Latest Updates
-
ಮಧ್ಯಪ್ರದೇಶ UCC: ಲಿವ್-ಇನ್ ಜೋಡಿಗಳಿಗೆ ಕಡ್ಡಾಯ ನೋಂದಣಿ, ನಿಯಮ ಮೀರಿದರೆ ಕಾದಿದೆ ಸಂಕಷ್ಟ! -
ಹಾಲಿನಲ್ಲಿ ವಿಷಕಾರಿ ಕಲಬೆರಕೆ ಪತ್ತೆ: ನಿಮ್ಮ ಮನೆಯ ಹಾಲಿನ ಸುರಕ್ಷತೆ ಪರೀಕ್ಷಿಸುವುದು ಹೇಗೆ? -
ಬೆಂಗಳೂರಿನಲ್ಲಿ 12 ಗಂಟೆಗಳ ಕಾಲ ನೀರಿನ ಕಡಿತ: ನಾಳೆ ನೀರು ಉಳಿಸಲು ಈ ಟಿಪ್ಸ್ ಫಾಲೋ ಮಾಡಿ! -
ಮಳೆಗಾಲದಲ್ಲಿ ಜಿಮ್ಗೆ ಹೋಗಲು ಸಾಧ್ಯವಿಲ್ಲವೇ? ಮನೆಯಲ್ಲೇ ಫಿಟ್ ಆಗಿರಲು 8 ನಿಮಿಷದ ಈ ವರ್ಕೌಟ್ ಟ್ರೈ ಮಾಡಿ! -
ಮದುವೆಗೆ ಮುನ್ನ ಎಚ್ಚರ: ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ವರದಕ್ಷಿಣೆ ಮತ್ತು ಉಡುಗೊರೆಗಳ ನಡುವಿನ ವ್ಯತ್ಯಾಸವೇನು? -
ಬೆಂಗಳೂರಿನಲ್ಲಿ ಮಳೆ ಬಿಡುವು: ನಿಮ್ಮ ಬಾಲ್ಕನಿ ಗಾರ್ಡನ್ ಗಿಡಗಳನ್ನು ರಕ್ಷಿಸಲು ಈ ಸರಳ ಟಿಪ್ಸ್ ಪಾಲಿಸಿ -
ಟೊಮೆಟೊ, ಶುಂಠಿ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಉಳಿಸಲು ಇಲ್ಲಿದೆ ಸ್ಮಾರ್ಟ್ ಟಿಪ್ಸ್! -
2026ರಲ್ಲಿ ಚಿನ್ನದ ಆಭರಣ: ತೂಕದಲ್ಲಿ ಕಡಿಮೆ ಖರೀದಿ, ಖರ್ಚಿ ನಲ್ಲಿ ಹೆಚ್ಚು — ಕುಟುಂಬಗಳ ಖರೀ ದಿ ಹೇಗೆ ಬದಲಾಗುತ್ತಿದೆ? -
ನಥಿಂಗ್ ಫೋನ್ (4b) RCB ಎಡಿಷನ್ ಸೇಲ್ ಶುರು: ಫ್ಯಾನ್ಸ್ ಮಿಸ್ ಮಾಡ್ಬೇಡಿ, ಇಂದೇ ಖರೀದಿಸಿ! -
ಆಷಾಢ ಅಮಾವಾಸ್ಯೆ: ಉಪವಾಸದ ದಿನ ಸುಸ್ತಾಗದಂತೆ ಇರಲು ಈ 7 ನಿಮಿಷದ ವ್ಯಾಯಾಮ ಟ್ರೈ ಮಾಡಿ!
ಶ್ರಾವಣ ವಿನಾಯಕ ಚತುರ್ಥಿ 2023 : ಶುಭ ಮುಹೂರ್ತ, ಆಚರಣೆ ಹೇಗಿರಬೇಕು?
ಶ್ರಾವಣ ಮಾಸದ ಕೊನೆಯ ಗಣೇಶ ಚತುರ್ಥಿಯನ್ನು ಆಗಸ್ಟ್ 20 ರಂದು ಆಚರಣೆ ಮಾಡಲಾಗುತ್ತಿದೆ. ಪ್ರತಿ ತಿಂಗಳ ಚತುರ್ಥಿ ತಿಥಿಯಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಶುಕ್ಲ ಪಕ್ಷದ ಚತುರ್ಥಿಯನ್ನು ವಿನಾಯಕ ಚತುರ್ಥಿ ಎಂದು ಕರೆಯಲಾಗುತ್ತದೆ. ಮತ್ತು ಕೃಷ್ಣ ಪಕ್ಷದ ಚತುರ್ಥಿಯನ್ನು ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ.

ಶ್ರಾವಣ ಮಾಸದ ವಿನಾಯಕ ಚತುರ್ಥಿಯ ದಿನದಂದು ಉಪವಾಸ ಆಚರಿಸಲಾಗುತ್ತದೆ. ಮತ್ತು ಆ ದಿನ ಗಣೇಶನನ್ನು ಪೂಜಿಸಲಾಗುತ್ತದೆ. ಈ ದಿನದ ಗಣೇಶನಿಗಾಗಿ ಉಪವಾಸವನ್ನು ಮಾಡೋದ್ರಿಂದ ನಮ್ಮ ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ಹೆಚ್ಚಾಗುತ್ತಂತೆ. ಮತ್ತು ಗಣೇಶನು ಮನೆಯಲ್ಲಿ ಸಂಪತ್ತು ಮತ್ತು ಧಾನ್ಯಗಳಿಂದ ತುಂಬಿರುವಂತೆ ಆಶೀರ್ವದಿಸುತ್ತಾನಂತೆ. ಅಷ್ಟಕ್ಕೂ ಈ ಉಪವಾಸವನ್ನು ಯಾವಾಗ ಆಚರಣೆ ಮಾಡಲಾಗುತ್ತೆ? ಪೂಜಾ ಮಹತ್ವವೇನು? ಆಚರಣಾ ವಿಧಿ ಬಗ್ಗೆ ತಿಳಿದುಕೊಳ್ಳೋಣ.
ವಿನಾಯಕ ಚತುರ್ಥಿಯ ಶುಭ ಸಮಯ ಯಾವುದು?
ಪಂಚಾಂಗದ ಪ್ರಕಾರ ಆಗಸ್ಟ್ 19ರಂದು ರಾತ್ರಿ 10.19ಕ್ಕೆ ವಿನಾಯಕ ಚತುರ್ಥಿ ಆರಂಭವಾಗಲಿದೆ. ಇದು ಆಗಸ್ಟ್ 21 ರಂದು ರಾತ್ರಿ 12.21 ಕ್ಕೆ ಕೊನೆಗೊಳ್ಳುತ್ತದೆ. ಇನ್ನೂ ವಿನಾಯಕ ಚತುರ್ಥಿ ಉಪವಾಸವನ್ನು ಆಗಸ್ಟ್ 20 ರಂದು ಆಚರಿಸಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಗಣೇಶನ ಪೂಜೆಯನ್ನು ಮಧ್ಯಾಹ್ನದ ಸಮಯದಲ್ಲಿ ಮಾಡಲಾಗುತ್ತದೆ. ಆಗಸ್ಟ್ 20 ರಂದು ಬೆಳಿಗ್ಗೆ 11.26 ರಿಂದ ಮಧ್ಯಾಹ್ನ 1.58 ರವರೆಗೆ ಪೂಜೆಗೆ ಶುಭ ಮುಹೂರ್ತವಿರುತ್ತದೆ. ಈ ಸಮಯದಲ್ಲಿ ಪೂಜೆ ಮಾಡೋದ್ರಿಂದ ಒಳ್ಳೆಯದಾಗುತ್ತಂತೆ.
ಶ್ರಾವಣ ಚತುರ್ಥಿಯ ಮಹತ್ವವೇನು?
ಶ್ರಾವಣ ಮಾಸದಲ್ಲಿ ಶಿವನ ಜೊತೆಗೆ ಆತನ ಮಗ ಎಂದು ಕರೆಯಲ್ಪಡುವ ಗಣೇಶನ ಪೂಜೆಗೂ ವಿಶೇಷ ಪ್ರಾಮುಖ್ಯತೆ ಇದೆ. ಗಣೇಶನ ಆರಾಧನೆಯ ಸಂದರ್ಭದಲ್ಲಿ ದೇವರಿಗೆ ಗರಿಕೆಯನ್ನು ಅರ್ಪಿಸಿ. ಇದರ ಜೊತೆಗೆ ಮೋದಕ, ಲಡ್ಡೂಗಳನ್ನು ಅರ್ಪಿಸುವುದು ವಿಶೇಷ ಮಹತ್ವವನ್ನು ಹೊಂದಿದೆ.
ಶ್ರಾವಣ ವಿನಾಯಕ ಚತುರ್ಥಿಯ ಆಚರಣೆಗಳು ಹೇಗಿರುತ್ತೆ?
ಶ್ರಾವಣ ವಿನಾಯಕ ಚತುರ್ಥಿಯ ದಿನದಂದು ಮುಂಜಾನೆಯೇ ಸ್ನಾನ ಮಾಡಿ ವಿನಾಯಕನ ಸಂಕಲ್ಪ ಮಾಡಬೇಕು. ಆ ನಂತರ ಕೆಂಪು ಬಟ್ಟೆಯನ್ನು ಕೆಳಗೆ ಹಾಕಿ ಅದರ ಮೇಲೆ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಬೇಕು. ದೇವರಿಗೆ ಗರಿಕೆ, ಪುಷ್ಪ, ಪಂಚಮೇವ, ಪಂಚಾಮೃತ, ಅನ್ನವನ್ನು ಅರ್ಪಿಸಿ. ಇದರ ಜೊತೆಗೆ ಮೋದಕ ಮೋತಿಚೂರ್ ಲಡ್ಡುಗಳನ್ನು ಅರ್ಪಿಸಿ. ಮತ್ತು ನಂತರ ಗಣೇಶನ ಮಂತ್ರಗಳೊಂದಿಗೆ ಆರತಿ ಮಾಡಿ. ನಂತರ ಪ್ರಸಾದವನ್ನು ಎಲ್ಲರಿಗೂ ವಿತರಣೆ ಮಾಡಿ.



Click it and Unblock the Notifications