Latest Updates
-
ಬೇಸಿಗೆ ಮದುವೆ ಸಂಭ್ರಮ: ಬಿಸಿಲ ಬೇಗೆಯಿಂದ ಅತಿಥಿಗಳನ್ನು ರಕ್ಷಿಸಲು ಇಲ್ಲಿದೆ ಮಾಸ್ಟರ್ ಪ್ಲಾನ್ -
ಮೇ 2-3ರ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಗಿಡಗಳನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಭಾರತದಲ್ಲಿ ಸುಡುವ ಬಿಸಿಲು: ಹೀಟ್ ವೇವ್ನಿಂದ ಪಾರಾಗಲು ಇಲ್ಲಿವೆ ಬೆಸ್ಟ್ ಡಯಟ್ ಮತ್ತು ಹೈಡ್ರೇಶನ್ ಟಿಪ್ಸ್! -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಕರಣ್ ಜೋಹರ್ ಅಬ್ಬರ, ಭಾರತೀಯ ಫ್ಯಾಷನ್ ಲೋಕದ ಹೊಸ ಸಂಚಲನ! -
ಮೇ ತಿಂಗಳ ಬಿಸಿಲ ಧಗೆ: ನಿಮ್ಮ ಬೆಳಗಿನ ದಿನಚರಿಯಲ್ಲಿ ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಕಷ್ಟ! -
ಎವೆಲಿನ್ ಶರ್ಮಾ ವಿಚ್ಛೇದನ: ಮಕ್ಕಳ ಭವಿಷ್ಯಕ್ಕಾಗಿ ಈ ಜೋಡಿ ಆರಿಸಿದ ಹೊಸ ದಾರಿ ಯಾವುದು? -
ಬಿಸಿಲ ಧಗೆಗೆ ತಂಪಾದ ಗುಡ್ ನ್ಯೂಸ್: ಮೇ 8 ರಿಂದ ಶುರುವಾಗಲಿದೆ ಗ್ರೇಟ್ ಸಮ್ಮರ್ ಸೇಲ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸರಳ ಆಹಾರ ಪದ್ಧತಿಯಿಂದ ಇಡೀ ದಿನ ಇರಿ ಫ್ರೆಶ್! -
ಬಿಸಿಲ ಬೇಗೆಗೆ ಸುಸ್ತಾಗಿದ್ದೀರಾ? ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ ಕೂಲ್ ಆಗಿರಿ! -
ಬಿಸಿಗಾಳಿಯ ಅಬ್ಬರ: ನಿಮ್ಮ ಫಿಟ್ನೆಸ್ ದಿನಚರಿಯನ್ನು ಬದಲಾಯಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ!
ಹೀಗೆ ನಡೆದುಕೊಂಡರೆ ದುರ್ಗೆ ನಿಮ್ಮ ಸಕಲ ಕಷ್ಟ ನಿವಾರಿಸುತ್ತಾಳೆ
ಸರ್ವ ಮಂಗಳ ಮಾಂಗಲ್ಯೇ, ಶಿವೇ ಸರ್ವಾರ್ಥ ಸಾಧಿಕೇ| ಶರಣ್ಯೇ ತ್ರಯಂಬಕೇ ಗೌರೀ, ನಾರಾಯಣಿ ನಮೋಸ್ತುತೇ||
ದುರ್ಗೆ ಮಾತೆ.... ನಮ್ಮನ್ನು ಕಾಪಾಡು, ಸದಾ ನಿನ್ನ ರಕ್ಷಣೆ ನಮಗಿರಲಿ ಎಂದು ಬೇಡುತ್ತೇವೆ. ದುರ್ಗೆ ದುಷ್ಟರಿಗೆ ತಕ್ಕ ಶಾಸ್ತಿ ಕಲಿಸುತ್ತಾಳೆ, ಶಿಷ್ಟರನ್ನು ಬೆಳೆಸುತ್ತಾರೆ. ಶಿಷ್ಟರನ್ನು ರಕ್ಷಿಸುವ ಶಕ್ತಿ ಸ್ವರೂಪಿಣಿ ದುರ್ಗಾ ದೇವಿ.

ದುರ್ಗೆಯನ್ನು ಯಾರು ಭಕ್ತಿಯಿಂದ ಆರಾಧಿಸುತ್ತಾರೋ ಅವರನ್ನು ಅವಳು ಸದಾ ರಕ್ಷಣೆ ಮಾಡುತ್ತಾಳೆ ಎಂಬುವುದು ಅವಳ ಭಕ್ತರ ಅಚಲ ನಂಬಿಕೆ.
ದುರ್ಗೆಯನ್ನು ಪೂಜೆಯಿಂದ ಮಾತ್ರವಲ್ಲ ನಮ್ಮ ನಡವಳಿಕೆಯಿಂದಲೂ ಒಲಿಸಿಕೊಳ್ಳಬಹುದು. ನಾವು ಯಾವ ರೀತಿ ನಡೆದುಕೊಂಡರೆ ಶ್ರೀ ದುರ್ಗೆಯ ಕೃಪೆಗೆ ಪಾತ್ರರಾಗಬಹುದು ಎಂದು ನೋಡೋಣ ಬನ್ನಿ:
ಮಂಗಳವಾರ, ಶುಕ್ರವಾರ ಸಾತ್ವಿಕ ಆಹಾರ ಸೇವಿಸಿ
ನಮ್ಮ ಮನಸ್ಸು ಹಾಗೂ ದೇಹ ಎರಡನ್ನೂ ಶುದ್ಧವಾಗಿಟ್ಟುಕೊಳ್ಳಬೇಕು. ಆದ್ದರಿಂದ ಈ ದಿನ ಸಾತ್ವಿಕ ಆಹಾರಗಳನ್ನು ಸೇವಿಸಿ. ಸಾತ್ವಿಕ ಆಹಾರ ಎಂದರೆ ಈರುಳ್ಳಿ-ಬೆಳ್ಳುಳ್ಳಿ ಸೇರಿಸಬಾರದು. ಹಾಲು-ಹಣ್ಣುಗಳನ್ನು ಮಾತ್ರ ಸೇವಿಸಬೇಕು. ಈ ಎರಡು ದಿನ ಉಪವಾಸವಿದ್ದು ದೇವಿಯನ್ನು ಆರಾಧಿಸಿ.
ಒಳ್ಳೆಯ ಆಲೋಚನೆಗಳಿರಲಿ: ಯಾರಿಗೆ ಕೆಟ್ಟ ಆಲೋಚನೆಗಳಿರುತ್ತದೋ ಅವರಿಂದ ದುರ್ಗೆ ದೂರವಿರುತ್ತಾಳೆ. ಆದ್ದರಿಂದ ಕೆಟ್ಟ ಆಲೋಚನೆಯಲ್ಲಿ ಶಕ್ತಿಯನ್ನು ವ್ಯಯಗೊಳಿಸಬೇಡಿ. ಒಳ್ಳೆಯದನ್ನೇ ಆಲೋಚಿಸಿ, ನಾಲ್ಕು ಜನರಿಗೆ ಒಳ್ಳೆಯದು ಮಾಡಿ.
ಒಳ್ಳೆಯ ಸಂಗ ನಿಮ್ಮದಿರಲಿ
ನಾವು ಯಾರ ಜೊತೆ ಸ್ನೇಹ ಬೆಳೆಸುತ್ತೇವೆ ಎಂಬುವುದು ಕೂಡ ಮುಖ್ಯ. ಕೆಟ್ಟ ಆಲೋಚನೆಗಳಿರುವ ವ್ಯಕ್ತಿ ಜೊತೆ ಸೇರಿದರೆ ಅವರಿಂದ ನಮಗೂ ಕೆಟ್ಟ ಹೆಸರು ಬರುವುದು. ನೀವು ಒಳ್ಳೆಯವರಾಗಿರಿ, ಒಳ್ಳೆಯವರ ಜೊತೆ ಮಾತ್ರ ಸೇರಿ.
ಬೇರೆಯವರನ್ನು ಬೈಯ್ಯುವುದು, ಹೀಯಾಳಿಸುವುದು ಮಾಡಬೇಡಿ
ಬೇರೆಯವರನ್ನು ಬೈಯ್ಯುವುದರಿಂದ, ಹೀಯಾಳಿಸುವುದರಿಂದ ಅದರ ಶಾಪ ನಮಗೇ ತಟ್ಟುತ್ತದೆ, ಆದ್ದರಿಂದ ಯಾರು ದುರ್ಗೆಯನ್ನು ಒಲಿಸಿಕೊಳ್ಳಬೇಕು ಎಂದು ಪ್ರಯತ್ನಿಸುತ್ತಾರೋ ಅವರ ವರ್ತನೆಯೂ ಹೀಗಿರಬೇಕು.
ಮಾತು ಮೃದುವಾಗಿರಲಿ
ತುಂಬಾ ಜೋರಾಗಿ ಕಿರುಚಾಡುವುದು, ಕಠೋರ ಬದಗಳನ್ನು ಬಳಸುವುದು ಇಂಥವರ ಬಳಿ ಇರಲು ದುರ್ಗೆ ಇಷ್ಟಪಡುವುದಿಲ್ಲ. ಮಾತು ಮೃದುವಾಗಿರಲಿ, ನಡತೆ ಸ್ವಚ್ಛವಾಗಿರಲಿ.
ಕ್ಷಮಿಸುವ ಗುಣವಿರಲಿ, ಫಲಾಪೇಕ್ಷವಿಲ್ಲದೆ ಒಳ್ಳೆಯ ಕಾರ್ಯ ಮಾಡಿ
ಕ್ಷಮಿಸುವ ಗುಣವಿರುವ ವ್ಯಕ್ತಿ ದೇವರ ಸಮಾನ. ಅಲ್ಲದೆ ಯಾರಿಗಾದರೂ ಸಹಾಯ ಮಾಡುವಾಗ ಅವರಿಂದ ಏನೂ ಫಲ ನಿರೀಕ್ಷೆ ಮಾಡದೆ ಸಹಾಯ ಮಾಡಿ. ಹೀಗೆ ಮಾಡುವುದರಿಂದ ಶ್ರೀ ದುರ್ಗೆಯ ಆಶೀರ್ವಾದ ನಿಮ್ಮ ಮೇಲಿರುತ್ತದೆ.
ದುರ್ಗೆಗೆ ಸಂಪೂರ್ಣ ಶರಣಾಗಿ
ನನ್ನಲ್ಲಿ ಏನಿದೆ, ಎಲ್ಲವೂ ನಿನ್ನದೆ, ನಿನ್ನ ಅನುಗ್ರಹವೊಂದಿದ್ದರೆ ಸಾಕು ಎಂದು ಶ್ರೀದುರ್ಗೆಗೆ ಸಂಪೂರ್ಣ ಶರಣಾಗಿ. ಹೀಗೆ ಮಾಡುವುದರಿಂದ ದುರ್ಗೆ ಕೃಪೆಯಿಂದಾಗಿ ಬದುಕಿನಲ್ಲಿ ತುಂಬಾ ಒಳಿತಾಗುವುದು.
ಈ ಮಂತ್ರಗಳನ್ನು ಪಠಿಸಿ
ಧ್ಯಾನ ಮಂತ್ರ
ಓಂ ಜಾತಾ ಜತ್ ಸಮ್ಯುಕ್ತಮರ್ಧೇಂದು ಕೃತಿ ಲಕ್ಷಣಮ್
ಲೋಚನಾಯಾತ್ರಾ ಸ್ನುಕ್ತಮ್ ಪದಮೇಂದು ಸಾದ್ಯ ಶನಯಮ್
ಈ ಮಂತ್ರ ಪಠಿಸುವುದರಿಂದ ಪೂಜೆಯಲ್ಲಿ ಧ್ಯಾನ ಹೆಚ್ಚುವುದು.
ದುರ್ಗಾ ಶತ್ರು ಶಾಂತಿ ಮಂತ್ರ
ರಿಪವಾಹ ಸಂಕ್ಷ್ಯಾಮ್ ಯಂತಿ ಕಲ್ಯಾಣಮ್ ಚಾಪ್ ಪಾದಾಯತೇ
ನಂದತೇ ಚ ಕುಲಮ್ ಪುನಾಸಮ್ ಮಹಾತ್ಮಮಮ್ ಮಾ ಶ್ರೀನು ಯಾನ್ಮನ್
ಈ ಮಂತ್ರ ಪಠಿಸುವುದರಿಂದ ದುರ್ಗೆ ನಮ್ಮನ್ನು ಶತ್ರುಗಳಿಂದ ರಕ್ಷಿಸುತ್ತಾಳೆ.
ಸರ್ವ ಬಾಧಾ ಮುಕ್ತಿ ಮಂತ್ರ
ಸರ್ವ ಬಾಧಾ ವಿನಿರ್ಮುಕ್ತೊ ಧನ ಧ್ಯಾನ ಸುತನ್ವಿತಃ
ಮನುಷ್ಯೊ ಮತಪ್ರಸಾದಿನ್ ಭವಿಷ್ಯತಿ ನ ಸನ್ಶಯಃ
ಸರ್ವ ಬಾಧೆ ಅಂದರೆ ಕಾಯಿಲೆಗಳು, ಮಾನಸಿಕ ತೊಂದರೆ ಮತ್ತಿತರ ಸಮಸ್ಯೆಗಳು ದೂರಾಗುವುದು.
ದುರ್ಗಾ ದುಸ್ವಪ್ನ ನಿವಾರಣೆ ಮಂತ್ರ
ಶಾಂತಿ ಕರ್ಮಣಿ ಸರ್ವತ್ರ ತ ದುಃಸ್ವಪ್ನ ದರ್ಶನೆ
ಗೃಹ ಪೀಡಸು ಚೊಗ್ರಾಸು ಮಹಾತ್ಮಯಾನ್ ಶ್ರೀನು ಯಾನ್ಮಮ್
ಈ ಮಂತ್ರ ಪಠಿಸುವುದರಿಂದ ಕೆಟ್ಟ ಆಲೋಚನೆ, ಕೆಟ್ಟ ಸ್ವಪ್ನಗಳು ದೂರಾಗುವುದು. ಮನಸ್ಸಿಗೆ ಧೈರ್ಯ ಸಿಗುವುದು.



Click it and Unblock the Notifications
