Latest Updates
-
ಬಿಸಿಗಾಳಿಯ ಅಬ್ಬರ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ! -
ಹೊಸ ಜೀವನ ಆರಂಭಿಸುವ ಮುನ್ನ ಎಚ್ಚರ: ವಿಚ್ಛೇದನ ಮತ್ತು ಕಾನೂನು ಹಕ್ಕುಗಳ ಬಗ್ಗೆ ಹೈಕೋರ್ಟ್ ಹೇಳಿದ್ದೇನು? -
ಬಿರುಗಾಳಿ ಮತ್ತು ಬಿಸಿಲ ಬೇಗೆ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ನಿಮ್ಮ ಜೀವ ಉಳಿಸುವ ಸರಳ ಮನೆಮದ್ದುಗಳಿವು! -
ಬಿಸಿಲಿನ ಬೇಗೆಗೆ ತತ್ತರಿಸಿದ್ದೀರಾ? ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಕೂಲಿಂಗ್ ಹ್ಯಾಕ್ಸ್ ಮಿಸ್ ಮಾಡ್ಬೇಡಿ! -
ಬದಲಾಗುತ್ತಿರುವ ಹವಾಮಾನ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಕಾದಿದೆ ಅಪಾಯ! -
ವಾಟ್ಸಾಪ್ನಲ್ಲಿ ಪ್ರೀತಿಯ ಬಲೆ: ನಿಮ್ಮ ಖಾತೆ ಖಾಲಿಯಾಗುವ ಮುನ್ನ ಈ ಎಚ್ಚರಿಕೆ ವಹಿಸಿ! -
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಬೇಸಿಗೆಯ ಧಗೆಗೆ ಸುಸ್ತಾಗಿದ್ದೀರಾ? ಈ ಸಾಂಪ್ರದಾಯಿಕ ಆಹಾರಗಳಿದ್ದರೆ ಬಿಸಿಲು ನಿಮ್ಮನ್ನೇನೂ ಮಾಡಲ್ಲ! -
ಅಂತರಾಷ್ಟ್ರೀಯ ನೃತ್ಯ ದಿನ: ಸೋಶಿಯಲ್ ಮೀಡಿಯಾದಲ್ಲಿ ಡ್ಯಾನ್ಸ್ ಅಬ್ಬರ, ನೀವು ಮಿಸ್ ಮಾಡ್ಬೇಡಿ!
ಶುಕ್ರ-ಮಂಗಳ ಯುತಿ 2023: ಈ 4 ರಾಶಿಯವರ ಅದೃಷ್ಟ ಖುಲಾಯಿಸಲಿದೆ
ವೈದಿಕ ಜ್ಯೋತಿಷ್ಯದ ಪ್ರಕಾರ ಒಂದು ಗ್ರಹವು ತನ್ನ ರಾಶಿಯನ್ನು ಬದಲಾಯಿಸುವಾಗ ಅದರ ಪರಿಣಾಮವು ಎಲ್ಲಾ ರಾಶಿಗಳ ಮೇಲೆ ಸ್ಪಷ್ಟವಾಗಿ ಗೋಚರವಾಗಲಿದೆ. ಇದರ ಪರಿಣಾಮ ಕೆಲವೊಂದು ರಾಶಿಗಳಿಗೆ ಶುಭವಾದರೆ ಮತ್ತೂ ಕೆಲವು ರಾಶಿಗಳಿಗೆ ಅಶುಭವಾಗಲಿದೆ. ಈ ತಿಂಗಳ ಕೊನೆಯ ಸಂಚಾರವು ಮೇ 30 ರ ರಾತ್ರಿ ಸಂಭವಿಸಲಿದೆ. ಈ ದಿನ ಶುಕ್ರನು ಕರ್ಕಾಟಕ ರಾಶಿಯಲ್ಲಿ ಸಾಗಲಿದ್ದಾನೆ. ರಾತ್ರಿ 7.39ಕ್ಕೆ ಚಂದ್ರ ಕರ್ಕಾಟಕ ರಾಶಿಯಲ್ಲಿ ಈ ಸಂಕ್ರಮಣ ನಡೆಯಲಿದೆ.
ಶುಕ್ರನು ಮೇ 30 ರಂದು ಈ ರಾಶಿಗೆ ಆಗಮಿಸಲಿದ್ದು ಜುಲೈ 7 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ. ಈ ಸಮಯದಲ್ಲಿ ಮಂಗಳ ಮತ್ತು ಶುಕ್ರನ ಸಂಯೋಜನೆಯಿಂದ ಅನೇಕ ರಾಶಿಯವರಿಗೆ ಇದರಿಂದ ಶುಭವಾಗಲಿದೆ. ಅಷ್ಟಕ್ಕೂ ಈ ಸಮಯವು ಯಾವ ರಾಶಿಯವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ ಅನ್ನೋದನ್ನು ತಿಳಿದುಕೊಳ್ಳೋಣ.

ಮೇಷ ರಾಶಿ
ಶುಕ್ರ ಮತ್ತು ಮಂಗಳನ ಸಂಯೋಜನೆಯಿಂದ ಮೇಷ ರಾಶಿಯವರಿಗೆ ಈ ಸಮಯದಲ್ಲಿ ಎಲ್ಲವೂ ಒಳ್ಳೆಯದಾಗಲಿದೆ. ಮೇಷ ರಾಶಿಯವರು ಕುಟುಂಬದ ಸೌಲಭ್ಯಗಳ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕು. ಇಷ್ಟು ಮಾತ್ರವಲ್ಲದೆ ಮನೆಯವರಿಗಾಗಿ ಕೆಲವೊಂದು ವಸ್ತುಗಳನ್ನು ಖರೀದಿಸಬೇಕಾಗುತ್ತದೆ. ಇನ್ನೂ ಅವಿವಾಹಿತರಿಗೆ ಮದುವೆಯಾಗೋ ಭಾಗ್ಯವಿದೆ. ಇಷ್ಟು ದಿನ ನಿಮಗೆ ಸಿಗದಿರೋ ಹಣವನ್ನು ನೀವು ಮರಳಿ ಪಡೆಯಬಹುದು. ಈ ಸಮಯದಲ್ಲಿ ನೀವು ಯಾವುದೇ ರೀತಿಯ ಒತ್ತಡವನ್ನು ಹೊಂದಿರುವುದಿಲ್ಲ. ಆರ್ಥಿಕ ಲಾಭದ ಎಲ್ಲಾ ಸಾಧ್ಯತೆಗಳೂ ಇವೆ.
ಮಿಥುನ ರಾಶಿ
ಶುಕ್ರ ಹಾಗೂ ಮಂಗಳನ ಯುತಿಯಿಂದಾಗಿ ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗುತ್ತದೆ. ಒರ್ವ ವ್ಯಕ್ತಿಯ ಕೌಟುಂಬಿಕ ಸಂತೋಷದಲ್ಲಿ ಹೆಚ್ಚಳವಾಗುತ್ತದೆ. ವೃತ್ತಿಯಲ್ಲಿ ಪ್ರಗತಿಯ ಹೊಸ ಮಾರ್ಗಗಳು ತೆರೆದುಕೊಳ್ಳುತ್ತವೆ. ನೀವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ ಈ ಸಮಯದಲ್ಲಿ ನೀವು ಯಶಸ್ಸನ್ನು ಪಡೆಯಬಹುದು. ಆದಾಯದ ಹೆಚ್ಚಳವು ನಿಮ್ಮ ಜೀವನಶೈಲಿಯನ್ನು ಸುಧಾರಿಸುತ್ತದೆ.
ಕರ್ಕಾಟಕ ರಾಶಿ
ಶುಕ್ರ ಮತ್ತು ಮಂಗಳನ ಸಂಯೋಗವು ಕರ್ಕಾಟಕ ರಾಶಿಯವರಿಗೆ ಅನುಕೂಲಕರ ಫಲಿತಾಂಶಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಜೀವನದಲ್ಲಿ ಅನೇಕ ಶುಭ ಘಟನೆಗಳು ನಡೆಯಲಿದೆ. ಅಷ್ಟೇ ಅಲ್ಲ ನೀವು ಪ್ರೀತಿಸಿದವರೊಂದಿಗೆ ನಿಮ್ಮ ಬಾಂಧವ್ಯ ಉತ್ತಮವಾಗುತ್ತದೆ. ಸಂಗಾತಿಯೊಂದಿಗೆ ಉತ್ತಮ ಸಂಬಂಧವಿರುತ್ತದೆ. ಉದ್ಯೋಗದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ನಿಮ್ಮ ಸಂಬಂಧವು ಬಲವಾಗಿರುತ್ತದೆ. ಭವಿಷ್ಯದಲ್ಲಿ ನಿಮ್ಮ ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ.
ಕನ್ಯಾರಾಶಿ
ಕನ್ಯಾ ರಾಶಿಯವರಿಗೆ ಶುಕ್ರ ಮತ್ತು ಮಂಗಳ ಸಂಯೋಜನೆಯು ವಿಶೇಷವಾಗಿ ಮಂಗಳಕರ ಮತ್ತು ಫಲದಾಯಕವಾಗಿರುತ್ತದೆ. ಈ ರಾಶಿಯವರು ಆರ್ಥಿಕ ಪ್ರಗತಿ ಸಾಧಿಸುತ್ತಾರೆ. ಅವಿವಾಹಿತರ ಹುಡುಗಿ/ಹುಡುಗ ಹುಡುಕಾಟ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ಅಷ್ಟೇ ಅಲ್ಲ ಕಷ್ಟ ಕಾಲದಲ್ಲಿ ಸಹೋದರ ಸಹೋದರಿಯರ ಸಹಕಾರ ದೊರೆಯಲಿದೆ.



Click it and Unblock the Notifications