಆಗಿರಲು 12 ನಿಮಿಷದ ಸರಳ ವರ್ಕೌಟ್! -
ರಕ್ಷಾಬಂಧನ ಶಾಪಿಂಗ್ ಎಚ್ಚರ: ನಿಮ್ಮ ಹಣ ಕದಿಯಲು ಕಾಯುತ್ತಿದ್ದಾರೆ ಸೈಬರ್ ವಂಚಕರು! -
ಭಾರಿ ಮಳೆ, ಬಿರುಗಾಳಿ ಎಚ್ಚರಿಕೆ: ನಿಮ್ಮ ಅಪಾರ್ಟ್ಮೆಂಟ್ ಸುರಕ್ಷಿತವಾಗಿಡಲು ಈ 30 ನಿಮಿಷದ ಪ್ಲಾನ್ ಫಾಲೋ ಮಾಡಿ -
ಮುಂಬೈನಲ್ಲಿ ಮೋಮೋಸ್ ತಿಂದ 16 ಮಂದಿಗೆ ಫುಡ್ ಪಾಯಿಸನಿಂಗ್: ಹೊರಬಂತು ಶಾಕಿಂಗ್ ಸತ್ಯ, ಸುರಕ್ಷಿತವಾಗಿರುವುದು ಹೇಗೆ? -
ರಕ್ಷಾಬಂಧನ ವಿಶೇಷ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಪ್ರಯಾಣಕ್ಕೂ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ!
ಶ್ರಾವಣ ಶಿವರಾತ್ರಿ 2023 : ಇಷ್ಟಾರ್ಥ ಸಿದ್ಧಿಗಾಗಿ ಈ ಪರಿಹಾರ ಮಾಡಿ!
ಹಿಂದೂ ಪಂಚಾಂಗದ ಪ್ರಕಾರ ಒಂದು ವರ್ಷದಲ್ಲಿ ಒಟ್ಟು 12 ಶಿವರಾತ್ರಿಗಳು ಬರುತ್ತವೆ. ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಶ್ರಾವಣ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯು ಜುಲೈ 15 ರಂದು ರಾತ್ರಿ 08:32 ಕ್ಕೆ ಪ್ರಾರಂಭವಾಗಿ ಜುಲೈ 16 ರಂದು ರಾತ್ರಿ 10:08 ಕ್ಕೆ ಕೊನೆಗೊಳ್ಳುತ್ತದೆ. ಶ್ರಾವಣ ಶಿವರಾತ್ರಿಯ ದಿನ ರಾತ್ರಿಯಲ್ಲಿ ಪೂಜೆ ಮಾಡುವ ವಿಧಿ-ವಿಧಾನಗಳು ಇರೋದ್ರಿಂದ ಉಪವಾಸವನ್ನು ಜುಲೈ 15, 2023 ರಂದು ಶನಿವಾರ ಆಚರಿಸಲಾಗುತ್ತದೆ.

ಶ್ರಾವಣ ಶಿವರಾತ್ರಿಯ ಶುಭ ಸಂದರ್ಭದಲ್ಲಿ ಶಿವ ದೇವಾಲಯಗಳಲ್ಲಿ ಭಕ್ತರು ರುದ್ರಾಭಿಷೇಕ ಹಾಗೂ ಪೂಜೆಗಳನ್ನು ಕೈಗೊಂಡು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಶಿವನಲ್ಲಿ ಭಕ್ತಿಯಿಂದ ಪ್ರಾರ್ಥಿಸಿಕೊಳ್ಳುತ್ತಾರೆ. ಅನೇಕ ಜನರು ಶ್ರಾವಣ ಶಿವರಾತ್ರಿಯಂದು ಉಪವಾಸ ಮಾಡುತ್ತಾರೆ.
ಶಿವರಾತ್ರಿಯು ಪವಿತ್ರವಾದ ದಿನವಾಗಿದ್ದು, ಈ ಶಿವನ ಧ್ಯಾನದಲ್ಲಿ ತಲ್ಲೀನರಾದರೆ ಆತ ನಮ್ಮ ಕಷ್ಟಗಳನ್ನೆಲ್ಲಾ ದೂರ ಮಾಡುತ್ತಾನೆ ಅನ್ನೋ ನಂಬಿಕೆಯಿದೆ. ಅಷ್ಟಕ್ಕೂ ಶಿವರಾತ್ರಿ ದಿನ ನಮ್ಮ ಇಷ್ಟಾರ್ಥ ಸಿದ್ಧಿಗಾಗಿ ಏನು ಮಾಡಬೇಕು? ಯಾವ ರೀತಿ ಪರಿಹಾರಗಳನ್ನು ಕೈಗೊಳ್ಳಬೇಕು ಅನ್ನೋದನ್ನು ತಿಳಿಯೋಣ.
ಶ್ರಾವಣ ಶಿವರಾತ್ರಿ ದಿನ ಈ ರೀತಿ ಪರಿಹಾರ ಮಾಡಿ :
* ಪಂಚಾಮೃತದಿಂದ ಶಿವಲಿಂಗಕ್ಕೆ ಅಭಿಷೇಕ ಮಾಡಿ
* ಶಿವನ ಸಂಕಲ್ಪ ಮಾಡಿ ಹಾಲಿನಿಂದ ಅಭಿಷೇಕ ಮಾಡಿದ ನಂತರ ಓಂ ಹಿ ಈಶಾನಾಯ ನಮಃ ಎಂದು ಜಪಿಸಿ
* ಎರಡನೇ ಹಂತದಲ್ಲಿ ಅಭಿಷೇಕ ಮಾಡಿದ ನಂತರ ಓಂ ಹಿ ಅಘೋರಾಯ ನಮಃ ಎಂದು ಜಪಿಸಿ
* ಮೂರನೇ ಹಂತದಲ್ಲಿ ಧೃತ ಸ್ನಾನ ಮಾಡಿ ಮತ್ತು ಓಂ ಹಿ ವಾಮದೇವಾಯ ನಮಃ ಎಂಬ ಮಂತ್ರವನ್ನು ಜಪಿಸಿ
* ನಾಲ್ಕನೇ ಹಂತದಲ್ಲಿ ಜೇನಿನ ಅಭಿಷೇಕ ಮಾಡಿ. ಮತ್ತು ಓಂ ಹಿ ಸದ್ಯೋಜಾತಯೇ ನಮಃ ಮಂತ್ರವನ್ನು ಜಪಿಸಿ.
ಸಮಸ್ಯೆಗೆ ಪರಿಹಾರಗಳು ಪಡೆಯೋದು ಹೇಗೆ?
* ಮನುಷ್ಯ ಎಂದ ಮೇಲೆ ಆತನಿಗೆ ನೂರಾರು ಆಸೆ, ಕನಸುಗಳಿರುತ್ತದೆ. ಉದಾಹರಣೆಗೆ ಉದಾಹರಣೆಗೆ ನಿಮಗೆ ಸಂಬಳ ಬರದಿದ್ದರೆ "ನನಗೆ ಸಂಬಳ ಸಿಕ್ಕಿದೆ ನನಗೆ ಸಂತೋಷವಾಗಿದೆ" ಎಂದು ಬರೆಯಬೇಕು. ಕೆಂಪು ಪೆನ್ನಿನಿಂದ ಕಾಗದದ ಮೇಲೆ ಬರೆದು ಆ ಕಾಗದವನ್ನು ಮಡಚಿ ಶಿವರಾತ್ರಿಯ ದಿನದಂದು ಮನೆಯ ಹೊರಗೆ ನೆಲದ ಮೇಲೆ ಹೂತುಹಾಕಿ. ಅಲ್ಲದೆ ಆ ಜಾಗದಲ್ಲಿ ಗಿಡ ನೆಟ್ಟು ಪ್ರತಿನಿತ್ಯ ನೀರುಣಿಸಬೇಕು.
* ಪಂಚ ಮುಖಿ ರುದ್ರಾಕ್ಷವನ್ನು ನೀರಿನಿಂದ ಸ್ವಚ್ಛಗೊಳಿಸಿ ಒಣಗಿಸಿ. ಒಣಗಿದ ನಂತರ ಅದನ್ನು ನಿಮ್ಮ ಎಡಗೈಯಲ್ಲಿ ಇರಿಸಿ. ಮತ್ತು ಅದನ್ನು ನಿಮ್ಮ ಬಲಗೈಯಿಂದ ಮುಚ್ಚಿ. ಮತ್ತು ನಿಮ್ಮ ಮನಸ್ಸಿನಲ್ಲಿರುವ ಹಾರೈಕೆಗಳನ್ನು ಹೇಳಿಕೊಳ್ಳಿ. ಇದು ನನ್ನ ಒಂದು ಮಾಂತ್ರಿಕ ರುದ್ರಾಕ್ಷಿಯಾಗಿದ್ದು ಅದು ನನ್ನ ಎಲ್ಲಾ ಆಸೆಗಳನ್ನು ಪೂರೈಸುತ್ತದೆ ಎಂದು ಮನಸ್ಸಿನಲ್ಲಿ ಯೋಚಿಸಿ. ಇದಾದ ಬಳಿಕ ಅದನ್ನು ಎಲ್ಲೋ ಸುರಕ್ಷಿತವಾಗಿ ಇರಿಸಿ ಮತ್ತು ದಿನಕ್ಕೆ ಒಮ್ಮೆ ನೋಡಿ.
* ಒಂದು ಕರಿಮೆಣಸು ಮತ್ತು ಏಳು ಕರಿ ಎಳ್ಳನ್ನು ಅಂಗೈಯಲ್ಲಿ ಇರಿಸಿ. ಮತ್ತು ನಿಮ್ಮ ಹೃದಯದಿಂದ ಹಾರೈಕೆ ಮಾಡಿ ಮತ್ತು ಅದನ್ನು ಶಿವಲಿಂಗಕ್ಕೆ ಅರ್ಪಿಸಿ. ಹೀಗೆ ಮಾಡುವುದರಿಂದ ನಿಮ್ಮ ಆಸೆ ಖಂಡಿತ ಈಡೇರುತ್ತದೆ.
* ಶಿವರಾತ್ರಿಯ ದಿನದಂದು 21 ಬಿಲ್ವಪತ್ರೆಯನ್ನು
ತೆಗೆದುಕೊಂಡು ಪ್ರತಿಯೊಬ್ಬರ ಮೇಲೆ ಶ್ರೀಗಂಧದಿಂದ 'ಓಂ ನಮಃ ಶಿವಾಯ' ಎಂದು ಬರೆಯಿರಿ. ಮತ್ತು ನಿಮ್ಮ ಇಚ್ಛೆಯನ್ನು ಮನಸ್ಸಿನಲ್ಲಿ ನೆನೆದುಕೊಂಡು ಶಿವಲಿಂಗಕ್ಕೆ ಅರ್ಪಿಸಿ.
ಶಿವರಾತ್ರಿಯ ದಿನ ಈ ರೀತಿ ಪೂಜೆ ಸಲ್ಲಿಸಿ ಪರಿಹಾರಗಳನ್ನು ಮಾಡಿದ್ರೆ ಇಷ್ಟಾರ್ಥಗಳು ಸಿದ್ಧಿಯಾಗುತ್ತೆ ಅನ್ನೋ ನಂಬಿಕೆಯಿದೆ.
ಸೂಚನೆ : ಇಂಟರ್ನೆಟ್ ನಲ್ಲಿ ಸಿಗುವ ಮಾಹಿತಿಯನ್ನು ಆಧಾರಿಸಿ ಈ ಲೇಖನ ಬರೆಯಲಾಗಿದೆ. ಬೋಲ್ಡ್ ಸ್ಕೈ ಕನ್ನಡ ಇದಕ್ಕೆ ಜವಾಬ್ದಾರರಾಗಿ ಇರೋದಿಲ್ಲ. ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ತಜ್ಞರ ಮಾಹಿತಿ ಪಡೆಯೋದು ಉತ್ತಮ.



Click it and Unblock the Notifications