Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಶ್ರಾವಣ ವಿನಾಯಕ ಚತುರ್ಥಿ 2023 : ಶುಭ ಮುಹೂರ್ತ, ಆಚರಣೆ ಹೇಗಿರಬೇಕು?
ಶ್ರಾವಣ ಮಾಸದ ಕೊನೆಯ ಗಣೇಶ ಚತುರ್ಥಿಯನ್ನು ಆಗಸ್ಟ್ 20 ರಂದು ಆಚರಣೆ ಮಾಡಲಾಗುತ್ತಿದೆ. ಪ್ರತಿ ತಿಂಗಳ ಚತುರ್ಥಿ ತಿಥಿಯಂದು ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತದೆ. ಶುಕ್ಲ ಪಕ್ಷದ ಚತುರ್ಥಿಯನ್ನು ವಿನಾಯಕ ಚತುರ್ಥಿ ಎಂದು ಕರೆಯಲಾಗುತ್ತದೆ. ಮತ್ತು ಕೃಷ್ಣ ಪಕ್ಷದ ಚತುರ್ಥಿಯನ್ನು ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ.

ಶ್ರಾವಣ ಮಾಸದ ವಿನಾಯಕ ಚತುರ್ಥಿಯ ದಿನದಂದು ಉಪವಾಸ ಆಚರಿಸಲಾಗುತ್ತದೆ. ಮತ್ತು ಆ ದಿನ ಗಣೇಶನನ್ನು ಪೂಜಿಸಲಾಗುತ್ತದೆ. ಈ ದಿನದ ಗಣೇಶನಿಗಾಗಿ ಉಪವಾಸವನ್ನು ಮಾಡೋದ್ರಿಂದ ನಮ್ಮ ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ಹೆಚ್ಚಾಗುತ್ತಂತೆ. ಮತ್ತು ಗಣೇಶನು ಮನೆಯಲ್ಲಿ ಸಂಪತ್ತು ಮತ್ತು ಧಾನ್ಯಗಳಿಂದ ತುಂಬಿರುವಂತೆ ಆಶೀರ್ವದಿಸುತ್ತಾನಂತೆ. ಅಷ್ಟಕ್ಕೂ ಈ ಉಪವಾಸವನ್ನು ಯಾವಾಗ ಆಚರಣೆ ಮಾಡಲಾಗುತ್ತೆ? ಪೂಜಾ ಮಹತ್ವವೇನು? ಆಚರಣಾ ವಿಧಿ ಬಗ್ಗೆ ತಿಳಿದುಕೊಳ್ಳೋಣ.
ವಿನಾಯಕ ಚತುರ್ಥಿಯ ಶುಭ ಸಮಯ ಯಾವುದು?
ಪಂಚಾಂಗದ ಪ್ರಕಾರ ಆಗಸ್ಟ್ 19ರಂದು ರಾತ್ರಿ 10.19ಕ್ಕೆ ವಿನಾಯಕ ಚತುರ್ಥಿ ಆರಂಭವಾಗಲಿದೆ. ಇದು ಆಗಸ್ಟ್ 21 ರಂದು ರಾತ್ರಿ 12.21 ಕ್ಕೆ ಕೊನೆಗೊಳ್ಳುತ್ತದೆ. ಇನ್ನೂ ವಿನಾಯಕ ಚತುರ್ಥಿ ಉಪವಾಸವನ್ನು ಆಗಸ್ಟ್ 20 ರಂದು ಆಚರಿಸಲಾಗುತ್ತದೆ. ಶಾಸ್ತ್ರಗಳ ಪ್ರಕಾರ ಗಣೇಶನ ಪೂಜೆಯನ್ನು ಮಧ್ಯಾಹ್ನದ ಸಮಯದಲ್ಲಿ ಮಾಡಲಾಗುತ್ತದೆ. ಆಗಸ್ಟ್ 20 ರಂದು ಬೆಳಿಗ್ಗೆ 11.26 ರಿಂದ ಮಧ್ಯಾಹ್ನ 1.58 ರವರೆಗೆ ಪೂಜೆಗೆ ಶುಭ ಮುಹೂರ್ತವಿರುತ್ತದೆ. ಈ ಸಮಯದಲ್ಲಿ ಪೂಜೆ ಮಾಡೋದ್ರಿಂದ ಒಳ್ಳೆಯದಾಗುತ್ತಂತೆ.
ಶ್ರಾವಣ ಚತುರ್ಥಿಯ ಮಹತ್ವವೇನು?
ಶ್ರಾವಣ ಮಾಸದಲ್ಲಿ ಶಿವನ ಜೊತೆಗೆ ಆತನ ಮಗ ಎಂದು ಕರೆಯಲ್ಪಡುವ ಗಣೇಶನ ಪೂಜೆಗೂ ವಿಶೇಷ ಪ್ರಾಮುಖ್ಯತೆ ಇದೆ. ಗಣೇಶನ ಆರಾಧನೆಯ ಸಂದರ್ಭದಲ್ಲಿ ದೇವರಿಗೆ ಗರಿಕೆಯನ್ನು ಅರ್ಪಿಸಿ. ಇದರ ಜೊತೆಗೆ ಮೋದಕ, ಲಡ್ಡೂಗಳನ್ನು ಅರ್ಪಿಸುವುದು ವಿಶೇಷ ಮಹತ್ವವನ್ನು ಹೊಂದಿದೆ.
ಶ್ರಾವಣ ವಿನಾಯಕ ಚತುರ್ಥಿಯ ಆಚರಣೆಗಳು ಹೇಗಿರುತ್ತೆ?
ಶ್ರಾವಣ ವಿನಾಯಕ ಚತುರ್ಥಿಯ ದಿನದಂದು ಮುಂಜಾನೆಯೇ ಸ್ನಾನ ಮಾಡಿ ವಿನಾಯಕನ ಸಂಕಲ್ಪ ಮಾಡಬೇಕು. ಆ ನಂತರ ಕೆಂಪು ಬಟ್ಟೆಯನ್ನು ಕೆಳಗೆ ಹಾಕಿ ಅದರ ಮೇಲೆ ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಬೇಕು. ದೇವರಿಗೆ ಗರಿಕೆ, ಪುಷ್ಪ, ಪಂಚಮೇವ, ಪಂಚಾಮೃತ, ಅನ್ನವನ್ನು ಅರ್ಪಿಸಿ. ಇದರ ಜೊತೆಗೆ ಮೋದಕ ಮೋತಿಚೂರ್ ಲಡ್ಡುಗಳನ್ನು ಅರ್ಪಿಸಿ. ಮತ್ತು ನಂತರ ಗಣೇಶನ ಮಂತ್ರಗಳೊಂದಿಗೆ ಆರತಿ ಮಾಡಿ. ನಂತರ ಪ್ರಸಾದವನ್ನು ಎಲ್ಲರಿಗೂ ವಿತರಣೆ ಮಾಡಿ.



Click it and Unblock the Notifications