Latest Updates
-
ಸೋಶಿಯಲ್ ಮೀಡಿಯಾದಲ್ಲಿ ನಿಮ್ಮ ಸಂಬಂಧವನ್ನು ರಹಸ್ಯವಾಗಿಡಬೇಕಾ? ನೆಮ್ಮದಿಯ ಬದುಕಿಗೆ ಈ ಡಿಜಿಟಲ್ ಬೌಂಡರಿಗಳು ಮಸ್ಟ್! -
ದೆಹಲಿ-ಎನ್ಸಿಆರ್ನಲ್ಲಿ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಮರೆಯದಿರಿ! -
ಅಡುಗೆಮನೆಯಲ್ಲಿ ಕಡಲೆ ಹಿಟ್ಟು ಬಳಸುವ ಮುನ್ನ ಎಚ್ಚರ: FSSAI ಜಾರಿಗೆ ತಂದಿದೆ ಹೊಸ ಕಠಿಣ ನಿಯಮಗಳು! -
ಫ್ಲಿಪ್ಕಾರ್ಟ್ GRWM ಸೇಲ್: ಟ್ರೆಂಡಿ ಲುಕ್ ಪಡೆಯಲು ಇನ್ಫ್ಲುಯೆನ್ಸರ್ ಸಜೆಸ್ಟ್ ಮಾಡಿದ ಬೆಸ್ಟ್ ಡೀಲ್ಗಳು ಇಲ್ಲಿವೆ! -
ಬಿಸಿಲಿನಲ್ಲಿ ವ್ಯಾಯಾಮ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ಹೀಟ್ಸ್ಟ್ರೋಕ್ ಕಟ್ಟಿಟ್ಟ ಬುತ್ತಿ, ಎಚ್ಚರವಿರಲಿ! -
ಅಸ್ಸಾಂನಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದೀರಾ? ಹೊಸ ಕಾನೂನಿನ ಪ್ರಕಾರ ನೋಂದಣಿ ಮಾಡದಿದ್ದರೆ ಜೈಲು ಶಿಕ್ಷೆ ಕಟ್ಟಿಟ್ಟ ಬುತ್ತಿ! -
ಬಿಸಿಲಿಗೆ ಗಿಡಗಳು ಬಾಡುತ್ತಿವೆಯೇ? ಈ ಮ್ಯಾಜಿಕ್ ಟಿಪ್ಸ್ ಬಳಸಿ ನಿಮ್ಮ ಬಾಲ್ಕನಿ ಗಾರ್ಡನ್ ಅನ್ನು ಹಸಿರಾಗಿಡಿ! -
ಬಿಸಿಲ ಝಳಕ್ಕೆ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ನಿಂದ ಪಾರಾಗಲು ಈ ತಂಪು ಪದಾರ್ಥಗಳು ನಿಮ್ಮ ಆಹಾರದಲ್ಲಿರಲಿ, ಇಂದೇ ಟ್ರೈ ಮಾಡಿ! -
ಬಕ್ರೀದ್ 2026: ಈ ಬಾರಿಯ ಹಬ್ಬದ ಸಂಭ್ರಮದಲ್ಲಿ ಮಿಂಚಲು ನೀವು ಮಿಸ್ ಮಾಡಲೇಬಾರದ ಫ್ಯಾಷನ್ ಟ್ರೆಂಡ್ಸ್ ಮತ್ತು ಸ್ಟೈಲಿಂಗ್ ಟಿಪ್ಸ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ!
ಬಿಗ್ಬಾಸ್ಗೆ ಎಂಟ್ರಿ ಕೊಟ್ಟಿರುವ ಹನುಮಂತ ಮುಗ್ಧನಂತೆ ನಟಿಸುತ್ತಿದ್ದಾರಾ? ಏಕೆ ಈ ಸಂಶಯ ಗೊತ್ತಾ?
5-6 ವರ್ಷಗಳ ಹಿಂದಿನ ಮಾತು ಲುಂಗಿ-ಶರ್ಟ್ ಧರಿಸಿ ಒಬ್ಬ ಯುವಕ ಸರಿಗಮಪ ಸ್ಟೇಜ್ಗೆ ಬರ್ತಾನೆ,ಅವನ ಹಾಡು ಎಷ್ಟು ಮಂತ್ರ ಮುಗ್ಧಗೊಳಿಸುತ್ತೋ ಆತನ ಮುಗ್ಧತೆ ವೀಕ್ಷಕರನ್ನು ಸೂಜಿ ಗಲ್ಲಿನಂತೆ ಸೆಳೆಯಿತು.
ಹಳ್ಳಿಯ ಮುಗ್ಧತೆ, ಕುರಿಗಳನ್ನು ಬೇಯಿಸುತ್ತಿದ್ದ ಹುಡುಗನಿಗೆ ಈ ನಗರ, ಅಲ್ಲಿಯ ಭಾಷೆ, ಅಲ್ಲಿಯ ವೇಷ ಭೂಷಣ ಎಲ್ಲವೂ ಹೊಸತು... ಆತನ ಕಣ್ಣುಗಳಲ್ಲಿ ಆ ಅಚ್ಚರಿಯ ಬೆರಗು ಸ್ಪಷ್ಟವಾಗಿ ಕಾಣುತ್ತಿತ್ತು... ಒಂದೇ ದಿನದಲ್ಲಿ ಹನುಮಂತ ಎಂಬ ಅಪ್ಪಟ ಹಳ್ಳಿ ಪ್ರತಿಭೆ ಕನ್ನಡಿಗರ ಮನಸ್ಸಿನೊಳಗೆ ಭದ್ರ ಸ್ಥಾನ ಗಳಿಸುವಲ್ಲಿ ಯಶಸ್ವಿಯಾದ... ಅದೇ ಹುಡುಗ ಬಿಗ್ಬಾಸ್ ಎಂಬ ದೊಡ್ಡ ವೇದಿಕೆಗೆ ಸ್ಪರ್ಧಿಯಾಗಿ ಬಂದಿದ್ದಾರೆ, ಇಲ್ಲಿಯೂ ನಾನು ಮುಗ್ಧ ಎಂಬಂತೆ ಕಾಣಿಸಲು ಪ್ರಯತ್ನಿಸಿರುವುದು ಮಾತ್ರ ಸ್ಪಷ್ಟವಾಗಿ ಕಾಣುತ್ತಿದೆ.


ಆಗ ಬಂದಾಗ ಇದ್ದ ಮುಗ್ಧತೆ ಈಗ ಇದೆ ಎಂದು ಬಿಂಬಿಸಲು ಹೊರಟಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ
ಹನುಮಂತ ಬಿಗ್ಬಾಸ್ಗೆ ಬರುವಾಗ ಈ ವೇದಿಕೆ ಬಗ್ಗೆ ಏನೂ ಗೊತ್ತೇ ಇಲ್ಲದೆ ಬಂದವರು ಅಂತೂ ಖಂಡಿತ ಅಲ್ಲ, ಬಿಗ್ಬಾಸ್ ಅಂದರೆ ಏನು? ಇಲ್ಲಿ ಸ್ಪರ್ಧೆ ಎಷ್ಟು ಕಠಿಣವಾಗಿರುತ್ತದೆ ಎಂಬುವುದು ಗೊತ್ತಿರುತ್ತದೆ, ವೇದಿಕೆಗೆ ಬಂದ ಮೊದಲ ದಿನವೇ ತಾನು ಅತಿ ಮುಗ್ಧ ಎಂದು ಬಿಂಬಿಸಲು ಪ್ರಯತ್ನ ಹಾಕಿದ್ದಾರೆ, ಅದು ಬೇಡವಿತ್ತೇನೋ... ಇದರಲ್ಲಿಯೇ ಸ್ವಲ್ಪ ಫೇಕ್ ಆಗಿ ಕಾಣಲಾರಂಭಿಸಿದ್ದಾರೆ.
ಅಂದು ಕಂಡ ಹನುಮಂತ ಅಂತು ಅಲ್ವೇ ಅಲ್ಲ ಈಗೀನ ಹನುಮಂತ
ಮಕ್ಕಳು ಕೂಡ ವರ್ಷಗಳು ಕಳೆಯುತ್ತಿದ್ದಂತೆ ಅವರ ಸ್ವಭಾವದಲ್ಲಿ ಬದಲಾವಣೆಯಾಗುತ್ತದೆ, ನಾವು-ನೀವೆಲ್ಲಾ ಅಷ್ಟೇ ಪ್ರತಿಯೊಂದು ಜಾಗಕ್ಕೆ ಹೋದಾಗ, ಹೊಸದೊಂದು ಕೆಲಸ ಮಾಡಿದಾಗ ಹೊಸ ಅನುಭವಗಳನ್ನು ಕಲಿಯುತ್ತೇವೆ, ಅವೆಲ್ಲಾ ನಮ್ಮ ಮೇಲೆ ಪ್ರಭಾವ ಬೀರುವುದು. ಹನುಮಂತ ಕಿರುತೆರೆ ಲೋಕಕ್ಕೆ ಬಂದು 5 ವರ್ಷಗಳು ಕಳೆದಿದೆ, ಹಾಡಿನ ಸ್ಪರ್ಧೆ ಬಳಿಕ ಡ್ಯಾನ್ಸ್, ಇನ್ನಿತರ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ತನಗೆ ಗೊತ್ತಿರದ ಪ್ರಪಂಚ ನೋಡಿದ್ದಾರೆ, ಹೊಸ ವಿಷಯಗಳನ್ನು ಅರಿತುಕೊಂಡಿದ್ದಾರೆ ಹಾಗಾಗಿ ಹನುಮಂತ ಒಳ್ಳೆಯವರಿರಬಹುದು ಆದರೆ ಅತಿ ಮುಗ್ಧ ಅಂತು ಅಲ್ವೇ ಅಲ್ಲ....
ಮುಗ್ಧತೆ ಪಟ್ ಅಂತ ಗುರುತಿಸಬಹುದು, ಲಾಯರ್ ಜಗದೀಶ್ರಲ್ಲಿ ಮುಗ್ಧತೆ ಇರ್ಲಲ್ವಾ?
ಲಾಯರ್ ಜಗದೀಶ್ ಅಂತ ವ್ಯಕ್ತಿಯಲ್ಲಿ ಒಂದು ಮುಗ್ಧತೆಯೂ ಇದೆ ಎಂದು ತೋರಿಸಿಕೊಟ್ಟಿದ್ದು ಬಿಗ್ಬಾಸ್ ವೇದಿಕೆ. ಅವರ ಕಿರುಚಾಟ, ಅರಚಾಟ, ವಾದ ಇವುಗಳ ಆಚೆಗೆ ಒಂದು ಮುಗ್ಧತೆ ಇತ್ತು, ಆ ಮುಗ್ಧತೆ ಹಲವಾರು ಬಾರಿ ಕಂಡು ಬಂದಿತ್ತು, ಹಾಗಾಗಿ ಜನ ಆ ಮುಗ್ಧತೆಯನ್ನು ತುಂಬಾ ಇಷ್ಟಪಟ್ಟಿದ್ದರು.
ಏನೂ ಗೊತ್ತಿಲ್ಲದವನಂತೆ ಮಾತನಾಡಿದರೆ ಒಪ್ಪಿಕೊಳ್ಳಲು ವೀಕ್ಷಕರೇನು ದಡ್ಡರೇ?
ವೀಕ್ಷಕರು ತಮ್ಮ ಸಮಯವನ್ನು ಬಿಗ್ಬಾಸ್ ನೋಡಲು ಕೊಡುತ್ತಿದ್ದಾರೆ ಎಂದ ಮೇಲೆ ಅವರಿಗೆ ಅದರೊಳಗಿನ ವ್ಯಕ್ತಿಗಳು ಕೂಡ ಯಾರು ಹೇಗೆ ಎಂಬುವುದು ಸ್ಪಷ್ಟವಾಗಿ ಗೊತ್ತಾಗಿರುತ್ತದೆ. ಹನುಮಂತ ಅವರು ಬಿಗ್ಬಾಸ್ ಮನೆಗೆ ಬಂದ ತಕ್ಷಣ ಬಿಗ್ಬಾಸ್ ಜೊತೆ ಮುಗ್ಧನಂತೆ ಮಾತನಾಡಿದ್ದು, ನನ್ನ ಬಗ್ಗೆ ನೀಡಿ ಇಂಡ್ರೋಡಕ್ಷನ್ ಯಾವುದರಲ್ಲಿಯೂ ಮುಗ್ಧತೆ ಇರಲಿಲ್ಲ, ನಾನು ಮುಗ್ಧ ಎಂಬಂತೆ ಬಿಂಬಿಸಲು ಪ್ರಯತ್ನ ಹಾಕಿರುವುದು ಕಾಣುತ್ತೆ. ಬದುಕು ಜೀವನದ ಪಾಠ ಕಲಿಸುತ್ತೆ ಅಂತಾರೆ... 5 ವರ್ಷಗಳಿಂದ ಈ ರಿಯಾಲಿಟಿ ಶೋಗಳಲ್ಲಿ ತುಂಬಾ ಸಮಯ ಕಳೆದಿರುವ ಹನುಮಂತನಿಗೆ ಈಗ ಹೊರ ಪ್ರಪಂಚದ ಜ್ಞಾನ ತುಂಬಾನೇ ಚೆನ್ನಾಗಿದೆ. ಹಾಗಾಗಿ ಕುರಿ ಕಾಯುವ ಮುಗ್ಧನಲ್ಲ, ಬಿಗ್ಬಾಸ್ನಲ್ಲಿ ಬದುಕುವ ಗಟ್ಟಿತನ ಈಗ ಅವರಲ್ಲಿ ಖಂಡಿತ ಇದೆ.
ಬಿಗ್ಬಾಸ್ನಲ್ಲಿ ತಂತ್ರಗಾರಿಕೆ ಬಳಸಿ ಮಾಡು ಟಾಸ್ಕ್ಗಳು ಕಷ್ಟವಾಗಬಹುದೇನೋ,ಆದರೆ ಬಿಗ್ಬಾಸ್ ಕಷ್ಟವಾಗಲ್ಲ ಜಗಳ, ಕಿರುಚಾಟ ಇವುಗಳಿಗೆ ಹೆದರುವ ವ್ಯಕ್ತಿಯಲ್ಲ ಹೇಮಂತ, ಆದರೆ ಕೆಲವೊಂದು ನಿರ್ಧಾರಗಳನ್ನು ಮಾಡುವಾಗ ಏಕೆ ಹೀಗೆ ಮಾಡಿದೆ? ಎಲ್ಲರು ಮುಗಿಬಿದ್ದರೆ ಕಷ್ಟವಾಗಬಹುದು, ಅದುಬಿಟ್ಟು ದೈಹಿಕ ಟಾಸ್ಕ್ ಮಾಡುವ ಸಾಮರ್ಥ್ಯ ಹನುಮಂತನಲ್ಲಿದೆ, ಬುದ್ಧಿವಂತಿಕೆಯೂ ಇದೆ. ಯಾರು ಹೇಗೆ ಎಂದು ಅರಿತುಕೊಳ್ಳುವ ಸಾಮರ್ಥ್ಯವಿದೆ.
ಈಗ ಬಿಗ್ಬಾಸ್ ನೀಡುತ್ತಿರುವ ಟಾಸ್ಕ್ಗಳಿಂದಾಗಿ ಹನುಮಂತನಿಗೆ ತುಂಬಾ ಸಮಯ ನಾಟಕವಾಡಲು ಸಾಧ್ಯವಾಗಲ್ಲ ಎಂಬುವುದು ದಿಟ, ಹನುಮಂತನ ನಿಜವಾದ ಆಟ ಬೇಗ ಶುರುವಾಗಲಿ ಎಂದು ವೀಕ್ಷಕರು ಕಾಯುತ್ತಿದ್ದಾರೆ...



Click it and Unblock the Notifications