Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಯುಗಾದಿಯ ಮಹತ್ವ, ಹಬ್ಬದ ಶುಭಗಳಿಗೆ, ರಾಹುಕಾಲದ ಮಾಹಿತಿ ಇಲ್ಲಿದೆ..!
ಭಾರತೀಯರಿಗೆ ಯುಗಾದಿಯಿಂದ ಹೊಸ ವರ್ಷ ಆರಂಭವಾಗುವುದು ಎನ್ನುವ ನಂಬಿಕೆಯಿದೆ. ಯುಗಾದಿಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ರೀತಿಯಿಂದ ಆಚರಿಸುವರು. ಒಂದು ಚಾಂದ್ರಮಾನ ಯುಗಾದಿ ಮತ್ತೊಂದು ಸೂರ್ಯಮಾನ ಯುಗಾದಿ ಎನ್ನುವುದು.
ಈ ವರ್ಷ ಚಾಂದ್ರಮಾನ ಯುಗಾದಿಯು ಚೈತ್ರ ಮಾಸದ ಮೊದಲ ದಿನ, ಇಂಗ್ಲಿಷ್ ಕ್ಯಾಲೆಂಡರ್ ಪ್ರಕಾರ ಎಪ್ರಿಲ್ 9ಕ್ಕೆ ಬಂದಿದೆ. ಹಿಂದೂಗಳ ಪಾಲಿನ ಪ್ರಮುಖ ಹಬ್ಬ ಇದಾಗಿದ್ದು, ಪ್ರತಿಯೊಂದು ಕಡೆಗಳಲ್ಲೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಯುಗಾದಿ ಅಥವಾ ಉಗಾದಿಯು ಹಿಂದೂ ಪಂಚಾಂಗದ ಹೊಸ ವರ್ಷ ಎಂದು ಆಚರಿಸಲಾಗುತ್ತದೆ ಮತ್ತು ಇದು ದಕ್ಷಿಣ ಭಾರತದ ರಾಜ್ಯಗಳಾಗಿರುವಂತಹ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ತುಂಬಾ ಜನಪ್ರಿಯ ಹಬ್ಬ. ಮಹಾರಾಷ್ಟ್ರದಲ್ಲಿ ಇದು ಗುಡಿ ಪಡ್ವ ಎಂದು ಮತ್ತು ಪಶ್ಚಿಮ ಬಂಗಾಳದಲ್ಲಿ ನೊಬೊ ಬೊರ್ಸೊ ಎಂದು ಕರೆಯುವರು. ಆದರೆ ಎಲ್ಲಾ ಕಡೆಗಳಲ್ಲೂ ಬಹುಪಾಲು ಒಂದೇ ರೀತಿ ಆಚರಣೆ ರೂಢಿಯಲ್ಲಿದೆ.

ಯುಗಾದಿಯು ಹೆಚ್ಚಾಗಿ ಚೈತ್ರಾ ಶುಕ್ಲ ಪ್ರತಿಪಾದದಲ್ಲಿ ಆಚರಿಸಲಾಗುತ್ತದೆ. ಯುಗಾದಿಯ ಬಗ್ಗೆ ಒಂದು ಆದ್ಯಾತ್ಮಿಕವಾದ ಕಥೆಯು ಇದೆ. ಬ್ರಹ್ಮ ದೇವರು ಈ ದಿನವೇ ಭೂಮಿ ಮೇಲೆ ಜೀವಿಗಳನ್ನು ಸೃಷ್ಟಿಸಲು ಆರಂಭಿಸಿದರು. ಈ ದಿನವನ್ನು ಯುಗಾದಿ ಎಂದು ಆಚರಿಸಲಾಗುತ್ತದೆ. ಈ ದಿನದಂದು ಬ್ರಹ್ಮ ದೇವರಿಗೆ ಗೌರವ ಸಲ್ಲಿಸುವ ಕಾರಣಕ್ಕಾಗಿ ಬ್ರಹ್ಮ ಪೂಜೆ ಕೂಡ ಮಾಡಲಾಗುತ್ತದೆ.
ಯುಗಾದಿ ಆಚರಣೆಯ ವಿಧಾನವೇನು?
ಈ ದಿನದಂದು ಸೂರ್ಯೋದಯದ ಮೊದಲು ಎದ್ದು ಸ್ನಾನ ಮಾಡಿದ ಬಳಿಕ ದೇವರ ಸ್ತೋತ್ರ ಜಪಿಸಲಾಗುತ್ತದೆ. ಈ ವೇಳೆಯಲ್ಲಿ ಕೆಲವು ಕಡೆ ಎಣ್ಣೆ ಸ್ನಾನ ಮಾಡಲಾಗುತ್ತದೆ, ತೈಲಅಭ್ಯಂಗನ ಸ್ನಾನಂ'' ಎಂದು ಹೇಳಲಾಗುತ್ತದೆ. ಎಣ್ಣೆ ಹಚ್ಚಿಕೊಂಡು ಈ ದಿನ ಸ್ನಾನ ಮಾಡಿದರೆ, ತುಂಬಾ ಪವಿತ್ರ ಎಂದು ಪರಿಗಣಿಸಲಾಗಿದೆ. ಈ ದಿನ ದೇವರ ಮೂರ್ತಿಗಳಿಗೂ ನೀರಿನಿಂದ ಅಭಿಷೇಕ ಮಾಡಿ ಶುದ್ಧೀಕರಿಸಬೇಕು. ಮೂರ್ತಿಗಳನ್ನು ತೊಳೆದು, ದೇವರ ಕೋಣೆ ಸ್ವಚ್ಛ ಮಾಡಿದ ಬಳಿಕ ಹೊಸ ಬಟ್ಟೆಗಳನ್ನು ಧರಿಸಿ, ಪ್ರಸಾದವನ್ನು ಇಟ್ಟು ಪೂಜೆ ಮಾಡಬೇಕು. ಪೂಜೆಗಾಗಿ ವಿಶೇಷವಾಗಿ ಬೇವು ಬೆಲ್ಲ ಅಥವಾ ಯುಗಾದಿ ಪಚಡಿಯನ್ನು ಇಡಬೇಕು. ಬಳಿಕ ಊಟದ ಜೊತೆ ಇದನ್ನು ಪ್ರಸಾದದಂತೆ ಸೇವಿಸಬಹುದು.
ಬೇವು ಬೆಲ್ಲ ಅಥವಾ ಯುಗಾದಿ ಪಚಡಿ
ಈ ವಿಶೇಷ ಪ್ರಸಾದವನ್ನು ಯುಗಾದಿ ಸಂದರ್ಭದಲ್ಲಿ ತಯಾರಿಸಲಾಗುತ್ತದೆ. ಇದು ಸಿಹಿಯಾಗಿ ಇರುವುದಿಲ್ಲ. ಬದಲಿಗೆ ಇದು ಸಿಹಿ ಮತ್ತು ಸ್ವಲ್ಪ ಕಹಿಯಾಗಿ ಇರುವುದು. ಯಾಕೆಂದರೆ ಇದನ್ನು ಆರು ವಿಭಿನ್ನ ಸಾಮಗ್ರಿಗಳನ್ನು ಬಳಸಿಕೊಂಡು ತಯಾರಿಸಲಾಗುತ್ತದೆ. ಇದರಲ್ಲಿ ಮುಖ್ಯವಾಗಿ ಬೇವಿನ ಎಲೆಗಳು, ಬೆಲ್ಲ, ಮೆಣಸು, ಬಲಿಯದ ಮಾವಿನ ಹಣ್ಣು, ಉಪ್ಪು ಮತ್ತು ಹುಳಿ ಹಾಕಿಕೊಂಡು ತಯಾರಿಸಲಾಗುತ್ತದೆ. ಯುಗಾದಿ ಪ್ರಸಾದವು ಒಬ್ಬರ ಜೀವನದಲ್ಲಿ ತುಂಬಾ ಮಹತ್ವ ಪಡೆದುಕೊಂಡಿರುವುದು. ಇದು ಪ್ರತಿಯೊಬ್ಬರ ಜೀವನದಲ್ಲಿ ಬರುವ ಏಳು ಬೀಳುಗಳನ್ನು ಬಿಂಬಿಸುವುದು. ಯಾಕೆಂದರೆ ಈ ಪ್ರಸಾದದಲ್ಲಿ ಕಹಿ ಹಾಗೂ ಸಿಹಿ ಎರಡೂ ಇದೆ. ಇದರಿಂದ ಜೀವನದಲ್ಲಿ ಕೂಡ ಸಿಹಿ ಹಾಗೂ ಕಹಿ ಎರಡು ನಮಗೆ ಸಿಗುವುದು ಎಂದು ಹೇಳಲಾಗುತ್ತದೆ.
ಯುಗಾದಿ ಹಬ್ಬದ ಘಳಿಗೆ ಯಾವುದು?
ಪ್ರತಿಪದಾ ಆರಂಭ: ಎಪ್ರಿಲ್ 8, ರಾತ್ರಿ 11:52ಕ್ಕೆ
ಪ್ರತಿಪದಾ ಅಂತ್ಯ: ಎಪ್ರಿಲ್ 9, ರಾತ್ರಿ 08:33ಕ್ಕೆ
ಯುಗಾದಿಯಂದು ರಾಹುಕಾಲ, ಶುಭ ಕಾಲ ಯಾವಾಗ?
ರಾಹುಕಾಲ- 3 ಗಂಟೆಯಿಂದ 4:30
ಗುಳಿಕ ಕಾಲ- ಬೆಳಗ್ಗೆ 10:30 ರಿಂದ 12 ಗಂಟೆ



Click it and Unblock the Notifications