Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಶುಕ್ರ ಗೋಚರ : ಈ 4 ರಾಶಿಯವರಿಗೆ 57 ದಿನಗಳ ಕಾಲ ಸಂಕಷ್ಟ!
ಆಗಸ್ಟ್ 7 ರಂದು ಬೆಳಿಗ್ಗೆ 10.37 ಕ್ಕೆ ಶುಕ್ರ ಗ್ರಹವು ಕರ್ಕ ರಾಶಿಯಲ್ಲಿ ಹಿಮ್ಮುಖವಾಗಿ ಸಾಗಲಿದೆ. ಅಕ್ಟೋಬರ್ 1 ರ ಭಾನುವಾರದವರೆಗೆ ಶುಕ್ರನು ಕರ್ಕ ರಾಶಿಯಲ್ಲಿ ಇರುತ್ತಾನೆ. ಅಕ್ಟೋಬರ್ 2 ರಂದು ಮುಂಜಾನೆ 01:18 ಕ್ಕೆ ಕರ್ಕಾಟಕವನ್ನು ಬಿಟ್ಟು ಸಿಂಹ ರಾಶಿಯನ್ನು ಪ್ರವೇಶಿಸುತ್ತದೆ. ಹೀಗಾಗಿ ಶುಕ್ರನು ಕರ್ಕಾಟಕ ರಾಶಿಯಲ್ಲಿ 57 ದಿನಗಳ ಕಾಲ ಇರುತ್ತಾನೆ. ಆಗಸ್ಟ್ 3 ರಿಂದ ಆಗಸ್ಟ್ 19 ರವರೆಗೆ ಶುಕ್ರ ಗ್ರಹವು ಬೆಳಿಗ್ಗೆ 05:21 ರವರೆಗೆ ಅಸ್ತಮಿಸಲಿದೆ. ಮತ್ತು ನಂತರ ಅದು ಉದಯಿಸುತ್ತದೆ.

ಹೀಗಾಗಿ 4 ರಾಶಿಯವರು ಕರ್ಕಾಟಕದಲ್ಲಿ ಶುಕ್ರನ ಸಂಚಾರದಿಂದಾಗಿ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಾರೆ. ಹೀಗಾಗಿ ಅವರು ಹಣದ ನಷ್ಟ, ಆರ್ಥಿಕ ಬಿಕ್ಕಟ್ಟು, ಸೌಕರ್ಯಗಳ ಕೊರತೆ ಮತ್ತು ಸಂಬಂಧಗಳಲ್ಲಿ ಕಹಿಯನ್ನು ಎದುರಿಸಬೇಕಾಗುತ್ತದೆ. ಅಷ್ಟಕ್ಕೂ ಕರ್ಕಾಟಕ ರಾಶಿಯಲ್ಲಿ ಶುಕ್ರ ಸಂಚಾರದಿಂದ ಯಾವ ನಾಲ್ಕು ರಾಶಿಯವರಿಗೆ ಆರೋಗ್ಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ತೊಂದರೆ ಉಂಟಾಗಲಿದೆ. ಆ ನಾಲ್ಕು ರಾಶಿಯವರು ಯಾರು ಅನ್ನೋದನ್ನು ತಿಳಿಯೋಣ.
ಕರ್ಕಾಟಕ ರಾಶಿ
ಶುಕ್ರನು ನಿಮ್ಮ ರಾಶಿಯಲ್ಲಿ ಹಿಮ್ಮುಖ ಸ್ಥಿತಿಯಲ್ಲಿ ಸಾಗುತ್ತಿದ್ದಾನೆ. ಹೀಗಾಗಿ ಇದರ ನೇರ ಪರಿಣಾಮ ನಿಮ್ಮ ಮೇಲೆ ಆಗಲಿದೆ. ಈ ಸಮಯದಲ್ಲಿ ನೀವು ಆರ್ಥಿಕ ನಷ್ಟವನ್ನು ಅನುಭವಿಸುವ ಕಾರಣ ಜಾಗರೂಕರಾಗಿರಬೇಕು. ಇದು ನಿಮ್ಮ ಆರ್ಥಿಕ ಸ್ಥಿತಿಯನ್ನು ದುರ್ಬಲಗೊಳಿಸುತ್ತದೆ. ಹೀಗಾಗಿ ಈ ಸಮಯದಲ್ಲಿ ನೀವು ಖರ್ಚು ವೆಚ್ಚಗಳನ್ನು ನಿಯಂತ್ರಿಸಬೇಕು. ವೈವಾಹಿಕ ಜೀವನದಲ್ಲಿ ಕಹಿ ಉಂಟಾಗಬಹುದು. ಇದರಿಂದಾಗಿ ನಿಮ್ಮ ಕೌಟುಂಬಿಕ ಜೀವನವು ಒತ್ತಡದಿಂದ ಕೂಡಿರುತ್ತದೆ. ಆತುರದ ಯಾವುದೇ ನಿರ್ಧಾರವು ಹಾನಿಕಾರಕವಾಗಬಹುದು.
ಸಿಂಹ ರಾಶಿ
ಶುಕ್ರನ ಸಂಕ್ರಮವು ಸಿಂಹ ರಾಶಿಯವರ ಜೀವನದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು. ನಿಮಗೆ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿ ಉಂಟಾಗಬಹುದು. ಹಣದ ಕೊರತೆಯು ಒತ್ತಡವನ್ನು ಉಂಟುಮಾಡಬಹುದು. ಏಕೆಂದರೆ ಅತಿಯಾದ ಖರ್ಚುಗಳು ನಿಮ್ಮನ್ನು ಕಾಡಬಹುದು. ಈ ಸಮಯದಲ್ಲಿ ನೀವು ವ್ಯರ್ಥ ಖರ್ಚುಗಳನ್ನು ನಿಲ್ಲಿಸಬೇಕು. ಇತರರ ಸಲಹೆಯ ಮೇರೆಗೆ ಹೂಡಿಕೆ ಮಾಡುವ ಮೂಲಕ ನೀವು ಬಲೆಗೆ ಬೀಳಬಹುದು. ಹೂಡಿಕೆ ಮಾಡುವ ಮೊದಲು ಚೆನ್ನಾಗಿ ಯೋಚಿಸಿ. ಮತ್ತು ಅರ್ಥಮಾಡಿಕೊಳ್ಳಿ. ನೀವು ಈಗ ಹೂಡಿಕೆ ಮಾಡದಿದ್ದರೆ ಉತ್ತಮ.
ಕನ್ಯಾ ರಾಶಿ
ಶುಕ್ರನ ಸಂಚಾರದಿಂದಾಗಿ ನಿಮ್ಮ ರಾಶಿಯವರು ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಯದಲ್ಲಿ ನೀವು ಯಾವ ರೀತಿ ವರ್ತಿಸುತ್ತೀರಿ ಅನ್ನೋದು ಮುಖ್ಯವಾಗುತ್ತದೆ. ನಿಮ್ಮ ಮಾತು, ನಡವಳಿಕೆ ಮತ್ತು ಕೋಪವನ್ನು ನಿಯಂತ್ರಿಸಿಕೊಳ್ಳಿ. ಇಲ್ಲದಿದ್ದರೆ ಮಾಡುವ ಕೆಲಸವು ಹಾಳಾಗಬಹುದು. ಶಿಕ್ಷಣ ಸ್ಪರ್ಧೆಗೆ ಸಂಬಂಧಿಸಿದ ಜನರು ಕಠಿಣ ಸಮಯವನ್ನು ಹೊಂದಬಹುದು. ಕೆಂದರೆ ಕೆಲವು ಸವಾಲುಗಳು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಈ ಸಮಯದಲ್ಲಿ ನೀವು ಹಣದ ಕೊರತೆ ಅನುಭವಿಸಬೇಕಾಗುತ್ತದೆ. ನಿಮ್ಮ ವೃತ್ತಿಯ ಬಗ್ಗೆ ಜಾಗರೂಕರಾಗಿರಿ. ನಿಮಗೆ ಹಾನಿ ಮಾಡುವ ಯಾವುದೇ ಕೆಲಸವನ್ನು ಮಾಡಬೇಡಿ.
ಕುಂಭ ರಾಶಿ
ಶುಕ್ರನ ಸಂಚಾರವು ನಿಮ್ಮ ಆರ್ಥಿಕ ಸ್ಥಿತಿಯ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು. ಹೆಚ್ಚುತ್ತಿರುವ ಖರ್ಚುಗಳು ನಿಮ್ಮನ್ನು ಕಾಡಬಹುದು. ಈ ಸಮಯದಲ್ಲಿ ನೀವು ವೈದ್ಯಕೀಯ ಸೌಲಭ್ಯಗಳಿಗಾಗಿ ಹೆಚ್ಚಿನ ಹಣವನ್ನು ಖರ್ಚು ಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ ನಿಮ್ಮ ಮತ್ತು ನಿಮ್ಮ ಕುಟುಂಬದ ಆರೋಗ್ಯವನ್ನು ನೀವು ಕಾಳಜಿ ವಹಿಸಬೇಕು. ಆರೋಗ್ಯದಲ್ಲಿ ಕ್ಷೀಣತೆ ಉಂಟಾಗಬಹುದು. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಸಹ ಜಾಗರೂಕರಾಗಿರಬೇಕು. ಲಾಭದ ಕೊರತೆಯನ್ನು ನಿಭಾಯಿಸುವುದು ದೊಡ್ಡ ಸವಾಲಾಗಿದೆ.



Click it and Unblock the Notifications
