Latest Updates
-
ಬಿಸಿಲಿನಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ 5 ಬದಲಾವಣೆಗಳನ್ನು ಮರೆಯಬೇಡಿ! -
ದೆಹಲಿ ಧೂಳಿನ ಬಿರುಗಾಳಿ: ನಿಮ್ಮ ಮನೆ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 500 ರೂಪಾಯಿಯ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ತಾಪಕ್ಕೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಬದಲಾವಣೆ ನಿಮ್ಮನ್ನು ಹೀಟ್ಸ್ಟ್ರೋಕ್ನಿಂದ ರಕ್ಷಿಸುತ್ತದೆ! -
ರೆಡ್ ಕಾರ್ಪೆಟ್ನಿಂದ ನಿಮ್ಮ ವಾರ್ಡ್ರೋಬ್ಗೆ: ಕಾನ್ 2026ರ ಈ ಫ್ಯಾಷನ್ ಟ್ರೆಂಡ್ಸ್ ಈಗ ಸಿಕ್ಕಾಪಟ್ಟೆ ವೈರಲ್! -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರ! -
ಬಿಸಿಲ ಬೇಗೆಯಲ್ಲಿ ಮದುವೆ ಸಂಭ್ರಮ ಹಾಳಾಗದಿರಲಿ: ಅತಿಥಿಗಳ ಆರೋಗ್ಯ ಕಾಪಾಡಲು ಇಲ್ಲಿವೆ ಸೀಕ್ರೆಟ್ ಟಿಪ್ಸ್! -
ಬಿಸಿಗಾಳಿಯ ಆರ್ಭಟ: ಮನೆಯನ್ನು ತಂಪಾಗಿಡಲು ಮತ್ತು ಆರೋಗ್ಯ ಕಾಪಾಡಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ರೆಡ್ ಅಲರ್ಟ್: ಆಯುಷ್ ಸಚಿವಾಲಯದ ಈ ಸಿಂಪಲ್ ಟಿಪ್ಸ್ ಪಾಲಿಸಿದರೆ ಸಾಕು, ದೇಹ ತಂಪಾಗಿರುತ್ತೆ! -
ಬಿಸಿಲಿನ ಬೇಗೆಯಿಂದ ತತ್ತರಿಸಿದ ಕರ್ನಾಟಕ: ಮನೆಯಲ್ಲೇ ತಂಪಾಗಿರಲು ನೀವು ಮಾಡಬೇಕಾದ ಆ 5 ಬದಲಾವಣೆಗಳೇನು? -
ಬಿಸಿಲ ಬೇಗೆಯಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ!
ಆಗಸ್ಟ್ 17ಕ್ಕೆ ಸಿಂಹ ಸಂಕ್ರಾಂತಿ: ಸಮಯ ಹಾಗೂ ಇದರ ಮಹತ್ವವೇನು?
ಪ್ರತಿ ತಿಂಗಳು ಸೂರ್ಯ ತನ್ನ ರಾಶಿಪಥ ಬದಲಾಯಿಸುತ್ತಲೇ ಇರುತ್ತಾನೆ, ಇದೀಗ ಸೂರ್ಯ ತಾನು ಅಧಿಪತಿಯಾಗಿರುವ ಸಿಂಹ ರಾಶಿಗೆ ಸಂಚಾರ ಮಾಡುವುದು. ಸೂರ್ಯನು ಆಗಸ್ಟ್ 17ರಂದು ಸಿಂಹ ರಾಶಿಗೆ ಸಂಚಾರ ಮಾಡಲಿದೆ, ಸಿಂಹ ಸಂಕ್ರಾಂತಿ ಮಹತ್ವವೇನು ನೋಡೋಣ ಬನ್ನಿ:

ಸಿಂಹ ಸಂಕ್ರಾಂತಿ 2023: ದಿನಾಂಕ ಮತ್ತು ಸಮಯ
ಸೂರ್ಯೋದಯ: ಬೆಳಗ್ಗೆ 06:07ಕ್ಕೆ
ಸೂರ್ಯಾಸ್ತ: ಸಂಜೆ 06:54ಕ್ಕೆ
ಪುಣ್ಯ ಕಾಲ ಮುಹೂರ್ತ: ಆಗಸ್ಟ್ 17 ಬೆಳಗ್ಗೆ 07:11ರಿಂದ ಮಧ್ಯಾಹ್ನ 01:35ರವರೆಗೆ
ಮಹಾ ಪುಣ್ಯಕಾಲ ಮುಹೂರ್ತ: ಆಗಸ್ಟ್ 17 ಮಧ್ಯಾಹ್ನ 01:11ರಿಂದ ಮಧ್ಯಾಹ್ನ 01:35ರವರೆಗೆ
ಸಿಂಹ ಸಂಕ್ರಾಂತಿ ಮಹತ್ವ
ಸಿಂಹ ಸಂಕ್ರಾಂತಿಯಂದು ಜನರು ದೇವಾಲಯಕ್ಕೆ ಹೋಗಿ ವಿಶೇಷ ಪೂಜೆಯನ್ನು ಸಲ್ಲಿಸುತ್ತಾರೆ. ಈ ದಿನ ಹಸುವಿನ ತುಪ್ಪ ತಿಂದರೆ ಒಳ್ಳೆಯದು ಎಂದು ಹೇಳಲಾಗುವುದು. ಕರ್ನಾಟಕದಲ್ಲಿ ಇಂದಿನಿಂದ ನಿಜ ಶ್ರಾವಣ ಮಾಸ ಶುರು, ನಿಜ ಶ್ರಾವಣ ಮಾಸ ಶುಭ ಕಾರ್ಯಗಳಿಗೆ ಶ್ರೇಷ್ಠವಾಗಿರುವುದರಿಂದ ಪೂಜಾ ಕಾರ್ಯಗಳು ಈ ಸಮಯದಲ್ಲಿ ನಡೆಯುವುದು. ಈ ದಿನ ಸೂರ್ಯದೇವ, ಶ್ರೀ ವಿಷ್ಣು, ನರಸಿಂಹನಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗುವುದು.
ಸಿಂಹ ಸಂಕ್ರಾಂತಿಯ ಪೂಜಾ ವಿಧಿಗಳು
* ಈ ದಿನ ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ಅರ್ಪಿಸಬೇಕು.
* ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿದರೆ ಒಳ್ಳೆಯದು
* ಶ್ರೀ ವಿಷ್ಣುವಿಗೆ ಹೂವಿನ ಪೂಜೆ ಅಂತ ಮಾಡಲಾಗುವುದು, ಸೂರ್ಯ ಕನ್ಯಾ ರಾಶಿಗೆ ಸಂಚಾರ ಮಾಡುವವರಿಗೂ ಈ ಪೂಜೆಯನ್ನು ಮಾಡಲಾಗುವುದು.
ಸೂರ್ಯದೇವ ದುರ್ಬಲ ಸ್ಥಾನದಲ್ಲಿದ್ದರೆ ಈ ಪರಿಹಾರ ಮಾಡಿ
* ಸೂರ್ಯ ಸಂಕ್ರಮಣದಂದು ಕೆಂಪು ವಸ್ತ್ರ ಧರಿಸಿ
* ಬೆಳಗ್ಗೆ ಬೇಗನೆ ಎದ್ದು ಸೂರ್ಯನಿಗೆ ಆರ್ಘ್ಯ ಅರ್ಪಿಸಿ
* ಈ ದಿನ ದಾನ-ಧರ್ಮಗಳಿಗೆ ತುಂಬಾನೇ ಶ್ರೇಷ್ಠ
ಸೂರ್ಯ ಯಂತ್ರ ಸ್ಥಾಪಿಸಿದರೆ ಒಳ್ಳೆಯದು
ಯಾರು ಸೂರ್ಯ ಯಂತ್ರ ಸ್ಥಾಪಿಸಬೇಕು?
* ಯಾರಿಗೆ ಸೂರ್ಯ ಮಂತ್ರ ಪಠಿಸಲು ಸಾಧ್ಯವಿಲ್ಲವೋ
* ಹರಳುಗಳನ್ನು ಖರೀದಿಸಿ ಧರಿಸುವಷ್ಟು ಶಕ್ತಿಯಿಲ್ಲದಿದ್ದರೆ ಈ ಸೂರ್ಯ ಯಂತ್ರ ಸ್ಥಾಪಿಸುವುದರ ಮುಖಾತರ ಪರಿಹಾರ ಕಂಡು ಕೊಳ್ಳಬಹುದು.
ಸೂರ್ಯ ಮಂತ್ರ
ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ
ಸೂರ್ಯ ಗಾಯತ್ರಿ ಮಂತ್ರ:
ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್
ಸೂರ್ಯ ವಶೀಕರಣ ಮಂತ್ರ:
ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ
ಸೂರ್ಯ ಬೀಜ ಮಂತ್ರ:
ಓಂ ಹ್ರಾಂ ಹ್ರೀಂ ಹ್ರೌಂ ಸಹ ಸೂರ್ಯಾಯ ನಮಃ
ಆದಿತ್ಯ ಹೃದಯಂ ಸ್ತೋತ್ರಂ
ಆದಿತ್ಯ ಹೃದಯ ಪುಣ್ಯಂ ಸರ್ವ ಶತ್ರು ವಿನಾಶನಂ
ಜಯಾವಹಂ ಜಪೇನ್ನಿತ್ಯಂ ಅಕ್ಷಯಂ ಪರಂ ಶಿವಂ



Click it and Unblock the Notifications